ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಐದನೇ ವರ್ಷದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಇಂದು ಶಾಂತಿನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಲತಾ, ಜೀವವಿಮಾ ನಿಗಮದ ಸದಸ್ಯ ಚಂದ್ರರಾವ್, ಭಜನಾ ಮಂಡಳಿ ಅಧ್ಯಕ್ಷ ಜಗದೀಶ್, ಒಕ್ಕೂಟದ ಅಧ್ಯಕ್ಷ ನಾರಾಯಣರವರು ಉಪಸ್ಥಿತರಿದ್ದರು. ಸದಸ್ಯರೆಲ್ಲರೂ ಸೇರಿ ಭಜನಾ ಮಂದಿರದ ಆವರಣ...

ಕಳಂಜ : ಪಟ್ಟೆ ಗುಳಿಗ ಬನದಲ್ಲಿ ಆಟಿಯ ಅಗೇಲು ಸೇವೆ

ಸುಮಾರು 100 ವರ್ಷಗಳಿಗೂ ಅಧಿಕ ಇತಿಹಾಸವಿರುವ ಕಳಂಜ ಗ್ರಾಮದ ಪಟ್ಟೆ ಗುಳಿಗ ದೈವಕ್ಕೆ ವರ್ಷಂಪ್ರತಿಯಂತೆ ಆಟಿಯ ಅಗೇಲು ಸೇವೆ ಆ.8 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾಮದ ಭಕ್ತರು ಉಪಸ್ಥಿತರಿದ್ದರು.
Ad Widget

ಅಜ್ಜಾವರ : ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆಗಳನ್ನು ತೆರವುಗೊಳಿಸಿದ ಸ್ಥಳೀಯರು

ಅಜ್ಜಾವರ ಗ್ರಾಮದ ಕೊಂಬರಡ್ಕ ರಸ್ತೆಬದಿಗಳಲ್ಲಿ ವಿದ್ಯುತ್ ತಂತಿಗೆ ತಾಗಿಕೊಂಡಿರುವ ಮರದ ರೆಂಬೆ ಕೊಂಬೆಗಳನ್ನು ಕಡಿಯುವ ಮೂಲಕ ಸ್ಥಳೀಯ ಯುವಕರ ತಂಡವು ಶ್ರಮದಾನ ನಡೆಸಿದೆ.ಈ ಶ್ರಮದಾನ ಕಾರ್ಯದಲ್ಲಿ ಸ್ಥಳೀಯ ನಿವಾಸಿಗಳಾದ ದಾಮೋದರ, ಗಣೇಶ ಪಳ್ಳತ್ತಡ್ಕ, ರಾಮಾದಾಸ , ಗಂಗಾಧರ , ವಿಜಯ , ಜಯರಾಜ್ , ಪವಿತ್ರಕುಮಾರ್, ನಿಖಿಲ್ , ‌ಚಂದ್ರಶೇಖರ, ವಿಜಯಕುಮಾರ್,ಮೋಹನ ಕಾಂತಮಂಗಲ , ದೀಕ್ಷಿತ್...

ಸುಬ್ರಹ್ಮಣ್ಯ : ಶಿಕ್ಷಕನ ಮೇಲೆ ಅತ್ಯಾಚಾರ ಆರೋಪ – ಬಂಧನ

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ.

ಸುಬ್ರಹ್ಮಣ್ಯ : ಶಿಕ್ಷಕನ ಮೇಲೆ ಅತ್ಯಾಚಾರ ಆರೋಪ – ಬಂಧನ

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕ, ರಾಯಚೂರು ಮೂಲದ ಗುರುರಾಜ್ ಎಂಬವರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿ ಅಪ್ರಾಪ್ತ ವಿದ್ಯಾರ್ಥಿನಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ಆಧಾರದಲ್ಲಿಆತನನ್ನು ಬಂಧನಕ್ಕೊಳಪಡಿಸಲಾಗಿದೆ. ಫೊಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಈ ಹಿಂದೆಯೂ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿದ್ದನೆಂದು ಸ್ಥಳೀಯರು ತಿಳಿಸಿದ್ದಾರೆ.

ನೆಲ್ಲೂರು ಕೆಮ್ರಾಜೆ: ಕೆರೆಗೆ ಬಿದ್ದು ತಾಯಿ- ಮಗು ಮೃತ್ಯು

ನೆಲ್ಲೂರು ಕೆಮ್ರಾಜೆ ಯ ಮಾಪಲಕಜೆಯಲ್ಲಿ ಕೆರೆಗೆ ಬಿದ್ದು ತಾಯಿ ಹಾಗೂ ಮಗು ಮೃತಪಟ್ಟ ಘಟನೆ ನಡೆದಿದೆ.ತೋಟದಲ್ಲಿನ ಕೆರೆಯ ಬಳಿ ಮಗು ಕಾಲುಜಾರಿ ಬಿದ್ದಾಗ ಅದನ್ನು ರಕ್ಷಿಸಲು ಸಂಗೀತಾ ಅವರು ಕೆರೆಗೆ ಹಾರಿದ್ದಾರೆ. ಆದರೆ ಈಜು ಭಾರದ ಅವರು ಮಗುವನ್ನು ರಕ್ಷಿಸಲೂ ಆಗದೆ ಇತ್ತ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲಾಗದೇ ಮೃತಪಟ್ಟಿದ್ದಾರೆ. ಸಂಗಿತಾ ಹಾಗೂ ಮಗುವಿನ ಮೃತದೇಹ ಮೇಲೆತ್ತಲಾಗಿದ್ದು...

ಬೆಳ್ಳಾರೆ : ಸಚಿವ ಅಂಗಾರರಿಗೆ ಮನವಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರರನ್ನು ಭೇಟಿ ಮಾಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ತಡಕಜೆ 3 ಮೂರನೇ ವಾರ್ಡಿನ ಸದಸ್ಯರಾದ ದಿನೇಶ್ ಚಂದ್ರ, ವೀಣಾ, ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಪನ್ನೆ, ಜಯರಾಮ ಉಮಿಕ್ಕಳ, ರಾಮಕೃಷ್ಣ ಭಟ್, ಪ್ರೇಮ್ ಸ್ಟುಡಿಯೋ ಬೆಳ್ಳಾರೆ, ಉಲ್ಲಾಸ್ ಹೊಟೇಲ್ ವಸಂತ, ಮಾಧವ ತಡಕಜೆ, ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಪ್ರದೀಪ್...

ಜರ್ನಲಿಸ್ಟ್ ಯೂನಿಯನ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷ- ಜೆ.ಕೆ ರೈ , ಕಾರ್ಯದರ್ಶಿ- ಶಿವಪ್ರಸಾದ್ ಆಲೆಟ್ಟಿ, ಖಜಾಂಜಿ- ಶಿವರಾಮ ಕಜೆಮೂಲೆ

ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ ಇದರ ವಾರ್ಷಿಕ ಮಹಾಸಭೆಯು ಆ.3 ರಂದು ಬೆಳ್ಳಾರೆ ದೇವಿ ಹೈಟ್ಸ್ ಸಭಾಭವನದಲ್ಲಿ ಜರುಗಿತು. ಕೆ.ಜೆ.ಯು. ಅಧ್ಯಕ್ಷ ಉಮೇಶ್ ಮಣಿಕ್ಕಾರ್ ರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೆ.ಜೆ. ಯು ಜಿಲ್ಲಾಧ್ಯಕ್ಷ ಹರೀಶ್ ಬಂಟ್ವಾಳ್, ಗೌರವಾಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕಾರ್ಯದರ್ಶಿ ಯಶ್ವಿತ್ ಕಾಳಮ್ಮನೆ, ಖಜಾಂಜಿ ಶ್ರೀಧರ ಕಜೆಗದ್ದೆ ಉಪಸ್ಥಿತರಿದ್ದರು. ಈ ಸಂದರ್ಭ...

ರೈಲಿನಡಿಗೆ ಬಿದ್ದು ಎಡಮಂಗಲದ ಯುವಕ ಮೃತ್ಯು

ಎಡಮಂಗಲದಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ಎಡಮಂಗಲ ಗ್ರಾಮದ ಪಟ್ಲದಮೂಲೆ ನಿವಾಸಿ ಭರತ್ (24) ಮೃತಪಟ್ಟ ದುರ್ದೈವಿ.ಎಡಮಂಗಲದ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ ನಾಯ್ಕರ ಪುತ್ರರಾಗಿರುವ ಭರತ್ ಕೂಲಿ ಕೆಲಸಕ್ಕೆ ಹೋಗುವವರಾಗಿದ್ದು, ಸಂಜೆ ಎಡಮಂಗಲದಲ್ಲಿರುವ ಟೈಲರ್ ಶಾಪ್ ಗೆ ಹೋಗಿ ಹಿಂತಿರುಗುವ ಸಂದರ್ಭದಲ್ಲಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಅಡಿಗೆ...

ಬಂದರು ಮತ್ತು ಮೀನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ : ಸಚಿವ ಎಸ್.ಅಂಗಾರ ಭರವಸೆ

ಬಂದರು ಮತ್ತು ಮೀನುಗಾರಿಕೆ ಸೇರಿದಂತೆ ಒಳನಾಡು ಜಲ ಸಾರಿಗೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಯಾವುದೇ ಖಾತೆ ನೀಡಿದರೂ ಅದನ್ನು ನಿಭಾಯಿಸಲು ಸಿದ್ಧನಿದ್ದೆ. ನನಗೆ ಈ ಹಿಂದೆ ನಿರ್ವಹಿಸಿದ್ದ ಖಾತೆ ದೊರಕಿರುವುದರಿಂದ ಸಂತಸವಾಗಿದೆ. ಈ ಹಿಂದೆ ಇದೇ ಖಾತೆಯನ್ನು ನಿರ್ವಹಣೆ ಮಾಡಿದ್ದುದರಿಂದ ಪ್ರಗತಿ ಕಾರ್ಯಕ್ಕೆ ಅನುಕೂಲಕರವಾಗಿದೆ. ಅಲ್ಲದೆ ಈ ಹಿಂದಿನ ಯೋಜನೆಗಳನ್ನು ಮುಂದುರೆಸಲು ಇದು...
Loading posts...

All posts loaded

No more posts

error: Content is protected !!