- Monday
- July 6th, 2026
ಪೆರುವೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಇದನ್ನು ಮನಗಂಡ ಊರಿನ ನಾಗರಿಕರು ಶ್ರಮದಾನದ ಮೂಲಕ ಸರಿಪಡಿಸಿದರು. ಈ ರಸ್ತೆ ಸಂಚಾರಕ್ಕೆ ದುಸ್ತರವಾಗಿದ್ದು ಆದಷ್ಟು ಬೇಗ ಕಾಂಕ್ರೀಟಿಕರಣಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.
ಅಜ್ಜಾವರ ಗ್ರಾಮದ ತುದಿಯಡ್ಕ ಶ್ರೀ ಸದಾಶಿವ ದೇವಾಲಯದ ಆವರಣ ಹಾಗೂ ಸುತ್ತಮುತ್ತಲೂ ಗಿಡ ಗಂಟಿಗಳು ಬೆಳೆದಿದ್ದು ಇದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸೋಮನಾಥ ಮುಳ್ಯಕಜೆ, ಕಾರ್ಯದರ್ಶಿ ಗುರುವಪ್ಪ ಹಾಗೂ ಸಂಘದ ಸದಸ್ಯರಾದ ಲಕ್ಷ್ಮಣ, ಕುಶಲ, ಲೋಕೇಶ್,ಅಜಿತ್ ಕುಶಾಲಪ್ಪ, ಕಮಲಾಕ್ಷ ಮುಂತಾದವರು ಪಾಲ್ಗೊಂಡಿದ್ದರು.
ಅಮರಮುಡ್ನೂರಿನ ಅಮರ ಸಂಘಟನಾ ಸಮಿತಿಯಿಂದ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಸುಬ್ರಹ್ಮಣ್ಯ, ಉಪ ವಿಭಾಗ ಪಂಜ ವಲಯ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 'ಮರ ಬೆಳೆಸಿ, ಬರ ಅಳಿಸಿ-ತಾಪ ಇಳಿಸಿ' ಧ್ಯೇಯದೊಂದಿಗೆ ದೇವಚಳ್ಳದ ಮಾವಿನಕಟ್ಟೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಕಳೆದ ಬಾರಿ ನೆಟ್ಟಿರುವ ಗಿಡಗಳ...
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.ಧ್ವಜಾರೋಹಣ ವನ್ನು ಶಾಲಾ ಮುಖ್ಯಶಿಕ್ಷಕಿ ಯು.ಪಿ.ಕುಸುಮಾವತಿ ನೆರವೇರಿಸಿದರು.ಈ ಸಂದರ್ಭದಲ್ಲಿ ಶಿಕ್ಷಕರಾದ ಕುಮಾರ್ ಕೆ.ಎಲ್., ಜಯಲತಾ ಕೆ.ಆರ್., ಮೀನಾಕುಮಾರಿ .ಕೆ, ಸವಿತಾ ಕುಮಾರಿ, ಶಿವಪ್ರಕಾಶ ಕೆ., ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ್.ಕೆ, ಸಿಬ್ಬಂದಿ ಬೇಬಿ.ಕೆ ಇದ್ದರು.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗೋವಿಂದನಗರ ಮತ್ತು ಅಂಗನವಾಡಿ ಕೇಂದ್ರ ದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಹಿರಿಯ ಮುಖ್ಯ ಗುರುಗಳಾದ ಗೋಪಾಲಕೃಷ್ಣ ಭಟ್ ರವರು ದ್ವಜಾರೋಹಣ ಸಂದರ್ಭದಲ್ಲಿ ರಾಷ್ಟ್ರ ನಾಯಕರನ್ನು ನೆನೆಯುತ್ತಾ ದೇಶಭಕ್ತಿ, ರಾಷ್ಟ್ರ ದ್ವಜದ ಮಹತ್ವ, ಸೈನಿಕರ ತ್ಯಾಗದ ಬಗ್ಗೆ ತಿಳಿಸಿದರು. ಎಸ್.ಡಿ.ಎಂ.ಸಿ ಅದ್ಯಕ್ಷರಾದ ಮುತ್ತಪ್ಪ, ಉಪಾಧ್ಯಕ್ಷರಾದ ಕಮಲ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ...
ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿ ಶೇಣಿ ಇದರ ವತಿಯಿಂದ ಸ್ವಾಂತಂತ್ರ್ಯ ಉತ್ಸವದ ಪ್ರಯುಕ್ತ ಶೇಣಿ ಪರಿಸರದಲ್ಲಿ ಗಿಡ ನೆಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.ಅದೇ ರೀತಿ ಕಳೆದ ವರ್ಷ ನೆಟ್ಟ ಗಿಡಗಳ ಉಪಚಾರ, ಮತ್ತು ಶೇಣಿ ಚೊಕ್ಕಾಡಿ ರಸ್ತೆಯ ಮಧ್ಯೆ ಸುಳುಗೊಡು ಎಂಬಲ್ಲಿ ರಸ್ತೆಗೆ ಬಿದ್ದಿದ್ದ ಮರ ತೆರವು ಮಾಡುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಧರ್ಮಪಾಲ...
ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳ ಧ್ವಜಾರೋಹಣ ನೆರವೇರಿಸಿ ಪ್ರಮಾಣವಚನ ಬೋಧಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಹರ್ಷನ್.ಕೆ.ಟಿ ಹಾಗೂ ಗ್ರಾ.ಪಂ. ಸದಸ್ಯ ಕರುಣಾಕರ ಆಳ್ವ 75ನೇ ಸ್ವಾತಂತ್ರ್ಯೋತ್ಸವಕ್ಕೆ ಸರ್ವರಿಗೂ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕೊಡಿಯಾಲ...
ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತಾದ ಸಂದೇಶವನ್ನು ನೀಡಿದರು .ಮುಖ್ಯ ಶಿಕ್ಷಕರಾದ ಯಶೋಧರ ನಾರಾಲು ಶುಭ ಹಾರೈಸಿದರು. ವಿದ್ಯಾರ್ಥಿನಿ ಯರಾದ ಖುಷಿ .ಪಿ.ಎಸ್ ,ಮೇಘ ನಾ .ಎಂ .ಕೆ .ಶ್ರಾವ್ಯ .ಧ್ವಜಗೀತೆ ಹಾಡಿದರು....
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಶಶಿಧರ್ ಭಟ್ ನೆಟ್ಟಾರು ನೆರವೇರಿಸಿದರು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಭುವನೇಶ್ವರ್ ಪಿ. ಶುಭ ಹಾರೈಸಿದರು. ಶಾಲಾ ಮುಖ್ಯಗುರು ಸುಬ್ಬಯ್ಯ ವೈ ಬಿ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಮೂರ್ತಿ ಸ್ವಾಗತಿಸಿದರು. ಶಿಕ್ಷಕ ಶಿವಪ್ರಸಾದ್...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ 75 ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್.ಡಿ.ಯಂ.ಸಿ ಅಧ್ಯಕ್ಷರಾದ ಶ್ರೀ ಲೋಕೇಶ್ವರ.ಡಿ.ಆರ್ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನೆಲ್ಸನ್, ಶಿಕ್ಷಕರಾದ ಪ್ರಸನ್ನ ಕುಮಾರ್.ವೈ.ಬಿ, ದ್ವಿತೀಯ ದರ್ಜೆ ಸಹಾಯಕರಾದ ಸೋಮಶೇಖರ್.ಯಂ, ಕಾಲೇಜು ವಿಭಾಗದ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್.ಎ.ವೈ ಎಸ್.ಡಿ.ಯಂ.ಸಿ. ಸದಸ್ಯರಾದ...
Loading posts...
All posts loaded
No more posts
