ಕೊಡಿಯಾಲಬೈಲು ಗೋಮಾಳಕ್ಕೆ ಬಿದ್ದ ಬೆಂಕಿ ಅಗ್ನಿಶಾಮಕ ದಳ

ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲ ಬೈಲು ಗೌಡ ಸಮುದಾಯ ಭವನದ ಹಿಂಬದಿಯಲ್ಲಿರುವ ಗೋಮಾಳಕ್ಕೆ ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತು, ಸುಳ್ಯ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದರು.

ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ದ.ಕ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ಆಶ್ರಯದಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಸುಳ್ಯ ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇಂದು ಮುಂಜಾನೆ ಚಾಲನೆ ನೀಡಲಾಯಿತು.ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ.ಚಿದಾನಂದರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್,...
Ad Widget

ಕಲ್ಲುಗುಂಡಿ : ರಸ್ತೆ ಬದಿ ಸ್ವಚ್ಛತೆ – ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯ

ಸಂಪಾಜೆ ಗ್ರಾಮದ ಪೊಲೀಸ್ ಹೊರ ಠಾಣೆ ಹತ್ತಿರ ಹಾಗೂ ಕಡೆಪಾಲ ಬಳಿ ಕಳೆದ ಕೆಲವು ದಿನಗಳಿಂದ ಕೋಳಿ ತ್ಯಾಜ್ಯ, ಊಟದ ತಟ್ಟೆ, ಪ್ಲಾಸ್ಟಿಕ್ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯಲಾಗಿತ್ತು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಜಾಲತಾಣಗಳಲ್ಲಿ ಪ್ರಶ್ನಿಸಿದ್ದರು. ತಕ್ಷಣ ಸ್ಪಂದಿಸಿದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ಜಿ. ಕೆ...

ಸೃಷ್ಟಿ ನೆಕ್ರಾಜೆ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನವೆಂಬರ್ ತಿಂಗಳಿನಲ್ಲಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಮೊಗ್ರ ಸ.ಹಿ.ಪ್ರಾ.ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಕು.ಸೃಷ್ಟಿ ಎನ್.ಎ. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರುಶಾಂತದುರ್ಗಾ ಕಲಾನಿಕೇತನ ಸುಬ್ರಹ್ಮಣ್ಯ ಇಲ್ಲಿಯ ನೃತ್ಯ ಗುರು ಶ್ರೀಮತಿ ಅದಿತಿ ನಾಯಕ್ ಹಾಗೂ ವಿಶ್ವ ಕಲಾನಿಕೇತನ ಪಂಜ ಇಲ್ಲಿಯ ನೃತ್ಯ ಗುರು ವಿದುಷಿ ಸ್ವಸ್ತಿಕಾ...

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಚುನಾವಣೆ – ಸಹಕಾರ ಬಳಗ ಗೆಲುವು, ಸಹಕಾರ ಭಾರತಿಗೆ ಸೋಲು – ಸಹಕಾರ ಬಳಗಕ್ಕೆ 10 ಸ್ಥಾನ, ಸಹಕಾರ ಭಾರತಿಗೆ 3 ಸ್ಥಾನ

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ ಸ.ಸಂಘದ ಅಡಳಿತ ಮಂಡಳಿ ಚುನಾವಣೆಗೆ ಇಂದು ಮತದಾನ ನಡೆದು ಮತ ಎಣಿಕೆ ನಡೆಯುತ್ತಿದೆ. ಇಲ್ಲಿ ಬಿಜೆಪಿಯ ಸಹಕಾರ ಭಾರತಿ ಹಾಗೂ ಸ್ವಾಭಿಮಾನಿ ಬಿಜೆಪಿಯ ಸಹಕಾರ ಬಳಗದ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಸಹಕಾರಿ ಅಭ್ಯರ್ಥಿಯಾಗಿ ಹರೀಶ್ ಕಂಜಿಪಿಲಿ ಸ್ಪರ್ಧಿಸಿದ್ದ ಕ್ಷೇತ್ರಕ್ಕೆ ಸಹಕಾರ ಬಳಗದ ವತಿಯಿಂದ ಯಾವುದೇ ಅಭ್ಯರ್ಥಿ ಹಾಕಿರಲಿಲ್ಲ. ಅದ್ದರಿಂದ ಹರೀಶ್...

ಲತಾಶ್ರೀ ಸುಪ್ರೀತ್ ಮೋಂಟಡ್ಕರಿಗೆ – ಜಾನ್ಸಿರಾಣಿ ಲಕ್ಷ್ಮೀ ಬಾಯಿ ರಾಜ್ಯ ಪ್ರಶಸ್ತಿ

ಶೈಕ್ಷಣಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಹಾಗೂ ಬೆಳಕು ಟಿವಿ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ ಜಾನ್ಸಿರಾಣಿ ಲಕ್ಷ್ಮೀ ಬಾಯಿ ಪ್ರಶಸ್ತಿಗೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ರವರು ಭಾಜನರಾಗಿದ್ದಾರೆ. ಫೆ 7 ರಂದು ನಡೆಯುವ ರಾಜ್ಯ ಮಟ್ಟದ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ರಾಜ್ಯ ದಿಂದ ಆಯ್ಕೆ ಯಾದ...

ಜ್ಞಾನಮಂದಾರ ಅಕಾಡೆಮಿಯಿಂದ ಸುಳ್ಯದಲ್ಲಿ ಕನ್ನಡ ಕಲಾ ಪ್ರತಿಭೋತ್ಸವ – ಸಾಧಕರಿಗೆ “ಸಮಾಜ ರತ್ನ ರಾಜ್ಯ ಪ್ರಶಸ್ತಿ” ಪ್ರದಾನ

ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು ಕಳೆದ ಹಲವು ವರ್ಷಗಳಿಂದ ವಿವಿಧ ಸಾಧಕರನ್ನು ಗೌರವಿಸುವ ಸಲುವಾಗಿ ಸಮಾಜರತ್ನ ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದ್ದು, ಈ ಬಾರಿಯ ಸಮಾಜರತ್ನ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಕಲಾ ಪ್ರತಿಭೋತ್ಸವ ಕಾರ್ಯಕ್ರಮವು ಜ.17 ರಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷರಾದ...

ಗಾಂಧಿನಗರ : ತಡೆಬೇಲಿಗೆ ಡಿಕ್ಕಿಯಾಗಿ ಕಾರು ಜಖಂ

ಗಾಂಧಿನಗರ ಮಸೀದಿ ಸಮೀಪ ಕಾರೊಂದು (KL 14 Z 3232):ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ಇಂದು ರಾತ್ರಿ 3 ಗಂಟೆಗೆ ನಡೆದಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಅರಂತೋಡು : ಬಿಯರ್ ತುಂಬಿದ ಲಾರಿ ಪಲ್ಟಿ – ಜನ ದಾಪುಗಾಲು

ಮೈಸೂರಿನಿಂದ ಮಂಗಳೂರಿಗೆ ಸಾಗುತ್ತಿದ್ದ ಬಿಯರ್ ತುಂಬಿದ ಲಾರಿ ಅರಂತೋಡು ಸಮೀಪ ಕೊಡಂಕೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ರಾತ್ರಿ 1 ಗಂಟೆ ಸುಮಾರಿಗೆ ನಡೆದಿದೆ. ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲಿನರ್ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ರೂ 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ....

ಜ.20 ರಂದು ರೈತಪರ ಸಂಘಟನೆಗಳ ವತಿಯಿಂದ ಸುಳ್ಯದಲ್ಲಿ ಉಪವಾಸ ಸತ್ಯಾಗ್ರಹ

ಸುಳ್ಯ ತಾಲೂಕಿನ ರೈತ,ಕಾರ್ಮಿಕ, ದಲಿತ, ಜನಪರ ಚಳವಳಿಗಳ ಒಕ್ಕೂಟ ಇದರ ಆಶ್ರಯದಲ್ಲಿ ರೈತ,ಕಾರ್ಮಿಕ, ದಲಿತ ಹಾಗೂ ಜನ ವಿರೋಧಿ ಮಸೂದೆಗಳನ್ನು ಹಿಂಪಡೆಯಲು ಆಗ್ರಹಿಸಿ ಸುಳ್ಯ ತಾಲೂಕು ಮಟ್ಟದ ಒಂದು ದಿನದ ಉಪವಾಸ ಧರಣಿ ಸತ್ಯಾಗ್ರಹ ಜ.೨೦ ರಂದು ಖಾಸಗಿ ನಿಲ್ದಾಣ ಬಳಿ ನಡೆಯಲಿದೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಹೇಳಿದರು.ಜ.26 ರಂದು...
Loading posts...

All posts loaded

No more posts

error: Content is protected !!