ಅಮರ ಸುದ್ದಿ ಅಭಿಯಾನ : ನಿಮ್ಮೂರಿನ ಸಮಸ್ಯೆಗಳಿಗೆ ಧ್ವನಿಯಾಗಲಿದೆ – ಸಮಸ್ಯೆಗಳ ಬಗ್ಗೆ ತಿಳಿಸಿ

ಸುಳ್ಯ ತಾಲೂಕು ಗ್ರಾಮಾಂತರ ಪ್ರದೇಶಗಳ ತಾಣ. ಇಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳು ಬೇಕಾದಷ್ಟಿವೆ. ಅದರಲ್ಲಿಯೂ ತುರ್ತು ಅಗತ್ಯಗಳು ಹಲವಾರು ಇವೆ. ಗ್ರಾ.ಪಂ.ಅಧ್ಯಕ್ಷರ, ಶಾಸಕರ, ಸಚಿವರ ಭರವಸೆಯ ಬಳಿಕವೂ ಬಗೆ ಹರಿಯದ ಹಲವಾರು ಸಮಸ್ಯೆಗಳಿವೆ. ಅವುಗಳಿಗೆ ಮಾಧ್ಯಮ ಸ್ಪರ್ಶ ನೀಡಿ ಸಂಬಂಧಪಟ್ಟವರ ಗಮನಕ್ಕೆ ತರುವ ಕಾರ್ಯ ಅಮರ ಸುದ್ದಿ ಮಾಡಲಿದೆ. ಗ್ರಾಮ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದ...

ಸುಬ್ರಹ್ಮಣ್ಯ : ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಕುಕ್ಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ೭೩ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸದ ಅಂಗವಾಗಿ ಧ್ವಜಾರೋಹಣ ಹಾಗೂ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ|ಗೋವಿಂದ್.ಎನ್.ಎಸ್ ವಹಿಸಿದ್ದರು. ಹಿರಿಯ ಕಾರ್ಯಕರ್ತರಾದ ಮಂಜುನಾಥ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ಘಟಕದ ನಗರ...
Ad Widget

ಸುಳ್ಯ : ರೋಟರಿ ಕ್ಲಬ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗೆ ಸನ್ಮಾನ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಆಲೆಟ್ಟಿ ಗ್ರಾಮದ ಮೆಸ್ಕಾಂ ಇಲಾಖೆಯ ಪವರ್ ಮ್ಯಾನ್ ಅನಿಲ್ ರವರ ಸೇವೆಯನ್ನು ಗುರುತಿಸಿ ಅಭಿನಂದಿಸುವ ಕಾರ್ಯಕ್ರಮ ಜು.8 ರಂದು ನಡೆಯಿತು. ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷ ಗುರುರಾಜ್ ವೈಲಾಯ, ನ.ಪಂ.ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಪಿ.ಡಿ.ಜಿ.ಎಂ.ಎಂ.ಸುರೇಶ್ ಚೆಂಗಪ್ಪ, ಅಸಿಸ್ಟೆಂಟ್ ಗವರ್ನರ್ ಜಿತೇಂದ್ರ ಎನ್., ಝೋನಲ್ ಲೆಫ್ಟಿನೆಂಟ್ ಭಾನುಪ್ರಕಾಶ್, ಕಾರ್ಯದರ್ಶಿ ಅಬ್ಬಾಸ್...

ಕುಟುಂಬ ಯೋಜನೆ ದೇಶದ ಅಭಿವೃದ್ಧಿ ಗೆ ಸಹಕಾರಿ- ಡಾ.ನಂದಕುಮಾರ್

ಕುಟುಂಬ ಯೋಜನೆಯನ್ನು ಸರಿಯಾಗಿ ಪಾಲನೆ ಮಾಡಿದರೇ ಜನಸಂಖ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆ ನಿಟ್ಟಿನಲ್ಲಿ ಈಗಿನ ವಿಪತ್ತಿನ ಸನ್ನಿವೇಶದಲ್ಲೂ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಭಾರತದ ಸರ್ವಾಂಗಿಣ ಅಭಿವೃದ್ಧಿಗೆ ಜನರು ಸಹಕರಿಸಬೇಕಿದೆ ಎಂದು ತಾಲೂಕು ಅರೋಗ್ಯ ಅಧಿಕಾರಿ ಡಾ.ನಂದಕುಮಾರ್ ಹೇಳಿದರು. ಸುಳ್ಯ ಶಾಂತಿನಗರ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಯೋಜನೆಯ ಅರ್ಹ ಫಲಾನುಭವಿಗಳಿಗೆ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜು.13 ರಂದು ರಿಕ್ಷಾ ಚಾಲಕರಿಂದ ತಾಲೂಕಿನಾದ್ಯಂತ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಜು.13ರಂದು ಬಿ.ಎಂ.ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಜು.9ರಂದು ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಹಳೇ ಬಸ್ ನಿಲ್ದಾಣ, ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ದೊಡ್ಡತೋಟ, ಉಬರಡ್ಕ, ಕಲ್ಲುಗುಂಡಿ...

ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ನಿಧನ

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ29 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆದಾಖಲಿಸಲಾಯಿತು. ಅಲ್ಲಿ ಕೊರೊನಾಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್ದೃಢಪಟ್ಟಿರುವುದಾಗಿ ತಿಳಿದು...

ಜಾಲ್ಸೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಜಾಲ್ಸೂರು ಗ್ರಾಮದ ಮಹಾಬಲಡ್ಕ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಭಾಕರನ್ ನಾಯರ್

ಸುಳ್ಯ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಉದ್ಯಮಿ ಪ್ರಭಾಕರನ್ ನಾಯರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆನಂದ ಖಂಡಿಗ, ಖಜಾಂಜಿಯಾಗಿ ಪ್ರಸನ್ನ ಕುಮಾರ್ ಕಲ್ಲಾಜೆ, ಆಯ್ಕೆಯಾಗಿದ್ದಾರೆ.ಕ್ಲಬ್ ಸರ್ವೀಸ್ ನಿರ್ದೇಶಕರಾಗಿ ಅಬ್ದುಲ್ ಮಜೀದ್ ಕೆ.ಎಂ, ವೊಕೇಶನಲ್ ಸರ್ವೀಸ್ ನಿರ್ದೇಶಕರಾಗಿ ಹರಿರಾಯ ಕಾಮತ್, ಕಮ್ಯುನಿಟಿ ಸರ್ವೀಸ್ ನಿರ್ದೇಶಕರಾಗಿ ಕಸ್ತೂರಿ ಶಂಕರ್, ಇಂಟರ್ ನ್ಯಾಷನಲ್ ಸರ್ವೀಸ್ ನಿರ್ದೇಶಕರಾಗಿ ಡಾ.ಸುಧಾಕರ ಭಟ್,...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಅಂಬ್ಯುಲೆನ್ಸ್ ಖರೀದಿಗೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ತುರ್ತು ಅಗತ್ಯವಾಗಿರುವ ಆಂಬುಲೆನ್ಸ್ ಸೇವೆ ಒದಗಿಸುವ ದೃಷ್ಟಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯನ್ನು ರಚಿಸಲಾಗಿದೆ.ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ, ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀಂದ್ರ ಕಟ್ಟೆಕೋಡಿ, ಮೋಹನ್‍ದಾಸ್ ಶಿರಾಜೆ, ವಿಶ್ವನಾಥ ಆಚಳ್ಳಿ, ಸುಕುಮಾರ್ ಕೋಡಂಬು ಇವರನ್ನು ಆಯ್ಕೆ...

ಸಂಪಾಜೆ : ಬೈಲೆ – ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ

ಸಂಪಾಜೆ ಗ್ರಾಮದ ಬೈಲೆ ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ಜು.8 ರಂದು ನಡೆಯಿತು.ತೆಕ್ಕಿಲ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಉಪಾಧ್ಯಾಯರಾದ ದಾಮೋದರ ಮಾಸ್ಟರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಗ್ರಾ.ಪಂ. ಉಪಾಧ್ಯಕ್ಸರಾದ ಲಿಸ್ಸಿ ಮೊನಾಲಿಸಾ, ಗ್ರಾ. ಪಂ. ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ,...
Loading posts...

All posts loaded

No more posts

error: Content is protected !!