ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜು.13 ರಂದು ರಿಕ್ಷಾ ಚಾಲಕರಿಂದ ತಾಲೂಕಿನಾದ್ಯಂತ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಜು.13ರಂದು ಬಿ.ಎಂ.ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಜು.9ರಂದು ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಹಳೇ ಬಸ್ ನಿಲ್ದಾಣ, ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ದೊಡ್ಡತೋಟ, ಉಬರಡ್ಕ, ಕಲ್ಲುಗುಂಡಿ...

ನಾಟಿಕೇರಿ ಸುಬ್ರಹ್ಮಣ್ಯ ಪ್ರಕಾಶ್ ನಿಧನ

ಅಮರಪಡ್ನೂರು ಗ್ರಾಮದ ಶೇಣಿ ನಾಟಿಕೇರಿದಿ.ಸೀತಾರಾಮ ಭಟ್ ರವರ ಪುತ್ರ ನಾಟಿಕೇರಿ ಸುಬ್ರಹ್ಮಣ್ಯಪ್ರಕಾಶ್ ರವರು ಜು. 8 ರಂದು ನಿಧನರಾದರು. ಅವರಿಗೆ29 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು, ಬಂಧುಮಿತ್ರರನ್ನು ಅಗಲಿದ್ದಾರೆ. ಅವರಿಗೆ ಕಳೆದ 5 ದಿನದ ಹಿಂದೆ ಅನಾರೋಗ್ಯ ಕಾಣಿಸಿಕೊಂಡಿದ್ದು ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆದಾಖಲಿಸಲಾಯಿತು. ಅಲ್ಲಿ ಕೊರೊನಾಪರೀಕ್ಷೆಗೊಳಪಡಿಸಿದಾಗ ಅವರಿಗೆ ಪಾಸಿಟಿವ್ದೃಢಪಟ್ಟಿರುವುದಾಗಿ ತಿಳಿದು...
Ad Widget

ಜಾಲ್ಸೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಜಾಲ್ಸೂರು ಗ್ರಾಮದ ಮಹಾಬಲಡ್ಕ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ : ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಭಾಕರನ್ ನಾಯರ್

ಸುಳ್ಯ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರಾಗಿ ಸುಳ್ಯದ ಉದ್ಯಮಿ ಪ್ರಭಾಕರನ್ ನಾಯರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಆನಂದ ಖಂಡಿಗ, ಖಜಾಂಜಿಯಾಗಿ ಪ್ರಸನ್ನ ಕುಮಾರ್ ಕಲ್ಲಾಜೆ, ಆಯ್ಕೆಯಾಗಿದ್ದಾರೆ.ಕ್ಲಬ್ ಸರ್ವೀಸ್ ನಿರ್ದೇಶಕರಾಗಿ ಅಬ್ದುಲ್ ಮಜೀದ್ ಕೆ.ಎಂ, ವೊಕೇಶನಲ್ ಸರ್ವೀಸ್ ನಿರ್ದೇಶಕರಾಗಿ ಹರಿರಾಯ ಕಾಮತ್, ಕಮ್ಯುನಿಟಿ ಸರ್ವೀಸ್ ನಿರ್ದೇಶಕರಾಗಿ ಕಸ್ತೂರಿ ಶಂಕರ್, ಇಂಟರ್ ನ್ಯಾಷನಲ್ ಸರ್ವೀಸ್ ನಿರ್ದೇಶಕರಾಗಿ ಡಾ.ಸುಧಾಕರ ಭಟ್,...

ಗುತ್ತಿಗಾರು : ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ – ಅಂಬ್ಯುಲೆನ್ಸ್ ಖರೀದಿಗೆ ದೇಣಿಗೆ ಸಂಗ್ರಹಕ್ಕೆ ಚಾಲನೆ

ಗುತ್ತಿಗಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ತುರ್ತು ಅಗತ್ಯವಾಗಿರುವ ಆಂಬುಲೆನ್ಸ್ ಸೇವೆ ಒದಗಿಸುವ ದೃಷ್ಟಿಯಿಂದ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಎಂಬ ಸಂಸ್ಥೆಯನ್ನು ರಚಿಸಲಾಗಿದೆ.ಟ್ರಸ್ಟ್ ನ ಅಧ್ಯಕ್ಷರಾಗಿ ಚಂದ್ರಶೇಖರ ಕಡೋಡಿ, ಕಾರ್ಯದರ್ಶಿಯಾಗಿ ಹರ್ಷಿತ್ ಪಡ್ರೆ, ಕೋಶಾಧಿಕಾರಿಯಾಗಿ ಸುಪ್ರೀತ್ ಗುಡ್ಡೆಮನೆ ಹಾಗೂ ಸದಸ್ಯರುಗಳಾಗಿ ಯತೀಂದ್ರ ಕಟ್ಟೆಕೋಡಿ, ಮೋಹನ್‍ದಾಸ್ ಶಿರಾಜೆ, ವಿಶ್ವನಾಥ ಆಚಳ್ಳಿ, ಸುಕುಮಾರ್ ಕೋಡಂಬು ಇವರನ್ನು ಆಯ್ಕೆ...

ಸಂಪಾಜೆ : ಬೈಲೆ – ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ

ಸಂಪಾಜೆ ಗ್ರಾಮದ ಬೈಲೆ ಶಿರಾಡಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ಜು.8 ರಂದು ನಡೆಯಿತು.ತೆಕ್ಕಿಲ್ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಉಪಾಧ್ಯಾಯರಾದ ದಾಮೋದರ ಮಾಸ್ಟರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಗ್ರಾ.ಪಂ. ಉಪಾಧ್ಯಕ್ಸರಾದ ಲಿಸ್ಸಿ ಮೊನಾಲಿಸಾ, ಗ್ರಾ. ಪಂ. ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ,...

ಗುತ್ತಿಗಾರು : ವಿಶ್ವ ಜನಸಂಖ್ಯಾ ದಿನಾಚರಣೆ

ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚೈತ್ರಭಾನು, ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ಸ್ಮೃತಿ ದಿನಾಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಸ್ಥಾಪಕರಾದ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆಯನ್ನು ಜು.7ರಂದು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಳವಾಗಿ ಆಚರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಐದು ದಶಕಗಳ ಹಿಂದೆ ಶಾಲೆಯನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಲಭಿಸುವಂತೆ ಮಾಡಿದ ಮಹಾಚೇತನ ವೆಂಕಟಸುಬ್ಬರಾವ್ ಸ್ಮರಣೀಯರಾಗಿದ್ದಾರೆ ಎಂದರು. ಶಾಲಾ...

ಪೆಟ್ರೋಲ್ ಬೆಲೆ ಏರಿಕೆಯಿಂದ ಜನಸಾಮಾನ್ಯ ಹೈರಾಣು- ಪಿಸಿ ಜಯರಾಮ್

ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಳ್ಯದ ಓಡಬಾಯಿ-...

ಪೆಟ್ರೋಲ್ ಬೆಲೆ ಏರಿಕೆಯಿಂದ ಜನಸಾಮಾನ್ಯ ಹೈರಾಣು- ಪಿಸಿ ಜಯರಾಮ

ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದರು. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಜು.೭ ರಂದು ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು....
Loading posts...

All posts loaded

No more posts

error: Content is protected !!