ಪಂಜ : ದೇವರ ದರ್ಶನ ಬಲಿ – ಕಣ್ತುಂಬಿಕೊಂಡ ನೂರಾರು ಭಕ್ತರು – ಫೆ 6 ರಂದು ಬ್ರಹ್ಮರಥೋತ್ಸವ

ಪರಿವಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯುತ್ತಿದೆ. ಇಂದು (ಫೆ.5) ರಂದು ಪೂರ್ವಾಹ್ನ ಶ್ರೀ ದೇವರ ಬಲಿಹೊರಟು ದರ್ಶನ ಬಲಿ, ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ರೈ ಅಗೋಳಿ ಬೈಲುಗುತ್ತು, ದೇವಳದ ಮಾಜಿ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು,...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ‘ನನ್ನ ಹಾಡು ನನ್ನದು’ ಸಂಗೀತ ಸ್ಪರ್ಧೆಯ ಫಲಿತಾಂಶ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸುಳ್ಯದ ಚಂದನ ಸಾಹಿತ್ಯ ವೇದಿಕೆ ಜಂಟಿಯಾಗಿ ನನ್ನ ಹಾಡು ನನ್ನದು ಸಂಗೀತ ಸ್ಪರ್ಧೆ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು . ಚಂದನ ಸಾಹಿತ್ಯ ವೇದಿಕೆಯ ದಶಮಾನೋತ್ಸವ ಮತ್ತು ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಂಗೀತ...
Ad Widget

ಎಲಿಮಲೆ: ಅಂಗನವಾಡಿ ಕೇಂದ್ರದಲ್ಲಿ ಶ್ರಮದಾನ

ಎಲಿಮಲೆ ಅಂಗನವಾಡಿ ಕೇಂದ್ರದಲ್ಲಿ ಮಹಾಲಕ್ಷ್ಮಿ ಸ್ತ್ರೀಶಕ್ತಿ ಸ್ವ ಸಹಾಯ ಸಂಘದ ಸದಸರಿಂದ ಶ್ರಮದಾನ ನಡೆಯಿತು. ಊಟದ ವ್ಯವಸ್ಥೆಯನ್ನು ಅಂಗನವಾಡಿ ಕೇಂದ್ರ ಹಾಗೂ ಉತ್ಸವ ಜನರಲ್ ಸ್ಟೋರ್ ಮಾಲಕರಾದ ಸವಿತಾ ಕೇಶವ ಕಾಯರ ನೀಡಿ ಸಹಕರಿಸಿದರು.

ಆಲೆಟ್ಟಿ ಗ್ರಾಮದ ಕಾಂಗ್ರೆಸ್ ಬೆಂಬಲಿತ ಸದಸ್ಯರಿಂದ ರಮಾನಾಥ ರೈ ಭೇಟಿ

ಆಲೆಟ್ಟಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾದ ನೂತನ ಗ್ರಾಮ ಪಂಚಾಯತ್ ಸದಸ್ಯರು ಫೆ.5 ರಂದು ಕಾಂಗ್ರೆಸ್ ನಾಯಕ ಹಾಗು ಮಾಜಿ ಸಚಿವ ಬಿ ರಮಾನಾಥ ರೈ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದರು . ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮುತ್ತಪ್ಪ ಪೂಜಾರಿ ಆಲೆಟ್ಟಿ , ಸತ್ಯಕುಮಾರ್ ಆಡಿಂಜ ,...

ಸುಬ್ರಹ್ಮಣ್ಯ: ಪ್ರಾಮಾಣಿಕತೆ ಮೆರೆದ ಮಠದ ಅರ್ಚಕರು

ಸುಬ್ರಹ್ಮಣ್ಯ ಮಠದಲ್ಲಿ ಪೂಜೆ ಮಾಡುತ್ತಿರುವ ಕಳಂಜ ಗ್ರಾಮದ ಶ್ರೀಕೃಷ್ಣ ರಾವ್ ಅವರ ತಂದೆ ವೆಂಕಟರಮಣಯ್ಯ ಇವರಿಗೆ ಭಕ್ತರೋರ್ವರ ಮೊಬೈಲ್ ದೊರೆತಿದ್ದು ಅದನ್ನು ಶ್ರೀಕೃಷ್ಣ ರಾವ್ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ತಲುಪಿಸಿ ಪ್ರಾಮಾಣಿಕ ಮೆರೆದಿರುತ್ತಾರೆ. ಸಂಬಂಧಪಟ್ಟವರು ಪೋಲೀಸ್ ಠಾಣೆಯಿಂದ ಸೂಕ್ತ ದಾಖಲೆ ನೀಡಿ ಪಡೆದುಕೊಳ್ಳಲು ಸೂಚಿಸಿದ್ದಾರೆ.

ಕೇಶವ ಪೂಜಾರಿ ಮಣಿಮಜಲು ನಿಧನ

ಕಳಂಜ ಗ್ರಾಮದ ಮಣಿಮಜಲು ನಿವಾಸಿ ಕೇಶವ ಪೂಜಾರಿಯವರು ಫೆ. 4 ರಂದು ನಿಧನರಾದರು. ಮೃತರಿಗೆ 46 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳ ಹಿಂದೆ ಅಸೌಖ್ಯದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಫೆ. 4ರ ಸಂಜೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.

ಪ್ರಜ್ಞಾ ಎಂ.ಆರ್ ಗೆ ಡಾಕ್ಟರೇಟ್

ಸುಳ್ಯದ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಪ್ರಜ್ಞಾ ಎಂ.ಆರ್ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರು ಸಂಶೋಧನೆ ನಡೆಸಿ ಸಲ್ಲಿಸಿರುವ ಮಹಾಪ್ರಬಂಧಕ್ಕೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಮಂಗಳೂರು ಎಜೆಐಇಟಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಪಿ.ಜೆ...

ಫೆ. 6 : ಅಜ್ಜಾವರ ಗ್ರಾಮ ಪಂಚಾಯತಿನಲ್ಲಿ ಜಮಾಬಂದಿ

ಅಜ್ಜಾವರ ಗ್ರಾ.ಪಂ.ನ 2019-20ನೇ ಸಾಲಿನ ಜಮಾಬಂದಿಯು ಫೆ. 6 ರಂದು ಪೂರ್ವಾಹ್ನ ಗಂಟೆ 11 ಕ್ಕೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದ ಸಭಾಭವನದಲ್ಲಿ ಜರುಗಲಿದೆ. ಸದ್ರಿ ಸಭೆಯಲ್ಲಿ ಗ್ರಾಮಸ್ಥರು ಭಾಗವಹಿಸಿ, ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಭೆಯನ್ನು ಯಶಸ್ವಿಗೊಳಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಜಯಮಾಲ ಎ ಕೆ ಯವರು...

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಜಾತ್ರೆಗೆ ಹಸಿರು ಕಾಣಿಕೆ ಸಮರ್ಪಣೆ.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷ ಮಹೋತ್ಸವ ಆರಂಭಗೊಂಡಿದ್ದು. ಇಂದು ಫೆಬ್ರವರಿ 3 ರಂದು ಪೂತ್ಯ ಹಸಿರು ಕಾಣಿಕೆ ಮೆರವಣಿಗೆಯು ಕಟ್ಟೆಯಿಂದ ಆರಂಭಗೊಂಡು ದೇವಳಕ್ಕೆ ಸಮರ್ಪಣೆ ಗೊಂಡಿತು.ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ತಿಮ್ಮಪ್ಪಗೌಡ ಪುತ್ಯ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ...

ಸುಳ್ಯ : ಹೆಲ್ಮೆಟ್ ಹಾಕದೆ ಸಂಚರಿಸಿದರೆ ಇಬ್ಬರಿಗೂ ದಂಡ : ಎಸ್.ಐ. ಹರೀಶ್

ಬೈಕ್ ನಲ್ಲಿ ಸವಾರಿಸುವ ಹಿಂಬದಿ ಸವಾರರು ಕೂಡಾ ಸುಳ್ಯದಲ್ಲಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಇಲ್ಲವಾದಲ್ಲಿ ಬೈಕ್ ಚಲಾಯಿಸುವ ಹಾಗೂ ಹಿಂಬದಿ ಕುಳಿತಿರುವ ಇಬ್ಬರಿಗೂ ದಂಡ ವಿಧಿಸಲಾಗುವುದು ಎಂದು ಸುಳ್ಯ ಎಸ್.ಐ. ಹರೀಶ್ ಎಂ.ಆರ್. ತಿಳಿಸಿದ್ದಾರೆ. ಈ ಆದೇಶ ಕೆಲ ದಿನಗಳಿಂದಲೇ ಜಾರಿಯಲ್ಲಿದೆ. ಸುಳ್ಯದಲ್ಲಿ ಜಾಗೃತಿ ಮೂಡಿಸಲಾಗಿದೆ. ಆದರೂ ಹೆಚ್ಚಿನ ಹಿಂಬದಿ ಸವಾರರು ಹೆಲ್ಮೆಟ್ ಹಾಕದಿರುವುದು ಕಂಡು...
Loading posts...

All posts loaded

No more posts

error: Content is protected !!