ಆ.29 : ದರ್ಖಾಸ್ತು ಹಿ.ಪ್ರಾ.ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...

ಗೂನಡ್ಕ : ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ

ಮಾಣಿ‌- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ‌ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್‌ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ...
Ad Widget

ಪಂಜ: ಶ್ರೀಮತಿ ಅನಸೂಯ.ಸಿ.ಕೆ ನಿಧನ

ಪಂಜ ಸಂಕಡ್ಕ ನಿವಾಸಿ ಕೂತ್ಕುಂಜ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರ ಪತ್ನಿ ಶ್ರೀಮತಿ ಅನಸೂಯ.ಸಿ.ಕೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.20ರಂದು ನಿಧನರಾದರು. ಅವರಿಗೆ 49 ವರ್ಷ ವಯಸ್ಸಾಗಿತ್ತು.ಶ್ರೀಮತಿ ಅನಸೂಯ.ಸಿ.ಕೆ ಯವರು ಪಂಜ ವನಿತಾ ಸಮಾಜದ ಕಾರ್ಯದರ್ಶಿಯಾಗಿ, ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದರು.

ಬೆಳ್ಳಾರೆ : ‘ಕ್ಷಯ ಮುಕ್ತ ಭಾರತ’ ವಿಶೇಷ ರಂಗ ತರಬೇತಿ ಉದ್ಘಾಟನೆ

ಜೇಸಿಐ ಬೆಳ್ಳಾರೆ, ಯುವ ಜೇಸಿಐ ಬೆಳ್ಳಾರೆ, ಕ್ಷಯ ಚಿಕಿತ್ಸಾ ಘಟಕ - ಆರೋಗ್ಯ ಇಲಾಖೆ ಸುಳ್ಯ ನೇತೃತ್ವದಲ್ಲಿ ಕ್ಷಯ ರೋಗ ಕುರಿತು ಜಾಗೃತಿ ಮೂಡಿಸುವ ಕಿರುಚಿತ್ರ 'ಕ್ಷಯ ಮುಕ್ತ ಭಾರತ' ಇದರ ವಿಶೇಷ ರಂಗ ತರಬೇತಿಯ ಉದ್ಘಾಟನೆ ಬೆಳ್ಳಾರೆ ಜೇಸಿ ಭವನದಲ್ಲಿ ಆ.23ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ...

ಬಿಜೆಪಿ ಮಹಿಳಾ ಮೋರ್ಚಾದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಸನ್ಮಾನ

ಸುಳ್ಯ ಬಿಜೆಪಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರಿಗೆ ಸನ್ಮಾನ ಮಾಡಲಾಯಿತು.ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ, ಕಾರ್ಯದಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಬಾರ್ ತೆರೆಯಬಾರದೆಂದು ಹರ್ಷಿತ್ ಅವರು ಅಕ್ರಮ ಗಣಿಗಾರಿಕೆ ಹಣೆಪಟ್ಟಿ ಕಟ್ಟಿ ನಮ್ಮನ್ನು ಮಣಿಸಲು ಯತ್ನಿಸುತ್ತಿದ್ದಾರೆ – ದೇವಿಪ್ರಸಾದ್ ಚಿಕ್ಮುಳಿ

ನಾವು ನಮ್ಮ ಕಟ್ಟಡದಲ್ಲಿ ಬಾರ್ ತೆರೆದರೆ ತಮ್ಮ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಅಕ್ರಮ ಗಣಿಗಾರಿಕೆ ಎಂಬ ಹಣೆಪಟ್ಟಿ ನೀಡಿ ಹರ್ಷಿತ್ ಕೊರಂಬಟ ಮತ್ತು ನಿವೃತ್ತ ಪಿಡ್ಲ್ಯೂಡಿ ಇಂಜಿನಿಯರ್ ಗಿರೀಶ್ ಕೊರಂಬಟ ಎಂಬವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಕಾರ್ಯಕರ್ತ ಎಂದು ಬಿಂಬಿಸಿಕೊಂಡಿರುವ ಅಡ್ಕಾರು ವಿನೋಬನಗರದ ಭೋಜಪ್ಪ ನಾಯ್ಕ ಅವರನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ದೇವಿಪ್ರಸಾದ್...

ಸುಳ್ಯ : ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ

ಸುಳ್ಯ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಪಕ್ಷದ ಕಚೇರಿಯಲ್ಲಿ ಆ.23 ರಂದು ನಡೆಯಿತು.‌ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಓಬಿಸಿ ಸುಳ್ಯ ಮಂಡಲ ಅಧ್ಯಕ್ಷ ಚಂದ್ರಶೇಖರ್ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಬಿಜೆಪಿ ಮಂಡಲ...

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನುತುಪ್ಪ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ

ಪುತ್ತೂರಿನಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಯವರು ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯ ಜೇನುತುಪ್ಪವನ್ನು ಇಂದು ಉದ್ಘಾಟಿಸಿ ಮಾರುಕಟ್ಟೆಗೆ ಪರಿಚಯಿಸಿದರು. ಈ ಸಂದರ್ಭದಲ್ಲಿ ಪುತ್ತೂರಿನ ಶಾಸಕರಾದ ಮಾನ್ಯ ಸಂಜೀವ ಮಠಂದೂರು, ಗ್ರಾಮಜನ್ಯದ ಅಧ್ಯಕ್ಷರಾದ ರಾಮಕೃಷ್ಣ ಭಟ್ ಕುರುಂಬುಡೆಲು, ನಿರ್ದೇಶಕರಾದ ಮೂಲಚಂದ್ರ ಕೆ., ಶಂಕರ ಭಾರದ್ವಾಜ್, ರಾಮಪ್ರತೀಕ ಕರಿಯಾಲ,...

ತಾಳೆ ಬೆಳೆಗಾರರ ಸಂಘದ ವತಿಯಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ – ರೈತರಿಗೆ ಬೆಂಬಲ ಬೆಲೆ ಹಾಗೂ ಕೃಷಿಗೆ ವಿಸ್ತರಣೆಗೆ ಪ್ರೋತ್ಸಾಹ ನೀಡಲು ಒತ್ತಾಯ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆಯವರು ಸುಳ್ಯಕ್ಕೆ ಬಂದಿದ್ದ ಸಂದರ್ಭದಲ್ಲಿ ತಾಳೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಬಗ್ಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಅಂತರ ರಾಷ್ಟ್ರೀಯ ಪಾಮ್ ಎಣ್ಣೆ ದರ ಆಧರಿಸಿ ಎಣ್ಣೆ ಹಾಗೂ ತಾಳೆ ಹಣ್ಣಿನ ಖರೀದಿ ದರ ನಿರ್ಧರಿಸಲಾಗುತ್ತದೆ.ಆ ಬೆಲೆ ಇಲ್ಲಿನ ಉತ್ಪಾದಕ ವೆಚ್ಚದ ಅನ್ವಯ ಲಾಭದಾಯಕವಾಗುವುದಿಲ್ಲ...

ಎಲಿಮಲೆ : ರಕ್ಷಾಬಂಧನ

ಎಲಿಮಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಯೋಧ್ಯೆ ಶಾಖೆ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಆ 22 ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.ಶಾಖೆಯ ಪ್ರಮುಖ್ ಹಾಗೂ ಸದಸ್ಯರು ಮತ್ತು ಸ್ಥಳೀಯರು ಸಹೋದರತೆಯನ್ನು ಸಾರುವ ರಕ್ಷೆಯನ್ನು ಪರಸ್ಪರ ರಾಖಿ ಕಟ್ಟುವುದರೊಂದಿಗೆ ಆಚರಿಸಿದರು.
Loading posts...

All posts loaded

No more posts

error: Content is protected !!