ಬೆಳ್ಳಾರೆ : ಝಕರಿಯಾ ಜುಮಾ ಮಸೀದಿ ಹಿತರಕ್ಷಣಾ ಸಮಿತಿ ವತಿಯಿಂದ ಕೋವಿಡ್ ಕಿಟ್ ವಿತರಣೆ

ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಹಿತರಕ್ಷಣಾ ಸಮಿತಿ ವತಿಯಿಂದ ಬೆಳ್ಳಾರೆಯ ಅರ್ಹ ಬಡಕುಟುಂಬಗಳಿಗೆ ಕೋವಿಡ್ ಕಿಟ್ ವಿತರಣೆಗೆ ಜೂನ್ 12 ರಂದು ಚಾಲನೆ ನೀಡಲಾಯಿತು.ಹಿತರಕ್ಷಣಾ ಸಮಿತಿಯ ಗೌರವ ಸಲಹೆಗಾರರಾದ ಯು ಹೆಚ್ ಅಬೂಬಕ್ಕರ್ , ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ,ಸಮಿತಿಯ ಅಧ್ಯಕ್ಷ ಮೊಯ್ದು ಕುಂಞ ಪನ್ನೆ , ಪ್ರಧಾನ ಕಾರ್ಯದರ್ಶಿ ಜಮಾಲುದ್ದೀನ್ ಕೆ ಎಸ್,...

ದೇವಚಳ್ಳ : ಸೇವಾ ಭಾರತಿ ಮತ್ತು ಸಚಿವ ಎಸ್. ಅಂಗಾರ ರವರ ನೇತೃತ್ವದಲ್ಲಿ ಆಹಾರದ ಕಿಟ್ ವಿತರಣೆ

ದೇವಚಳ್ಳ ಗ್ರಾಮದ ದೇವ ಕಾಲೋನಿ ಮತ್ತು ಅಡ್ಡನಪಾರೆಯಲ್ಲಿ ಕೋವಿಡ್ ಸಂತ್ರಸ್ತರಿಗೆ ಸೇವಾ ಭಾರತಿ ಮತ್ತು ಸಚಿವರಾದ ಎಸ್. ಅಂಗಾರ ರವರ ನೇತೃತ್ವದಲ್ಲಿ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಪಂಚಾಯತ್ ಸದಸ್ಯರಾದ ರಮೇಶ್ ಪಡ್ಪು,...
Ad Widget

ಜೂ 14 – 21 ಸುಳ್ಯ ತಾಲೂಕಿನ 5 ಗ್ರಾ.ಪಂ. ಲಾಕ್ ಡೌನ್ ಗೆ ಜಿಲ್ಲಾಧಿಕಾರಿ ಆದೇಶ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 50 ಕ್ಕಿಂತ ಹೆಚ್ಚು ಸಕ್ರೀಯ ಪ್ರಕರಣಗಳಿರುವ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗ್ರ, ಗುತ್ತಿಗಾರು ಹಾಗೂ ಅರಂತೋಡನ್ನು ಜೂ 14 ರಿಂದ 21 ರವರೆಗೆ ಲಾಕ್ ಡೌನ್ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜೂ. 14 ಬೆಳಿಗ್ಗೆ 9 ರಿಂದ ಜೂ 21 ಬೆಳಿಗ್ಗೆ 9 ರವರೆಗೆ ಲಾಕ್ ಡೌನ್ ಆಗಲಿದೆ....

ಚಂದ್ರಕಲಾ‌ ಮೋಂಟಡ್ಕ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ, ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ದಿ. ಬಾಲಕೃಷ್ಣ ಗೌಡರವರ ಧರ್ಮಪತ್ನಿ ಶ್ರೀಮತಿ ಚಂದ್ರಕಲಾ (78.ವ) ರವರು ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು‌ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಪ್ರಶಾಂತ್ ಮೋಂಟಡ್ಕ, ಪ್ರಸನ್ನ ಮೋಂಟಡ್ಕ, ಪುತ್ರಿ ಪ್ರಮೀಳಾ ಶಶಿಧರ ಕೊಲ್ಯ, ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಕಳಂಜ : ವೈದ್ಯರ ನಡಿಗೆ ಹಳ್ಳಿಯ ಕಡೆಗೆ

ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನ ತಡೆಗಟ್ಟುವ ಹಿನ್ನೆಲೆಯಲ್ಲಿ ವೈದ್ಯರ ತಂಡ ಮನೆ ಮನೆಗೆ ಭೇಟಿ ಮಾಡಿ ಸಾರ್ವಜನಿಕರ ಆರೋಗ್ಯದ ವಿಚಾರಣೆ ಮತ್ತು ತಪಾಸಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ವೈದ್ಯರ ತಂಡ, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯರಾದ ಬಾಲಕೃಷ್ಣ ಬೇರಿಕೆ, ಸುಧ ವಾರಣಾಶಿ, ಕಮಲ, ಪಿ.ಡಿ.ಒ ಶ್ರೀಧರ , ಆರೋಗ್ಯ ಸಹಾಯಕಿ...

ಅಲ್ಪ ಪ್ರಮಾಣದ ಅನುದಾನ ಕಡಿತ ಗ್ರಾಮದ ಅಭಿವೃದ್ಧಿಗೆ ಪರಿಣಾಮ ಬೀರದು: ಪದ್ಮನಾಭ ಶೆಟ್ಟಿ ಪೆರುವಾಜೆ

ಕೋವಿಡ್-19 ಹೊಡೆತಕ್ಕೆ ಇಡೀ ವಿಶ್ವವೇ ಪರಿತಪಿಸುತ್ತಿರುವಾಗ ರಾಜ್ಯದಲ್ಲಿ ಪಂಚಾಯತ್ ಅನುದಾನವನ್ನು ಅಲ್ಪ ಪ್ರಮಾಣದಲ್ಲಿ ಕಡಿತಗೊಳಿಸಿರುವುದು ಸರಿಯಾದ ಕ್ರಮವಾಗಿದೆ. ಹಿಂದೆಂದೂ ಕಾಣದ ಭೀಕರ ಸಾಂಕ್ರಾಮಿಕ ರೋಗದಿಂದ ಉಂಟಾದ ಸಂಕಷ್ಟದ ನಿರ್ವಹಣೆಗೆ ರಾಜ್ಯ ಸರಕಾರ ಸಾಕಷ್ಟು ಅನುದಾನವನ್ನು ನೀಡಿದೆ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಮಾಜದ ಶ್ರಮಿಕ ವರ್ಗದ ಕಣ್ಣೀರೊರೆಸಲು ಸಾವಿರಾರು ಕೋಟಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಬಡತನ ರೇಖೆಗಿಂತ...

ಸುಳ್ಯ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

ಸುಳ್ಯ ಶಾಂತಿನಗರ ನಿವಾಸಿ ಸುಳ್ಯ ಮೆಸ್ಕಾಂ ಉದ್ಯೋಗಿ ನಾಗೇಶ್ ಅವರ ಪುತ್ರ ಪ್ರಮೋದ್ (21) ಡೆಂಗ್ಯೂ ಜ್ವರಕ್ಕೆ ಬಲಿಯಾದ ದುರ್ದೈವಿ. ಕೆಲ ದಿನಗಳ ಹಿಂದೆ ಜ್ವರ ಕಂಡುಬಂದು ಡೆಂಗ್ಯೂ ಎಂದು ಗೊತ್ತಾಗುವ ವೇಳೆ ತೀವ್ರ ಅಸ್ವಸ್ಥರಾಗಿದ್ದರು. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಜೂ....

ಗುತ್ತಿಗಾರು : ಅಮರ ತಾಲೂಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂಬ್ಯುಲೆನ್ಸ್ ಖರೀದಿ ಬಗ್ಗೆ ಸಮಾಲೋಚನಾ ಸಭೆ

ಗುತ್ತಿಗಾರು ಗ್ರಾಮವನ್ನು ಕೇಂದ್ರವಾಗಿರಿಸಿ ಹತ್ತು ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕರ ಶಾಶ್ವತ ಅನುಕೂಲಕ್ಕಾಗಿ ಟ್ರಸ್ಟ್ ಮುಖಾಂತರ ದೇಣಿಗೆ ಸಂಗ್ರಹಣೆ ಮಾಡಿ ಅಂಬ್ಯುಲೆನ್ಸ್ ಖರೀದಿ ಮಾಡಿ ಮಿತ ದರದಲ್ಲಿ ಸೇವೆ ಒದಗಿಸುವ ಬಗ್ಗೆ ಸಭೆ ನಡೆಸಲಾಯಿತು. ಲಾಕ್ ಡೌನ್ ಮುಗಿದ ತಕ್ಷಣವೇ ಸದ್ರಿ ಯೋಜನೆಯನ್ನು ಅನುಷ್ಟಾನಗೊಳಿಸುವುದು ಮತ್ತು ದಾನಿಗಳು ಅಥವಾ ಸಂಸ್ಥೆಯೊಂದು ಅಂಬ್ಯುಲೆನ್ಸ್ ವಾಹನದ ಸಂಪೂರ್ಣ ವೆಚ್ಚವನ್ನು ಕೊಡುಗೆಯಾಗಿ...

ದ.ಕ. ಜಿಲ್ಲೆಯಲ್ಲಿ ಜೂ. 20ರವರೆಗೆ ಲಾಕ್‌ಡೌನ್ ವಿಸ್ತರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಳಿಕೆಯಾಗದಿರುವುದರಿಂದ ಮತ್ತೊಂದು ವಾರ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚುತ್ತಲೇ ಇದ್ದು, ಪಾಸಿಟಿವಿಟಿ ದರವನ್ನು ಕನಿಷ್ಟ ಮಟ್ಟಕ್ಕೆ ಇಳಿಸುವ ದೃಷ್ಟಿಯಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರು ಜಿಲ್ಲೆಯಲ್ಲಿ ಮತ್ತೊಂದು ವಾರ...

ಅಡ್ಕಾರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪೆರಾಜೆಯ ಯುವಕ ಮೃತ್ಯು

ಇಂದು ಸಂಜೆ ಅಡ್ಕಾರು ಬಳಿಯ ಮಾವಿನಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡವರಲ್ಲಿ ಪೆರಾಜೆಯ ಕುಂಬಳಚೇರಿ ದಿನಕರ ಎಂಬವರು ಮೃತರಾಗಿರುವುದಾಗಿ ತಿಳಿದುಬಂದಿದೆ. ಇನ್ನೂ ನಾಲ್ವರ ಗಾಯಗೊಂಡಿದ್ದಾರೆ.ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಪಿಕಪ್ ವಾಹನಕ್ಕೆ ಕಂಟೈನರ್ ಡಿಕ್ಕಿ ಹೊಡೆದು ಐವರು ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಟಿಪ್ಪರ್ ಚಾಲಕ ದಿನಕರ್ ಮತ್ತಿತರರನ್ನು ಕೆ.ವಿ.ಜಿ. ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ದಿನಕರ್ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
Loading posts...

All posts loaded

No more posts

error: Content is protected !!