- Tuesday
- May 5th, 2026
ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಕೊಲ್ಲಮೊಗ್ರದಲ್ಲಿ ಎರಡು ಕೊರೋನಾ ಬಾಧಿತರ ಮನೆಗಳಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬುವ ಕೆಲಸವನ್ನು ನಿರಂತರ ಮಾಡುತ್ತಿದ್ದಾರೆ.ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್.ಟಿ.ಎನ್, ಮಣಿಕಂಠ ಕಟ್ಟ, ಹಾಗೂ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಹರ್ಷ ಅಡ್ನೂರುಮಜಲು...
ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಪಡಿತರ ವಿತರಣಾ ಕೇಂದ್ರದಲ್ಲಿ ಕೊರೋನಾ ವಾರಿಯರ್ಸ್ ಗಳಾದ ಶಶಿಧರ್ ಬಾಳೆಗುಡ್ಡೆ,ಮುಖೇಶ್ ಪಡ್ಪು, ಚಂದ್ರಶೇಖರ್ ಕಡೋಡಿ, ರಾಜೇಶ್ ಅಂಬೆಕಲ್ಲು, ಪುನೀತ್ ಮುಂಡೋಡಿ, ಶಿವಪ್ರಕಾಶ್ ಕಡಪಳ, ಪಂಚಾಯತ್ ಸದಸ್ಯ ರಮೇಶ್ ಪಡ್ಪು, ಶೈಲೇಶ್ ಅಂಬೆಕಲ್ಲು ಹಾಗೂ ಸಹಕಾರ ಸಂಘದ ಸಿಬ್ಬಂದಿ ಪಡಿತರ ವಿತರಣೆಗೆ ಸಹಕಾರ ನೀಡಿದರು.
ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ತಾಜೆ ಕಾಲೋನಿಯಲ್ಲಿ ಅನಾರೋಗ್ಯ ಪೀಡಿತರ ಮನೆ ಭೇಟಿ ಮಾಡಿದ ಗ್ರಾ.ಪಂ.ಸದಸ್ಯರು ಅವರಿಗೆ ಮಾನಸಿಕ ಸ್ಥೈರ್ಯ ತುಂಬಿದರು. ಈ ವೇಳೆ ಗ್ರಾ.ಪಂ. ಸದಸ್ಯ ಶೈಲೇಶ್ ಅಂಬೆಕಲ್ಲು, ರಮೇಶ್ ಪಡ್ಪು, ಪಿಡಿಓ ಗುರುಪ್ರಸಾದ್ ಉಪಸ್ಥಿತರಿದ್ದರು.
ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆ ಮತ್ತು ಕಲಾಮಾಯೆ ಏನೆಕಲ್ಲು ಪ್ರಸ್ತುತ ಪಡಿಸುವ ಅರೆಬಾಸೆ ಪದ್ಯ ಕವನಗಳ ಗಮ್ಮತ್ ಆನ್ಲೈನ್ ನಲ್ಲಿ ನಡೆಯಲಿದೆ. ಕವಿಗಳಿಗೆ, ಕವನ ವಾಚಕರಿಗೆ ಉಚಿತ ಅವಕಾಶವಿರುವ ಈ ವಿನೂತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರೆಬಾಸೆ ಘನತೆ ಗೌರವ ಹೆಚ್ಚಿಸುವಂತೆ ಹಾಗೂ ಅತೀ ಹೆಚ್ಚು ವ್ಹೀವ್ಸ್ ಪಡೆದವರಿಗೆ ಕಿರಣ ಗೌರವ ಸನ್ಮಾನ ನೀಡಿ ಗೌರವಿಸಲಾಗುವುದು...
ಪ್ರತಿಷ್ಠಿತ ಗ್ರಾಮ ಮಡಪ್ಪಾಡಿ ಆದರೇ ರಸ್ತೆ ಬಗ್ಗೆ ಮಾತ್ರ ಅದೆಷ್ಟೋ ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಾ ಬಂದಿದೆ. ಸೇವಾಜೆಯಿಂದ ಮಡಪ್ಪಾಡಿಗೆ ಸಾಗುವ ರಸ್ತೆ ಕೆಲವೆ ವರ್ಷಗಳ ಹಿಂದೆ ಮರುಡಾಮರೀಕರಣ ನಡೆದಿದ್ದರೂ ಡಾಮರು ಕಿತ್ತು ಹೋಗಿ ರಸ್ತೆ ಮತ್ತೆ ಅಸ್ತವ್ಯಸ್ತವಾಗಿದೆ ಸೇವಾಜೆಯಿಂದ ಕಜೆವರೆಗಿನ ರಸ್ತೆ ಗುಂಡಿಗಳಿಗೆ ಕಳೆದ ಬೇಸಿಗೆಯಲ್ಲಿ ಮಣ್ಣು ಹಾಕಿ ಮುಚ್ಚಲಾಗಿತ್ತು. ಈ ಮಣ್ಣು ಬೇಸಿಗೆ ಕಾಲವಿಡೀ...
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ತುರ್ತು ಸೇವೆಗಳಿಗಾಗಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಮುತ್ತಪ್ಪ ಅವರು ತಮ್ಮ ಸ್ವಂತ ವಾಹನವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ಮೇ.17 ರಂದು ಬಳ್ಪ ಗ್ರಾಮದ ಕ್ಯಾನ್ಸರ್ ರೋಗಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಅವರನ್ನು ಮಂಗಳೂರಿನ ಎ.ಜೆ ಅಸ್ಪತ್ರೆಗೆ ಅಡ್ಮಿಟ್ ಮಾಡಲು ಕರೆದುಕೊಂಡು ಹೋಗಲು ಹಾಗೂ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪುತ್ತೂರಿನ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರರಾಗಿದ್ದ ಉದ್ಯಮಿ ಬೆಳ್ಳಾರೆಯ ಕೋಡಿಬೈಲು ಸತ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಅವರು ಬೆಳ್ಳಾರೆಯಿಂದ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ....
ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ಸದಸ್ಯರು ಮತ್ತು ಬಾಕಿಲ ಪರಿಸರದ ದಾನಿಗಳ ಸಹಕಾರದಿಂದ ಲಾಕ್ ಡೌನ್ ಆಗಿರುವ ಈ ಸಂದರ್ಭದಲ್ಲಿ ತೊಂದರೆಗೊಳಗಾದ ಬಡವರಿಗೆ ಉಚಿತ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ನಡೆಯಿತು.
ಉಪ್ಪಿನಂಗಡಿ ಸಮೀಪದ ತೆಕ್ಕಾರುನ ಪಿಂಡಿಕಲ್ಲು ಎಂಬಲ್ಲಿ ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಕಲ್ಲೇರಿ ಶಾಖೆಯ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ (26) ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಇಂದು ಸಂಜೆ ಸಂಭವಿಸಿದೆ.ಮೃತ ವಿಕಾಸ್ ಮೂಲತಃ ಬಿಜಾಪುರದವರಾಗಿದ್ದು, ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
Loading posts...
All posts loaded
No more posts
