- Friday
- July 10th, 2026
ಹಲ್ಲುಗಳು ಇತರ ಅಂಗಗಳಂತೆ ಶ್ರೇಷ್ಠ ಅಂಗವಾಗಿದೆ. ಅದರ ರಕ್ಷಣೆ ಅಗತ್ಯ ಎಂದು ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಕರುಣಾಕರ ಕೆ.ವಿ ಹೇಳಿದರು. ಇವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜ.22ರಂದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಬಾಯಿ...
ಪೆರುವಾಜೆ ಗ್ರಾಮದ ಅರ್ನಾಡಿ ಹತ್ತಿರ ಚಿರತೆಯೊಂದು ಓಡಾಟ ನಡೆಸಿದ ವಿಚಾರ ತಿಳಿದುಬಂದಿದೆ. ಗ್ರಾಮಸ್ಥರು ಜಾಗರೂಕರಾಗಿದ್ದು ರಾತ್ರಿ ಪ್ರಯಾಣ, ತೋಟಗಳಿಗೆ ರಾತ್ರಿ ನೀರು ಬಿಡುವ ಕೃಷಿಕರು ಎಚ್ಚರ ವಹಿಸುವಂತೆ ಹಾಗೂ ಚಿರತೆ ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಬೆಳ್ಳಾರೆ ಶಾಖೆಯ ಉಪವಲಯಾರಣ್ಯಾಧಿಕಾರಿ ಪ್ರಸಾದ್.ಕೆ.ಜೆ ವಿನಂತಿಸಿದ್ದಾರೆ. ಸಂಪರ್ಕ ಸಂಖ್ಯೆ : 9480108532, 9480527590.
ಭಾರತ ಸರಕಾರದ ವತಿಯಿಂದ ಗ್ರಾಮೀಣ ವಸತಿಪ್ರದೇಶದ ಆಸ್ತಿಗಳನ್ನು ಡ್ರೋನ್ ತಂತ್ರಜ್ಞಾನದ ಮೂಲಕ ಸ್ವಾಮಿತ್ವ ಯೋಜನೆಯಡಿ ಅಳತೆಕಾರ್ಯ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಜ.22 ರಂದು ಪೂರ್ವಾಹ್ನ 11.00 ಗಂಟೆಗೆ ಸರಿಯಾಗಿ ಅಜ್ಜಾವರ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಸಭಾಂಗಣದಲ್ಲಿ ವಿಶೇಷ ಗ್ರಾಮಸಭೆಯನ್ನು ಕರೆಯಲಾಗಿದೆ. ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು, ಸ್ತ್ರೀಶಕ್ತಿ,...
ಜ್ಞಾನ ಮಂದಾರ ಅಕಾಡೆಮಿ ವತಿಯಿಂದ ನೀಡುವ ಸಮಾಜರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ವೆಂಕಟರಮಣ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ದೇವಚಳ್ಳ ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾದ ಶೈಲೇಶ್ ಅಂಬೆಕಲ್ಲು ರವರನ್ನು ಸೊಸೈಟಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷ ಮೋಹನರಾಮ್ ಸುಳ್ಳಿ, ನಿರ್ದೇಶಕರುಗಳಾದ...
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಜ.22 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಹರಿಹರಪಲ್ಲತ್ತಡ್ಕ ಗ್ರಾಮದ ಗುಂಡಿಹಿತ್ಲು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಮತ್ತು ಸಪರಿವಾರ ದೈವಗಳ ಗುಡಿಗಳು ನವೀಕರಣಗೊಂಡಿದ್ದು ಜ. 24 ಆದಿತ್ಯವಾರದಿಂದ ಜ. 26 ಮಂಗಳವಾರದ ತನಕ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು...
ಕನಾ೯ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ 2020ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಯಶಸ್ವಿ ಪಿ.ಭಟ್ ಶೇ.94.75(ಡಿಸ್ಟಿಂಕ್ಷನ್)ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಗಾನ ನೃತ್ಯ ಅಕಾಡೆಮಿ (ರಿ.) ಮಂಗಳೂರು, ಸುಳ್ಯ ಶಾಖೆಯ ಗುರು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಇವರ ಶಿಷ್ಯೆ ಹಾಗೂ ಸುಳ್ಯ ದೇವಸ್ಯ ನಿವಾಸಿಯಾದ ಪ್ರಶಾಂತ್ ಭಟ್ ಮತ್ತು ಶ್ರೀ ಮತಿ...
ಗ್ರಾಮ ಪಂಚಾಯತ್ ಚುನಾವಣೆ ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿ ನಿಗದಿಪಡಿಸಲು ಈ ಹಿಂದೆ ನಿಗದಿಪಡಿಸಲಾಗಿದ್ದ ಸ್ಥಳ ಮತ್ತು ದಿನಾಂಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸುಳ್ಯ ಹಾಗೂ ಕಡಬ ತಾಲೂಕಿನ ಮೀಸಲಾತಿ ಪ್ರಕ್ರಿಯೆ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ಜ.23 ರಂದು ಆಯೋಜಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದಕ್ಕೆ ಜನಪ್ರತಿನಿಧಿ ಹಾಗೂ ಪಕ್ಷಗಳಿಂದ ವಿರೋಧ ವ್ಯಕ್ತವಾಗಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರು ಷಷ್ಠಿಯ ಪ್ರಯುಕ್ತ ಧರ್ಮ ಸಮ್ಮೇಳನ ದೇವಸ್ಥಾನದ ಧರ್ಮಸಮ್ಮೇಳನ ಮಂಟಪದಲ್ಲಿ ಜ.19 ರಂದು ನಡೆಯಿತು ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಂಗಾರ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಹಣ ಅಗತ್ಯ ಬಿದ್ದಿಲ್ಲ. ಇಲ್ಲಿ...
ಸುಳ್ಯದ ಕೇರ್ಪಳದಲ್ಲಿ ಸುಮಾರು 5 ವರ್ಷದಿಂದ ನೆಲೆಸಿರುವ ಆನಂದ ಎಂಬವರ ಪತ್ನಿ ಚಂದ್ರಾವತಿ (49)ಎಂಬವರು ಜ.18 ರಂದು ಮನೆಯಿಂದ ಕಾಣೆಯಾಗಿದ್ದರು. ಮನೆಯವರು ಹುಡುಕಾಟ ಆರಂಭಿಸಿದಾಗ ಪರ್ಸ್ ಮತ್ತು ಮೊಬೈಲ್ ಪಯಸ್ವಿನಿ ಹೊಳೆಯ ಬದಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಹೊಳೆಗೆ ಬಿದ್ದಿರಬಹುದೆಂದು ಶಂಕಿಸಲಾಗಿತ್ತು. ಹಾಗಾಗಿ ಪೋಲೀಸರು,ಅಗ್ನಿಶಾಮಕ ದಳದವರು,ಮುಳುಗು ತಜ್ಞರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ . ಯಾವುದೇ...
Loading posts...
All posts loaded
No more posts
