- Tuesday
- July 7th, 2026
ಅಕ್ರಮ ಮದ್ಯ ಸಾಗಾಟ ಜಾಲ ಭೇದಿಸಿದ ಸುಬ್ರಹ್ಮಣ್ಯ ಪೋಲಿಸರು ಇನ್ನೋವಾ ವಾಹನದಲ್ಲಿದ್ದ ಅಕ್ರಮ ಮದ್ಯ ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.2 ರಂದು ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿದ ಸುಬ್ರಹ್ಮಣ್ಯ ಪೋಲಿಸರು ನಾಲ್ಕೂರು ಗ್ರಾಮದ ಮಲ್ಲಾರ ಎಂಬಲ್ಲಿ ಇನ್ನೋವಾ ಕಾರ್ ನಲ್ಲಿ ಸಾಗಿಸುತ್ತಿದ್ದ 9 ಬಾಕ್ಸ್ ಮದ್ಯ ವಶಕ್ಕೆ ಪಡೆದಿದ್ದು, ವಾಹನ ಸಹಿತ...
ಅಕ್ರಮ ನಾಡಕೋವಿ ಮಾರಾಟ ಪ್ರಕರಣದಲ್ಲಿ ಬಂಧಿತರಾದ ಒಂದನೇ ಆರೋಪಿ ದಿವಾಕರ ಆಚಾರಿಗೆ ಪುತ್ತೂರು ಸೆಶನ್ಸ್ ನ್ಯಾಯಾಲಯದಿಂದ ಜಾಮೀನು ದೊರೆತಿದೆ. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಇವರಿಗೆ ದೊರೆತ ಮಾಹಿತಿ ಪ್ರಕಾರ ಆರೋಪಿ ದಿವಾಕರ ಆಚಾರಿ ತನ್ನ ಕಬ್ಬಿಣದ ಕೆಲಸ ಮಾಡುವ ಕೊಟ್ಟಿಗೆಯಲ್ಲಿ ಅಕ್ರಮ ನಾಡಕೋವಿ ತಯಾರಿಸಿ ಮಾರಾಟ ಮಾಡುತ್ತಿದ್ದನೆಂದು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ರೆನ್ನಲಾದ ಆರೋಪದಡಿ ಬಂಧಿಸಿ...
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ,ಸುಬ್ರಹ್ಮಣ್ಯ ಇಲ್ಲಿ 18 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಜೂ.30 ಹಾಗೂ ಜುಲೈ 2 ರಂದು ಕೊರೊನಾ ಲಸಿಕೆಯನ್ನು ಹಾಕಲಾಯಿತು. ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ, ನೋಡಲ್ ಅಧಿಕಾರಿ ವಿಶ್ವನಾಥ ನಡುತೋಟ, ಉಪನ್ಯಾಸಕರುಗಳಾದ ಶ್ರೀಧರ್, ಪ್ರವೀಣ್ , ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಹೇಮಲತಾ, ಕವಿತಾ ಮತ್ತು...
ಪರಿಸರ ಕಾರ್ಯಕ್ರಮದ ಗಿಡ ನಾಟಿ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಬ್ರಹ್ಮಣ್ಯ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ ಹಾಗೂ ಅರಣ್ಯ ಇಲಾಖೆ ಸುಬ್ರಹ್ಮಣ್ಯ ವಲಯ ಇವರ ಜಂಟಿ ಆಶ್ರಯದಲ್ಲಿ ಅರಣ್ಯೀಕರಣ ಕಾರ್ಯಕ್ರಮದ ಅಡಿಯಲ್ಲಿ ಜೂ.29 ರಂದು ಕೊಲ್ಲಮೊಗ್ರ ಅರಣ್ಯ ವಿಶ್ರಾಂತಿ ಗೃಹದ ವಠಾರದಲ್ಲಿ ಗಿಡ ನಾಟಿ...
https://youtu.be/kUf9O8EPokA ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ( ರಿ.) ಸುಳ್ಯ ಇದರ ಆಶ್ರಯದಲ್ಲಿ ಸಾಮಾಜಿಕ ಜಾಗೃತಿಯ ಕಿರುಚಿತ್ರ ಸ್ಥಿತಿ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದೆ. ಹಿರಿಯ ಯಕ್ಷರಂಗ ಕಲಾವಿದ ಸುಜನಾ ಸುಳ್ಯ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದರು. ರಂಗನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ರಂಗಮನೆ ಸುತ್ತಲಿನ ಪರಿಸರದಲ್ಲಿ ಚಿತ್ರೀಕರಣ ನಡೆಸಲಾಗಿತ್ತು. ಮಾ| ಮನುಜ ನೇಹಿಗ,ಕು| ಲಾಲಿತ್ಯ ಹಾಗೂ ಜೀವನ್...
ಜೂ.27 ರಂದು ಕಜ್ಜೋಡಿ, ಮುಳ್ಳುಬಾಗಿಲು, ಕರಂಗಲ್ಲು ಹಾಗೂ ದೊಡ್ಡಕಜೆ ಊರಿನ ಜನರು ಹರಿಹರದಿಂದ ಕರಂಗಲ್ಲು ವರೆಗೆ ವಿದ್ಯುತ್ ಲೈನ್ ಗಳಿಗೆ ಮುಟ್ಟುವ ಮರದ ಕೊಂಬೆಗಳನ್ನು ಕಡಿದು, ರಸ್ತೆ ಬದಿಯಲ್ಲಿನ ಕಾಡು(ಕಳೆ) ಕಡಿದು, ನೀರು ಸರಾಗವಾಗಿ ಹರಿದು ಹೋಗುವಂತೆ ರಸ್ತೆಗೆ ಅಡ್ಡಲಾಗಿ ಚರಂಡಿ ನಿರ್ಮಿಸಿ ಮುಂತಾದ ಕೆಲಸಗಳನ್ನು ಶ್ರಮದಾನದ ಮೂಲಕ ಮಾಡಿದರು. ✍ವರದಿ :- ಉಲ್ಲಾಸ್ ಕಜ್ಜೋಡಿ
ಜೂ. 28 ಸೋಮವಾರದಂದು ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 385 ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ 34 ಕೋವಿಡ್ ಲಸಿಕೆಗಳು ಲಭ್ಯವಿರುವುದು. ಎಲ್ಲಾ ಫಲಾನುಭವಿಗಳು ಇದರ ಸದುಪಯೋಗ ಪಡೆಯಬೇಕೆಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹಾಗೂ ಪೆರುವಾಜೆ ಗ್ರಾ.ಪಂ.ಸದಸ್ಯರಾಗಿರುವ ಪದ್ಮನಾಭ ಶೆಟ್ಟಿ ಪೆರುವಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸುಳ್ಯ ತಾಲೂಕು ಸುಬ್ರಹ್ಮಣ್ಯ ವಲಯದ ಕೊಲ್ಲಮೊಗ್ರುವಿನಲ್ಲಿ ಕೊರಗಜ್ಜ ಎಂಬ ಹೆಸರಿನ ನೂತನ ಪ್ರಗತಿಬಂಧು ಸಂಘವು ಆಲ್ಕಬೆ ಚೆನ್ನಪ್ಪ ಗೌಡರ ಮನೆಯಲ್ಲಿ ಜೂ.24ರಂದು ಉದ್ಘಾಟನೆಗೊಂಡಿತು.ಸಂಘದ ಉದ್ಘಾಟನೆಯನ್ನು ಪುಷ್ಪಾವತಿ ಆಲ್ಕಬೆ ಅವರು ನೆರವೇರಿಸಿದರು.ಪ್ರಾಸ್ತಾವಿಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ಸೀತಾರಾಮ ಅವರು ಮಾತನಾಡಿದರು.ಸಂಘಗಳ ವ್ಯವಹಾರಗಳ...
ಕಲ್ಮಕಾರು ಗ್ರಾಮದ ಗೋಪಾಲಕೃಷ್ಣ ದಬ್ಬಡ್ಕ ಅವರ ಮನೆಗೆ ಜೂ.21 ರಂದು ಮರ ಬಿದ್ದಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಜೂ.22 ರಂದು ಮನೆಗೆ ಬಿದ್ದ ಮರವನ್ನು ತೆರವುಗೊಳಿಸಿ ಮನೆಯ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛಗೊಳಿಸುವ ಕಾರ್ಯ ಮಾಡಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ...
ಭಾಷೆ ಪ್ರಾಂತ್ಯಗಳಿಗೆ ಸೀಮಿತಮಾಡಿ ಎನ್ನಡ ಎಕ್ಕಡಗಳ ಮಧ್ಯೆ ಮಾತೃ ಭಾಷೆ ಕನ್ನಡವನ್ನೇ ಮರೆಯುತ್ತಿರುವ ನಮಗೆ ನಮ್ಮ ಭಾಷಪ್ರಾಂತ್ಯಕ್ಕೆ ಸೇರದ ಸರ್ವ ಶ್ರೇಷ್ಠ ವೀರ ಪುರುಷನ ಬಗ್ಗೆ ಗೊತ್ತಿರಲು ಹೇಗೆ ಸಾಧ್ಯ? ಪರಕೀಯ ಆಕ್ರಮಣಕಾರರನ್ನು ವೈಭವಿಕರಿಸಿ ಅಶೋಕನಿಗಿಂತ ಅಕ್ಬರ್ ದಿ ಗ್ರೇಟ್ ಮತ್ತೆ ಉಳಿದವರು ದಾರಿ ತಪ್ಪಿದ ದೇಶ ಭಕ್ತರು ಎಂದು ಹೇಳುವ ಪಠ್ಯಪುಸ್ತಕ ದಲ್ಲಿರುವ ಹಾಗೇಯೇ...
Loading posts...
All posts loaded
No more posts
