- Wednesday
- July 8th, 2026
ಪ್ರತಿಷ್ಠಿತ ಗ್ರಾಮ ಮಡಪ್ಪಾಡಿ ಆದರೇ ರಸ್ತೆ ಬಗ್ಗೆ ಮಾತ್ರ ಅದೆಷ್ಟೋ ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗುತ್ತಾ ಬಂದಿದೆ. ಸೇವಾಜೆಯಿಂದ ಮಡಪ್ಪಾಡಿಗೆ ಸಾಗುವ ರಸ್ತೆ ಕೆಲವೆ ವರ್ಷಗಳ ಹಿಂದೆ ಮರುಡಾಮರೀಕರಣ ನಡೆದಿದ್ದರೂ ಡಾಮರು ಕಿತ್ತು ಹೋಗಿ ರಸ್ತೆ ಮತ್ತೆ ಅಸ್ತವ್ಯಸ್ತವಾಗಿದೆ ಸೇವಾಜೆಯಿಂದ ಕಜೆವರೆಗಿನ ರಸ್ತೆ ಗುಂಡಿಗಳಿಗೆ ಕಳೆದ ಬೇಸಿಗೆಯಲ್ಲಿ ಮಣ್ಣು ಹಾಕಿ ಮುಚ್ಚಲಾಗಿತ್ತು. ಈ ಮಣ್ಣು ಬೇಸಿಗೆ ಕಾಲವಿಡೀ...
ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ತುರ್ತು ಸೇವೆಗಳಿಗಾಗಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಮುತ್ತಪ್ಪ ಅವರು ತಮ್ಮ ಸ್ವಂತ ವಾಹನವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ಮೇ.17 ರಂದು ಬಳ್ಪ ಗ್ರಾಮದ ಕ್ಯಾನ್ಸರ್ ರೋಗಿಗೆ ಆರೋಗ್ಯ ಸಮಸ್ಯೆ ಉಂಟಾಗಿ ಅವರನ್ನು ಮಂಗಳೂರಿನ ಎ.ಜೆ ಅಸ್ಪತ್ರೆಗೆ ಅಡ್ಮಿಟ್ ಮಾಡಲು ಕರೆದುಕೊಂಡು ಹೋಗಲು ಹಾಗೂ...
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಪುತ್ತೂರಿನ ತೆಂಕಿಲದಲ್ಲಿ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ, ಸ್ಕೂಟರ್ ಸವಾರರಾಗಿದ್ದ ಉದ್ಯಮಿ ಬೆಳ್ಳಾರೆಯ ಕೋಡಿಬೈಲು ಸತ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.ಅವರು ಬೆಳ್ಳಾರೆಯಿಂದ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ....
ಆದಿಶಕ್ತಿ ಕ್ರೀಡಾ ಮತ್ತು ಕಲಾ ಸಂಘ ಬಾಕಿಲ ಇದರ ಸದಸ್ಯರು ಮತ್ತು ಬಾಕಿಲ ಪರಿಸರದ ದಾನಿಗಳ ಸಹಕಾರದಿಂದ ಲಾಕ್ ಡೌನ್ ಆಗಿರುವ ಈ ಸಂದರ್ಭದಲ್ಲಿ ತೊಂದರೆಗೊಳಗಾದ ಬಡವರಿಗೆ ಉಚಿತ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ನಡೆಯಿತು.
ಉಪ್ಪಿನಂಗಡಿ ಸಮೀಪದ ತೆಕ್ಕಾರುನ ಪಿಂಡಿಕಲ್ಲು ಎಂಬಲ್ಲಿ ವಿದ್ಯುತ್ ಸಂಪರ್ಕದ ಲೋಪವನ್ನು ಸರಿಪಡಿಸಲು ಹೋಗಿದ್ದ ಕಲ್ಲೇರಿ ಶಾಖೆಯ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ (26) ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಇಂದು ಸಂಜೆ ಸಂಭವಿಸಿದೆ.ಮೃತ ವಿಕಾಸ್ ಮೂಲತಃ ಬಿಜಾಪುರದವರಾಗಿದ್ದು, ಕಳೆದ 5 ವರ್ಷಗಳಿಂದ ಮೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಸುಳ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಇಳಿಮುಖ ಕಾಣುತ್ತಿದ್ದು ಇಂದು 40 ಹೊಸ ಸೋಂಕಿತರ ಪತ್ತೆಯಾಗಿದ್ದಾರೆ. ನಿನ್ನೆ ಕೂಡ 44 ಪ್ರಕರಣಗಳಿದ್ದವು. ಒಟ್ಟು ಸುಳ್ಯದಲ್ಲಿ 381 ಕೋವಿಡ್ ಸಕ್ರೀಯ ಪ್ರಕರಣಗಳಿವೆ.
ಕೊರೋನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕಿತರಿಗೆ ಧೈರ್ಯ ತುಂಬುವ ಸಲುವಾಗಿ ಮೇ.13 ಹಾಗೂ ಮೇ.14 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಐದು ಕೊರೋನಾ ಬಾಧಿತರ ಮನೆಗಳಿಗೆ ಬೇಟಿ ನೀಡಿ ಕೊರೋನಾ ಬಾಧಿತರಿಗೆ ಹಾಗೂ ಕೊರೋನಾ ಬಾಧಿತರ ಮನೆಯವರಿಗೆ ಧೈರ್ಯ ತುಂಬುವ ಕೆಲಸ...
ಕಳಂಜ ಗ್ರಾಮದ ಮುಂಡುಗಾರು ಮನೆ ನಾಗಪ್ಪ ಗೌಡರವರ ಪುತ್ರಿ ರೇಶ್ಮಾರವರ ವಿವಾಹ ಕಾರ್ಯಕ್ರಮವು ಶಾಂತಿಗೋಡು ಗ್ರಾಮದ ಮರಕ್ಕೂರು ಮನೆ ಪೂವಣಿ ಗೌಡರವರ ಪುತ್ರ ನವೀನರೊಂದಿಗೆ ಮೇ.13 ರಂದು ಮರಕ್ಕೂರು ವರನ ಮನೆಯಲ್ಲಿ ನಡೆಯಿತು.
ಲಾಕ್ ಡೌನ್ ಮಧ್ಯೆಯೂ ಸುಳ್ಯದಲ್ಲಿ ಕೊರೊನಾ ಪಾಸಿಟಿವ್ ಮತ್ತೆ ಏರಿಕೆ ಕಂಡಿದೆ. ಇಂದು 57 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ನಿನ್ನೆ 56 ಸೋಂಕಿತರಿದ್ದರು. ಸುಳ್ಯದಲ್ಲಿ ಒಟ್ಟು 533 ಸೋಂಕಿತರಿದ್ದಾರೆ.
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ...
Loading posts...
All posts loaded
No more posts
