- Sunday
- April 26th, 2026
ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್.ವತಿಯಿಂದ 40ಲಕ್ಷ ಅನುದಾನದಲ್ಲಿ ನಿರ್ಮಿಸಲಾದ ವಿಸ್ತ್ರತ ಕಟ್ಟಡ ದ ಉದ್ಘಾಟನಾ ಸಮಾರಂಭಇಂದು ನಡೆಯಿತು. ನೂತನ ವಿಸ್ತ್ರತ ಕಟ್ಟಡವನ್ನು ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ ಮತ್ತು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನೆರವೇರಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ರಾದ ಡಾ.ಕೆ.ವಿ.ಚಿದಾನಂದ...
ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು. ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಸದಸ್ಯರಾದ ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲ್ತಡ್ಕ, ಬಾಲಕೃಷ್ಣ ಕುಂಟುಕಾಡು,...
ಆಲೆಟ್ಟಿ ಗ್ರಾಮದ ದೋಣಿಮೂಲೆ ದಿ.ಶೇಷಪ್ಪ ಗೌಡ ರವರ ಪತ್ನಿ ಶ್ರೀಮತಿ ಪಾರ್ವತಿ ದೋಣಿಮೂಲೆ ಯವರು ಅಲ್ಪಕಾಲದಅಸೌಖ್ಯದಿಂದ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಪುರುಷೋತ್ತಮ ದೋಣಿಮೂಲೆ, ಅರುಣೋದಯ ದೋಣಿಮೂಲೆ, ಪುತ್ರಿಯರಾದ ಶ್ರೀಮತಿ ಜಲಜಾಕ್ಷಿ, ಶ್ರೀಮತಿ ಜಯಲಕ್ಷ್ಮಿ, ಶ್ರೀಮತಿ ಲೀಲಾಕ್ಷಿ,ಅಳಿಯಂದಿರಾದ ಶಿವರಾಮ ಗೌಡ ಕಲ್ಲೆಂಬಿ, ವಸಂತ ಗೌಡ ಬೊಳ್ಳೂರು,...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಯ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವ್ಯವಸ್ಥಾಪನ ಸಮಿತಿಯ ನೂತರ ಸದಸ್ಯರುಗಳಾಗಿ ಕೇಶವ ಹೊಸೋಳಿಕೆ, ಮಿತ್ರದೇವ ಮಡಪ್ಪಾಡಿ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ ರುದ್ರ ಚಾಮುಂಡಿ, ಸನತ್ ಮುಳುಗಾಡು, ಶ್ರೀಮತಿ ಉಷಾ ಪುರುಷೋತ್ತಮ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಸಮಿತಿ...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ ಎಲ್ಲಾ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ವಿಜಯೋತ್ಸವ ನಡೆಯಿತು. ಪಟಾಕಿ ಸಿಡಿಸಿ, ಪೇಟೆಯಲ್ಲಿ ಮೆರವಣಿಗೆ ಸಾಗಿ ಸಂಭ್ರಮಿಸಿದರು. ಗೆಲುವು ಸಾಧಿಸಿದ ಹಾಲಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ,...
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಫೆ.23 ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ತಂಡ 12 ಸ್ಥಾನ ಪಡೆದು ಭರ್ಜರಿ ಗೆಲುವು ದಾಖಲಿಸಿದ್ದು ಕಾಂಗ್ರೆಸ್ ಬೆಂಬಲಿತ ಸಹಕಾರ ಭಾರತ ತಂಡ,ಹಾಗೂ ಪಕ್ಷೇತರರು ಸೋಲು ಕಂಡಿದ್ದಾರೆ. ಸಹಕಾರ ಭಾರತಿ ಅಭ್ಯರ್ಥಿಯಾಗಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಹಾಲಿ ಅಧ್ಯಕ್ಷ ವೆಂಕಟ್...
ಮಡಿಕೇರಿ : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್...
ನಗರಗಳಲ್ಲಿ ಎಲ್ಲಾ ನಿವೇಶನಗಳಿಗೆ ಎ ಖಾತಾ ಹಾಗೂ ಬಿ ಖಾತಾ ಎಂದು ವರ್ಗಿಕರಿಸಿ ಸರಕಾರವು ಅಧಿಸೂಚನೆ ಹೊರಡಿಸಿ ತುರಾತುರಿಯಲ್ಲಿ ಬಿ ಖಾತಾ ನೀಡಲು ಆಂದೋಲನ ಕ್ಕೆ ಆದೇಶ ನೀಡಿರುವುದು ಜನಗಳ ಕಣ್ಣೊರೆಸುವ ತಂತ್ರವಷ್ಟೇ ಆಗಿದೆ. ಇದರ ಒಳತಂತ್ರ ಖಾಲಿಯಾಗಿರುವ ಸರಕಾರದ ಖಜಾನೆ ತುಂಬಲು ಇನ್ನೊಂದು ಮಾರ್ಗವಷ್ಟೇ ಆಗಿದೆ ಎಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಜಾತ್ರೋತ್ಸವದ ಮೊದಲ ದಿನವಾದ ಫೆ.20 ಗುರುವಾರದಂದು ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ದೇವರಿಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ,...
Loading posts...
All posts loaded
No more posts
