- Sunday
- March 15th, 2026
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾಗಿ ಹರಿಣಿ ದೇರಾಜೆ ಹಾಗೂ ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆಯಾದರು.ಇಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ 11, ಕಾಂಗ್ರೆಸ್ 2 ಹಾಗೂ ಬಂಡಾಯ 2 ಸ್ಥಾನ ಪಡೆದಿತ್ತು.
ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ರೀಧರ ಕುತ್ಯಾಳ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ದೇವಕಿ ಕುದ್ಕುಳಿ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ 7 ಸ್ಥಾನಗಳ ಪೈಕಿ ಬಿಜೆಪಿ 5 ಹಾಗೂ ಕಾಂಗ್ರೆಸ್ 2 ಸ್ಥಾನ ಪಡೆದಿತ್ತು.
ಬಾಳಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾಗಿ ತ್ರಿವೇಣಿ ಪಾಜಪಳ್ಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಲ್ಲಿ 10 ಸ್ಥಾನಗಳ ಪೈಕಿ ಬಿಜೆಪಿ 9 ಹಾಗೂ ಕಾಂಗ್ರೆಸ್ 1 ಸ್ಥಾನ ಪಡೆದುಕೊಂಡಿತ್ತು.
ಮರ್ಕಂಜ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಪವಿತ್ರ ಗುಂಡಿ ಹಾಗು ಉಪಾಧ್ಯಕ್ಷರಾಗಿ ಗೋವಿಂದ ಅಳವುಪಾರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿಯ 7, ಕಾಂಗ್ರೆಸ್ ನ 1 ಹಾಗೂ ಓರ್ವ ಪಕ್ಷೇತರ ಸದಸ್ಯರಿದ್ದಾರೆ.
ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮಾ ದೇರಾಜೆ ಹಾಗೂ ಉಪಾಧ್ಯಕ್ಷರಾಗಿ ನೇತ್ರಾವತಿ ಕಲ್ಲಾಜೆ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಬಿಜೆಪಿ10, ಕಾಂಗ್ರೆಸ್ 3 ಸ್ಥಾನ ಪಡೆದಿತ್ತು.
ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಪೆರುವಾಜೆ ಯಲ್ಲಿ ಬಿಜೆಪಿಗೆ ಅಧಿಕಾರ ಲಭಿಸಿದೆ. ಅಧ್ಯಕ್ಷರಾಗಿ ಜಗನ್ನಾಥ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ 8 ಸ್ಥಾನಗಳ ಪೈಕಿ ಕಾಂಗ್ರೆಸ್ 5 ಹಾಗೂ ಬಿಜೆಪಿ 3 ಸ್ಥಾನ ಪಡೆದಿತ್ತು. ಕಾಂಗ್ರೆಸ್ ಬೆಂಬಲಿತ ಸದಸ್ಯರಿಗೆ ಅಧಿಕಾರ ನಡೆಸಲು ಬಹುಮತವಿದ್ದರೂ ಕ್ಷಿಪ್ರ ರಾಜಕೀಯ ಬೆಳವಣಿಗೆಯಿಂದ ಕಾಂಗ್ರೆಸ್ ತನ್ನ ನೆಲೆ ಕಳೆದುಕೊಂಡಂತಾಗಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದ...
ಕಳಂಜ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಕುಮಾರ್.ಕೆ ಹಾಗೂ ಉಪಾಧ್ಯಕ್ಷರಾಗಿ ಕೆ.ಗಣೇಶ್ ರೈ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಎಲ್ಲಾ 6 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದರು. ಚುನಾವಣಾಧಿಕಾರಿಯಾಗಿ ಶ್ರೀ ಸಣ್ಣೇಗೌಡ ಸ. ಕಾ. ಅ. ಲೋಕೋಪಯೋಗಿ ಇಲಾಖೆ ಸುಳ್ಯ ಇವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಕೊಲ್ಲಮೊಗ್ರ ಗ್ರಾ.ಪಂ. ನೂತನ ಅಧ್ಯಕ್ಷತೆಗೆ ಉದಯ ಕೊಪ್ಪಡ್ಕ, ಉಪಾಧ್ಯಕ್ಷತೆಗೆ ಜಯಶ್ರೀ ಚಾಂತಾಳ ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಎಲ್ಲಾ 8 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಉದಯ ಕೊಪ್ಪಡ್ಕ ರವರು ಪ್ರಸ್ತುತ ತಾ.ಪಂ. ಸದಸ್ಯರಾಗಿ ಕೂಡ ಜನಸೇವೆ ಮಾಡುತ್ತಿದ್ದಾರೆ.
ಕಲ್ಮಕಾರು ಗ್ರಾಮದ ಕಾಟೂರು ನಿವಾಸಿ, ಖ್ಯಾತ ನಾಟಿ ವೈದ್ಯೆ ನಾಗಮ್ಮ ಕಾಟೂರು ಅಲ್ಪಕಾಲದ ಅಸೌಖ್ಯದಿಂದ ಫೆ.15 ರಂದು ನಿಧನರಾದರು. ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ಮೃತರು ನಾಲ್ಕು ಹೆಣ್ಣು ಹಾಗೂ ಮೂವರು ಗಂಡುಮಕ್ಕಳು, ಮೊಮ್ಮಕ್ಕಳು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅನಿಯಂತ್ರಿತವಾಗಿ ಏರುತ್ತಿರುವ ಬೆಲೆಯೇರಿಕೆಯ ವಿರುದ್ದ ಸುಳ್ಯದಲ್ಲಿ ಹೋರಾಟ ಸಂಘಟಿಸಲು ತಯಾರಿ ನಡೆಸಲಾಗುವುದು ಎಂದು ಸುಳ್ಯ ಸಿಐಟಿಯು ಅಧ್ಯಕ್ಷ ಕೆ.ಪಿ. ಜಾನಿ ತಿಳಿಸಿದ್ದಾರೆ.ಜನಸಾಮಾನ್ಯರಿಗೆ ಸಹಿಸಲಸಾಧ್ಯವಾದ ಮಟ್ಟದಲ್ಲಿ ದಿನನಿತ್ಯ ಏರುತ್ತಿರುವ ನಿತ್ಯೋಪಯೋಗಿ ವಸ್ತುಗಳಾದ ಆಹಾರ ಪದಾರ್ಥಗಳು, ಅಡುಗೆ ಅನಿಲ , ಡೀಸೆಲ್, ಪೆಟ್ರೋಲ್ , ಕಟ್ಟಡ ನಿರ್ಮಾಣ ಸಾಮಾಗ್ರಿಗಳು, ಬಟ್ಟೆ ಬರೆಗಳು ರೈತರು ನೀರಾವರಿಗಾಗಿ ಬಳಸುವ ಪೈಪುಗಳು ,...
Loading posts...
All posts loaded
No more posts
