ಗುತ್ತಿಗಾರು : ವಿಶ್ವ ಜನಸಂಖ್ಯಾ ದಿನಾಚರಣೆ

ಗುತ್ತಿಗಾರು ಪ್ರಾ.ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಚೈತ್ರಭಾನು, ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ಸ್ಮೃತಿ ದಿನಾಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಸ್ಥಾಪಕರಾದ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆಯನ್ನು ಜು.7ರಂದು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಳವಾಗಿ ಆಚರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನೆಟ್ಟಾರು ವೆಂಕಟ್ರಮಣ ಭಟ್ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಐದು ದಶಕಗಳ ಹಿಂದೆ ಶಾಲೆಯನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಲಭಿಸುವಂತೆ ಮಾಡಿದ ಮಹಾಚೇತನ ವೆಂಕಟಸುಬ್ಬರಾವ್ ಸ್ಮರಣೀಯರಾಗಿದ್ದಾರೆ ಎಂದರು. ಶಾಲಾ...
Ad Widget

ಪೆಟ್ರೋಲ್ ಬೆಲೆ ಏರಿಕೆಯಿಂದ ಜನಸಾಮಾನ್ಯ ಹೈರಾಣು- ಪಿಸಿ ಜಯರಾಮ್

ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಳ್ಯದ ಓಡಬಾಯಿ-...

ಪೆಟ್ರೋಲ್ ಬೆಲೆ ಏರಿಕೆಯಿಂದ ಜನಸಾಮಾನ್ಯ ಹೈರಾಣು- ಪಿಸಿ ಜಯರಾಮ

ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದರು. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಜು.೭ ರಂದು ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು....

ಅರಂತೋಡು : ಹೃದಯಾಘಾತದಿಂದ ಯುವಕ ಮೃತ್ಯು

ಅರಂತೋಡು ಗ್ರಾಮದ ಓಟೆಡ್ಕ ದಿ. ವೆಂಕಟ್ರಮಣ ಗೌಡರ ಪುತ್ರ ಯತೀಶ್ ( ಗುರು) ಹೃದಯಾಘಾತದಿಂದ ಜು.6 ರಂದು ನಿಧನರಾದರು. ಅವರಿಗೆ 26 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಹಾಲೆಮಜಲು : ಯುವಕ ನೇಣುಬಿಗಿದು ಆತ್ಮಹತ್ಯೆ

ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ವಿನಯ್ ಬಾಳಿಲ (ಕುಕ್ಕುತ್ತಡಿ) ಅವರು ಕಳೆದ ರಾತ್ರಿ ಮನೆ ಸಮೀಪದ ಮರವೊಂದಕ್ಕೆ ಜು.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. 6 ತಿಂಗಳ ಹಿಂದೆ ವಿವಾಹವಾಗಿದ್ದ ಇವರು ಪತ್ನಿ, ತಂದೆ ಬ‍ಾಬು ಗೌಡ, ತಾಯಿ ಚಂದ್ರಾವತಿ, ಸಹೋದರ ಸುರೇಶ, ಸಹೋದರಿ ಶ್ರೀಮತಿ ನವೀನ...

ಸಂಪಾಜೆ : ವನಮಹೋತ್ಸವ ಕಾರ್ಯಕ್ರಮ

ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ (ರಿ)ಊರುಬೈಲು ಇವರಿಂದ ಜು.7 ರಂದು ಸಂಪಾಜೆಯಲ್ಲಿ ವನಮಹೋತ್ಸವ ಆಚರಣೆ ಮಾಡಲಾಯಿತು. ಸಂಪಾಜೆ ಗೇಟ್ ಬಳಿಯ ಮುಖ್ಯ ರಸ್ತೆಯ ಅಂಚಿನಲ್ಲಿ ಕಳೆನಾಶ ಮಾಡಿ ,ಪ್ಲಾಸ್ಟಿಕ್ ತ್ಯಾಜ್ಯ ಆಯುವ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಆ ಬಳಿಕ ರಸ್ತೆಯ ಅಂಚಿನುದ್ದಕ್ಕೂ ಸಸಿಗಳನ್ನು...

ಕಳಂಜ: ಕಾರ್ಮಿಕರ ಕಿಟ್ ವಿತರಣೆ

ಕಳಂಜ ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗಿದ್ದ ಕಾರ್ಮಿಕರ ಕಿಟ್ ವಿತರಿಸಲಾಯಿತು. ಕಾರ್ಮಿಕ ಇಲಾಖೆಯ ಅಧೀನದಲ್ಲಿ ನೋಂದಾಯಿತ ಕಾರ್ಮಿಕರ ಮನೆ ಮನೆಗೆ ತೆರಳಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯ ಬಾಲಕೃಷ್ಣ ಬೇರಿಕೆ ಮತ್ತಿತರರು ಹಾಜರಿದ್ದರು. ಕಳಂಜ ಗ್ರಾಮದ ಒಟ್ಟು 57 ಮಂದಿಗೆ ಸರ್ಕಾರ ನೀಡಿದ ಕಾರ್ಮಿಕರ ಕಿಟ್ ವಿತರಿಸಲಾಯಿತು.

ಕುಕ್ಕೆ: ದೇವರ ದರ್ಶನಕ್ಕೆ ಮಾತ್ರ ಅವಕಾಶ – ಹರಿಕೆ ಸೇವೆಗಳಿಲ್ಲ – ಮಂಗಳಾರತಿಗೆ ಅವಕಾಶ

ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ  ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...

ಕಾಂಗ್ರೆಸ್ ಸೇವಾದಳ ವತಿಯಿಂದ ಬೋರುಗುಡ್ಡೆ ಹಿಂದೂ ರುದ್ರ ಭೂಮಿಯಲ್ಲಿ ಶ್ರಮದಾನ

ಸುಳ್ಯ ಕಾಂಗ್ರೆಸ್ ಸೇವಾದಳ, ನಗರ ಕಾಂಗ್ರೆಸ್ ಮತ್ತು ಬೋರುಗುಡ್ಡೆ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿಯ ಸಹಕಾರದಲ್ಲಿ ಸುಳ್ಯ ನಗರದ ಬೋರುಗುಡ್ಡೆ ನಾವೂರು ಪ. ಜಾತಿ ಕಾಲೋನಿಯ ಮೀಸಲು ಹಿಂದೂ ರುದ್ರ ಭೂಮಿ ಯಲ್ಲಿ ಶ್ರಮದಾನದ ಮೂಲಕ ಕಾಡು ಕಡಿದು ಸ್ವಚ್ಛತೆ ಕಾರ್ಯ ಮಾಡಲಾಯಿತು. ನಂತರ ಸ್ಥಳದಲ್ಲಿ ಗಿಡ ನೆಡಲಾಯಿತು. ಶ್ರಮದಾನದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ...
Loading posts...

All posts loaded

No more posts

error: Content is protected !!