- Tuesday
- July 7th, 2026
ಆಗಸ್ಟ್ ಒಂದರಿಂದ ಹದಿನೈದರವರೆಗಿನ "ಸ್ವಚ್ಚ ಭಾರತ್ ಪಾಕ್ಷಿಕ ಅಭಿಯಾನ" ಯೋಜನೆ ಅಂಗವಾಗಿ ನೆಹರು ಯುವ ಕೇಂದ್ರ, ಮಡಿಕೇರಿ ಇವರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ ,ಊರುಬೈಲು, ಇದರ ಸದಸ್ಯರು ಆಗಸ್ಟ್ 1ರಂದು ಚೆಂಬು ಗ್ರಾಮದ ಎಲ್ಲಾ ಪ್ರಮುಖ ಸೇತುವೆಗಳನ್ನು ಸ್ವಚ್ಚಗೊಳಿಸಿ ,ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ ಯತೀಶ್ ಹನಿಯಡ್ಕ ಸಂಘದ ಸದಸ್ಯರಿಗೆ...
ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಗೂನಡ್ಕದ ಸಲೀಂ ಎಂಬ ಯುವಕನಿಗೆ ದಾವಣಗೆರೆಯ ಬೊಲೆರೋ ವಾಹನ ಡಿಕ್ಕಿ ಹೊಡೆದು ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ಗೂನಡ್ಕದಲ್ಲಿ ನಡೆದಿದೆ.ಬೈಕ್ ಗೆ ಡಿಕ್ಕಿ ಹೊಡೆದು ಬೊಲೆರೋ ಚಾಲಕ ವಾಹವನ್ನು ಮುಂದಕ್ಕೆ ಚಲಾಯಿಸಿಕೊಂಡು ಸಾಗಿದ ಬಳಿಕ ಸ್ಥಳೀಯರು ಬೊಲೆರೋವನ್ನು ಚಟ್ಟೆಕಲ್ಲು ಎಂಬಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನಿಗೆ ಸುಳ್ಯದಲ್ಲಿ ಚಿಕಿತ್ಸೆ...
ಸುಳ್ಯ ಲಯನ್ಸ್ ಕ್ಲಬ್ ಹಾಗೂ ಆಲೆಟ್ಟಿ ಗ್ರಾಮ ಪಂಚಾಯತ್ ಇದರ ಆಶ್ರಯದಲ್ಲಿ ಹಸಿರೇ ಉಸಿರು ಕಾರ್ಯಕ್ರಮದಡಿಯಲ್ಲಿ ಆಲೆಟ್ಟಿ ಗ್ರಾಮದಾದ್ಯಂತ ಸುಮಾರು 10 ಸಾವಿರ ಗಿಡ ನೆಡುವ ವನಮಹೋತ್ಸವ ಕಾರ್ಯಕ್ರಮಕ್ಕೆ ಜುಲೈ 31ರಂದು ಚಾಲನೆ ನೀಡಲಾಯಿತು. ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವೇದಿಕೆಯಲ್ಲಿ ನಡೆದ ಸಮಾರಂಭವನ್ನು ಡಾ. ಯು.ಪಿ.ಶಿವಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್...
ಬ್ಯಾಚುಲರ್ ಆಫ್ ಬ್ಯುಸಿನೆಸ್ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾ ಸಿಂಗಾಪುರ್ ಯುನಿವರ್ಸಿಟಿ ನಲ್ಲಿ ಪೂರೈಸಿ ಇನ್ನುಳಿದ ಎರಡು ವರ್ಷಗಳ ವಿದ್ಯಾಭ್ಯಾಸ ವನ್ನು ಆಸ್ಟ್ರೇಲಿಯಾದ ಜೇಮ್ಸ್ ಕುಕ್ ಯೂನಿವರ್ಸಿಟಿ ಯಲ್ಲಿ ಪೂರೈಸಿ ಆಸ್ಟ್ರೇಲಿಯಾದ ಬ್ರಿಸ್ಬೇನ್ ಕ್ಯಾಂಪಸ್ ಫೆಲೋಶಿಪ್ ಅನ್ನು ಪ್ರಜ್ವಲ್ ಹೊದ್ದೆಟ್ಟಿ ಪಡೆದಿರುತ್ತಾರೆ. ಇವರು ಮಂಗಳೂರಿನಲ್ಲಿ ನೆಲೆಸಿರುವ ಗೋವರ್ಧನ ಹೊದ್ದೆಟ್ಟಿ ಹಾಗೂ...
ಸ್ವರ್ಣ ಮಹಿಳಾ ಮಂಡಲ (ರಿ) . ಕನಕಮಜಲು ಇದರ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು.31ರಂದು ಶ್ರೀ ಆತ್ಮ ರಾಮ ಭಜನಾ ಮಂದಿರದಲ್ಲಿ ನಡೆಯಿತು. ಶ್ರೀಮತಿ ಕೃತಿಕಾ ಗುರುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಾರದಾ ಉಗ್ಗಮೂಲೆ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ...
ಕೋನಡ್ಕಪದವು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ರಚಿಸುವ ಬಗ್ಗೆ ಕೋನಡ್ಕಪದವು ಅಂಗನವಾಡಿ ಕೇಂದ್ರದಲ್ಲಿ ಜು.27ರಂದು ಸಭೆ ನಡೆಯಿತು.ಈ ಸಭೆಯಲ್ಲಿ ದ.ಕ. ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರುಗಳಾದ ಎಸ್.ಟಿ. ಜಯರಾಮ ರೈ, ನಾರಾಯಣ ಪ್ರಕಾಶ್ ಹಾಗೂ ಉಪವ್ಯವಸ್ಥಾಪಕರಾದ ಡಾ.ಸತೀಶ್ ರಾವ್ ಮತ್ತು ವಿಸ್ತರಣಾ ಅಧಿಕಾರಿ ನಾಗೇಶ್ರವರು ಭಾಗವಹಿಸಿ ಮಾಹಿತಿಯನ್ನು ನೀಡಿದರು.ನಂತರ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಪ್ರಸಿದ್ಧ ಚಿತ್ರ ಕಲಾವಿದ, ರಂಗ ನಿರ್ದೇಶಕ ಮೋಹನ್ ಸೋನಾ ರ ಸಾಕ್ಷ್ಯ ಚಿತ್ರ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಸಾಕ್ಷ್ಯ ಚಿತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜೀವನ್ ರಾಂ ರಂಗಮನೆ,...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟರವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ ವರದಿ ವಾಚಿಸಿದರೆ, ಕೋಶಾಧಿಕಾರಿ ಲೋಕೇಶ್ ಗುಡ್ಡೆಮನೆ ಲೆಕ್ಕಪತ್ರ ಮಂಡಿಸಿದರು.ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಂಗಾಧರ ಕಲ್ಲಪಳ್ಳಿ, ಲೋಕೇಶ್ ಪೆರ್ಲಂಪಾಡಿ, ಸಂಘದ ಗೌರವಾಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿದ್ದರು.2021-22 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ...
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ 8ನೇ ತರಗತಿಯವರಿಗೆ ನಡೆಸಿದ 2020- 21ನೇ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದ ವಿದ್ಯಾರ್ಥಿನಿ ಪಲ್ಲವಿ ಕೆ ಎಸ್ ನಾಲ್ಕು ವರ್ಷಗಳ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ . ಇವರು ಕಾಣಿಯೂರು ಗ್ರಾಮದ ಅಬ್ಬರ ಮನೆ ಶ್ರೀ ಶಿವರಾಮ ಕೆ ಮತ್ತು...
ನೆಹರೂ ಮೆಮೋರಿಯಲ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದಿಂದ "ವೃತ್ತಿ ಜೀವನದ ಕಡೆಗೆ ಮಾರ್ಗಸೂಚಿ"ಎಂಬ ವಿಷಯದ ಬಗ್ಗೆ ರಾಜ್ಯಮಟ್ಟದ ವೆಬಿನರ್ ಜುಲೈ 30ರಂದು ನಡೆಯಿತು.ಮಂಗಳೂರು ವಿಶ್ವವಿದ್ಯಾಲಯದ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಕುಮಾರಿ ಕಾವ್ಯ ಪಿ ಹೆಗ್ಡೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ...
Loading posts...
All posts loaded
No more posts
