ಗುತ್ತಿಗಾರು : ಮನೆ ಮೇಲೆ ಮರ ಬಿದ್ದು ಹಾನಿ

ಗುತ್ತಿಗಾರು ಗ್ರಾಮದ ಚಿಕ್ಮುಳಿ ನಿವಾಸಿ ಕಾಯರ ಸೂರಪ್ಪ ಗೌಡರ ಮನೆ ಮೇಲೆ ಇಂದು ಬೆಳಿಗ್ಗೆ ಮರ ಬಿದ್ದು ಸಂಪೂರ್ಣ ಮನೆ ಹಾನಿಯಾಗಿದೆ.

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಾಗಾರ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ದಕ್ಷಿಣ ಕನ್ನಡ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆ, ತಾಲೂಕು ರೆಡ್ ಕ್ರಾಸ್ ಸಂಸ್ಥೆ, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾಲಯ ಹಾಗೂ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸುಳ್ಯ ತಾಲೂಕಿನ ಪ್ರೌಢಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
Ad Widget

ಶಮನಗೊಂಡ ಬಿಜೆಪಿ ಭಿನ್ನಮತ : ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ ; ಒಗ್ಗಟ್ಟಿನ ಮಂತ್ರ ಜಪಿಸಿದ ಎಸ್.ಎನ್. ಮನ್ಮಥ

ಸಂಘಟನೆ ಬೆಳೆದಂತೆ, ಕಾರ್ಯಕರ್ತರ ಪಡೆ ವಿಸ್ತಾರವಾದಂತೆ ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ ಮನಸ್ತಾಪಗಳು ಬರುತ್ತವೆ. ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ೪ ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯ...

ವಳಲಂಬೆ : ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಶುಭಾರಂಭ

ವಳಲಂಬೆಯಲ್ಲಿ ವಿಶ್ವ ಬ್ರಾಹ್ಮಣ ಫ್ಯಾಬ್ರಿಕೇಶನ್ & ಗ್ಲಾಸ್ ವರ್ಕ್ಸ್ ಇಂದು ಶುಭಾರಂಭಗೊಂಡಿತು. ಇಲ್ಲಿ ಅಲ್ಯೂಮಿನಿಯಂ ಪಾರ್ಟಿಶನ್, ಇಂಟೀರಿಯರ್ ವರ್ಕ್, ಪ್ಲೈವುಡ್ ಡೋರ್, ಫೈಬರ್ ಡೋರ್ & ಕಿಟಕಿ ಕೆಲಸ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಎಂದು ಮಾಲಕರಾದ ಮಹೇಶ್ ಶರ್ಮ ವಳಲಂಬೆ ತಿಳಿಸಿದ್ದಾರೆ.

ಕಳೆದುಕೊಂಡ ಮೊಬೈಲನ್ನು ವಿದ್ಯಾರ್ಥಿಗೆ ಹಿಂತಿರುಗಿಸಲು ಪ್ರಯತ್ನಿಸಿದ ಬಾಲಕೃಷ್ಣ ತೊಡಿಕಾನ

ಸುಳ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳೆದುಕೊಂಡ ಬೆಲೆ ಬಾಳುವ ಮೊಬೈಲ್ ಹ್ಯಾಂಡ್ ಸೆಟ್ ನ್ನು ಮಲ್ಲಿಕಾ ಸ್ಟಾಲ್ ನಲ್ಲಿ ಇರುವ ಸಿಸಿ ಕ್ಯಾಮಾರದಲ್ಲಿ ಕಂಡು ಹಿಡಿದು ಕಂಡಕ್ಟರ್ ಕೈಯಿಂದ ಪಡೆದು ಕಳೆದುಕೊಂಡ ವಿದ್ಯಾರ್ಥಿಗೆ ಹಿಂದಿರುಗಿಸಲಾಗಿದೆ. ಮಲ್ಲಿಕಾ ಸ್ಟಾಲ್ ಬಾಲಕೃಷ್ಣ ತೊಡಿಕಾನ ಇವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೇಸರಿ ಎಂಬುದು ತ್ಯಾಗದ ಪ್ರತೀಕ – ಕೇಸರಿ ಶಾಲು ಹಾಕಿಕೊಂಡದ್ದನ್ನು ಸಮರ್ಥಿಸಿಕೊಂಡ ಸಚಿವ ಎಸ್.ಅಂಗಾರ

ಭಾರತದ ಧ್ವಜ ದಲ್ಲಿ ಕೇಸರಿ ಬಿಳಿ ಹಸಿರು ಬಣ್ಣದಲ್ಲಿ ಕೇಸರಿ ತ್ಯಾಗದ, ಬಿಳಿ ಶಾಂತಿ ಹಾಗೂ ಹಸಿರು ಬಣ್ಣ ಸಮೃದ್ಧಿಯ ಬಗ್ಗೆ ಅರ್ಥವನ್ನು ಸೂಚಿಸುತ್ತದೆ. ಶಾಂತಿ ಮತ್ತು ಸಮೃದ್ಧಿ ಇರಬೇಕಾದರೆ ತ್ಯಾಗ ಅನಿವಾರ್ಯ. ಹಾಗಾಗಿ ನಾನು ತ್ಯಾಗದ ಬಣ್ಣವನ್ನು ಸೂಚಿಸುವ ಕೇಸರಿ ಬಣ್ಣದ ಶಾಲು ಹಾಕಿಕೊಳ್ಳುತ್ತೇನೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದರು. ಇತ್ತೀಚಿಗೆ ಅಂಗಾರ...

ಕೆವಿಜಿ ಆಯರ್ವೇದ ಕಾಲೇಜಿನಲ್ಲಿ ಮೀನುಕೃಷಿ ಕಾರ್ಯಗಾರ – ಸ್ಥಳೀಯ ಮಟ್ಟದ ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ – ಅಂಗಾರ

ನಮ್ಮ ಸ್ಥಳೀಯ ತೋಟಗಳಲ್ಲಿ ಅನೇಕ ಕೆರೆಗಳಿವೆ. ಅವುಗಳಲ್ಲಿ ಹೇಗೆ ವೈಜ್ಞಾನಿಕವಾಗಿ ಮೀನುಕೃಷಿ ಮಾಡಬಹುದು ಎಂಬುದರ ಕುರಿತು ಯೋಜನೆ ರೂಪಿಸಬೇಕಿದೆ ಎಂದು ಸಚಿವ ಎಸ್ .ಅಂಗಾರ ಅವರು ಹೇಳಿದರು. ಕೆವಿಜಿ ಆಯುರ್ವೇದ ಫಾರ್ಮಾ ಮತ್ತು ಸಂಶೋಧನಾ ಘಟಕದಲ್ಲಿ ನಡೆದ ಮೀನು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದ.ಕ , ಉಡುಪಿ ಭಾಗಗಳ ಮೀನುಗಾರಿಕೆ...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ನೇಮಕ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇದ್ದೀನ್ ಕುಂಞ ಅರಂತೋಡು ಆಯ್ಕೆಯಾದರು.ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ್ ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಜಿ.ಕೆ.ಹಮೀದ್ ರವರ ಶಿಫಾರಸು ಮೇರೆಗೆ ರಾಜ್ಯ ಅಲ್ಪಸಂಖ್ಯಾತ...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಪಡ್ಪಿನಂಗಡಿ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ಪಡ್ಪಿನಂಗಡಿ, ಕಾರ್ಯದರ್ಶಿ ಯಾಗಿ ಬಶೀರ್ ಯು. ಪಿ.ಬೆಳ್ಳಾರೆ, ಉಪಾಧ್ಯಕ್ಷರಾಗಿ, ಇದ್ದೀನ್ ಕುಂಞಿ ಅರಂತೋಡು ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸಾಹುಲ್ ಹಮೀದ್ ಕೆ. ಕೆ, ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ , ಸುಳ್ಯ ಬ್ಲಾಕ್ ಅಧ್ಯಕ್ಷರಾದ ಜಯರಾಮ್...

ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಲಿಸ್ಸಿ ಮೊನಾಲಿಸಾ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಲಿಸ್ಸಿ ಮೊನಾಲಿಸಾ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿಲ್ಲಾಧ್ಯಕ್ಷರಾದ ಕೆ.ಕೆ.ಶಾಹುಲ್ ಹಮೀದ್ ರವರು ನೇಮಕಗೊಳಿಸಿದ್ದಾರೆ.ಇಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಯೀದ್ ಅಹ್ಮದ್ ರವರು ನೇಮಕಾತಿ ಆದೇಶ ಪತ್ರವನ್ನು ಲಿಸ್ಸಿ ಮೊನಾಲಿಸಾರವರಿಗೆ ಹಸ್ತಾಂತರಿಸಿದರು.ಎ.ಐ.ಸಿ.ಸಿ.ಕಾರ್ಯದರ್ಶಿಗಳಾದ ಐವನ್ ಡಿ'ಸೋಜಾ, ಸುಳ್ಯ ಬ್ಲಾಕ್...
Loading posts...

All posts loaded

No more posts

error: Content is protected !!