- Wednesday
- May 6th, 2026
ಈಗಾಗಲೇ ದೇಶಾದ್ಯಂತ ಕೊರೊನಾ ವೈರಸ್ ನ 2ನೇ ಅಲೆ ಪ್ರಾರಂಭವಾಗಿದ್ದು ಜಿಲ್ಲೆಯಲ್ಲೂ ಕೂಡಾ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದೆ. ಈ ವೈರಾಣುವಿನ ವಿರುದ್ದ ಹೋರಾಡಲು ಈಗಾಗಲೇ ದೇಶಾದ್ಯಂತ ಕೋವಿಡ್ ಲಸಿಕೆಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಮುಂದುವರೆದು ಇದೇ ಬರುವ ಎ.7 ನೇ ಬುಧವಾರ ಬೆಳಿಗ್ಗೆ ಗಂಟೆ 10 ರಿಂದ ಸಂಜೆ 4 ಗಂಟೆಯವರೆಗೆ ಕಳಂಜ ಗ್ರಾಮ...
ಪಾರ್ಶ್ವವಾಯುಗೆ ಒಳಗಾಗಿ ನಡೆದಾಡಲು ಕಷ್ಟಪಡುತ್ತಿದ್ದ ಕಲ್ಲೇಮಠ ಕುಂಜಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎ.5 ರಂದು ವೀಲ್ ಚಯರ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀ ಹರಿ ಪ್ರಗತಿಬಂದು ತಂಡದ ಸದಸ್ಯರಾದ ದಿನಕರ ಕೊಪ್ಪತ್ತಡ್ಕ, ರಾಘವೇಂದ್ರ, ನಾರಾಯಣ.ರೈ, ಗಿರೀಶ್, ಉಮೇಶ್ ಕಟ್ಟ, ಶೇಖರ.ವಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹರಿಹರ...
ಗುತ್ತಿಗಾರು ಪೇಟೆಯಲ್ಲಿ ಮೆಸ್ಕಾಂ ಭೂಗತ ಕೇಬಲ್ ಅಳವಡಿಸುತ್ತಿದ್ದು ಎ.3 ರಂದು ಪೈಪ್ ಒಡೆದು ಹಾಕಿ ಪೇಟೆಯಾದ್ಯಂತ ನೀರಿನ ಸಂಪರ್ಕ ಕಡಿತಗೊಂಡಿದ್ದು ನೀರಿಗಾಗಿ ಪರದಾಡುವಂತಾಗಿದೆ. ಈ ಬಗ್ಗೆ ಪಂಚಾಯತ್ ಆಗಲಿ & ಕೇಬಲ್ ಅಳವಡಿಸುತ್ತಿರುವ ಗುತ್ತಿಗೆದಾರರಾಗಲಿ ಸರಿ ಪಡಿಸದೇ ಪೇಟೆಯಾದ್ಯಂತ ನೀರಿಗೆ ಸಮಸ್ಯೆ ತಂದೊಡ್ಡಿದ್ದಾರೆ. ಜನಪ್ರತಿನಿಧಿಗಳಾದರೂ ಕುಡಿಯುವ ನೀರಿಗೆ ಪರ್ಯಾಯ ಮಾಡುವರೇ ಎಂದು ಜನ ಕಾಯವ ಪರಿಸ್ಥಿತಿ...
ಸುಬ್ರಹ್ಮಣ್ಯ ಘಟಕದಿಂದ ಒಟ್ಟು 25 ಗೃಹರಕ್ಷಕ ದಳದ ಸಿಬ್ಬಂದಿಗಳು ಏ. 2 ರಿಂದ 7 ರವರೆಗೆ ನಡೆಯಲಿರುವ ತಮಿಳುನಾಡಿನ ಚೆನ್ನೈ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಂದೋಬಸ್ತ್ ಗಾಗಿ ಕರ್ತವ್ಯಕ್ಕೆ ತೆರಳಿರುತ್ತಾರೆ.
ಐವರ್ನಾಡು : ಸಾಂಸ್ಕೃತಿಕ ಕಲಾ ವೇದಿಕೆ ರಚನೆ – ಅಧ್ಯಕ್ಷ ರಾಮಚಂದ್ರ ಗೌಡ ಪಲ್ಲತ್ತಡ್ಕ, ಕಾರ್ಯದರ್ಶಿ ರಾಧಾಕೃಷ್ಣ ಚಾಕೋಟೆ
ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ ಪ್ರಥಮ ಸಭೆಯು ಐವರ್ನಾಡಿನ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಎ.2ರಂದು ಜರಗಿತು.ಸಾಂಸ್ಕೃತಿಕ ಕಲಾ ವೇದಿಕೆಯ ಸಂಚಾಲಕ ಚಂದ್ರಾಕೋಲ್ಚಾರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ವರ್ಷದ ಲೆಕ್ಕಪತ್ರವನ್ನು ಚಂದ್ರಾ ಕೋಲ್ಚಾರು ಮಂಡಿಸಿದರು. ಬಳಿಕ ಮುಂದಿನ ವರ್ಷದ ಯೋಜನೆಗಳು ಹಾಗೂ ಸದಸ್ಯರುಗಳನ್ನು ಸೇರ್ಪಡೆಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಸಾಂಸ್ಕೃತಿಕ ಕಲಾ ವೇದಿಕೆ ಐವರ್ನಾಡು ಇದರ...
ಸುಳ್ಯ ಕಸಬಾ ಗ್ರಾಮದ ಅರಂಬೂರು ಅಮರ ಸುಳ್ಯ ಸುದ್ದಿ ಸಿಬ್ಬಂದಿ ಪದ್ಮನಾಭ ಗೌಡರ ಸುಪುತ್ರಿ ಕೃತಿ ಯ ವಿವಾಹ ನಿಶ್ಚಿತಾರ್ಥವು ಆಲೆಟ್ಟಿ ಗ್ರಾಮದ ಮೂಕಮಲೆ (ಗಬ್ಬಲ್ಕಜೆ) ರಾಮಕೃಷ್ಣ ಗೌಡರ ಪುತ್ರ ಜಿನಿತ್ ರೊಂದಿಗೆ ವಧುವಿನ ಮನೆಯಲ್ಲಿ ಏ.4 ರಂದು ನಡೆಯಿತು.
ದ.ಕ.ಜಿಲ್ಲಾ ಪಂಚಾಯತ್, ಬಾಳಿಲ ಗ್ರಾ.ಪಂ. ಸುಳ್ಯ ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಇದರ ಸಹಯೋಗದಲ್ಲಿ ಬಾಳಿಲ ಮತ್ತು ಮುಪ್ಪೇರ್ಯ ಗ್ರಾಮದ 45 ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಎ.5 ಮತ್ತು ಎ.8 ರಂದು ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವು ಬೆಳಗ್ಗೆ 9.30 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ಮುಪ್ಪೇರ್ಯ...
ಕಾಯರ್ತೋಡಿಯಲ್ಲಿರುವ ಶ್ರೀ ವರದಾಯಿನಿ ವ್ಯಾಘ್ರಚಾಮುಂಡೇಶ್ವರಿ ದೇವಸ್ಥಾನದಲ್ಲಿ ಎ.11, 12 ರಂದು ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಶ್ರಮದಾನ ಕಾರ್ಯಕ್ರಮ ಏ.4 ರಂದು ನಡೆಯಿತು.ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಡಿ.ಎಸ್.ಶೇಷಪ್ಪ, ಮೊಕೇಸರರಾದ ಡಿ.ಎಸ್.ಕುಶಾಲಪ್ಪ, ಡಿ.ಎಸ್.ಗಿರೀಶ್ ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಸರಗೋಡು ವಿಧಾನ ಸಭಾ ಕ್ಷೇತ್ರ ಅಭ್ಯರ್ಥಿ ಕೆ. ಶ್ರೀಕಾಂತ್ ಅವರ ಪರವಾಗಿ ಕಾರಡ್ಕ ಗ್ರಾಮ ಪಂಚಾಯತ್ ವಠಾರದ ಅಂಬಿಕಾ ನಗರದಲ್ಲಿ ಬಿಜೆಪಿ ಸುಳ್ಯ ಮಂಡಲದ ವತಿಯಿಂದ, ಮತ ಯಾಚಿಸಲಾಯಿತು. ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬೂಡು ರಾಧಾಕೃಷ್ಣ ರೈ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಜಗದೀಶ್ ಸರಳಿಕುಂಜ, ಬಿಜೆಪಿ...
ಕೋವಿಡ್ -19 ವೈರಾಣುವಿನ ವಿರುದ್ದ ಈಗಾಗಲೇ ದೇಶಾದ್ಯಂತ ಕೋವಿಶೀಲ್ಡ್ ಲಸಿಕೆಯನ್ನು ಫ್ರಂಟ್ ಲೈನ್ ವರ್ಕರ್ಸ್, 60 ವರ್ಷ ದಾಟಿದ ವಯಸ್ಕರು ಮತ್ತು 45-59 ವರ್ಷ ವಯೋಮಾನದ ಬಿಪಿ, ಶುಗರ್,ಅಸ್ತಮಾ, ಹೃದಯ, ಕಿಡ್ನಿ ಸಂಬಂಧಿತ ತೊಂದರೆ ಇರುವವರಿಗೆ ಮೊದಲ ಆದ್ಯತೆಯಲ್ಲಿ ನೀಡಲಾಗಿದೆ. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು ವಾರದ...
Loading posts...
All posts loaded
No more posts
