ಬೆಳ್ಳಾರೆ : 50ನೇ ವರ್ಷದ ಶ್ರೀ ಗಣೇಶೋತ್ಸವ

ಸಾರ್ವಜನಿಕ ಸಾಂಸ್ಕೃತಿಕ ಗಣೇಶೋತ್ಸವ ಸಮಿತಿ(ರಿ.) ಮತ್ತು ವಿರಾಟ್ ಫ್ರೆಂಡ್ಸ್ (ರಿ.) ಬೆಳ್ಳಾರೆ ಇದರ ಆಶ್ರಯದಲ್ಲಿ 50ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಸಲಾಯಿತು. ಈ ಬಾರಿ ಕೋವಿಡ್ ಹಾವಳಿಯಿಂದಾಗಿ ಅದ್ದೂರಿಯ ಆಚರಣೆ ನಡೆಸದೆ ಸರಳವಾಗಿ ಗಣೇಶೋತ್ಸವ ಆಚರಿಸಲಾಯಿತು. ಗಣಪತಿ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಹಾಗೂ ಮಹಾಪೂಜೆ ನೆರವೇರಿತು. ಬೆಳ್ಳಾರೆ ಶ್ರೀ...

ಶುಭಶ್ರೀ ಮಹಿಳಾ ಮಂಡಲದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕಿಯರಿಗೆ ಸನ್ಮಾನ

ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಕನ್ನಡ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಎಂ. ಮೀನಾಕ್ಷಿ ಗೌಡ ಅವರು ಉದ್ಘಾಟಿಸಿದರು. ಕಾಂತಮಂಗಲ ಕಿರಿಯ ಪಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾದ ಶಿಕ್ಷಕಿ ವಿಜಯಲಕ್ಷ್ಮೀ. ಎಸ್ ರವರನ್ನು "ಉತ್ತಮ ಶಿಕ್ಷಕ ಪ್ರಶಸ್ತಿ" ನೀಡಿ ಗೌರವಿಸಲಾಯಿತು. ಬಳಿಕ ಶುಭಶ್ರೀ ಮಹಿಳಾ ಮಂಡಲದ ಮಹಾಸಭೆಯು ನಡೆಯಿತು. ಈ ಸಂದರ್ಭದಲ್ಲಿ ಸರಕಾರಿ...
Ad Widget

ಕೋಟೆಮುಂಡುಗಾರು : 30ನೇ ವರ್ಷದ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಟೇಮುಂಡುಗಾರು ಇದರ ವತಿಯಿಂದ 30ನೇ ವರ್ಷದ ಗಣೇಶೋತ್ಸವವನ್ನು ಕೋಟೆಮುಂಡುಗಾರು ಸ.ಹಿ.ಪ್ರಾ.ಶಾಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅರ್ಚಕರಾದ ಶಂಭಯ್ಯ ಭಟ್ ಮುಂಡುಗಾರು ಇವರ ನೇತೃತ್ವದಲ್ಲಿ ಮೂರ್ತಿ ಪ್ರತಿಷ್ಠಾಪನೆ, ಗಣಪತಿ ಹವನ ನಡೆಯಿತು. ಸಮಿತಿಯ ಅಧ್ಯಕ್ಷ ರಾಜೇಶ್ ಪಟ್ಟೆ ದೀಪ ಪ್ರಜ್ವಲನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಗಿರಿಧರ ಕಳಂಜ,...

ವಳಲಂಬೆ : 18ನೇ ವರ್ಷದ ಗಣೇಶೋತ್ಸವ

ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ 18 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಬೆಳಿಗ್ಗೆ 9.00 ಗಂಟೆಗೆ ಗಣಪತಿ ಪ್ರತಿಷ್ಠೆ ಯೊಂದಿಗೆ ಪ್ರಾರಂಭಗೊಂಡಿತು. ಕೊವಿಡ್19ರ ಕಾರಣ ಯಾವುದೇ ಸ್ಪರ್ಧಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಸರಳವಾಗಿ ಆಚರಿಸಲಾಯಿತು. ಭಜನಾ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮಕ್ಕೆ ಸೀಮಿತಗೊಳಿಸಲಾಗಿದೆ.ನಾಳೆಯ ದಿನ ಸಂಜೆ 5.00 ಗಂಟೆಗೆ ಶ್ರೀ ಗಣಪತಿ...

ಕೊಲ್ಲಮೊಗ್ರ : ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ

ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆಯಂತೆ ಬಿಜೆಪಿಯ ಸುಳ್ಯ ಮಂಡಲದ ವತಿಯಿಂದ ಪಕ್ಷದ ಬೂತ್ ಸಮಿತಿಯ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮ ಸೆ.09 ರಂದು ಕೊಲ್ಲಮೊಗ್ರದಲ್ಲಿ ನಡೆಯಿತು. ಬೂತ್ ಸಂಖ್ಯೆ 228 ಇದರ ಅದ್ಯಕ್ಷರಾದ ರಾಕೇಶ್ ಮುಳ್ಳುಬಾಗಿಲು ಇವರ ಮನೆಯಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಅವರು ನಾಮಫಲಕ ಅಳವಡಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಬಿಜೆಪಿ ಸುಳ್ಯ...

ಮಂಡೆಕೋಲು : ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗಣೇಶೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಬೆಳಗ್ಗೆ ದೇವರ ಪ್ರತಿಷ್ಠಾಪನೆ ನಡೆದಿದ್ದು, ಸಂಜೆ ವಿಸರ್ಜನೆ ನಡೆಯಲಿದೆ.

ಕೊನೆಗೂ ವೀಕೆಂಡ್ ಕರ್ಫ್ಯೂ ರದ್ದು : ಸೋಂಕು ಹೆಚ್ಚಿದರೆ ಮತ್ತೆ ಕರ್ಫ್ಯೂ ಹೇರಲು ಜಿಲ್ಲಾಡಳಿತಕ್ಕೆ ಅಧಿಕಾರ

ದ.ಕ ಕನ್ನಡ ಸೇರಿದಂತೆ ಕೇರಳ ಗಡಿ ಹಂಚಿಕೊಂಡಿದ್ದ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಹೊಂದಿರುವ ಕಾರಣ ವೀಕೆಂಡ್ ಕರ್ಫ್ಯೂ ಹಿಂತೆಗೆದುಕೊಳ್ಳುವ ಕುರಿತು ಸರ್ಕಾರ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಮತ್ತೆ ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾದರೆ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲು...

ಮಡಪ್ಪಾಡಿ : ಜಮಾಬಂಧಿ ಕಾರ್ಯಕ್ರಮ

ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ 2020-21 ನೇ ಸಾಲಿನ ಜಮಾಬಂದಿ ಸೆ.9 ರಂದು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಚಂದ್ರಶೇಖರ್ ಪೇರಾಲ್ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸುಳ್ಯ ಇವರು ಜಮಾಬಂಧಿ ಅಧಿಕಾರಿಗಳಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್.ಸಿ.ವಿ., ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸದಸ್ಯರಾದ ಜಯರಾಮ ಹಾಡಿಕಲ್ಲು, ಸುಜಾತ...

ಬೆಳ್ಳಾರೆ: ರೋಟರಿ ಕ್ಲಬ್‌ಗಳ ವತಿಯಿಂದ ವಿದ್ಯಾಸೇತು ಪುಸ್ತಕ ಬಿಡುಗಡೆ

ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಸುಳ್ಯ ಸಿಟಿ, ಸುಬ್ರಹ್ಮಣ್ಯ, ಕಡಬ ಇದರ ಆಶ್ರಯದಲ್ಲಿ ವಿದ್ಯಾಸೇತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಸೆ.8 ರಂದು ನಡೆಯಿತು.ರೋಟರಿ ಜಿಲ್ಲಾ ಗವರ್ನರ್ ಎ.ಆರ್ ರವೀಂದ್ರ ಭಟ್ ವಿದ್ಯಾಸೇತು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ದ.ಕ ಜಿಲ್ಲಾ ಕ್ರೀಡಾ ಶಿಕ್ಷಣಾಧಿಕಾರಿ ಲಕ್ಷ್ಮೀಶ ರೈ,...

ಯುವಮೋರ್ಚಾ ಕಾರ್ಯನಿರ್ವಹಣಾ ತಂಡದ ಸಭೆ – ನೂತನ ಕಾರ್ಯದರ್ಶಿ, ಸದಸ್ಯರಿಗೆ ಗೌರವ ಸಲ್ಲಿಕೆ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯನಿರ್ವಹಣ ತಂಡದ ಸಭೆ ಸುಳ್ಯದ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲದ ಕಾರ್ಯದರ್ಶಿ ಶ್ರೀಮತಿ ಮೋಹಿನಿ ನಾಗರಾಜ್ ನೆರವೇರಿಸಿ ಶುಭಹಾರೈಸಿದರು. ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕುಮಾರಿ ಸಿಂಧೂ ಹಾಗೂ ಸದಸ್ಯೆಯಾಗಿ ಆಯ್ಕೆಯಾದ ಮುಮ್ತಾಜ್ ನೆಲ್ಯಡ್ಕ ಇವರನ್ನು ಪಕ್ಷದ ಸಾಲು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
Loading posts...

All posts loaded

No more posts

error: Content is protected !!