- Saturday
- April 25th, 2026
ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಆಶ್ರಯದಲ್ಲಿ ಸಂಸ್ಥೆಯ ದಶ ಸಂಭ್ರಮಾಚರಣೆಯ, ದಶ ಕಾರ್ಯಕ್ರಮಗಳ ಅಂಗವಾಗಿ ಚಿಣ್ಣರ ಹಬ್ಬ ಕಾರ್ಯಕ್ರಮ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಫೆ. 24ರಂದು ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ ಪನ್ನೆ ಉದ್ಘಾಟಿಸಿ ಮಾತನಾಡಿ ಪುಟಾಣಿಗಳ ಮನಸ್ಸನ್ನು ಅರಳಿಸುವುದೇ ಚಿಣ್ಣರ ಹಬ್ಬ ಕಾರ್ಯಕ್ರಮ ಮುಖ್ಯ ಆಶಯ ವಾಗಲಿ ಎಂದರು. ಕರ್ನಾಟಕ...
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದಲ್ಲಿರುವ ಅರಂಬೂರು ಮನೆತನದ ಕುದ್ಕುಳಿ ಎಂಬಲ್ಲಿ ಶ್ರೀ ವಿಷ್ಣುಮೂರ್ತಿ ಶ್ರೀ ಧರ್ಮದೈವ ಹಾಗೂ ಶ್ರೀ ಕುಕ್ಕೆತ್ತಿಬಲ್ಲು ಸಪರಿವಾರ ದೈವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ, ಶ್ರೀ ರುದ್ರ ಚಾಮುಂಡಿ, ಕುಕ್ಕೆತ್ತಿ ಬಲ್ಲು ಹಾಗೂ ಉಪದೈವಗಳ ನಡಾವಳಿ ನೇಮೋತ್ಸವ ಫೆ.22 ಹಾಗೂ 23 ರಂದು ನಡೆಯಿತು. ಫೆ.22 ರಂದು ಬೆಳಿಗ್ಗೆ ಚಾವಡಿಯಲ್ಲಿ ಶ್ರೀ ವೆಂಕಟೇಶ ಶಾಸ್ತ್ರೀ...
ಸುಳ್ಯ ಪಟ್ಟಣಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚಿಸಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 2011 ರಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆಯಡಿಯಲ್ಲಿ ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ಸ್ಥಳೀಯ ಯೋಜನಾ ಪ್ರದೇಶವನ್ನಾಗಿ ಘೋಷಿಸಿ ಸುಳ್ಯ ಪಟ್ಟಣ ಪಂಚಾಯತ್ ಯೋಜನಾ ಪ್ರಾಧಿಕಾರ ಎಂದು ಆದೇಶಿಸಲಾಗಿತ್ತು. ಅದರಂತೆ ಇದನ್ನು ಇದೀಗ ಪ್ರತ್ಯೇಕ ಯೋಜನಾ...
ಸುಳ್ಯ ರೈತ ಉತ್ಪಾದಕರ ಕಂಪನಿ ವತಿಯಿಂದ ಕಾಫಿ ಮಂಡಳಿ ಕೊಡಗು ತೋಟಗಾರಿಕೆ ಇಲಾಖೆ ಸುಳ್ಯ ಗ್ರಾಮ ಪಂಚಾಯತ್ ಸಂಪಾಜೆ ದ. ಕ .ಜಂಟಿ ಆಶ್ರಯದಲ್ಲಿ ಕಾಫಿ ಬೆಳೆಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಕೆ ಮಾಡಿದರು. ಮಾಜಿ ಅಧ್ಯಕ್ಷರಾದ ಜಗದೀಶ್ ಕೆ....
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್ಾನ್ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ...
ನಾಲ್ಕೂರು ಗ್ರಾಮದ ಕಲ್ಲಾಜೆ ದಿ.ಕರಿಯಪ್ಪ ಇವರ ಪತ್ನಿ ತಂಗಮ್ಮ ಅಲ್ಪಕಾಲದ ಅಸೌಖ್ಯದಿಂದ ಫೆ. 22 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರಿಯರಾದ ಶ್ರೀಮತಿ ಸೀತಮ್ಮ ಶೀರಾಜೆ, ಶ್ರೀಮತಿ ದುರ್ಗೆಶ್ವರಿ ಕಿರಿಭಾಗ ( ಕೊತ್ನಡ್ಕ) ಹಾಗೂ ಸೊಸೆಯಂದಿರು, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇದರ ನೂತನ ಪದಾಧಿಕಾರಿಗಳ ನೇಮಕ ಆಯ್ಕೆ ಹಾಗೂ ಮಹಾಸಭೆ ಫೆ.23 ರಂದು ನಡಯಿತು. ಹಾಲಿ ಅಧ್ಯಕ್ಷ ರಂಜಿತ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಲೆಕ್ಕ ಪತ್ರ ಮಂಡನೆ ಮಾಡಿ ನೂತನ ಯೋಜನೆಗಳ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ರಂಜಿತ್ ಕುಮಾರ್ ಪುನರಾಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಬಾಲಕುಮಾರನ್,...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತ್ರತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ...
ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ...
ಕೊಲ್ಲಮೊಗ್ರ ಪೇಟೆಯಿಂದ ಕಟ್ಟ ರಸ್ತೆ ಸಂಪರ್ಕಿಸುವಲ್ಲಿ ಸರ್ಕಲ್ ನಿರ್ಮಾಣ ಹಾಗೂ ಮೋರಿ ನಿರ್ಮಾಣ ಗಾಮಗಾರಿಗೆ ಗ್ರಾ.ಪಂ.ಮೋಹಿನಿ ಕಟ್ಟ ಗುದ್ದಲಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ನ ರೂ. 10 ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ನೇಮಿಚಂದ್ರ ಬಳ್ಳಡ್ಕ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷೆ ಮೋಹಿನಿ ಕಟ್ಟ, ಗ್ರಾ.ಪಂ.ಉಪಾಧ್ಯಕ್ಷ ಮಾಧವ ಚಾಂತಾಳ, ಪಿಡಿಓ...
Loading posts...
All posts loaded
No more posts
