ಏನೆಕಲ್ಲು : ಕರ್ನಾಟಕ ಅರೆಬಾಸೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ವತಿಯಿಂದ ವಾದ್ಯ ಪರಿಕರಗಳ ವಿತರಣೆ

ಕರ್ನಾಟಕ ಅರೆಬಾಸೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ವಿಶೇಷ ಘಟಕ ಯೋಜನೆಯ ಅಡಿಯಲ್ಲಿ ಅಂದಾಜು 30000/- ಮೊತ್ತದ ವಾದ್ಯ ಪರಿಕರಗಳನ್ನು ಕಡಬ ತಾಲೂಕಿನ ಏನೆಕಲ್ ನಿವಾಸಿ ಪ್ರವೀಣ್ ಇವರಿಗೆ ಅಕಾಡೆಮಿಯ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪುರುಷೋತ್ತಮ ಕರಂಗಲ್ಲು, ಕುಸುಮಾದರ ಎ.ಟಿ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ,ಪುರುಷೋತ್ತಮ ಕಿರ್ಲಾಯ ಇವರು...

ಕುಕ್ಕೆ ಸುಬ್ರಹ್ಮಣ್ಯ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಗೆ ವೇಗ ನೀಡಲು ಸಚಿವರಿಗೆ ಒತ್ತಾಯ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಮಾಸ್ಟರ್ ಪ್ಲಾನ್ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ರಾಜ್ಯದ ಮುಜರಾಯಿ ಸಚಿವೆ ಸನ್ಮಾನ್ಯ ಶ್ರೀಮತಿ ಶಶಿಕಲಾ ಜೊಲ್ಲೆ ಅವರಿಗೆ ಸುಳ್ಯ ಕ್ಷೇತ್ರದ ಶಾಸಕರು, ಮಾನ್ಯ ಸಚಿವರು ಆಗಿರುವ ಶ್ರೀ ಎಸ್ ಅಂಗಾರ ಅವರ ನೇತೃತ್ವದಲ್ಲಿ ವಿಕಾಸಸೌಧದ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ ಈ ಯೋಜನೆಯ ಬಗ್ಗೆ...
Ad Widget

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಶಿರಾಡಿ ಘಾಟಿ ವೀಕ್ಷಣೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಆ.17 ರಂದು ಶಿರಾಡಿ ಘಾಟಿ ವೀಕ್ಷಣೆ ಕಾರ್ಯಕ್ರಮ ನಡೆಯಿತು. ದೋಣಿಗಲ್ ಪ್ರದೇಶದಲ್ಲಿ ಕುಸಿತಗೊಂಡ ಶಿರಾಡಿ ಘಾಟಿ ರಸ್ತೆಯನ್ನು ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಅವರು ಶಿರಾಡಿ ಘಾಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಗಾಲದಲ್ಲಿ ಕುಸಿತ ಸಂಭವಿಸುತ್ತಿದೆ....

ಬೆಳ್ಳಾರೆ: ಹಿರಿಯ ಉದ್ಯಮಿ ಚಂದ್ರಶೇಖರ ಶೆಣೈ ನಿಧನ

ಬೆಳ್ಳಾರೆಯ ಕೆಳಗಿನ ಪೇಟೆಯ ಹಿರಿಯ ಉದ್ಯಮಿ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನ ಚಂದ್ರಶೇಖರ ಶೆಣೈ ಆ.19ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಚಿತ್ರ ಶೆಣೈ, ಪುತ್ರರಾದ ಚೇತನ್ ಶೆಣೈ, ಶ್ರೀ ಗುರುರಾಘವೇಂದ್ರ ಸ್ಟೋರ್ಸ್ ನಡೆಸುತ್ತಿರುವ ಜೇಸೀ ಬೆಳ್ಳಾರೆಯ ಪೂರ್ವಾಧ್ಯಕ್ಷ ಮಿಥುನ್ ಶೆಣೈ, ಓರ್ವ ಸಹೋದರ, ಮೂವರು ಸಹೋದರಿಯರು...

ಮಂಗಳೂರು ವಿ.ವಿ. ಸಂಧ್ಯಾ ಕಾಲೇಜಿನಿಂದ ಅನಿಂದಿತ್ ಅವರಿಗೆ “ಲೆಟರ್ ಆಫ್ ಅಪ್ರಿಸಿಯೇಶನ್”

ಮಂಗಳೂರು ವಿ.ವಿ.‌ ಸಂಧ್ಯಾ ಕಾಲೇಜಿನಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯದ ಯುವಕ ಅನಿಂದಿತ್ ಗೌಡ ಕೊಚ್ಚಿ ಬಾರಿಕೆ ಅವರು ಭಾಗವಹಿಸಿದ್ದರು. "ಸ್ವಾತಂತ್ರ್ಯ ಸಮರದಲ್ಲಿ ನಮ್ಮವರು" ಎಂಬ ವಿಷಯದಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪೆನಿಯ ವಿರುದ್ಧ 1857 ರಿಗಿಂತ ಇಪ್ಪತ್ತು ವರ್ಷಗಳ ಹಿಂದೆಯೇ ಭಾರತದಲ್ಲಿ, ಅದು ಕೂಡ...

ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆ ನಿಧನ

ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಸಂಪಾಜೆ : ಮುಸ್ಲಿಮ್ ಒಕ್ಕೂಟದಿಂದ “ನನ್ನ ಕನಸಿನ ಭಾರತ” ಭಾಷಣ ಸ್ಪರ್ಧೆ

75ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 15 ಆಗಸ್ಟ್ 2021 ರಂದು ಮುಸ್ಲಿಮ್ ಒಕ್ಕೂಟ ಸಂಪಾಜೆ ವಾಟ್ಸಪ್ ಗ್ರೂಪ್ ನಲ್ಲಿ "ನನ್ನ ಕನಸಿನ ಭಾರತ" ವಿಷಯದಲ್ಲಿ ನಡೆದ ಕನ್ನಡ ಭಾಷಣ ಸ್ಪರ್ಧೆ ನಡೆದಿತ್ತು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸ್ವಾದಿಕ್ ಸಂಪಾಜೆ, ದ್ವಿತೀಯ ಸ್ಥಾನವನ್ನು ಮೊಹಮ್ಮದ್ ಹಾಸಿಮ್, ತೃತೀಯ ಶಮೀರ್ ಮೌಲವಿ ಪಡೆದರು.

ಸುಳ್ಯ : ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ

ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸುಳ್ಯ, ತಾಲ್ಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ, ತಾಲ್ಲೂಕಿನಲ್ಲಿ ಹೊಸದಾಗಿ ರಚನೆ ಯಾದ 12 ಪ.ಪಂಗಡ ಸ್ತ್ರೀ ಶಕ್ತಿ ಗುಂಪುಗಳಿಗೆ ಸುಳ್ಯ ತಾಲ್ಲೂಕು ಸ್ತ್ರೀ ಶಕ್ತಿ ಭವನದಲ್ಲಿ ನಡೆದ 3...

ಬಾಬು ಪೂಜಾರಿ ಕಳಂಜ ನಿಧನ

ಕಳಂಜ ನಿವಾಸಿ ಬಾಬು ಪೂಜಾರಿ ಕಳಂಜ ಹೃದಯಾಘಾತದಿಂದ ಆ.15ರಂದು ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಭವಾನಿ, ಪುತ್ರ ಸುಧೀರ್, ಪುತ್ರಿಯರಾದ ಶ್ರೀಮತಿ ಜಯಶ್ರೀ, ಶ್ರೀಮತಿ ಸುಜಾತ ಈಶ್ವರಮಂಗಲ, ಶ್ರೀಮತಿ ವಿಜಯಶ್ರೀ ಬೆಂಗಳೂರು ಹಾಗೂ ಸಹೋದರರಾದ ಆನಂದ ಪೂಜಾರಿ ಕಳಂಜ, ಐತ್ತಪ್ಪ ಪೂಜಾರಿ ಕಳಂಜ, ಸುಂದರ ಪೂಜಾರಿ ಸಜೀಪ ಮೇಲ್ಕಾರ್, ಸಹೋದರಿಯರಾದ...

ಕಾಣಿಯೂರು: ವಿನೂತನ ಹುಟ್ಟು ಹಬ್ಬಕ್ಕೆ ಸಾಕ್ಷಿಯಾದ ಚಾರ್ವಾಕದ ಯುವಕ

ಕಡಬ ತಾಲೂಕಿನ ಕಾಣಿಯೂರಿನ ಚಾರ್ವಾಕದ ಯುವಕ ರಾಜೇಶ್ ತನ್ನ ಹುಟ್ಟು ಹಬ್ಬವನ್ನು ವಿನೂತನ ರೀತಿಯಲ್ಲಿ ಆಚರಿಸಿಕೊಂಡು ಬಡ ಕುಟುಂಬಕ್ಕೆ ಆಸರೆಯಾಗಿದ್ದಾರೆ. ಪ್ರತಿಯೊಬ್ಬರೂ ಹುಟ್ಟು ಹಬ್ಬವನ್ನು ಒಂದು ರೀತಿಯಲ್ಲಿ ಮೋಜು ಮಸ್ತಿಯೊಂದಿಗೆ ಆಚರಿಸುತ್ತಾರೆ. ಆದರೆ ಅದಕ್ಕೆ ಅಪವಾದವೆಂಬಂತೆ ಚಾರ್ವಾಕದ ಯುವಕ ಶ್ರೀ ದುರ್ಗಾ ಅರ್ಥ್ ಮೂವರ್ಸ್ ಮಾಲೀಕ ರಾಜೇಶ್ ಚಾರ್ವಾಕ ತೀರ ಬಡಕುಟುಂಬದ ಶೇಖರ ಪೂಜಾರಿ ಅವರ...
Loading posts...

All posts loaded

No more posts

error: Content is protected !!