- Friday
- July 10th, 2026
ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣ ಕಾರ್ಯಕ್ಕೆ ನಿಧಿ ಸಮರ್ಪಣೆ ಮಾಡುವ ಕಾರ್ಯಕ್ಕೆ ಕಳಂಜ ಗ್ರಾಮದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕರ್ತರು ಮನೆ ಮನೆಗೆ ತೆರಳಿ ನಿಧಿ ಸಮರ್ಪಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಐವತ್ತೊಕ್ಲು ಗ್ರಾಮದ ಕರಿಕ್ಕಳದಲ್ಲಿ ಅಯೋಧ್ಯ ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಭಜನೆಯೊಂದಿಗೆ ಊರವರು ಕರಿಕ್ಕಳದಲ್ಲಿ ನಿಧಿಸಮರ್ಪಣೆ ಅಭಿಯಾನ ನಡೆಸಿದರು.
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವತಿಯಿಂದ ಜ.16 ರಂದು ಗ್ರಾ. ಪಂ. ಸಭಾಂಗಣದಲ್ಲಿ ಕೆ.ವಿ.ಜಿ ಪ್ರೌಢಶಾಲೆಯ ವಿದ್ಯಾರ್ಥಿ ರಚನ್ ಎ.ಡಿ ಇವರ ಅಧ್ಯಕ್ಷತೆಯಲ್ಲಿ 2020-21ನೇ ಸಾಲಿನ ಮಕ್ಕಳ ಗ್ರಾಮ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕೆ.ವಿ.ಜಿ ಪ್ರೌಢಶಾಲೆ ಕೊಲ್ಲಮೊಗ್ರು ಇದರ ಸಹ ಶಿಕ್ಷಕರಾದ ವೆಂಕಟ್ರಮಣ ಕೆ.ಕೆ. ಹಾಗೂ ರಾಜೇಶ್ ಕುಮಾರ್ ಆರ್. ಸ. ಹಿ.ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು...
ಅಜ್ಜಾವರ ಗ್ರಾ.ಪಂ.ವ್ಯಾಪ್ತಿಯಲ್ಲಿ ಉಚಿತವಾಗಿ ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಜ.17 ರಂದು ಗ್ರಾಮದ ಆರು ಕಡೆಗಳಲ್ಲಿ ನಡೆಯಲಿದೆ. ದೊಡ್ಡೇರಿ ಭಜನಾ ಮಂದಿರದ ಬಳಿ, ಮುಳ್ಯ ಭಜನಾ ಮಂದಿರದ ಬಳಿ, ಮೇನಾಲ ಹಾಲು ಸೊಸೈಟಿ ಬಳಿ, ಕಾಂತಮಂಗಲ ಬಸ್ ಸ್ಟಾಂಡ್ ಬಳಿ, ಅಜ್ಜಾವರ ಹಾಲು ಸೊಸೈಟಿ ಬಳಿ, ಅಡ್ಪಂಗಾಯ ಶಾಲಾ ಬಳಿ ನಡೆಯಲಿದೆ ಎಂದು...
ಮುಂದೂಡಲ್ಪಟ್ಟಿದ್ದ ಪೋಲೀಯೋ ಲಸಿಕಾ ಕಾರ್ಯಕ್ರಮ ಜ.31 ಕ್ಕೆ ನಡೆಯಲಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕುವಂತೆ ತಾಲೂಕು ವೈಧ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಂಘಟನೆಗಳು ದೇಣಿಗೆ ಸಂಗ್ರಹಿಸುವ ಕ್ರಮ ಸರಿಯಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಸುಳ್ಯ ನಗರ ಪಂಚಾಯತ್ ಸದಸ್ಯ ಎಂ. ವೆಂಕಪ್ಪ ಗೌಡ ಹೇಳಿದ್ದಾರೆ. ಇಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ನ್ಯಾಯಾಲಯದ ತೀರ್ಪಿನ ಪ್ರಕಾರ ಹಾಗೂ ಎಲ್ಲಾ ಅಡ್ಡಿಗಳು ನಿವಾರಣೆಯಾಗಿ ರಾಮ ಮಂದಿರ ನಿರ್ಮಾಣವಾದರೆ ಸಂತೋಷವೇ. ಅದಕ್ಕೆ ಯಾರೂ...
ಗ್ರಾಮ ಪಂಚಾಯತ್ ಚುನಾವಣೆ 2020 ರ ಅಧ್ಯಕ್ಷ ಉಪಾಧ್ಯಕ್ಷರ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಜ.23 ರಂದು ಜಿಲ್ಲಾ ಪಂಚಾಯಿತಿಯ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಿದ್ದಾರೆ. ಈ ಮೀಸಲಾತಿ ಪ್ರಕ್ರಿಯೆಯನ್ನು ಆಯಾಯ ತಾಲೂಕು ಹಾಗೂ ಸುಳ್ಯ ತಾಲೂಕಿನ ಮೀಸಲಾತಿ ಪ್ರಕ್ರಿಯೆಯನ್ನು ಸುಳ್ಯದಲ್ಲಿ ನಡೆಸುವಂತೆ ಕಾಂಗ್ರೆಸ್ ಬ್ಲಾಕ್ ಸಮಿತಿಯ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರ...
ಐನೆಕಿದು ಬಿಜೆಪಿ ಗ್ರಾಮ ಸಮಿತಿ ವತಿಯಿಂದ ನೂತನ ಸಚಿವರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಶಾಸಕ ಎಸ್ ಅಂಗಾರ ಅವರನ್ನು ಸುಬ್ರಹ್ಮಣ್ಯದಲ್ಲಿ ಭೇಟಿಯಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಐನೆಕಿದು ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಪೈಲಾಜೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ , ಐನೆಕಿದು- ಸುಬ್ರಹ್ಮಣ್ಯ ಸಿ.ಎ ಬ್ಯಾಂಕ್ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಅಜಿತ್...
ಅಯ್ಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಪ್ರಯುಕ್ತ ಐನೆಕಿದು ವ್ಯಾಪ್ತಿಯಲ್ಲಿ ನಿಧಿ ಸಮರ್ಪಣಾ ಅಭಿಯಾನಕ್ಕೆ ನಿನ್ನೆ ಕೋಟೆ ಅಶ್ವಥ್ ಕಟ್ಟೆಯಲ್ಲಿ ಪ್ರಾರ್ಥನೆ ಮಾಡಿ ಪ್ರಾರಂಭಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಲೂಕು ಶಾರೀರಿಕ್ ಪ್ರಮುಖ್ ಭುಕ್ಷೀತ್ ನೀರ್ಪಾಡಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ಗಿರೀಶ್ ಪೈಲಾಜೆ ಹಿರಿಯ ಸ್ವಯಂ ಸೇವಕರಾದ ಕಿಶೋರ್ ಕುಮಾರ್ ಕೂಜುಗೋಡು, ಸುಬ್ರಹ್ಮಣ್ಯ ಸಿ.ಎ ಬ್ಯಾಂಕ್...
Loading posts...
All posts loaded
No more posts
