- Friday
- July 10th, 2026
ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಟ್ರಸ್ಟ್ ನೀಡುವ 2020ನೇ ಸಾಲಿನ ಮಾಸ್ತಿ ಪ್ರಶಸ್ತಿ ಪ್ರಕಟಿಸಿಸಲಾಗಿದ್ದು ಸುಳ್ಯದ ಸುಬ್ರಾಯ ಚೊಕ್ಕಾಡಿ ಹಾಗೂ ಪುರುಷೋತ್ತಮ ಬಿಳಿಮಲೆಯವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳನ್ನು ಮಾ.27 ರಂದು ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.ಈ ಪ್ರಶಸ್ತಿಯ ಜತೆ ರೂ. 25 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.
ಕಲ್ಮಡ್ಕ ಗ್ರಾ.ಪಂ. ಅಧ್ಯಕ್ಷೆಯಾಗಿ ಹಾಜಿರಾ ಗಫೂರ್, ಉಪಾಧ್ಯಕ್ಷರಾಗಿ ಮಹೇಶ್ ಕರಿಕ್ಕಳ ಅವಿರೋಧ ಆಯ್ಕೆಯಾಗಿದ್ದಾರೆ. ಇಲ್ಲಿ ಒಟ್ಟು 9 ಸ್ಥಾನಗಳಲ್ಲಿ 5 ಕಾಂಗ್ರೆಸ್, 3 ಪಕ್ಷೇತರರು, 1 ಜೆಡಿಎಸ್ ಪಡೆದುಕೊಂಡಿತ್ತು.
ಜಾಲ್ಸೂರು ಗ್ರಾಮದ ಕುಕ್ಕಂದೂರು ಶ್ರೀ ಮುರುಗನ್ ದೇವಸ್ಥಾನದ ಅಷ್ಟಬಂಧ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ. 16 ಮತ್ತು 17 ರಂದು ನಡೆಯಲಿದೆ.
ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರಾಗಿ ಚಂದ್ರಶೇಖರ ಪನ್ನೆ, ಉಪಾಧ್ಯಕ್ಷೆಯಾಗಿ ಗೌರಿ ಆಯ್ಕೆಯಾಗಿದ್ದಾರೆ. ಇಲ್ಲಿ 14 ಸ್ಥಾನಗಳ ಪೈಕಿ ಬಿಜೆಪಿ 8, ಕಾಂಗ್ರೆಸ್ 4, ಎಸ್ ಡಿ ಪಿ ಐ 2 ಸ್ಥಾನ ಪಡೆದಿತ್ತು.
ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ರೇವತಿ ಪುಲ್ಲಡ್ಕ, ಉಪಾಧ್ಯಕ್ಷೆಯಾಗಿ ಪ್ರಮೀಳಾ ಎರ್ದಡ್ಕ ಆಯ್ಕೆಯಾಗಿದ್ದಾರೆ. ಇಲ್ಲಿ 17 ಸ್ಥಾನಗಳ ಪೈಕಿ ಬಿಜೆಪಿ 13 ರಲ್ಲಿ ಜಯಗಳಿಸಿತ್ತು.
ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ವಿನುತಾ ಪಾತಿಕಲ್ಲು ಮತ್ತು ಉಪಾಧ್ಯಕ್ಷರಾಗಿ ಅನಿಲ್ ತೋಟಪ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಡೆಕೋಲು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ 14 ಮತ್ತು ಕಾಂಗ್ರೆಸ್ 1 ಸ್ಥಾನ ಪಡೆದಿತ್ತು. ಇಲ್ಲಿ ಅವಿರೋಧ ಆಯ್ಕೆ ನಡೆದಿದೆ.
ಸಂಪಾಜೆ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಿ.ಕೆ.ಹಮೀದ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಾಗಿ ಲಿಸ್ಸಿ ಮೊನಾಲಿಸಾ ಆಯ್ಕೆಯಾಗಿದ್ದಾರೆ. ಇಲ್ಲಿ ಕಾಂಗ್ರೆಸ್ 13 ಮತ್ತು ಬಿಜೆಪಿ 1 ಸ್ಥಾನ ಪಡೆದುಕೊಂಡಿತ್ತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ. 11 ರಿಂದ ಫೆ. 14 ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಫೆ. 14 ರಂದು ಬೆಳಗ್ಗೆ ಬೆಳಗ್ಗಿನ ಪೂಜೆ, ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಬಳಿಕ ಕಲ್ಲೇರಿತ್ತಾಯ ದೈವದ ಭಂಡಾರ ತೆಗೆದು...
ಅರಂತೋಡು ರಿಕ್ಷಾ ಚಾಲಕ ಮಾಲಕರ ವತಿಯಿಂದ ನೂತನ ಸಚಿವ ಎಸ್ ಅಂಗಾರರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಹರೀಶ್ ಕಂಜಿಪಿಲಿ, ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಹಾಗೂ ಗ್ರಾ.ಪಂ. ಸದಸ್ಯರು ಹಾಗೂ ರಿಕ್ಷಾ ಚಾಲಕರು ಉಪಸ್ಥಿತರಿದ್ದರು.
ಸುಳ್ಯ ಬಿಜೆಪಿ ಮಂಡಲದ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಸಭೆಯು ಸುಳ್ಯದ ಬಿಜೆಪಿ ಕಛೇರಿಯಲ್ಲಿ ಫೆ.14ರಂದು ನಡೆಯಿತು.ಫೆ.28ರಂದು ಮಂಗಳೂರಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟಕದ ಜಿಲ್ಲಾ ಕಾರ್ಯಕಾರಿಣಿ ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಅಜಿತ್ ಉಳ್ಳಾಲ್, ಸಹ ಸಂಚಾಲಕ ದೀರಜ್ ಮಂಗಳೂರು, ಅಕ್ಷಯ್, ಸಾಮಾಜಿಕ ಜಾಲತಾಣ ಜಿಲ್ಲಾ...
Loading posts...
All posts loaded
No more posts
