- Sunday
- March 15th, 2026
ಕೊಲ್ಲಮೊಗ್ರದಲ್ಲಿ ಲಾಸ್ಯ ಕಲಾಶಾಲೆಯ ನೇತೃತ್ವದಲ್ಲಿ ಮಾ.7 ರಿಂದ ನೃತ್ಯ ತರಬೇತಿ ಆರಂಭವಾಗಲಿದೆ. ಪ್ರತಿ ಆದಿತ್ಯವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ರವರೆಗೆ ಮಯೂರ ಕಲಾ ಮಂದಿರದಲ್ಲಿ ತರಬೇತಿ ನಡೆಯಲಿದೆ ಎಂದು ಸಂಯೋಜಕಿ ರೇಷ್ಮಾ ಕಡ್ಯ ತಿಳಿಸಿದ್ದಾರೆ.
ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.11 ರಂದು ಮಹಾಶಿವರಾತ್ರಿ ಉತ್ಸವ ನಡೆಯಲಿದೆ. ಸಂಜೆ ಗಂಟೆ 5.00 ರಿಂದ ಶತರುದ್ರಾಭಿಷೇಕ, ರಾತ್ರಿ ಗಂಟೆ 9.30 ಕ್ಕೆ ಮಹಾಪೂಜೆ ನಡೆಯಲಿದೆ. ರಾತ್ರಿ ಗಂಟೆ 10.00 ರಿಂದ ಮಹತೋಭಾರ ಶ್ರೀ ಮಂಗಳಾದೇವಿ ಪ್ರಸಾದಿತ ಯಕ್ಷಗಾನ ಮಂಡಳಿ ಮಂಗಳೂರು ಇವರಿಂದ " ಬೂಡುದ ಭಂಡಾರ ” ತುಳು ಯಕ್ಷಗಾನ ಬಯಲಾಟ...
ಕಾಂಚೋಡು ಶ್ರೀ ಮಂಜುನಾಥೇಶ್ವರದೇವಾಲಯದಲ್ಲಿ ಮಾ. 11 ರಂದು ಮಹಾಶಿವರಾತ್ರಿ ಉತ್ಸವ ಜರುಗಲಿದೆ. ಉತ್ಸವದ ಅಂಗವಾಗಿ ಸಂಜೆ ಗಂಟೆ 6 ರಿಂದ ಶತರುದ್ರಾಭಿಷೇಕ, ರಂಗಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಯಸ್.ಬಿ.ದಳರವರು ತಿಳಿಸಿದ್ದಾರೆ.
ಕೋವಿಡ್ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ತಡವಾಗಿ ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮಾರ್ಚ್ ತಿಂಗಳ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು...
ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನಯುವ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯೂಎಸಿ ವತಿಯಿಂದ ಅಗ್ನಿ ಅವಘಡಗಳ ಅರಿವು ಮತ್ತುಅಗ್ನಿ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಸುಳ್ಯದ ಅಗ್ನಿ ಶಾಮಕ ಠಾಣೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಶ್ರೀಮತಿ ರತ್ನಾವತಿ ಡಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಇಂತಹ...
ನ.ಪಂ.ನ ಆವರಣದಲ್ಲಿರು ಪ್ಲಾಸ್ಟಿಕ್ ಕಸ ವಿಲೇವಾರಿಗೆ ಬರ್ನಿಂಗ್ ಮೆಷಿನ್ ಪಂಚಾಯತ್ ಆವರಣ ತಲುಪಿದ್ದು ಶೀಘ್ರವೇ ಕಸ ವಿಲೇವಾರಿ ಆಗಲಿದೆ ಎಂದು ನ.ಪಂ.ಅಧ್ಯಕ್ಷರು ಹೇಳಿಕೆ ನೀಡಿದ್ದಾರೆ. ಆದರೇ ನ.ಪಂ.ಆವರಣಕ್ಕೆ ಪ್ಲಾಸ್ಟಿಕ್ ಪ್ರೆಸ್ಸಿಂಗ್ ಮೆಷಿನ್ ನಂತೆ ಕಂಡುಬರುತ್ತಿದ್ದು ಹಾಗೂ ಹಳೆಯದಾಗಿದ್ದು ಈ ಯಂತ್ರದಿಂದ ಎಲ್ಲಾ ತ್ಯಾಜ್ಯ ವಿಲೇವಾರಿ ಸಾಧ್ಯವೇ ಅಥವಾ ಎಲ್ಲಾ ತ್ಯಾಜ್ಯ ನಿರ್ವಹಣೆಗೆ ಬೇರೆ ಯಂತ್ರ ಇದೇ...
ಕೋಟೆಮುಂಡುಗಾರಿನಲ್ಲಿ ಫೆ. 26 ರಿಂದ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಕೈಕೊಟ್ಟಿದ್ದು ಇದುವರೆಗೆ ನೆಟ್ವರ್ಕ್ ಸರಿಯಾಗದೇ ಜನ ಪೇಚಿಗೆ ಸಿಲುಕಿದ್ದಾರೆ. 4 ದಿನಗಳಿಂದ ಬಿ ಎಸ್ ಎನ್ ಎಲ್ ಸ್ತಬ್ದವಾಗಿದ್ದು ಬೇರೆ ನೆಟ್ವರ್ಕ್ ವ್ಯವಸ್ಥೆ ಇಲ್ಲದೆ ತುರ್ತು ಅಗತ್ಯಗಳಿಗೆ ಪರದಾಡುವಂತಾಗಿದೆ. ಓ ಎಫ್ ಸಿ ಕಡಿತಗೊಂಡಿರುವುದು ನೆಟ್ವರ್ಕ್ ಸಮಸ್ಯೆಗೆ ಕಾರಣವಾಗಿದ್ದು ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡಲು...
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ಮತ್ತು 25 ರಂದು ನಡೆಯಲಿರುವ ಜಾತ್ರೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ ಕಡ್ತಲ್ಕಜೆ ಅವರ ನೇತೃತ್ವದಲ್ಲಿ ಮಾ.1 ರಂದು ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಕುಶಾಲಪ್ಪ ಗೌಡ ಪಾರೆಪ್ಪಾಡಿ,...
ಹಿಂದುಳಿದ ವರ್ಗಗಳ ಸುಳ್ಯ ಮಂಡಲ ಮೋರ್ಚಾದ ಕಾರ್ಯಕಾರಿಣಿ ಸಭೆ ಇಂದು ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಅಧ್ಯಕ್ಷ ಚಂದ್ರಶೇಖರ ಪನ್ನೇ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಆರ್.ಸಿ ನಾರಾಯಣ ರೆಂಜಾ, ಜಿಲ್ಲಾ ಕಾರ್ಯದರ್ಶಿ ಉದಯಕುಮಾರ್ ಬಿ.ಸಿ ರೋಡ್, ಜಿಲ್ಲಾ ಕೋಶಾಧಿಕಾರಿ ಮಾಧವ ಚಾಂತಾಳ, ಬಿಜೆಪಿ...
ಯುವಕ ಮಂಡಲ ಮಡಪ್ಪಾಡಿ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಆರು ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ "ಮಡಪ್ಪಾಡಿ ಪ್ರೀಮಿಯರ್ ಲೀಗ್ 2021" ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯ ಕ್ರೀಡಾಂಗಣದಲ್ಲಿ ಫೆ.28 ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
Loading posts...
All posts loaded
No more posts
