- Wednesday
- July 8th, 2026
ಉಬರಡ್ಕ ಮಿತ್ತೂರು ಗ್ರಾಮದ ನೀರಬಿದಿರೆ ವಿನ್ಸೆಂಟ್ ಡಿಸೋಜ ಅಲ್ಪಕಾಲದ ಅಸೌಖ್ಯದಿಂದ ಜೂ.4 ರಂದು ನಿಧನರಾದರು. ಮೃತರು ತಾಯಿ, 7 ಮಂದಿ ಸಹೋದರಿಯರು ಹಾಗೂ ಓರ್ವ ಸಹೋದರರನ್ನು ಅಗಲಿದ್ದಾರೆ.
ಹೇ ಮಾನವ….ಆಮ್ಲಜನಕ ನೀಡುವ ಮರಗಿಡಗಳನ್ನು ಕಡೆದುರುಳಿಸುತ್ತಿದ್ದೆ ಅಂದು…ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಾಗಿ ಪರದಾಡುತ್ತಿರುವೆ ಇಂದು… ಉದ್ಯೋಗಕ್ಕಾಗಿ ಹಳ್ಳಿಯನ್ನು ತೊರೆದು ಪಟ್ಟಣಕ್ಕೆ ಹೋದೆ ಅಂದು…ಕೊರೋನಾ ಬಂತೆಂದು ಹೆದರಿ ಉದ್ಯೋಗವನ್ನು ತೊರೆದು ಮರಳಿ ಹಳ್ಳಿಗೆ ಬಂದೆ ಇಂದು… ಸಂಬಂಧಗಳ ಬೆಲೆಯನ್ನು ಮರೆತು ಹೋದೆ ಅಂದು…ಸಂಬಂಧಗಳ ನಿಜವಾದ ಬೆಲೆಯನ್ನು ತಿಳಿದು ಹಿಂತಿರುಗಿ ಬಂದೆ ಇಂದು… ಜೀವನದಲ್ಲಿ ಹಣವೇ ಮುಖ್ಯ ಎಂದು ತಿಳಿದಿದ್ದೆ...
ಸುಳ್ಯದಲ್ಲಿ ಇಂದು 48 ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ತೊಡಿಕಾನದಲ್ಲಿ 2, ಕಳಂಜದಲ್ಲಿ 1, ಅಜ್ಜಾವರದಲ್ಲಿ 2, ನಾಲ್ಕೂರಿನಲ್ಲಿ 6, ದೇವಚಳ್ಳದಲ್ಲಿ 8, ಅಮರಮುಡ್ನೂರಿನಲ್ಲಿ 1, ಸಂಪಾಜೆಯಲ್ಲಿ 2, ಅಮರಪಡ್ನೂರಿನಲ್ಲಿ 3, ಏನೆಕಲ್ಲಿನಲ್ಲಿ 2, ಐನೆಕಿದುನಲ್ಲಿ 1, ಸುಬ್ರಹ್ಮಣ್ಯದಲ್ಲಿ 5, ಸುಳ್ಯದಲ್ಲಿ 2, ಎಡಮಂಗಲದಲ್ಲಿ 2, ಕೊಡಿಯಾಲದಲ್ಲಿ 6, ಗುತ್ತಿಗಾರಿನಲ್ಲಿ 1, ಬೆಳ್ಳಾರೆಯಲ್ಲಿ 2, ಮಂಡೆಕೋಲಿನಲ್ಲಿ 1 ಪಾಸಿಟಿವ್...
ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಅವರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡು ಬಡವರಿಗೆ ಹಾಗೂ ಅಂಗವಿಕಲಗರಿಗೆ ಕಿಟ್ ವಿತರಣೆ ಮಾಡಲು ಸೇಲ್ಕೋ ಫೌಂಡೇಷನ್ ಗೆ ಮನವಿ ಪತ್ರ ಕಳುಹಿದ್ದರು . ಇದಕ್ಕೆ ಸ್ಪಂದಿಸಿದ ಸೆಲ್ಕೋ ಫೌಂಡೇಷನ್ 50 ಕುಟುಂಬಗಳಿಗೆ ಕಿಟ್ ನ್ನು ಅಧ್ಯಕ್ಷೆ ಸತ್ಯವತಿ ಅವರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಸೆಲ್ಕೋ ಸಂಸ್ಥೆಯ...
ಎಬಿವಿಪಿ ಕರ್ನಾಟಕ ಹಾಗೂ ಎಸ್.ಎಫ್.ಡಿ ವತಿಯಿಂದ ಜೂನ್ 5 ರಿಂದ 5 ದಿನ 5 ಗಿಡ ನೆಡುವ ಮೂಲಕ 'ಆಕ್ಸಿಜನ್ ಚಾಲೆಂಜ್'ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕುಕ್ಕೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ಜೂ.8 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ 5 ಗಿಡ ನೆಡುವ ಮೂಲಕ 4 ದಿನದ 'ಆಕ್ಸಿಜನ್ ಚಾಲೆಂಜ್'...
ಬಾಳುಗೋಡು ಗ್ರಾಮದ ಅಯ್ಯಪ್ಪ ಯುವಕ ಮಂಡಲ ಉಪ್ಪುಕಳ ಇದರ ಸದಸ್ಯರಿಂದ ವನ್ಯಜೀವಿಗಳಿಗಾಗಿ ಹಣ್ಣಿನ ಗಿಡ ಬೆಳೆಸಿ ಅಭಿಯಾನ ಜೂ. 6 ರಂದು ಆರಂಭಿಸಲಾಯಿತು. ಅಭಿಯಾನದಲ್ಲಿ ಬಾಳುಗೋಡು ಉಪ್ಪುಕಳ ಸಂಪರ್ಕ ರಸ್ತೆಯ ಮಾನಡ್ಕ ಎಂಬಲ್ಲಿಂದ ಕೊತ್ನಡ್ಕವರೆಗೆ ರಸ್ತೆಯ ಬದುಗಳಲ್ಲಿ ಮಾವಿನ ಸಸಿ, ಪೇರಳೆ ಸಸಿ, ನಕ್ಷತ್ರ ಹಣ್ಣಿನ ಸಸಿ, ಗೇರುಬೀಜ ಸಸಿ, ಕಾಳುಮೆಣಸು ಬಳ್ಳಿಗಳನ್ನು ನೆಡಲಾಯಿತು. ವಿಶೇಷವಾಗಿ...
ಕೇನ್ಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಕೇನ್ಯ ಗ್ರಾಮದ ಕಾರ್ಯತಡ್ಕದಿಂದ ಪೇರ್ಬಂಡ ಕೆರೆಕೋಡಿ ನೇಲ್ಯಡ್ಕ ರಸ್ತೆಗಳಿಗೆ ಚರಂಡಿ ವ್ಯವಸ್ಥೆ ಮತ್ತು ರಸ್ತೆ ದುರಸ್ತಿ ಮಾಡುವ ಮುಖಾಂತರ ಜೂ.6ರಂದು ಶ್ರಮದಾನ ಮಾಡಲಾಯಿತು.ಈ ಶ್ರಮದಾನದಲ್ಲಿ ಜಾಗರಣ ಕಾರ್ಯಕರ್ತರು ಭಾಗವಹಿಸಿದರು.
ಶೇಣಿ ಕುಳ್ಳಾಜೆಯ ಎಂ.ಎಸ್.ಕೆ. ತಂಡದ ಸದಸ್ಯರಿಂದ ಶೇಣಿ ಪಾಡಾಜೆ ರಸ್ತೆಯಲ್ಲಿದ್ದ ಗುಂಡಿಯನ್ನು ಕಾಂಕ್ರೀಟ್ ಹಾಕಿ ಮುಚ್ಚಲಾಯಿತು. ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ಸುಬ್ರಾಯ ಸೂರೆಂಗಿ, ವಿಜಯ ಕುಳ್ಳಾಜೆ, ಸುಬ್ರಮಣ್ಯ ಸೂರೆಂಗಿ, ದಿನೇಶ್ ಕುಳ್ಳಾಜೆ, ವಿಶ್ವನಾಥ ಕುಳ್ಳಾಜೆ, ದೀಕ್ಷಿತ್ ಶೇಣಿ, ಕೃತಿಕ್ ಕುಳ್ಳಾಜೆ, ಜಗದೀಶ್ ಕುಳ್ಳಾಜೆ, ನಿತೀನ್ ಕುಳ್ಳಾಜೆ, ಯಶೋಧರ ಕುಳ್ಳಾಜೆ, ರಾಮಚಂದ್ರ ಕುಳ್ಳಾಜೆ ಉಪಸ್ಥಿತರಿದ್ದರು.
ಉತ್ತರಾಖಂಡ್ ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ ಎನ್.ಎಂ.ಸಿ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ.ಪಿ. ಆಯ್ಕೆ
ಸುಳ್ಯದ ಎನ್ ಎಂ ಸಿ ಪ್ರಥಮ ಬಿ ಕಾಂ ವಿದ್ಯಾರ್ಥಿನಿ ಕೆಡೆಟ್ ವಿಸ್ಮಿತ ಕೆ ಪಿ ಯವರು ಉತ್ತರಕಾಶಿ ಉತ್ತರಖಾಂಡ್ ನಲ್ಲಿ ಎನ್ ಸಿ ಸಿ ವತಿಯಿಂದ ನಡೆಯುವ ರಾಷ್ಟ್ರೀಯ ಮಟ್ಟದ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ. 19 ಕೆಎಆರ್ ಬೆಟಾಲಿಯನ್ , ಎನ್ ಸಿ ಸಿ ಮಡಿಕೇರಿಯಿಂದ ಆಯ್ಕೆ ಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. 2021 ಜೂನ್ 6...
Loading posts...
All posts loaded
No more posts
