- Sunday
- March 15th, 2026
ಯುವಜನ ಸಂಯುಕ್ತ ಮಂಡಳಿ ವತಿಯಿಂದ (ರಿ) ಸುಳ್ಯ ಫೆ.13 ರಂದು ಅಯುಷ್ಮಾನ್ ಕಾರ್ಡ್ ನೋಂದಣಿ & ವಿತರಣಾ ಶಿಬಿರವು ನಡೆಯಿತು. ಮಂಡಳಿಯ ಅಧ್ಯಕ್ಷ ಅನಿಲ್ ಪೂಜಾರಿಮನೆ ಸಭಾಧ್ಯಕ್ಷತೆ ವಹಿಸಿದ್ದರು. ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಯಿಲೆ ಬಂದ ಮೇಲೆ ಪರಿತಪಿಸುವ ಬದಲು ಈಗಲೇ ಇಂತಹ ಕಾರ್ಡುಗಳನ್ನು ಮಾಡುವುದು...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ದುಡಿದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಅವರು...
ಮುಕ್ಕೂರು ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಹಯೋಗದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ವತಿಯಿಂದ ಫೆ.13 ರಂದು ಆಧಾರ್ ತಿದ್ದುಪಡಿ ಮತ್ತು ನೋಂದಣಿ ಶಿಬಿರ ನಡೆಯಿತು.ಶಿಬಿರ ಉದ್ಘಾಟಿಸಿದ ಪ್ರಗತಿಪರ ಕೃಷಿಕ, ಶಿವಳ್ಳಿ ಸಂಪನ್ನ ಬೆಳಂದೂರು ವಲಯ ಅಧ್ಯಕ್ಷ ಮೋಹನ ಬೈಪಡಿತ್ತಾಯ ಮಾತನಾಡಿ, ಸರಕಾರದ ಸವಲತ್ತುಗಳು ಜನರಿಗೆ ದೊರಕಲು ದಾಖಲೆಗಳು...
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಣ್ಣಪ್ಪಾದಿ ದೈವಗಳ ನೇಮೋತ್ಸವದ ಅಂಗವಾಗಿ ಇಂದು (ಫೆ. 13) ಬೆಳಗ್ಗೆ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10 ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಗಂಟೆ...
ಸುಳ್ಯದಲ್ಲಿ ಫೆ 14 ರಂದು ಚಂದಮ ಸಾಹಿತ್ಯ ವೇದಿಕೆಯ ವತಿಯಿಂದ ನಡೆಯುವ ಕವಿ ಸಂಗಮ - ಕವಿ ಸಂಭ್ರಮ ಕಾರ್ಯಕ್ರಮದಲ್ಲಿ ನೀಡಲಿರುವ 2021 ನೇ ಸಾಲಿನ "ಸಾಹಿತ್ಯ ರತ್ನ" ರಾಜ್ಯ ಪ್ರಶಸ್ತಿಗೆ ಸಮ್ಯಕ್ತ್ ಜೈನ್ ರವರು ಆಯ್ಕೆಗೊಂಡಿದ್ದಾರೆ . ಇವರು ಕಡಬ ತಾಲೂಕು ನೂಜಿಬಾಳ್ತಿಲದ ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ರವರ ಸುಪುತ್ರ...
ಮಡಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಗುತ್ತಿಗಾರು ಇವುಗಳ ಜಂಟಿ ಆಶ್ರಯದಲ್ಲಿ ತರಬೇತಿ ಕಾರ್ಯಾಗಾರ ನಡೆಯಿತು.ಈ ತರಬೇತಿ ಕಾರ್ಯಾಗಾರದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ನಾಗೇಶ ಕುಚ್ಚಾಲ ವಹಿಸಿದ್ದರು. ತರಬೇತಿಯ ಉದ್ಘಾಟನೆಯನ್ನು ಗುತ್ತಿಗಾರು ಕ್ಲಸ್ಟರ್...
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಫೆ.11 ರಾತ್ರಿ ಪತ್ತೆಯಾದ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ. ರಾತ್ರಿ ವೇಳೆ ತೋಟಕ್ಕೆ ಹೋಗಿದ್ದ ವೇಳೆ ಹೇರ ನಿವಾಸಿ ಶೇಖರ್ ಮತ್ತು ಸೌಮ್ಯ ದಂಪತಿಗಳಿಗೆ ದಾಳಿ ಮಾಡಿದ್ದ ಈ ಚಿರತೆ ಸದ್ಯ ಅರಣ್ಯ ಇಲಾಖೆಯವರ ಕೈಗೆ ಸಿಕ್ಕಿಬಿದ್ದಿದ್ದು ಆಪರೇಷನ್ ಚೀತಾ ಯಶಸ್ವಿಯಾಗಿದೆ. *ಕೈಕಂಬ ವಿಫಲವಾಗಿದ್ದ ಕಾರ್ಯಾಚರಣೆ*...
ಸುಳ್ಯದಲ್ಲಿ ಪ್ರಥಮಬಾರಿಗೆ "ಗೃಹಶೋಭೆ" ಗೃಹೋಪಯೋಗಿ ವಸ್ತುಗಳ ಮಾರಾಟ ಮೇಳ ಫೆಬ್ರವರಿ 12 ರಿಂದ 21 ರವರೆಗೆ ನಡೆಯಲಿದೆ. ಗೃಹಪಯೋಗಿ ಬಳಕೆಯ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ ಗಾಂಧಿನಗರ ಶಾಲಾ ಮೈದಾನದಲ್ಲಿ ಫೆಬ್ರವರಿ 12 ರಂದು ಸಂಜೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ಸರ್ಕಾರದ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಎಸ್ ಅಂಗಾರ ಉದ್ಘಾಟನೆಯನ್ನು...
ಸುಳ್ಯ ಮಂಡಲ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಅಧ್ಯಕ್ಷರಾದ ಶುಭದಾ ರೈ ಯವರ ಅಧ್ಯಕ್ಷತೆ ಯಲ್ಲಿ ಫೆ.10 ರಂದು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಧನಲಕ್ಷ್ಮೀ, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಭೋದ್...
ಹೆಣ್ಣಿಗೆ ವಿಶೇಷವಾದ ಸ್ಥಾನವನ್ನು ಕೊಟ್ಟು ಪೂಜಿಸುವ ತುಳುನಾಡಿನಲ್ಲಿಂದು ಕೆಡ್ಡಸ ಆಚರಣೆಯ ಸಂಭ್ರಮ. ಭೂಮಿಯನ್ನು ತಾಯಿಯ ಸ್ಥಾನಕ್ಕೆ ಹೋಲಿಕೆ ಮಾಡುವ ಸಂಸ್ಕೃತಿ ಹೊಂದಿರುವ ತುಳುನಾಡು ಹಲವು ಸಂಸ್ಕೃತಿಗಳನ್ನು ಒಳಗೊಂಡಿದೆ. ಈ ದಿನ ಭೂಮಿ ತಾಯಿ ಋತುಮತಿಯಾಗುವಳು ಎಂಬ ನಂಬಿಕೆ ತುಳುವರದು. ಪ್ರಕೃತಿಮಾತೆ ಹೊಸ ಹುಟ್ಟು ಪಡೆಯಲು ತಯಾರಾಗುವಳು ಎಂಬ ಸಂತಸದಿಂದ ತುಳುವರು ಈ ಹಬ್ಬವನ್ನು ಅತ್ಯಂತ ಸಂಭ್ರಮದಿಂದ...
Loading posts...
All posts loaded
No more posts
