ಸುಳ್ಯ : ಚಿತ್ರ ಕಲಾವಿದ, ರಂಗ ನಿರ್ದೇಶಕ ಮೋಹನ್ ಸೋನಾ ಸಾಕ್ಷ್ಯ ಚಿತ್ರ ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಪ್ರಸಿದ್ಧ ಚಿತ್ರ ಕಲಾವಿದ, ರಂಗ ನಿರ್ದೇಶಕ ಮೋಹನ್ ಸೋನಾ ರ ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಸಾಕ್ಷ್ಯ ಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜೀವನ್ ರಾಂ ರಂಗಮನೆ,...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ – ಅಧ್ಯಕ್ಷರಾಗಿ ಪದ್ಮನಾಭ ಮುಂಡೋಕಜೆ, ಕಾರ್ಯದರ್ಶಿ ಗಣೇಶ್ ಮಾವಂಜಿ, ಕೋಶಾಧಿಕಾರಿ ದಯಾನಂದ ಕೊರತ್ತೋಡಿ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವರದಿ ವಾಚಿಸಿದರೆ, ಕೋಶಾಧಿಕಾರಿ ಲೋಕೇಶ್ ಗುಡ್ಡೆಮನೆ ಲೆಕ್ಕಪತ್ರ ಮಂಡಿಸಿದರು.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಸಂಘದ ಗೌರವಾಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿದ್ದರು.2021-22 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ...
Ad Widget

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ .ಕೆ. ಎಸ್ . ಎನ್ಎಂ ಎಂ ಎಸ್ ಪರೀಕ್ಷೆ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿಯವರಿಗೆ ನಡೆಸಿದ 2020- 21ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ನಾಲ್ಕು ವರ್ಷಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ . ಇವರು ಕಾಣಿಯೂರು ಗ್ರಾಮದ ಅಬ್ಬರ ಮನೆ ಶ್ರೀ ಶಿವರಾಮ ಕೆ ಮತ್ತು...

ಎನ್ಎಂಸಿ: “ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ”ರಾಜ್ಯಮಟ್ಟದ ವೆಬಿನರ್

ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ "ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ"ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ...

ಅಮಲೇರಿದ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

ವ್ಯಕ್ತಿಯೋರ್ವ ಅಮಲೇರಿ ಕಾರು ಚಲಾಯಿಸಿದ ಪರಿಣಾಮ ರೋಗಿಯನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಇನ್ನೊಂದು ಕಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದು ರಸ್ತೆಯ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿ ಜು. 30 ರಂದು ನಡೆದಿದೆ. ಸುಳ್ಯದಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಪೇರಾಲಿನ ಹುಕ್ರಪ್ಪ ಗೌಡ ಎಂಬವರ ಮಗ ಮಂಜುನಾಥ್ ಚಲಾಯಿಸುತ್ತಿದ್ದ ಮಾರುತಿ...

ಚೊಕ್ಕಾಡಿ ಎಜುಕೇಷನ್ ಸೊಸೈಟಿ ಪುನರ್ ರಚನೆ -ಅಧ್ಯಕ್ಷರಾಗಿ ಎಸ್. ಅಂಗಾರ, ಸಂಚಾಲಕರಾಗಿ ರಾಧಾಕೃಷ್ಣ ಬೊಳ್ಳೂರು ಆಯ್ಕೆ

ಚೊಕ್ಕಾಡಿ ಪ್ರೌಢಶಾಲೆ ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿರುವ ಚೊಕ್ಕಾಡಿ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯನ್ನು ಪುನರ್ ರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಸಚಿವರೂ ಆಗಿರುವ ಶಾಸಕ ಎಸ್. ಅಂಗಾರ ಹಾಗೂ ಸಂಚಾಲಕರಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು ಆಯ್ಕೆಯಾಗಿದ್ದಾರೆ. ಜುಲೈ 27 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಪುನರ್ ರಚನೆ...

ಸುಳ್ಯ : ವಿಷ ಸೇವಿಸಿ ಕೆ.ಎಫ್.ಡಿ.ಸಿ ಉದ್ಯೋಗಿ ಆತ್ಮಹತ್ಯೆ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಕೌಟುಂಬಿಕ...

ಬೆಳ್ಳಾರೆ ರೋಟರಿ ಕ್ಲಬ್ ಪದಗ್ರಹಣ ಸಮಾರಂಭ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದೇವಿ ಹೈಟ್ಸ್‌ನ ಅನುಗ್ರಹ ಸಭಾಂಗಣದಲ್ಲಿ ಜು.28 ರಂದು ನಡೆಯಿತು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಆಸ್ಕರ್ ಆನಂದ ನೂತನ ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭಹಾರೈಸಿದರು. ನೂತನ ಅಧ್ಯಕ್ಷರಾಗಿ ಪದ್ಮನಾಭ ಬೀಡು, ಕಾರ್ಯದರ್ಶಿ ಕೆ.ವಿನಯಕುಮಾರ್, ಸರ್ಜೆಂಟ್ ಆರ್ಮ್ ರಾಜಗೋಪಾಲ, ನಿಕಟಪೂರ್ವಾಧ್ಯಕ್ಷ ಮೋನಪ್ಪ ಗೌಡ...

ಸಂಪಾಜೆ : ಗ್ರಾಮದ ಸಮಸ್ಯೆಯ ಬಗ್ಗೆ ಸಹಾಯಕ ಕಮೀಷನರ್ ನೇತ್ರತ್ವದಲ್ಲಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಸಹಾಯಕ ಕಮಿಷನರ್ ಡಾ. ಯತೀಶ್ ಉಳ್ಳಾಲ್ ಅವರ ನೇತೃತ್ವದಲ್ಲಿ ಅಧ್ಯಕ್ಷತೆಯಲ್ಲಿ ಸಂಪಾಜೆ ಗ್ರಾಮದ ಸಮಸ್ಯೆ ಬಗ್ಗೆ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ ಹಮೀದ್ಗ್ರಾಮದ ಸಮಸ್ಯೆಗಳ ಸಂಪೂರ್ಣ ವಿವರ ನೀಡಿದರು. ಸಹಾಯಕ ಕಮಿಷನರ್ ಪ್ಲಾಟಿಂಗ್ ಸಮಸ್ಯೆ ಬಗ್ಗೆ ಪ್ರತಿ ಸರ್ವೆ ನಂಬರ್ ಮಾಹಿತಿ ಪಡೆದು, ಜಂಟಿ ಸರ್ವೆ...

ಗುತ್ತಿಗಾರು : ಲೋಕಾರ್ಪಣೆಗೆ ಸಿದ್ದವಾದ ವಿದ್ಯುತ್ ಸಬ್ ಸ್ಟೇಷನ್

ಗುತ್ತಿಗಾರು ಗ್ರಾಮದ ಮೊಗ್ರದಲ್ಲಿ 33/11 ವಿದ್ಯುತ್ ಸಬ್ ಸ್ಟೇಷನ್ ಕಾಮಗಾರಿ ಮುಕ್ತಾಯದ ಹಂತ ತಲುಪಿದ್ದು ಶೀಘ್ರ ಕಾರ್ಯಾರಂಭಗೊಳ್ಳಲಿದೆ. ಇದರಿಂದ ಈ ಭಾಗದ ಕೃಷಿಕರ,ವರ್ತಕರ, ಕಿರು ಇಂಡಸ್ಟ್ರಿಗಳ ವಿದ್ಯುತ್ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
Loading posts...

All posts loaded

No more posts

error: Content is protected !!