ವಿಜ್ರಂಭಣೆಯಿಂದ ನಡೆದ ಮಾವಿನಕಟ್ಟೆ ಒತ್ತೆಕೋಲ

ದೇವಚಳ್ಳ ಗ್ರಾಮದ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾರ್ಚ್ 18 ಮತ್ತು 19 ರಂದು ವಿಜ್ರಂಭಣೆಯಿಂದ ನಡೆಯಿತು. ಸುಮಾರು 3000 ಕ್ಕೂ ಮಿಕ್ಕಿ ಜನ ಭಾಗವಹಿಸಿ ದೈವದ ಪ್ರಸಾದ ಸ್ವೀಕರಿಸಿದರು. ಮಾ 18 ರಂದು ಬೆಳಿಗ್ಗೆ ಗಣಪತಿ ಹವನ, ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ, ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ,...

ಗುತ್ತಿಗಾರು : ವಿದ್ಯಾರ್ಥಿ ಪೊಲೀಸ್ ಕೆಡೆಟ್ ಉದ್ಘಾಟನೆ

ಗುತ್ತಿಗಾರು ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿ ಪೊಲೀಸ್ ಕೆಡೆಟ್ ನ ಉದ್ಘಾಟನಾ ಕಾರ್ಯಕ್ರಮವು ಮಾ.13 ರಂದು ನಡೆಯಿತು. ದ.ಕ.ಜಿ.ಪಂ.ನ ಮಾಜಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿಯವರು ಉದ್ಘಾಟಿಸಿ, ಶುಭಹಾರೈಸಿದರು. ವಿದ್ಯಾರ್ಥಿ ಪೊಲೀಸ್ ಕೆಡೆಟ್ ನ ಗುರಿ ಮತ್ತು ಉದ್ದೇಶಗಳ ಕುರಿತಂತೆ ಕೆಡೆಟ್ ನ ನೋಡೆಲ್ ಅಧಿಕಾರಿಗಳಾದ ಮಲ್ಲಿಕಾರ್ಜುನ ಮತ್ತು ಅನಿಲ್ ರವರು ಮಾಹಿತಿ ನೀಡಿದರು. ಶಾಲಾ...
Ad Widget

ಅದೋಗತಿ ತಲುಪಿದ ಸುಳ್ಯ ನಗರ ವ್ಯಾಪ್ತಿಯ ಕುದ್ಪಾಜೆ ರಸ್ತೆ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಕುದ್ಪಾಜೆ ರಸ್ತೆ ಕೆಲವೆಡೆ ಡಾಮರು ಕಾಣದೇ ಹಾಗೂ ಕೆಲವೆಡೆ ಹಾಕಿದ ಡಾಮರು ಕಿತ್ತು ಹೋಗಿ ಸಂಚಾರಕ್ಕೆ ದುಸ್ಥರವಾಗಿದೆ. ಈ ರಸ್ತೆಗೆ ಸುಮಾರು 27ವರ್ಷಗಳ ಹಿಂದೆ ಹಾಕಿದ ಡಾಮರು ಎದ್ದು ಹೋಗಿದೆ. ಮತ್ತೆ ಯಾರು ಕೂಡ ಈ ರಸ್ತೆ ಅಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. ಇಲ್ಲಿ ಸುಮಾರು 33 ಮನೆಗಳಿದ್ದು ವಾಹನ...

ಮೊಗ್ರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ 48 ದಿನ ಗಣಪತಿ ಹವನ

ಗುತ್ತಿಗಾರು: ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನ ನಿರ್ಮಾಣ ಕಾರ್ಯದ ಅಂಗವಾಗಿ ಹಾಗೂ ಲೋಕಕಲ್ಯಾಣಾರ್ಥವಾಗಿ 48 ದಿನಗಳ ಕಾಲ ನಿರಂತರವಾಗಿ ನಡೆಯುವ ಗಣಪತಿ ಹವನವು ಮಾ.17 ರಿಂದ ಆರಂಭಗೊಂಡಿತು. ಮೊಗ್ರದಲ್ಲಿ ಶ್ರೀಶೂಲಿನೀ ದುರ್ಗಾ ಹಾಗೂ ಶ್ರೀ ವನದುರ್ಗಾ ದೇವಸ್ಥಾನದ ನಿರ್ಮಾಣ ಹಾಗೂ ದೈವಸ್ಥಾನಗಳ ಅಭಿವೃದ್ದಿ ಕಾರ್ಯ ನಡೆಯಲಿದೆ....

ಗುತ್ತಿಗಾರು : ಮನೆ ಮನೆ ಯಕ್ಷಗಾನ ಪ್ರದರ್ಶನ

https://youtu.be/xxYWgrNqtsE ಶ್ರೀ ದುರ್ಗಾಪರಮೇಶ್ವರಿ ಕೃಪಾಶ್ರಿತ ಸಂಚಾರಿ ತಿರುಗಾಟದ ಯಕ್ಷಗಾನ ಮೇಳ ಹಾಗೂ ಚೌಕಿಮನೆ ಪಂಜ ಇದರ ಜಂಟಿ ಸಹಯೋಗದೊಂದಿಗೆ ಮನೆ ಮನೆ ಯಕ್ಷಗಾನ ಪ್ರದರ್ಶನ ಗುತ್ತಿಗಾರು ಗ್ರಾಮದ ವಿವಿಧೆಡೆ ಆರಂಭಗೊಂಡಿದೆ. ಈ ತಿರುಗಾಟದ ಯಕ್ಷಗಾನ ತಂಡ ಕಳೆದ ಆರು ವರ್ಷಗಳಿಂದ 'ಸಂಸ್ಕಾರದಿಂದ ಸಂಸ್ಕೃತಿಯ ಉಳಿವಿಗಾಗಿ' ಯಕ್ಷಗಾನ ಪ್ರದರ್ಶನ ನೀಡುತ್ತಿದೆ.

ರಂಗಭೂಮಿಯನ್ನು ಉಳಿಸಿಕೊಳ್ಳುವುದೇ ಸವಾಲಾಗಿದೆ ರಂಗಮನೆ ಬಹುಭಾಷಾ ನಾಟಕೋತ್ಸವದಲ್ಲಿ ಮುಖ್ಯ ಮಂತ್ರಿ ಚಂದ್ರು

ಆಧುನಿಕ ಮಾಧ್ಯಮಗಳು ಪ್ರಬಲವಾಗುತ್ತಿರುವ ಈ ಸಂದರ್ಭದಲ್ಲಿ ರಂಗಭೂಮಿಯನ್ನು ಉಳಿಸಿಕೊಳ್ಳುವುದು ಒಂದು ಸವಾಲಾಗಿದೆ. ಇಂತಹ ಆತಂಕಕಾರಿ ಸ್ಥಿತಿಯಲ್ಲಿಯೂ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬದ್ಧತೆಯಿಂದ ರಂಗಭೂಮಿಯನ್ನೇ ಬದುಕಾಗಿಸಿಕೊಂಡು ದುಡಿಯುತ್ತಿರುವ ಜೀವನರಾಂ ಓರ್ವ ಮಹಾನ್ ಸಾಧಕ' ಎಂದು ಹಿರಿಯ ರಂಗ ಕರ್ಮಿ, ಚಲನ ಚಿತ್ರ ನಟ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಅವರು ಸುಳ್ಯದ...

ಕೊಲ್ಲಮೊಗ್ರು : ಸೋಲಾರ್ ಬೀದಿ ದೀಪ ಅಳವಡಿಕೆ

ತಾಲೂಕು ಪಂಚಾಯತ್ ಅನುದಾನದಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಬಾಗಿಲು ನಲ್ಲಿ ಸೋಲಾರ್ ಬೀದಿ ದೀಪ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಉದಯ ಕೊಪ್ಪಡ್ಕ ಮತ್ತಿತರರು ಉಪಸ್ಥಿತರಿದ್ದರು. ✍ಉಲ್ಲಾಸ್ ಕಜ್ಜೋಡಿ

ಮಡಪ್ಪಾಡಿ : ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ಮತ್ತು ಪೋಷಣ್ ಅಭಿಯಾನ

ದ.ಕ.ಜಿ.ಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಗ್ರಾಮ ಪಂಚಾಯತ್ ಮಡಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಇಂದು ಆರೋಗ್ಯ ವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ ಮತ್ತು ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಪಕ್ವಾಡ್ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ...

ಹರಿಹರಪಲ್ಲತಡ್ಕ: ಮದ್ಯಮುಕ್ತ ಗ್ರಾಮವಾಗಿರಲು ಹೋರಾಟ ಸಮಿತಿ ರಚನೆ – ಅಧ್ಯಕ್ಷರಾಗಿ ಹಿಮ್ಮತ್ ಕೆ.ಸಿ., ಕಾರ್ಯದರ್ಶಿಯಾಗಿ ಬಾಲಸುಬ್ರಹ್ಮಣ್ಯ

ಹರಿಹರ ಪಲ್ಲತಡ್ಕ ಗ್ರಾ.ಪಂ ನ ಹರಿಹರ ಪಲ್ಲತಡ್ಕ ಪೇಟೆಯಲ್ಲಿ ಮದ್ಯ ಮಾರಾಟ ಕೇಂದ್ರ ಆರಂಭವಾಗುವುದಾಗಿ ಪ್ರಚಾರದಲ್ಲಿದ್ದು ಅದನ್ನು ವಿರೋಧಿಸಿ ಮಾ.16 ರಂದು ಹರಿಹರೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆ ನಡೆಯಿತು . ಸಭೆಯಲ್ಲಿ ಗ್ರಾಮ ವನ್ನು ಮದ್ಯ ಮುಕ್ತವಾಗಿರಿಸಲು ಒಕ್ಕೊರಲ ಆಗ್ರಹ ವ್ಯಕ್ತವಾಗಿದ್ದು ಮದ್ಯಮುಕ್ತ ಗ್ರಾಮ ಹೋರಾಟ ಸಮಿತಿ ರಚನೆ ರಚನೆಗೊಂಡಿತು. ಅಲ್ಲದೆ ಸಭೆಯಲ್ಲಿ ಹರಿಹರ ಗ್ರಾ.ಪಂ...

ಮಾ.19, 20 : ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿ

ಕಳಂಜ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡಾವಳಿಯು ಮಾ. 19 ಮತ್ತು ಮಾ. 20 ರಂದು ನಡೆಯಲಿದೆ. ಒತ್ತೆಕೋಲ ನಡಾವಳಿಯ ಅಂಗವಾಗಿ ಮಾ. 19 ರಂದು ಸಂಜೆ ಗಂಟೆ 6.00ಕ್ಕೆ ಸ್ಥಾನದಿಂದ ಭಂಡಾರ ತೆಗೆಯುವುದು, ರಾತ್ರಿ ಗಂಟೆ 7.30ಕ್ಕೆ ಮೇಲೇರಿಗೆ ಅಗ್ನಿಸ್ಪರ್ಶ, ರಾತ್ರಿ ಗಂಟೆ 8.00ರಿಂದ ಸ್ಥಳೀಯ ಪ್ರತಿಭೆಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ...
Loading posts...

All posts loaded

No more posts

error: Content is protected !!