ದೇವಚಳ್ಳ : ಮನೆ ಮೇಲೆ ಮರ ಬಿದ್ದು ಹಾನಿ

ದೇವಚಳ್ಳ ಗ್ರಾಮದ ಮಂಜೋಳುಕಜೆ ಪವನ ಕುಮಾರ್ ರವರ ಮನೆ ಮೇಲೆ ಜು.14 ರಂದು ದೊಡ್ಡ ಗಾತ್ರದ ಮರವೊಂದು ಬಿದ್ದು ಮನೆಯ ಚಾವಣಿ ಸಂಪೂರ್ಣ ಹಾನಿಯಾಗಿದೆ. ಸುದ್ದಿ ತಿಳಿದು ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಪ್ರಶಾಂತ್ ಮೆದು, ದುರ್ಗದಾಸ್ ಮೆತ್ತಡ್ಕ ಸ್ಥಳಕ್ಕೆ ಭೇಟಿ ನೀಡಿರುತ್ತಾರೆ. ಹಾಗೂ ಶ್ರೀ ವಿಷ್ಣು ವಿಶ್ವ ಹಿಂದೂ ಪರಿಷತ್...

ಉಬರಡ್ಕ : ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯು ಜು.15 ರಂದು ನಡೆಯಿತು. ಅರ್ಚಕ ವೆಂಕಟ್ರಾಮ್ ಭಟ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷರಾದ ದಾಮೋದರ ಗೌಡ ಮದುವೆಗದ್ದೆ, ಮಿತ್ತೂರು ಉಳ್ಳಾಕುಲು ದೈವಸ್ಥಾನದ ಮೊಕ್ತೇಸರ ವೆಂಕಟ್ರಮಣ ಕೆದಂಬಾಡಿ, ಕಟ್ಟಡ ಸಲಹಾ ಸಮಿತಿ ಸದಸ್ಯರು, ಆಡಳಿತ ಮಂಡಳಿ ನಿರ್ದೇಶಕರು,...
Ad Widget

ಮರ್ಕಂಜ : ಬರೆ ಕುಸಿತ

ಜೂನ್ 15ರಂದು ಸುರಿದ ಭಾರಿ ಮಳೆಗೆ ಮರ್ಕಂಜ ಗ್ರಾಮದ ಜನಾರ್ಧನ ನಾಯ್ಕರವರು ನಿರ್ಮಿಸುತ್ತಿರುವ ನೂತನ ಮನೆಯ ಹಿಂಬದಿಯ ಬರೆ ಕುಸಿದಿದೆ.

ಸುಬ್ರಹ್ಮಣ್ಯ ಠಾಣೆಯ ಎಸ್.ಐ. ಓಮನ ವರ್ಗಾವಣೆ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಓಮನಎನ್.ಕೆ. ಉಪ್ಪಿನಂಗಡಿಗೆ ವರ್ಗಾವಣೆಗೊಂಡಿದ್ದಾರೆ. ಸುಬ್ರಹ್ಮಣ್ಯಕ್ಕೆ ಪುತ್ತೂರು ನಗರ ಠಾಣೆ ಎಸ್.ಐ. ಜಂಬೂರಾಜ್ ಮಹಾಜನ್ ಬರಲಿದ್ದಾರೆ.

ಮಡಪ್ಪಾಡಿ : ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ಮಡಪ್ಪಾಡಿ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರ ಲಾಭಾಂಶ ವಿತರಣಾ ಕಾರ್ಯಕ್ರಮವು ಹಣ ಸಂಗ್ರಹಣ ಕೇಂದ್ರ ಮಡಪ್ಪಾಡಿ ದಲ್ಲಿ ನಡೆಯಿತು .ಒಟ್ಟು ಒಕ್ಕೂಟದಲ್ಲಿ 43 ಸಂಘಗಳಿಗೆ ಲಾಭಾಂಶ ವಿತರಣೆ ನಡೆದಿದ್ದು ಸಾಂಕೇತಿಕವಾಗಿ ರತ್ನ ಶ್ರೀ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆಯ...

ಯೇನೆಕಲ್ಲು : ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ

ಲಾಭಾಂಶ ವಿತರಣೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.14 ರಂದು ಯೇನೆಕಲ್ಲು ಒಕ್ಕೂಟದ 41 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಸದಸ್ಯರಾದ ಅಶೋಕ್ ನೆಕ್ರಾಜೆಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಯೇನೆಕಲ್ಲು ಒಕ್ಕೂಟದ ಸ್ಥಾಪಕಾಧ್ಯಕ್ಷರು ಹಾಗೂ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿಯಾಗಿರುವ ಶಿವಪ್ರಸಾದ್...

ಎಲಿಮಲೆ : ಶಿವಾನಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಪಾರ್ಲರ್ ಶುಭಾರಂಭ

ಎಲಿಮಲೆಯಲ್ಲಿ ಶಿವಾನಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಪಾರ್ಲರ್ ಜು .14 ರಂದು ಶುಭಾರಂಭಗೊಂಡಿತು.ಚಂದ್ರಶೇಖರ ಭಟ್ ತಳೂರು ದೀಪ ಬೆಳಗಿಸಿ ಉದ್ಘಾಟಿಸಿ,ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಕೆನರಾ ಬ್ಯಾಂಕ್ ಮ್ಯಾನೇಜರ್ ನಿಖಿಲ್, ಪ್ರಸನ್ನ ಕಾಂಪ್ಲೆಕ್ಸ್ ಮಾಲಕ ಸತ್ಯನಾರಾಯಣ ಬಲ್ಯಾಯ, ಎಲಿಮಲೆ ಉತ್ಸವ ಸ್ಟೋರ್ ಮಾಲಕ ಕೇಶವ ಕಾಯರ, ರಾಧಾಕೃಷ್ಣ ಶ್ರೀ ಕಟೀಲ್ಮಾವಿನಕಟ್ಟೆ ಉಪಸ್ಥಿತರಿದ್ದರು. ಶಿವಾನಿ ಗಾರ್ಮೆಂಟ್ಸ್ ನಮಾಲಕರಾದ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟದಿಂದ ಶ್ರಮದಾನ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ ಬಾಳಿಲ- ಮುಪ್ಪೇರಿಯ ಇದರ ಅಧ್ಯಕ್ಷರಾದ ವೆಂಕಪ್ಪ ನಾಯ್ಕ ಪೊಸೋಡು ಇವರ ಮುಂದಾಳತ್ವದಲ್ಲಿ ಒಕ್ಕೂಟದ ಸದಸ್ಯರಿಂದ ಶಾಲಾ ಸ್ವಚ್ಛತಾ ಕಾರ್ಯವನ್ನು ಜು.14 ರಂದು ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗದವರ ಸಹಕಾರದಿಂದ ಎಸೆಸೆಲ್ಸಿ ಪರೀಕ್ಷಾ ಕೇಂದ್ರವಾದ ಶಾಲೆಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಸುಬ್ರಹ್ಮಣ್ಯ : ಸ್ವಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.14 ರಂದು ಸುಬ್ರಹ್ಮಣ್ಯ ಒಕ್ಕೂಟದ 47 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿಕಟಪೂರ್ವ ಅದ್ಯಕ್ಷರು ಹಾಗೂ ಜನಜಾಗೃತಿ ವೇದಿಕೆ ಸುಳ್ಯ ಇದರ ಹಾಲಿ ಸದಸ್ಯರಾದ ವಿಮಲಾ ರಂಗಯ್ಯ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಸವಿತಾ...

ಕಜ್ಜೋಡಿ :- ಬರೆ ಕುಸಿದು ಮನೆಯ ಮೇಲೆ ಮರ ಬಿದ್ದು ಹಾನಿ

ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಎಂಬುವವರ ಮನೆಯ ಸಮೀಪದ ಬರೆ ಜು.13ರಂದು ರಾತ್ರಿ ಕುಸಿದು ಬಿದ್ದಿದೆ. ಬರೆಯ ಮೇಲಿದ್ದ ಮರ ಮನೆಯ ಮೇಲೆ ಬಿದ್ದು ಮನೆಯ ಮಾಡು ಜಖಂಗೊಂಡಿದೆ. ಜು.14 ರಂದು ಸ್ಥಳೀಯರು ದುರಸ್ತಿ ಕಾರ್ಯಕ್ಕೆ ಸಹಕರಿಸಿದರು. *✍ವರದಿ :- ಉಲ್ಲಾಸ್ ಕಜ್ಜೋಡಿ*
Loading posts...

All posts loaded

No more posts

error: Content is protected !!