ನಾಯಿಯನ್ನು ಅಟ್ಟಿಸಿಕೊಂಡು ಶೌಚಾಲಯಕ್ಕೆ ನುಗ್ಗಿದ ಚಿರತೆ ಲಾಕ್ – ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡ ಚಿರತೆ

ಸಾಕು ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬ ತಾಲೂಕಿನ ಕೈಕಂಬದಲ್ಲಿ ನಡೆದಿದೆ.ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು...

ಜೆಸಿಐ ಸುಳ್ಯ ಸಿಟಿ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆ

ಜೆಸಿಐ ಸುಳ್ಯ ಸಿಟಿ ವತಿಯಿಂದ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು ಫೆ. 02 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯ, ಮ್ಯಾಟ್ರಿಕ್ಸ್ ಎಜುಕೇಷನ್ ಇನ್ಸ್ಟಿಟ್ಯೂಷನ್ ಸುಳ್ಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನದ ಪ್ರತಿಜ್ಞಾ ವಿಧಿ ಬೋಧನೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಸುಳ್ಯದಲ್ಲಿ ಜೆಸಿಐ ಸುಳ್ಯ ಸಿಟಿಯ...
Ad Widget

ಫೆ.7 ರಂದು ರಂಗಮನೆಯಲ್ಲಿ “ಸೀತಾ ಸ್ವಯಂವರ”

    ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಕಾರದಲ್ಲಿ ಫೆ.7 ರಂದು ಸಂಜೆ 6.30 ಕ್ಕೆ ರಂಗಾಯಣ ಮೈಸೂರು ಪ್ರಸ್ತುತಪಡಿಸುವ ' ಸೀತಾ ಸ್ವಯಂವರ ' ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಹಿರಿಯ ನಾಟಕಕಾರ ಎಂ.ಎಲ್.ಶ್ರೀಕಂಠೇಶಗೌಡ ರಚಿಸಿದ ಈ ನಾಟಕವನ್ನು ಯುವ ರಂಗಕರ್ಮಿ ಜೀವನ್ ಕುಮಾರ್ ಹೆಗ್ಗೋಡು ನಿರ್ದೇಶಿಸಿದ್ದಾರೆ.     ಕಾರ್ಯಕ್ರಮವನ್ನು...

ಮಾಜಿ ಸೈನಿಕರ ಸಂಘದಿಂದ ಸರಕಾರಿ ಆಸ್ಪತ್ರೆಗೆ ಕೊಡುಗೆ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ 72 ನೇ ಗಣರಾಜ್ಯೋತ್ಸವದ ಅಂಗವಾಗಿ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ತೂಕ ನೋಡಲು ಸಹಾಯಕವಾಗುವ ಯಂತ್ರ ಖರೀದಿಸಲು ಸಹಾಯಧನ ನೀಡಲಾಯಿತು. ಸಂಘದ ವತಿಯಿಂದ ರೂ 5000 ಚೆಕ್ ಅನ್ನು ಹಿರಿಯ ಆರೋಗ್ಯಾಧಿಕಾರಿ ಡಾ.ಹಿಮಕರ ರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ದೇರಣ್ಣ ಗೌಡ, ಕಾರ್ಯದರ್ಶಿ ಮೋನಪ್ಪ...

ವಳಲಂಬೆ : ರಕ್ತೇಶ್ವರಿ ಮತ್ತು ಧೂಮಾವತಿ ದೈವಗಳ ನೇಮೋತ್ಸವ

ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು (ಫೆ. 02) ಬೆಳಿಗ್ಗೆ 5 ಗಂಟೆಗೆ ಉಳ್ಳಾಕ್ಲು-ಉಳ್ಳಾಲ್ತಿ ನೇಮ, ಬೆಳಿಗ್ಗೆ ಕುಮಾರ ದೈವದ ನೇಮ, ಬೆಳಿಗ್ಗೆ ಶ್ರೀ ದೇವರಿಗೆ ಪೂಜೆ, ಬೆಳಿಗ್ಗೆ ರಕ್ತೇಶ್ವರಿ ದೈವದ ನೇಮ, ಧೂಮಾವತಿ ದೈವದ ನೇಮ, ಮದ್ಯಾಹ್ನ ಮಹಾಪೂಜೆ, ಮದ್ಯಾಹ್ನ ದೈವಗಳ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಸಂಜೆ...

ಎನ್.ಎಂ.ಸಿ.ಯಲ್ಲಿ ವಿದ್ಯಾರ್ಥಿಗಳಿಗೆ ಪ್ರೇಶರ್ಸ್ ಡೇ ಕಾರ್ಯಕ್ರಮ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೆಶರ್ಸ್ ಡೇ ಜ.26 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ನೆಹರು ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ರುದ್ರಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ಸಂದೇಶ್ ರೈ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭಕೋರಿ ಬರಮಾಡಿಕೊಂಡರು. ಹಾಗೂ...

ಸುಳ್ಯ : ಎನ್.ಎಂ.ಸಿ. ಯಲ್ಲಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ.30 ರಂದು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜಿನ ಕಮ್ಯುನಿಟಿ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕಿ ಡಾ. ಕೃತಿ ಭಟ್ ಇವರು "ಮಕ್ಕಳ ರಕ್ಷಣೆ ಆರೋಗ್ಯದ ದೃಷ್ಟಿಕೋನದಲ್ಲಿ " ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು....

ಎಣ್ಮೂರು : ಪೋಲೀಸ್ ಬೀಟ್ ಸಭೆ, ಮಾಹಿತಿ ಕಾರ್ಯಾಗಾರ

ಬೆಳ್ಳಾರೆ ಪೋಲೀಸ್ ಠಾಣೆ ಮತ್ತು ಶ್ರೀ ಸೀತಾರಾಮಾಂಜನೇಯ ಭಾರತಿ ಕುಣಿತ ಭಜನಾ ತಂಡ ಏಣ್ಮೂರು ಇದರ ಸಂಯುಕ್ತ ಆಶ್ರಯದಲ್ಲಿ ಏಣ್ಮೂರು ಮತ್ತು ಕಲ್ಮಡ್ಕ ಗ್ರಾಮಗಳ ಬೀಟ್ ಸಭೆ ಮತ್ತು ಮಾಹಿತಿ ಕಾರ್ಯಾಗಾರ ಜ. 1 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಬೆಳ್ಳಾರೆ ಠಾಣೆ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಮಾತನಾಡಿ ವಾಹನ ಚಾಲಕರಿಗೆ ಮತ್ತು ಮಾಲೀಕರಿಗೆ...

ಪಂಜ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳೊಂದಿಗೆ ಫೆ.1 ರಂದು ರಾತ್ರಿ ಜರುಗಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರಾಮಯ್ಯ ಭಟ್, ಮಾಜಿ ಆಡಳಿತಾಧಿಕಾರಿ...

ವಳಲಂಬೆ : ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವರ ಉತ್ಸವ ಬಲಿ

ವಳಲಂಬೆ : ವಿಜ್ರಂಭಣೆಯಿಂದ ನಡೆದ ದೇವರ ಉತ್ಸವ ಬಲಿ - ನಾಳೆ ರಕ್ತೇಶ್ವರಿ, ಧೂಮಾವತಿ ದೈವಗಳ ನೇಮೋತ್ಸವ https://youtu.be/Lt8CHywxBcA ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗಣಪತಿ ಹೋಮ, ಏಕದಶ ರುದ್ರಾಭಿಷೇಕ, ನವಕ ಕಲಶಾಭಿಷೇಕ, ಮಹಾಪೂಜೆ ಮತ್ತು ಅನ್ನಸಂತರ್ಪಣೆ, ಚೆಂಡೆವಾದನ, ದೈವಗಳ ಭಂಡಾರ ತೆಗೆಯುವ ಕಾರ್ಯಕ್ರಮ, ಚೆಂಡೆವಾದನ, ರಾತ್ರಿ ಮಹಾಪೂಜೆ ಮತ್ತು...
Loading posts...

All posts loaded

No more posts

error: Content is protected !!