ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ವಿಕಲಚೇತನ ಹೆಣ್ಣು ಮಗುವಿನ ಮನೆಯಲ್ಲಿ ಕಾರ್ಯಕ್ರಮ

ಜನವರಿ 29 ರಂದು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆಯ ವತಿಯಿಂದ ದಶ ಸಂಭ್ರಮದ ಕಾರ್ಯಕ್ರಮದ ಅಂಗವಾಗಿ ವಾತ್ಸಲ್ಯ ಕಾರ್ಯಕ್ರಮದ ಪ್ರಯುಕ್ತ ಬೆಳ್ಳಾರೆ ಗ್ರಾಮದ ದರ್ಕಾಸ್ತು ಬಡ ಮಹಿಳೆ ಲಲಿತಾ ರೈಯವರ ವಿಕಲಚೇತನ ಮಗಳಾದ ಶೈಲಿ ರೈ ಇವರಿಗೆ ದಿನಬಳಕೆಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಪೂರ್ಣಿಮಾ ಪಡ್ಪು, ಕಾರ್ಯದರ್ಶಿ ಶೋಭಾ ಕುರುಂಬುಡೇಲು,...

ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿದ “ಅಲೆಮಾರಿ ಆರ್ಭಟ” ಮ್ಯೂಸಿಕ್ ಆಲ್ಬಮ್ ದಾವಣಗೆರೆಯಲ್ಲಿ ಬಿಡುಗಡೆ ಮತ್ತು ಸನ್ಮಾನ

ಸುಳ್ಯದ ಸಾಹಿತಿ, ಜ್ಯೋತಿಷಿ, ಚಿತ್ರ ನಿರ್ದೇಶಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ರವರು ಸಾಹಿತ್ಯ ರಚಿಸಿ ಹಾಡಿರುವ "ಅಲೆಮಾರಿ ಆರ್ಭಟ" ಮ್ಯೂಸಿಕ್ ಆಲ್ಬಮ್ ನ್ನು ಇತ್ತೀಚಿಗೆ ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜರುಗಿದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಅಲೆಮಾರಿ ಅರೆ ಅಲೆಮಾರಿ ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ -2025 ಮಹಾ ಸಮ್ಮೇಳನದಲ್ಲಿ ಚಿತ್ರದುರ್ಗ ಛಲವಾದಿ...
Ad Widget

ಇಂದು ನಾಳೆ (ಫೆ.1& 2) ವಳಲಂಬೆ ಜಾತ್ರೋತ್ಸವ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಫೆ.1 ಮತ್ತು 2 ರಂದು ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಜ. 25 ರಂದು ಶ್ರೀ ದೇವರಿಗೆ ಮತ್ತು ದೈವಗಳಿಗೆ ಗೊನೆ ಮುಹೂರ್ತ ನೆರವೇರಿದ್ದು, ಫೆ. 01 ರಂದು ಬೆಳಿಗ್ಗೆ ಗಂಟೆ 8-00ಕ್ಕೆ ಗಣಪತಿ ಹೋಮ, ಮಧ್ಯಾಹ್ನ ಗಂಟೆ 12-00ಕ್ಕೆ ನವ...

ಜ.31- ಕಡಬ ತಾ.ಪಂ. ನ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ ನಿವೃತ್ತಿ

ಕಡಬ ತಾಲ್ಲೂಕು ಪಂಚಾಯತ ನ ಸಹಾಯಕ ನಿರ್ದೇಶಕ, ಸಹಾಯಕ ಲೆಕ್ಕಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಜ. 31 ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ನಾಲ್ಕನೇ ತರಗತಿ ವರೆಗಿನ ಪ್ರಾಥಮಿಕ ಶಿಕ್ಷಣವನ್ನು ಕಡಬದ ಪಿಜಕ್ಕಳದಲ್ಲಿ ಪಡೆದ ಇವರು 7 ನೇ ತರಗತಿವರೆಗೆ ಕೋಟೆಮುಂಡುಗಾರು ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಬಾಳಿಲ ವಿದ್ಯಾಭೋಧಿನಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪಡೆದರು....

ಸುಳ್ಯ‌ದಲ್ಲಿ ಆಧಾರ್ ಸೇವೆ ಸರಿಪಡಿಸಲು ತಹಶೀಲ್ದಾರ್ ಗೆ ಎಸ್.ಡಿ.ಪಿ.ಐ. ಮನವಿ – ವಾರದೊಳಗೆ ಸರಿಪಡಿಸುವ ಭರವಸೆ

ಸುಳ್ಯ : ಕಳೆದ ಕೆಲವು ತಿಂಗಳುಗಳಿಂದ ಸುಳ್ಯದಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಆಧಾರ್ ಸೇವಾ ಸೌಲಭ್ಯವು ಸ್ಥಗಿತಗೊಂಡಿದ್ದುಅಗತ್ಯ ಕಾರ್ಯಗಳಿಗೆ ಆಧಾರ್ ಕಡ್ಡಾಯವಾಗಿರುವ ಕಾರಣದಿಂದ ಆಧಾರ್ ಸೇವಾ ಸೌಲಭ್ಯವಿಲ್ಲದ ಕಾರಣ ಯಾವುದೇ ಅಗತ್ಯ ಕಾರ್ಯಗಳಿಗೆ ಕಷ್ಟ ಪಡುವಂತಾಗಿದೆ.ಸುಳ್ಯ ತಾಲೂಕಿನಲ್ಲಿ 40 ಗ್ರಾಮಗಳಿದ್ದು, ಬೆಳ್ಳಾರೆಯ ಅಂಚೆ ಕಚೇರಿಯಲ್ಲಿ ಏಕ ಮಾತ್ರ ಆಧಾರ್ ಸೇವಾ ಕೇಂದ್ರವಿದೆ.ಆದುದರಿಂದ ತ್ವರಿತವಾಗಿ ಸ್ಪಂದಿಸಿ...

ಅಗಲಿದ ಪತ್ರಕರ್ತ ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಣೆ

ಸುಳ್ಯ: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ.ಬಾಳೆಪುಣಿ ಅವರಿಗೆ ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು. ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮೌನ ಪ್ರಾರ್ಥನೆ ನಡೆಸಿ ನುಡಿನಮನ ಸಲ್ಲಿಸಲಾಯಿತು.ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಜಯಪ್ರಕಾಶ್ ಕುಕ್ಕೇಟ್ಟಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಂಗಾಧರ...

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಪಡ್ಪಿರೆ ಉದ್ಘಾಟನೆ

ಕೊಡಗಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ: ಶಾಸಕ ಎ.ಎಸ್. ಪೊನ್ನಣ್ಣ ದೇವಾಲಯ ಅಭಿವೃದ್ಧಿಗೊಂಡರೆ ಊರಿನ ಅಭಿವೃದ್ಧಿ: ಶಾಸಕಿ ಭಾಗೀರಥಿ ದೇವಸ್ಥಾನದ ಅಭಿವೃದ್ಧಿಯಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ: ಕೆ.ಜಿ. ಬೋಪಯ್ಯ ಶಾಸ್ತಾವು ದೇವಾಲಯ ಕನ್ನಡ, ಮಲೆಯಾಳಿ, ತುಳು ದೈವಗಳ ಸಂಗಮವಿರುವ ಐತಿಹಾಸಿಕ ಕ್ಷೇತ್ರ: ಪ್ರೊ. ಕೆ.ಇ. ರಾಧಾಕೃಷ್ಣ ಶ್ರೀ ಶಾಸ್ತಾವು ದೇವರ...

ನಿವೃತ್ತ ವನಪಾಲಕ ಶಿವರಾಮ ಬಲ್ಯಾಯ ಅಡ್ಕಾರು ನಿಧನ

ಜಾಲ್ಲೂರು ಗ್ರಾಮದ ಅಡ್ಕಾರು ನಿವಾಸಿ, ನಿವೃತ್ತ ವನಪಾಲಕರಾದ ಶಿವರಾಮ ಬಲ್ಯಾಯ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಜ.30ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶಿವರಾಮ ಬಲ್ಯಾಯರು ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು ಪತ್ನಿ ಸರೋಜಿನಿ, ಪುತ್ರರಾದ ಶಶಿ ಅಡ್ಕಾರು, ಸಂದೇಶ್ ಅಡ್ಕಾರು, ಸುದೀಶ್ ಅಡ್ಕಾರು, ಪುತ್ರಿಯರಾದ...

24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸಿದ ಸುಳ್ಯ ಪೊಲೀಸ್!.

ಸುಳ್ಯ: 24 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂದಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣಾ ಅಕ್ರ: 60/2002 ಕಲಂ: 457, 380 ಐಪಿಸಿ (LPC no. 04/2007)ರಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ V.T ಬಾಬು ಯಾನೆ ಆಗಸ್ಟಿನ್ (55 ವರ್ಷ ) ತಂದೆ : ತೋಮಸ್ ವಾಸ :ವಲಿಯಪರಂಬಿಲ್, ಇಡುಕ್ಕಿ, ಕೇರಳ ಮತ್ತು V.T.ರಾರಿ...

ಪಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಚಂದ್ರಶೇಖರ ಶಾಸ್ತ್ರಿ, ಉಪಾಧ್ಯಕ್ಷರಾಗಿ ಸದಾನಂದ ಕಾರ್ಜ ಅವಿರೋಧ ಆಯ್ಕೆ

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು 12 ಸ್ಥಾನದಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಜ.30 ರಂದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಡಳಿತ ಮಂಡಳಿಗೆ ಚುನಾವಣೆ ಪ್ರಕ್ರಿಯೆ ನಡೆದಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿ ಎರಡು...
Loading posts...

All posts loaded

No more posts

error: Content is protected !!