- Wednesday
- May 6th, 2026
ಬೆಳ್ಳಾರೆ ಟೌನ್ ರೊಟರಿ ಕ್ಲಬ್ ವತಿಯಿಂದ ನಿವೃತ್ತ ಕ್ಯಾಪ್ಟನ್ ಸುದಾನಂದ ಮಾವಿನಕಟ್ಟೆ ಯವರಿಗೆ ಸನ್ಮಾನ ಕಾರ್ಯಕ್ರಮ ಏ.1 ರಂದು ನಡೆಯಿತು.
ಗುತ್ತಿಗಾರು ಗ್ರಾಮದ ವಳಲಂಬೆ ನಿವಾಸಿ ಅಮೈ ಶಿವರಾಮ ಗೌಡರು ಅಲ್ಪಕಾಲದ ಅಸೌಖ್ಯದಿಂದ ಎ.1 ರಂದು ನಿಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರೇವತಿ, ಮಕ್ಕಳಾದ ಪ್ರೇಮಾ ಪ್ರಕಾಶ್ ಆಲಂಕಳ್ಯ, ಜಗದೀಶ ಅಮೈ, ಮೋಹನ ಅಮೈ, ಸಹೋದರರು, ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
ಪೆರುವಾಜೆ ಗ್ರಾಮ ಪಂಚಾಯತ್ ನ ಎದುರುಗಡೆ ರೋಟರಿ ಕ್ಲಬ್ ಬೆಳ್ಳಾರೆ ಹಾಗೂ ಭಾವೈಕ್ಯ ಯುವಕ ಮಂಡಲ (ರಿ.) ಪೆರುವಾಜೆಯ ಸಹಭಾಗಿತ್ವದಲ್ಲಿ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ದಿ.ಪ್ರೇಮನಾಥ ರೈ ರವರ ಸ್ಮರಣಾರ್ಥವಾಗಿ ನಿರ್ಮಿಸಿದ ನೂತನ ಬಸ್ಸು ತಂಗುದಾಣವನ್ನು ಎ.01ರಂದು ಉದ್ಘಾಟಿಸಲಾಯಿತು.ಉದ್ಘಾಟನೆಯನ್ನು ರೋಟರಿಯ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಸಚ್ಚಿದಾನಂದ,...
ನೀನಾಸಂ ರಂಗ ಶಿಕ್ಷಣ ಕೇಂದ್ರ ಹೆಗ್ಗೋಡು ಆಶ್ರಯದಲ್ಲಿ ಎಪ್ರಿnoಲ್ 11 ರಿಂದ ನಡೆಯುವ ಒಂದು ತಿಂಗಳ ರಾಜ್ಯಮಟ್ಟದ ರಂಗ ತರಬೇತಿ ಶಿಬಿರದಲ್ಲಿ ಶಿಬಿರಾರ್ಥಿಯಾಗಿ ಭಾಗವಹಿಸಲು ಸುಳ್ಯ ತಾಲೂಕು ಕಲ್ಮಕಾರು ಇಲ್ಲಿನ ಹಳ್ಳಿ ಪ್ರತಿಭೆ ಮಮತಾ ಕೆ.ಆಯ್ಕೆಯಾಗಿದ್ದಾರೆ. ಕರ್ನಾಟಕ ಅರೆಭಾಷೆ ಅಕಾಡೆಮಿ ವತಿಯಿಂದ ರಾಜ್ಯಾದ್ಯಂತ ನಡೆದ,ಜೀವನ್ ರಾಂ ಸುಳ್ಯ ನಿರ್ದೇಶನದ ಸಾಹೇಬ್ರು ಬಂದವೇ ಅರೆಭಾಷೆ ನಾಟಕದ...
ಅರಂತೋಡು ಗ್ರಾಮದ ದೇರಾಜೆ ಮನೆಯ ಕಮಲಾಕ್ಷರವರ ಪುತ್ರ ರಾಜೇಶ್ ದೇರಾಜೆ ಮಾ.31 ರಂದು ಹೃದಯಾಘಾತದಿಂದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು. ರಾತ್ರಿ ಲೋ ಬಿ.ಪಿ.ಯಿಂದ ಅಸ್ವಸ್ಥಗೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ಕರೆತಂದಿದ್ದರು.ಮೃತರು ತಂದೆ, ತಾಯಿ ಯಶೋದಾ, ಪತ್ನಿ ರಚನಾ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ, ಸಹೋದರ ಸತೀಶ್...
ಸುಳ್ಯದ ಖಾಸಗಿ ಬಸ್ಸು ನಿಲ್ದಾಣ ಬಳಿ ಇರುವ ಮೋಹನ್ ಜ್ಯುವೆಲ್ಲರಿ ಮಾರ್ಟ್ ಗೆ ಕಳ್ಳರು ನುಗ್ಗಿ ಚಿನ್ನ, ನಗದು ಕಳವು ಮಾಡಿದ್ದಾರೆ. ಜ್ಯುವೆಲ್ಲರಿ ಅಂಗಡಿಯ ಬೀಗ ಒಡೆದ ಕಳ್ಳರು ಸುಮಾರು 10 ಲಕ್ಷ ಮೌಲ್ಯದ ಚಿನ್ನ ಹಾಗೂ ಸುಮಾರು ಐವತ್ತು ಸಾವಿರ ರೂಪಾಯಿ ಕಳವುಗೈದಿದ್ದಾರೆನ್ನಲಾಗಿದೆ. ಪತ್ರಿಕಾ ವಿತರಕರು ಅಂಗಡಿಗೆ ಪತ್ರಿಕೆ ಹಾಕುವ ಸಂದರ್ಭದಲ್ಲಿ ಬೀಗ ಒಡೆದಿರುವುದು...
ಬೇಕಾಗಿದ್ದಾರೆ : ಗುತ್ತಿಗಾರಿನ ಕಾಳಿಕಾಂಬ ಇಂಡಸ್ಟ್ರೀಸ್ ಗೆ ನುರಿತ ವೆಲ್ಡರ್ ಬೇಕಾಗಿದ್ದಾರೆ. ಸಂಪರ್ಕಿಸಿ : 9481633172, 8762478533
ಮಂಡೆಕೋಲು ಗ್ರಾಮದ ಪೇರಾಲು ಶ್ರೀ ರಾಮ ಮಂದಿರದ ಪುನಃ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಾ.29 ರಂದು ಜರಗಿತು. ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎನ್. ಗೋಪಾಲ್ ರಾವ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿದರು. ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಣೇಶ್ ನೀರ್ಪಾಡಿ ವಹಿಸಿದ್ದರು. ಅತಿಥಿಗಳಾಗಿ ಮುಚ್ಚಿರಡಿ ಕ್ಷೇತ್ರದ ಮೊಕ್ತೇಸರ ಕುಕ್ಕೇಟಿ ಲಕ್ಷ್ಮಣ...
ಅಕ್ಷಯ ಸಂಜೀವಿನಿ ಒಕ್ಕೂಟ ಗ್ರಾಮ ಪಂಚಾಯತ್ ಮಡಪ್ಪಾಡಿ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ನೆರವೇರಿಸಿದರು. ಗ್ರಾಂ.ಪಂ.ಸದಸ್ಯರಾದ ಜಯರಾಮ ಹಾಡಿಕಲ್ಲು ಮತ್ತು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಧನಪತಿ, ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಕುಂತಳಾ ಕೇವಳ ಒಕ್ಕೂಟದ ಉಪಾಧ್ಯಕ್ಷೆ ದುರ್ಗೇಶ್ವರಿ ಪಣಿಯಾಲ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.
ಡ್ಯಾನ್ಸ್ ಹೌಸ್ ಆಶ್ರಯದಲ್ಲಿ ನಿಂತಿಕಲ್ಲಿನ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ಏ.11 ಆದಿತ್ಯವಾರದಿಂದ ನೃತ್ಯ ತರಗತಿಗಳು ಪ್ರಾರಂಭವಾಗಲಿದೆ. ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ನೃತ್ಯ ನಿರ್ದೇಶಕಿ ಹರ್ಷಿಣಿ ಕೆ.ಕೆ. ಹಾಗೂ ಅತಿಥಿ ನೃತ್ಯ ನಿರ್ದೇಶಕ ಜಯಪ್ರಕಾಶ್ ಮಂಗಳೂರು ನೃತ್ಯ ತರಬೇತಿ ನೀಡಲಿದ್ದಾರೆ. ಆಸಕ್ತ ವಿದ್ಯಾರ್ಥಿಗಳು 8296012252 ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಬಹುದು ಎಂದು ಸಂಘಟಕರು...
Loading posts...
All posts loaded
No more posts
