- Sunday
- March 15th, 2026
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ ವಹಿಸಿದ್ದರು. ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಕೀನ ಡಿಸೋಜಾ, ರಾಜ್ಯಶಾಸ್ತ್ರ ಉಪನ್ಯಾಸಕರಾದ ರಂಜಿತ್ ಅಂಬೆಕಲ್ಲು ರಾಷ್ಟ್ರೀಯ ಮತದಾರರ ದಿನದ ಮಹತ್ವವನ್ನು ತಿಳಿಸಿದರು. ಹೈಸ್ಕೂಲ್ ವಿಭಾಗದ ಹಿಂದಿ ಶಿಕ್ಷಕರಾದ ಪ್ರಸನ್ನ ಕುಮಾರ್ ವೈ.ಬಿ. ಮತದಾರರ ದಿನದ...
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ಉದ್ಘಾಟನೆ ಇಂದು ನಡೆಯಿತು. ಪಿಡಿಓ ಶ್ಯಾಮ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು. ಗುತ್ತಿಗಾರು ಪ್ರಾ.ಆ. ಕೇಂದ್ರದ ಆಡಳಿತ ವೈಧ್ಯಾಧಿಕಾರಿ ಡಾ.ನಂದಕುಮಾರ್ ಕೋವಿಡ್ ಲಸಿಕೆಯ ಬಗ್ಗೆ ಮಾಹಿತಿ ನೀಡಿದರು. ಗುತ್ತಿಗಾರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚೈತ್ರಭಾನು ಕೆ.ಎಸ್. ಉಪಸ್ಥಿತರಿದ್ದರು. ಪ್ರಥಮವಾಗಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯಾದ...
ನಾಲ್ಕೂರು ಶ್ರೀ ವಿಷ್ಣುಮೂರ್ತಿ, ಧರ್ಮದೈವ ಹಾಗೂ ಪರಿವಾರ ದೈವಗಳ ಸ್ಥಾನ ಚೌಟಾಜೆ ಮನೆತನದ ಛಾವಡಿಯಲ್ಲಿ ಪೇರಾಲು ಹದಿನಾರರ ಹಾಗೂ ಅಂಬ್ರೋಟಿ ಹದಿನಾರರ ಸಮಕ್ಷಮದಲ್ಲಿ ಧರ್ಮದೈವ ದ (ರುದ್ರಚಾಮುಂಡಿ) ಭಂಡಾರ ತೆಗೆದು ಇಂದು ಮಧ್ಯಾಹ್ನ ದೈವದ ನೇಮ ಹಾಗೂ ಮಾರಿ ಓಡಿಸುವ ಕಾರ್ಯಕ್ರಮ ನಡೆಯಲಿರುವುದು.
ಹರಿಹರಪಲ್ಲತ್ತಡ್ಕ ಗ್ರಾಮದ ಗುಂಡಿಹಿತ್ಲು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ಗುಡಿಗಳು ನವೀಕರಣಗೊಂಡಿದ್ದು ಜ. 24 ಜ. 26ರ ತನಕ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದೆ. ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ...
ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಇದರ ವತಿಯಿಂದಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ವಾಸುದೇವ ಪೆರುವಾಜೆ, ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಜಲದುರ್ಗಾದೇವೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಪೆರುವಾಜೆ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಜ.24.ರಂದು ವಿವಿಧ ವೈದಿಕ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರುಗಿತು. ಕುದ್ವ ತೋಟದಲ್ಲಿ ಗೊನೆ ಕಡಿದು ಪೂರ್ವ ಸಂಪ್ರದಾಯದಂತೆ ಬ್ಯಾಂಡ್ ವಾಲಗ ಮೆರವಣಿಗೆ ಮೂಲಕ ಶ್ರೀ ದೇವಾಲಯಕ್ಕೆ ಸಮರ್ಪಿಸಲಾಯಿತು.ಫೆ.5 ರಂದು ಹಗಲು ಶ್ರೀ ದೇವರ ದರ್ಶನ ಬಲಿ.ಫೆ.6.ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವ ಜರುಗಲಿದೆ. ಎಂದು...
✍️ಚಂದ್ರಶೇಖರ ಬೇರಿಕೆ ಮನುಷ್ಯ ಸಾಧ್ಯತೆಯನ್ನು ಮೀರಿದ ಶಕ್ತಿಯೊಂದು ಮಾನವ ಬದುಕಿನ ಅನುಭವಕ್ಕೆ ಬರುತ್ತದೆ ಎಂಬ ಅಚಲ ನಂಬಿಕೆಯ ಮೇಲೆ ತುಳುನಾಡಿನ ದೈವಾರಾಧನಾ ಜಗತ್ತು ಆವೃತ್ತವಾಗಿದೆ. ಪರಶುರಾಮ ಸೃಷ್ಟಿಯ ತುಳುನಾಡು ದೈವ ನೆಲೆಯ ಬೀಡು. ತುಳುನಾಡಿನ ದೈವಾರಾಧನೆಯು 14ನೇ ಶತಮಾನದ ಚರಿತ್ರೆಯನ್ನು ಹೊಂದಿದ್ದು, ಕಾರ್ಕಳ ತಾಲ್ಲೂಕಿನ ಕಾಂತೇಶ್ವರದಲ್ಲಿ ದೊರೆತ 1379ರ ಶಾಸನವು ದೈವಾರಾಧನೆಗೆ ಅಧಿಕೃತ ಲಿಖಿತ ಆಧಾರ...
ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಎಸ್. ಅಂಗಾರರವರು ಬಿಜೆಪಿಯ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಣ್ಣಾ ವಿನಯಚಂದ್ರರು ನೂತನ ಸಚಿವರನ್ನು ಸ್ವಾಗತಿಸಿ, ಅಭಿನಂದಿಸಿದರು. ಈ ವೇಳೆ ತಾ.ಪಂ. ಸದಸ್ಯೆ ಶ್ರೀಮತಿ ಜಾಹ್ನವಿ ಕಾಂಚೋಡು, ಕಳಂಜ ಗ್ರಾ.ಪಂ. ಸದಸ್ಯರಾದ ಪ್ರಶಾಂತ್...
ಸುಬ್ರಹ್ಮಣ್ಯದ ಕುಲ್ಕುಂದ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ವಾರ್ಷಿಕ ಸಭೆ ರವೀಂದ್ರ ರುದ್ರಪಾದ ರವರ ಅಧ್ಯಕ್ಷತೆಯಲ್ಲಿ ಕುಲ್ಕುಂದ ದೈವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮುಂಬರುವ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಒತ್ತೆಕೋಲ ಮತ್ತು ನೇಮೋತ್ಸವಗಳ ಆಮಂತ್ರಣ ಪತ್ರಿಕೆಯನ್ನು ದೈವದ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವೆಂಕಟ್ರಾಜ್,ಚಂದ್ರಹಾಸ ಭಟ್, ಹರೀಶ...
ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವೆಂಕಪ್ಪಯ್ಯರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಪಿ.ಜಿ.ಎಸ್.ಎನ್. ಪ್ರಸಾದರಿಗೆ ಅಭಿನಂದನಾ ಕಾರ್ಯಕ್ರಮ ಜ. 21ರಂದು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು.ನಿವೃತ್ತರನ್ನು ಸಂಘದ ಮಾಜಿ ಉಪಾಧ್ಯಕ್ಷ ಕೆದ್ಲ...
Loading posts...
All posts loaded
No more posts
