ಸುಳ್ಯದಲ್ಲಿ ಇಂದು 78 ಸೋಂಕಿತರು ಪತ್ತೆ

ಸುಳ್ಯ ತಾಲೂಕಿನಲ್ಲಿ ಇಂದು 78 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣ ಕಲ್ಲಗದ್ದೆ ನಿಧನ

ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿ ಕೃಷ್ಣ (40) ಅಲ್ಪಕಾಲದ ಅಸೌಖ್ಯದಿಂದ ಮೇ.4 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಜಾನಕಿ, ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
Ad Widget

ಜಿಲ್ಲೆಯಲ್ಲಿ ಕೊರೊನ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ - ನಾಳೆ ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಖರೀದಿಗೆ ಅವಕಾಶ

ಕೊರೋನಾ ನಿಯಂತ್ರಣಕ್ಕಾಗಿ ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಕಠಿಣ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಬೆಳಿಗ್ಗೆ 6 ರಿಂದ 9ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುವುದು.ಮೇ.15...

ಸುಳ- ಉಬರಡ್ಕ ರಸ್ತೆಗೆ ಮರ ಬಿದ್ದು ಬಂದ್ – ನಾಲ್ಕು ವಿದ್ಯುತ್ ಕಂಬ ತುಂಡು

ಉಬರಡ್ಕ ರಸ್ತೆಯ ಅಟಲ್ ನಗರದಲ್ಲಿ ಮರ ಬಿದ್ದು ನಾಲ್ಕು ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಮೇ.6 ರಂದು ಮುಂಜಾನೆ ನಡೆದಿದೆ. ಕೆಲಕಾಲ ರಸ್ತೆ ಬಂದ್ ಆಗಿತ್ತು.

ಕೊರೊನ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ಕಾನೂನು ಜಾರಿ ಮಾಡಬೇಕು

ಕೊರೋನಾ ಮಹಾಮಾರಿಯಿಂದ ಜನರ ಸಾವಿನ ಸಂಖ್ಯೆ ಕಡಿಮೆ ಆಗಬೇಕಿದ್ದರೆ ದಾರಿ ಒಂದೇ, ಸಾವಿಗೀಡಾದ ವ್ಯಕ್ತಿಯು ಬಿಲ್ ಪಾವತಿಸಬಾರದು ಎಂದು ಸರ್ಕಾರ ರೂಲ್ಸ್ ಜಾರಿ ಮಾಡಬೇಕು. ಸರ್ಕಾರ ಕೊಡುವ ಅನುದಾನ ನೇರ ಮೃತರ ಮನೆಯವರಿಗೆ ತಲುಪಬೇಕು ಮತ್ತು ರೋಗಿಗೆ ಬಳಸಿದ ಚಿಕಿತ್ಸೆಯ ವಿವರಣೆ ಒಂದು ರೂಪಾಯಿಯಿಂದ ಲಕ್ಷದ ತನಕ ಲಿಖಿತವಾಗಿ ರೋಗಿಯ ಮನೆಯವರಿಗೆ ಕೊಡಬೇಕು. ರೋಗಿಯು ತನ್ನ...

ಕೊಲ್ಲಮೊಗ್ರ : ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ.ಅಧ್ಯಕ್ಷರ ನಡುವೆ ಮಾತಿನ ಚಕಮಕಿ – ಕೋವಿಡ್ ನಿರ್ವಹಣಾ ತಂಡದಿಂದ ಕೆಲಸ ಸ್ಥಗಿತಗೊಳಿಸಲು ನಿರ್ಧಾರ – ಅರಣ್ಯ ಸಿಬ್ಬಂದಿ ಸ್ಪಷ್ಟನೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಅರಣ್ಯ ಸಿಬ್ಬಂದಿಗಳ ಮಧ್ಯೆ ಕಳೆದ ರಾತ್ರಿ (ಮೇ.4) ಮಾತಿನ ಚಕಮಕಿ ನಡೆದು, ತನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂದು ಆರೋಪಿಸಿರುವ ಗ್ರಾ.ಪಂ. ಕೋವಿಡ್ ನಿರ್ವಹಣಾ ತಂಡ ತನ್ನ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ ಘಟನೆ ವರದಿಯಾಗಿದೆ.ಮೇ. 4 ರಂದು ರಾತ್ರಿ ಕೊಲ್ಲಮೊಗ್ರದಲ್ಲಿ ಹೋಮ್ ಐಸೊಲೇಶನ್ ನಲ್ಲಿದ್ದವರಿಗೆ ಆಹಾರ ಸಾಮಾಗ್ರಿ ವಿತರಿಸುತ್ತಿದ್ದ...

ಪ್ರಥಮ ಪಿಯುಸಿ ಪರೀಕ್ಷೆ ರದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣ ಹೆಚ್ಚಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು...

ಸುಳ್ಯದಲ್ಲಿ ಇಂದು 42 ಪ್ರಕರಣ – ಒಟ್ಟು 329 ಸೋಂಕಿತರು – 29 ಜನ ಗುಣಮುಖ

ಸುಳ್ಯ ತಾಲೂಕಿನಲ್ಲಿ ಇಂದು 42 ಕೊರೋನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ನಿನ್ನೆ 86 ಕ್ಕೇರಿದ ಪ್ರಕರಣ ಇಂದು ಕಡಿಮೆಯಾಗಿ 42 ಮಂದಿಗೆ ಪಾಸಿಟಿವ್ ಬಂದಿದೆ. ಸುಳ್ಯದಲ್ಲಿ ಒಟ್ಟು 329 ಪ್ರಕರಣಗಳಿವೆ. 29 ಜನ ಗುಣಮುಖರಾಗಿದ್ದಾರೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕುವುದರ ಜತೆಗೆ ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಲಸಿಕೆ ಲಭ್ಯವಿಲ್ಲ ಎಂದರೆ ಹೇಗೆ ?

ಲಸಿಕೆ ಲಭ್ಯವಿಲ್ಲದ ಕಾರಣ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕೆವಿಜಿ ಪುರಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಾಳೆ(ಮೇ‌4) ಲಸಿಕಾ ಕಾರ್ಯಕ್ರಮ ಇರುವುದಿಲ್ಲ. ಯಾವುದೇ ಲಸಿಕೆ ಲಭ್ಯವಿಲ್ಲದ ಕಾರಣ ಲಸಿಕಾ ಕಾರ್ಯಕ್ರಮ ನಾಳೆ ಇರುವುದಿಲ್ಲ. ಕೋವಿಡ್ ಲಸಿಕೆ ಬಂದಾಗ ತಿಳಿಸಲಾಗುವುದು ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಕೋವಿಡ್ ಪ್ರತಿರೋಧಕವಾಗಿ ನೀಡುವ ಕೋವ್ಯಾಕ್ಸಿನ್ ಕೆಲವು...

ಲಸಿಕೆ ಕೊರತೆ : ಪುರಭವನದಲ್ಲಿ ನಡೆಯುತ್ತಿದ್ದ ಕೋವಿಡ್ ಲಸಿಕೆ ವಿತರಣೆ ಸ್ಥಗಿತ

ಲಸಿಕೆ ಕೊರತೆಯಾಗಿರುವ ಕಾರಣದಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಕೆವಿಜಿ ಪುರಭವನದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಾಳೆ(ಮೇ‌4) ಲಸಿಕಾ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಯಾವುದೇ ಲಸಿಕೆ ಲಭ್ಯವಿಲ್ಲದ ಕಾರಣ ಲಸಿಕಾ ಕಾರ್ಯಕ್ರಮ ನಾಳೆ ಇರುವುದಿಲ್ಲ. ಕೋವಿಡ್ ಲಸಿಕೆ ಬಂದಾಗ ತಿಳಿಸಲಾಗುವುದು ಎಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಕೋವಿಡ್ ಪ್ರತಿರೋಧಕವಾಗಿ ನೀಡುವ ಕೋವ್ಯಾಕ್ಸಿನ್...
Loading posts...

All posts loaded

No more posts

error: Content is protected !!