ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು,ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು...

ಡೈಮಂಡ್ ಜುಬಿಲಿ ಜಾಂಬೂರಿ ಯಲ್ಲಿ ಪ್ರಶಸ್ತಿ ಪತ್ರ ಪಡೆದ ಕೆ.ವಿ.ಜಿ ಕೊಲ್ಲಮೊಗ್ರು ಇಲ್ಲಿನ ಸ್ಕೌಟ್ ವಿದ್ಯಾರ್ಥಿಗಳು

ಭಾರತೀಯ ಸ್ಕೌಟ್ ಮತ್ತು ಗೈಡ್ಸ್, ರಾಷ್ಟ್ರೀಯ ಸಂಸ್ಥೆ ಮತ್ತು ರಾಜ್ಯ ಸಂಸ್ಥೆ ತಮಿಳುನಾಡು ಇವುಗಳ ಸಹಯೋಗದಲ್ಲಿ ಜ.28 ರಿಂದ ಫೆ.03 ರವರೆಗೆ ತಮಿಳುನಾಡಿನ ಸಿಪ್ ಕಾಟ್ ಇಂಡಸ್ಟ್ರೀಯಲ್ ಪಾರ್ಕ್, ಮುನಪ್ಪರೈ, ತಿರಿಚಿರೆಪಳ್ಳಿ ಎಂಬಲ್ಲಿ 75ನೇ ವರ್ಷಾಚರಣೆ ಅಂಗವಾಗಿ ಸ್ಕೌಟ್ ಗೈಡ್ಸ್ ವಿಶೇಷ ಡೈಮಂಡ್ ಜುಬಿಲಿ ಜಾಂಬೂರಿ ಯನ್ನು ಆಯೋಜಿಸಲಾಗಿದ್ದು, ಈ ಜಾಂಬೂರಿ ಯಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ...
Ad Widget

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ನಡುತೋಟ ಆಯ್ಕೆ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಮಹೇಶ್ ನಡುತೋಟರವರು ಸ್ಪರ್ಧಿಸಿ ಅತ್ಯಧಿಕ ಮತಗಳಿಂದ ಚುನಾಯಿತರಾಗಿ ಜಿಲ್ಲಾ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರುಷದಿಂದ ನೆಲೆಸಿರುವ ಇವರು ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷರಾಗಿದ್ದಾರೆ. ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿಯೂ ದುಡಿದಿದ್ದಾರೆ....

ಸುಳ್ಯ: ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ನಲ್ಲಿ ಗಣಪತಿ ಹವನ, ಇಂದಿನಿಂದ ಹೊರ ರೋಗಿ ವಿಭಾಗದ ವೈದ್ಯಕೀಯ ಸೇವೆ ಹಾಗೂ ಪಂಚಕರ್ಮ ಚಿಕಿತ್ಸೆ ಲಭ್ಯ

ಕೆವಿಜಿ ರೂರಲ್ ಹೆಲ್ತ್ ಕೇರ್ ಟ್ರೈನಿಂಗ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಆಯುರ್ವೇದ ಆಸ್ಪತ್ರೆ, ಕೆವಿಜಿ ನರ್ಸಿಂಗ್ ಸೈನ್ಸ್ ಸೋಣಂಗೇರಿ, ಸುಳ್ಯ ಇಲ್ಲಿ ಫೆಬ್ರವರಿ 7 ರಂದು ಪುರೋಹಿತ ಶ್ರೀವರ ಪಾಂಗಣ್ಣಾಯ ಇವರ ವೈದಿಕತ್ವದಲ್ಲಿ ಗಣಪತಿ ಹವನ ವಿದ್ಯುಕ್ತವಾಗಿ ನೆರವೇರಿತು.ಈ ಸಮಾರಂಭದಲ್ಲಿ ಡಾ. ಕೆ. ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ...

ಪಂಜ: ಬ್ರಹ್ಮರಥೋತ್ಸವ- ಸಾವಿರಾರು ಭಕ್ತರು ಭಾಗಿ

ಪಂಜ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವವು ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರುಗುತ್ತಿದ್ದು ಫೆ.6 ರಂದು ರಾತ್ರಿ ಶ್ರೀದೇವರ ಬ್ರಹ್ಮ ರಥೋತ್ಸವವು ಸಹಸ್ರ ಸಹಸ್ರ ಭಕ್ತಾದಿಗಳು ಪಾಲ್ಗೊಂಡು ಭಕ್ತಿ ಸಡಗರದಿಂದ ಜರುಗಿತು. ಹಾಗೂ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ...

ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕಾಧ್ಯಕ್ಷ ನಾರಾಯಣ ಭೀಮಗುಳಿ ನಿಧನ

ಹರಿಹರ ಪಳ್ಳತ್ತಡ್ಕ ನಿವಾಸಿ ಶ್ರೀ ಹರಿಹರೇಶ್ವರ ಯಕ್ಷಗಾನ ಕಲಾ ಸಂಘದ ಸ್ಥಾಪಕಾಧ್ಯಕ್ಷ, ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿದ್ದ ನಾರಾಯಣ ಭೀಮಗುಳಿ ರವರು ಇಂದು(ಫೆ.06) ಸ್ವಗೃಹದಲ್ಲಿ ನಿಧನರಾದರು.ಇವರು ನಾಟಕ ಕಲಾವಿದರು, ಸಂಘಟಕರು ಮಾತ್ರವಲ್ಲದೇ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಬಲಶಾಲಿ, ಕಡಲಕೇಸರಿ ಪತ್ರಿಕೆಗಳಲ್ಲಿ ವರದಿಗಾರರಾಗಿಯೂ ಇವರು ಕರ್ತವ್ಯವನ್ನು ನಿರ್ವಹಿಸಿದ್ದರು.ಮೃತರಿಗೆ 52 ವರ್ಷ ವಯಸ್ಸಾಗಿತ್ತು.ಮೃತರು ತಂದೆ...

ಕನ್ನಡ ಚಲನಚಿತ್ರ ನಟ ದೇವರಾಜ್ ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ ಫೆ.6: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್, ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ...

ಮಂಡೆಕೋಲು ಸಹಕಾರ ಸಂಘದ ಅಧ್ಯಕ್ಷರಾಗಿ ಸುರೇಶ್ ಕಣೆಮರಡ್ಕ, ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧ ಆಯ್ಕೆ

ಮಂಡೆಕೋಲು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್‌ ಕಣೆಮರಡ್ಕ ಹಾಗೂ ಉಪಾಧ್ಯಕ್ಷರಾಗಿ ಪುರುಷೋತ್ತಮ ಕಾಡುಸೊರಂಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾದ ಕೇಶವಮೂರ್ತಿ ಹೆಬ್ಬಾರ್, ಆಶಿಕ್ ದೇವರಗುಂಡ, ಉಮೇಶ್‌ ಮಂಡೆಕೋಲು, ಲಕ್ಷ್ಮಣ ಉಗ್ರಾಣಿಮನೆ, ರಾಜಣ್ಣ ಪೇರಾಲುಮೂಲೆ, ಲಿಂಗಪ್ಪ ಬದಿಕಾನ,ಕುಸುಮ ದೇವರಗುಂಡ, ಸುಶೀಲ ಚೌಟಾಜೆ, ಶಶಿಧರ ಕಲ್ಲಡ್ಕ, ಸದಾನಂದ ಮಡಿವಾಳಮೂಲೆ ಉಪಸ್ಥಿತರಿದ್ದರು. ಸಹಕಾರ ಇಲಾಖೆಯ ಅಧಿಕಾರಿ ಶಿವಲಿಂಗಯ್ಯ...

ಕೀಟೋ ಡಯಟ್

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು...

ಫೆ 10. ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ವತಿಯಿಂದ ವಾರ್ಷಿಕ ಜಲಾಲಿಯ ರಾತೀಬ್ ಮತ್ತು ದಿಖ್ರ್ ದುವಾ ಮಜ್ಲಿಸ್

ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಕಮಿಟಿ ರಿ.ಇದರ ಆಶ್ರಯದಲ್ಲಿ ನಡೆಸಿಕೊಂಡು ಬರುತ್ತಿರುವ ಮಾಸಿಕ ಜಲಾಲಿಯ ರಾತೀಬ್ ಇದರ ವಾರ್ಷಿಕ ದಿಖ್ರ್ ಮತ್ತು ದುವಾ ಮಜ್ಲಿಸ್ ಕಾರ್ಯಕ್ರಮ ಫೆಬ್ರವರಿ 10 ರಂದು ಜಟ್ಟಿಪಳ್ಳ ಹಯಾತುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಮಿಟಿಯ ಮಾಜಿ ಅಧ್ಯಕ್ಷ ಹಾಗೂ ಸಂಘಟಕ ಶರೀಫ್ ಜಟ್ಟಿಪಳ್ಳ ಫೆ.6 ರಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ...
Loading posts...

All posts loaded

No more posts

error: Content is protected !!