ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಬಶೀರ್ ಯು ಪಿ ಬೆಳ್ಳಾರೆ ಆಯ್ಕೆಯಾಗಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಂ , ಕೆ ಪಿ ಸಿ ಸಿ ಮುಖಂಡ ಟಿ ಎಂ ಶಹೀದ್ , ಸುಳ್ಯ ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷ ಜಿ ಕೆ ಹಮೀದ್ ರವರ ಶಿಫಾರಸ್ಸಿನಂತೆ ಜಿಲ್ಲಾಧ್ಯಕ್ಷ...

ಸುಳ್ಯ ರೇಂಜ್ ತಹ್’ಖೀಖ್-ಮುಅಲ್ಲಿಂ ರಿಲೀಫ್ ಫಂಡ್ ಚಾಲನೆ

ಸುಳ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮದ್ರಸ ಮೇನೇಜ್ ಮೆಂಟ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ತಹ್'ಖೀಖ್-2021 ರೇಂಜ್ ವಿಶೇಷ ಸಭೆ ಹಾಗೂ ಮುಅಲ್ಲಿಂ ಡೇ ಆಚರಣೆ ಸುಳ್ಯ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ಮದ್ರಸಗಳಲ್ಲಿ ಕಲಿಸುತ್ತಿರುವ ಅಧ್ಯಾಪಕರ ಕ್ಷೇಮಕ್ಕಾಗಿ ಮುಅಲ್ಲಿಂ ರಿಲೀಫ್ ಫಂಡ್ ಗೆ ಚಾಲನೆ ನೀಡಲಾಯಿತು. ಟಿ.ಎಂ.ಶಹೀದ್ 10,000 ರೂ ಹಸ್ತಾಂತರ ಮಾಡುವ...
Ad Widget

ಅಚ್ರಪ್ಪಾಡಿ ಶಾಲೆಯ ಶ್ವೇತಾ, ಪೇರಾಲಿನ ಸುನಂದ, ಮರ್ಕಂಜದ ಕೆಂಚವೀರಪ್ಪರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Swetha Kenchaveerappa 2021 ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ಮೂವರು ಭಾಜನರಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಯ ಶ್ವೇತಾ ಕೆ., ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪೇರಾಲು ಶಾಲೆಯ ಸುನಂದ, ಪ್ರೌಢಶಾಲಾ ವಿಭಾಗದಲ್ಲಿ ಮರ್ಕಂಜದ ಚಿತ್ರಕಲಾ ಶಿಕ್ಷಕ ಕೆಂಚವೀರಪ್ಪ ರವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಅಚ್ರಪ್ಪಾಡಿ ಶಾಲೆಗೆ ಮುಖ್ಯ ಶಿಕ್ಷಕಿಯ ಸಹೋದರರಿಂದ ಟಿವಿ ಹಾಗೂ ಇನ್ವರ್ಟರ್ ಕೊಡುಗೆ

ಕರೋನದಿಂದ ಇಡೀ ದೇಶ ಹಾಗೂ ಜಗತ್ತಿನ ಎಲ್ಲ ಭಾಗಗಳಲ್ಲಿ ಜನರ ಎಲ್ಲಾ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕೆಗಳು ಬೌದ್ಧಿಕ ತರಗತಿಗಳು ನಡೆಯದೇ ಆನ್ಲೈನ್ ಶಿಕ್ಷಣಕ್ಕೆ ಸರ್ಕಾರಗಳು ಹೆಚ್ಚಿನ ಒತ್ತು ನೀಡುತ್ತಿರುವ ಈ ಸಂದರ್ಭದಲ್ಲಿ 1 ರಿಂದ ದ್ವಿತೀಯ ಪಿಯುಸಿ ತನಕದ ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪ್ರತಿದಿನ ಸಂವೇದ ತರಗತಿಗಳು ನಡೆಯುತ್ತಿವೆ. ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಅಭಾವದಿಂದ...

ಜಯನಗರ : ಗಂಡನ ಸಂಬಂಧಿಯೊಂದಿಗೆ ಹೆಂಡತಿ ಪರಾರಿ

ಜಯನಗರದ ಸುಮಾರು ೩೬ ವರ್ಷದ ಮಹಿಳೆಯೊಬ್ಬಳು ತನ್ನ ಗಂಡ ಮಾನಸಿಕ ಹಿಂಸೆ ನೀಡುತ್ತಾನೆ ಎಂದು ಆರೋಪಿಸಿ ಇಬ್ಬರು ಮಕ್ಕಳೊಂದಿಗೆ ಗಂಡನ ಸಂಬಂಧಿಕನೊಂದಿಗೆ ಓಡಿಹೋದ ಘಟನೆ ವರದಿಯಾಗಿದೆ. ಕೆಲ ದಿನಗಳ ಹಿಂದೆ ಈ ಮಹಿಳೆಯೇ ಸುಳ್ಯ ಪೋಲೀಸ್ ಠಾಣೆಗೆ ತೆರಳಿ ಗಂಡ ತನಗೆ ಹಿಂಸೆ ನೀಡುತ್ತಾನೆ. ನನಗೆ ಈತನೊಂದಿಗೆ ಇರಲು ಸಾಧ್ಯವಿಲ್ಲ ಎಂದು ದೂರು ನೀಡಿದ್ದಳು. ಬಳಿಕ...

ಸುಳ್ಯ : ಸವಿತಾ ಜ್ಯುವೆಲ್ಲರಿ ವರ್ಕ್ಸ್ ಶುಭಾರಂಭ

ಸುಳ್ಯದ ಜ್ಯೋತಿ ವೃತ್ತದ ಬಳಿ ಸವಿತಾ ಜ್ಯುವೆಲ್ಲರಿ ವರ್ಕ್ ಸೆ.1 ರಂದು ಶುಭಾರಂಭಗೊಂಡಿದೆ. ಇಲ್ಲಿ ಎಲ್ಲಾ ಬಗೆಯ ಚಿನ್ನ ಬೆಳ್ಳಿಯ ಕೆಲಸಗಳನ್ನು ಮಾಡಿಕೊಡಲಾಗುವುದು. ಹಾಗೂ ಗ್ರಾಹಕರು ತಮಗೆ ಬೇಕಾದಂತೆ ಆಭರಣ, ಮೂರ್ತಿ ಹಾಗೂ ಇತರ ಸಾಮಗ್ರಿಗಳನ್ನು ತಯಾರಿಸಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.

ಕುರುಂಜಿಭಾಗ್ : ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ

ಸುಳ್ಯದ ಕುರುಂಜಿಭಾಗ್ ಕೆ.ವಿ.ಜಿ.ಸರ್ಕಲ್ ನಲ್ಲಿ ಶ್ರೀ ಮಹಾಲಕ್ಷ್ಮಿ ಜನರಲ್ ಸ್ಟೋರ್ ಶುಭಾರಂಭ ಸೆ.1ರಂದು ಶುಭಾರಂಭಗೊಂಡಿತು. ಎಲ್ಲಾ ಬಗೆಯ ಉತ್ತಮ ಗುಣಮಟ್ಟದ ಜಿನಸು ಸಾಮಾಗ್ರಿಗಳು ದೊರೆಯುತ್ತದೆ. ಸುಳ್ಯ ನಗರ 2 ಕಿ.ಮೀ ವ್ಯಾಪ್ತಿಯಲ್ಲಿ ಹೋಮ್ ಡೆಲಿವರಿ ಲಭ್ಯವಿದೆ ಎಂದು ಮಾಲಕರಾದ ಸಂದೀಪ್ ತಿಳಿಸಿದ್ದಾರೆ.

ಮರ್ಕಂಜ ಪಿಡಿಓ ಆಗಿ ರವಿಚಂದ್ರ ಅಧಿಕಾರ ಸ್ವೀಕಾರ

ಮರ್ಕಂಜ ಗ್ರಾಮ ಪಂಚಾಯತ್ ನ ಪ್ರಭಾರ ಪಿಡಿಓ ಆಗಿ ರವಿಚಂದ್ರ ಎ ಅಧಿಕಾರ ಸ್ವೀಕರಿಸಿದರು. ಪಿಡಿಓ ಧನಪತಿಯವರು ಅಧಿಕಾರ ಹಸ್ತಾಂತರಿಸಿದರು.ಧನಪತಿಯವರು ಗುತ್ತಿಗಾರು ಗ್ರಾಮ ಪಂಚಾಯತ್ ಗೆ ವರ್ಗಾವಣೆಯಾಗಿದ್ದಾರೆ.

ಬೆಳ್ಳಾರೆಯಲ್ಲಿ ‘ಕ್ಷಯ ಮುಕ್ತ ಭಾರತ’ ಕಿರುಚಿತ್ರಕ್ಕೆ ಮುಹೂರ್ತ

ಜೇಸಿಐ ಬೆಳ್ಳಾರೆ, ಯುವ ಜೇಸಿ ವಿಭಾಗ, ಕ್ಷಯ ಚಿಕಿತ್ಸಾ ಘಟಕ ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ನಡೆಯುತ್ತಿರುವ 'ಕ್ಷಯ ಮುಕ್ತ ಭಾರತ' ಕಿರುಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸೆ.1ರಂದು ನಡೆಯಿತು. ಕಿರುಚಿತ್ರದ ಮುಹೂರ್ತವನ್ನು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಜೇಸಿ ರಾಜೀವಿ.ಆರ್ ರೈ ನೆರವೇರಸಿ ಕಿರುಚಿತ್ರಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ...

ಅರಂತೋಡು : ಮಾತೃಶ್ರೀ ಜನರಲ್ ಸ್ಟೋರ್ & ಚಿಕನ್ ಸೆಂಟರ್ ಶುಭಾರಂಭ

ತೊಡಿಕಾನ ಗ್ರಾಮದಲ್ಲಿ ಪರ್ನೋಜಿ ಉಲ್ಲಾಸ್ ನಗರದಲ್ಲಿ ನಿವೃತ್ತ ಸೈನಿಕ ಚಂಗಪ್ಪ ಗೌಡ ಕಲ್ಲಗದ್ದೆ ಮಾಲಕತ್ವದ ಮಾತೃಶ್ರೀ ಜನರಲ್ ಸ್ಟೋರ್ & ಚಿಕನ್ ಸೆಂಟರ್ ಸೆ.1 ರಂದು ಶುಭಾರಂಭಗೊಂಡಿತು.
Loading posts...

All posts loaded

No more posts

error: Content is protected !!