- Monday
- May 4th, 2026
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿರ್ಮಾಣದ,ಜೀವನ್ ರಾಂ ಸುಳ್ಯ ನಿರ್ದೇಶನದ,ರಂಗ- ಚಿತ್ರ ಕಲಾವಿದ ಮೋಹನ ಸೋನರ ಸಾಕ್ಷ್ಯಚಿತ್ರ ಯುಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಅದ್ಭುತ ಕಲಾವಿದ ಮೋಹನ ಸೋನರ ಜೀವನ ಸಾಧನೆಯ ಸಾಕ್ಷ್ಯಚಿತ್ರ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ https://youtu.be/hlqN34FblgU
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ)ಸುಳ್ಯ ದೊಡ್ಡತೋಟ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ದೊಡ್ಡತೋಟ ವಲಯ, ಜನಜಾಗೃತಿ ವೇದಿಕೆ ದೊಡ್ಡತೋಟ ,ಅರಣ್ಯ ಇಲಾಖೆ ಮರ್ಕಂಜ ಮತ್ತು ಗ್ರಾಮ ಅರಣ್ಯ ಸಮಿತಿ, ಹಾಗೂ ಸ. ಹಿ .ಪ್ರಾ ಶಾಲೆ ಮಿತ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ಆ.2 ರಂದು ಅರಣ್ಯೀಕರಣ ಗಿಡ...
ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದ ರಚನೆಯಾಗಲಿದ್ದು ಮಧ್ಯಾಹ್ನ 2 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿದೆ. ಸುಳ್ಯದ ಮಾಜಿ ಸಚಿವ ಎಸ್. ಅಂಗಾರ ಮತ್ತೊಮ್ಮೆ ಸಚಿವರಾಗುವುದು ಖಚಿತವಾಗಿದೆ. ಸಿಎಂ ಬೊಮ್ಮಾಯಿ ಯವರು ಅಂಗಾರರಿಗೆ ಕರೆ ಮಾಡಿ ಬೆಂಗಳೂರಿಗೆ ಬರಲು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಕರಾವಳಿಯ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಪೂಜಾರಿ ಹಾಗೂ...
ಬೆಳ್ಳಾರೆ ಕೊಳಂಬಳ ಅರ್ನಾಡಿ ಎಂಬಲ್ಲಿ ಖಾಸಗಿ ರಸ್ತೆಗೆ ಪಂಚಾಯತ್ ಬೀದಿದೀಪ ಅಳವಡಿಸಿದ್ದನ್ನು ಪಿಡಿಒ ನೇತೃತ್ವದಲ್ಲಿ ತೆರವು ಮಾಡಲಾಗಿತ್ತು. ಈ ಕುರಿತು ಸರಿಯಾದ ಕ್ರಮ ಕೈಗೊಂಡಿದ್ದರೂ ಪಿಡಿಒ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ರು. ಬಿಜೆಪಿ ಕಾರ್ಯಕರ್ತನ ಮನೆಯ ಹತ್ತಿರದ ಸಾರ್ವಜನಿಕ ರಸ್ತೆಗೆ ಹೋಗುವ ಬೀದಿ ದೀಪ ತೆರವುಗೊಳಿಸಿದ್ದಾರೆ. ಅನಿಲ್ ರೈ ಕುಮ್ಮಕ್ಕಿನಿಂದ ಗ್ರಾಂ ಪಂ. ಬೆಳ್ಳಾರೆ...
ಆಗಸ್ಟ್ ಒಂದರಿಂದ ಹದಿನೈದರವರೆಗಿನ "ಸ್ವಚ್ಚ ಭಾರತ್ ಪಾಕ್ಷಿಕ ಅಭಿಯಾನ" ಯೋಜನೆ ಅಂಗವಾಗಿ ನೆಹರು ಯುವ ಕೇಂದ್ರ, ಮಡಿಕೇರಿ ಇವರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ ,ಊರುಬೈಲು, ಇದರ ಸದಸ್ಯರು ಆಗಸ್ಟ್ 1ರಂದು ಚೆಂಬು ಗ್ರಾಮದ ಎಲ್ಲಾ ಪ್ರಮುಖ ಸೇತುವೆಗಳನ್ನು ಸ್ವಚ್ಚಗೊಳಿಸಿ ,ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ಯತೀಶ್ ಹನಿಯಡ್ಕ ಸಂಘದ ಸದಸ್ಯರಿಗೆ...
ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಗೂನಡ್ಕದ ಸಲೀಂ ಎಂಬ ಯುವಕನಿಗೆ ದಾವಣಗೆರೆಯ ಬೊಲೆರೋ ವಾಹನ ಡಿಕ್ಕಿ ಹೊಡೆದು ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ಗೂನಡ್ಕದಲ್ಲಿ ನಡೆದಿದೆ.ಬೈಕ್ ಗೆ ಡಿಕ್ಕಿ ಹೊಡೆದು ಬೊಲೆರೋ ಚಾಲಕ ವಾಹವನ್ನು ಮುಂದಕ್ಕೆ ಚಲಾಯಿಸಿಕೊಂಡು ಸಾಗಿದ ಬಳಿಕ ಸ್ಥಳೀಯರು ಬೊಲೆರೋವನ್ನು ಚಟ್ಟೆಕಲ್ಲು ಎಂಬಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಿಗೆ ಸುಳ್ಯದಲ್ಲಿ ಚಿಕಿತ್ಸೆ...
ಸುಳ್ಯ ಲಯನ್ಸ್ ಕ್ಲಬ್ ಹಾಗೂ ಆಲೆಟ್ಟಿ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಹಸಿರೇ ಉಸಿರು ಕಾರ್ಯಕ್ರಮದಡಿಯಲ್ಲಿ ಆಲೆಟ್ಟಿ ಗ್ರಾಮದಾದ್ಯಂತ ಸುಮಾರು 10 ಸಾವಿರ ಗಿಡ ನೆಡುವ ವನಮಹೋತ್ಸವ ಕಾರ್ಯಕ್ರಮಕ್ಕೆ ಜುಲೈ 31ರಂದು ಚಾಲನೆ ನೀಡಲಾಯಿತು. ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವೇದಿಕೆಯಲ್ಲಿ ನಡೆದ ಸಮಾರಂಭವನ್ನು ಡಾ. ಯು.ಪಿ.ಶಿವಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್...
ಬ್ಯಾಚುಲರ್ ಆಫ್ ಬ್ಯುಸಿನೆಸ್ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾ ಸಿಂಗಾಪುರ್ ಯುನಿವರ್ಸಿಟಿ ನಲ್ಲಿ ಪೂರೈಸಿ ಇನ್ನುಳಿದ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾದ ಜೇಮ್ಸ್ ಕುಕ್ ಯೂನಿವರ್ಸಿಟಿ ಯಲ್ಲಿ ಪೂರೈಸಿ ಆಸ್ಟ್ರೇಲಿಯಾದ ಬ್ರಿಸ್ಬೇನ್ ಕ್ಯಾಂಪಸ್ ಫೆಲೋಶಿಪ್ ಅನ್ನು ಪ್ರಜ್ವಲ್ ಹೊದ್ದೆಟ್ಟಿ ಪಡೆದಿರುತ್ತಾರೆ. ಇವರು ಮಂಗಳೂರಿನಲ್ಲಿ ನೆಲೆಸಿರುವ ಗೋವರ್ಧನ ಹೊದ್ದೆಟ್ಟಿ ಹಾಗೂ...
ಸ್ವರ್ಣ ಮಹಿಳಾ ಮಂಡಲ (ರಿ) . ಕನಕಮಜಲು ಇದರ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು.31ರಂದು ಶ್ರೀ ಆತ್ಮ ರಾಮ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಕೃತಿಕಾ ಗುರುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಾರದಾ ಉಗ್ಗಮೂಲೆ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ...
ಕೋನಡ್ಕಪದವು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ರಚಿಸುವ ಬಗ್ಗೆ ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಜು.27ರಂದು ಸಭೆ ನಡೆಯಿತು.ಈ ಸಭೆಯಲ್ಲಿ ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರುಗಳಾದ ಎಸ್.ಟಿ. ಜಯರಾಮ ರೈ, ನಾರಾಯಣ ಪ್ರಕಾಶ್ ಹಾಗೂ ಉಪವ್ಯವಸ್ಥಾಪಕರಾದ ಡಾ.ಸತೀಶ್ ರಾವ್ ಮತ್ತು ವಿಸ್ತರಣಾ ಅಧಿಕಾರಿ ನಾಗೇಶ್ರವರು ಭಾಗವಹಿಸಿ ಮಾಹಿತಿಯನ್ನು ನೀಡಿದರು.ನಂತರ...
Loading posts...
All posts loaded
No more posts
