- Thursday
- May 7th, 2026
ಸಹಕಾರಿ ರತ್ನ ಪ್ರಶಸ್ತಿಗೆ ಪಾತ್ರರಾಗಿರುವ ಜೇನು ವ್ಯವಸಾಯಗಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮತ್ತು ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಚಂದ್ರಾ ಕೋಲ್ಚಾರ್ ರವರನ್ನು ಗೌಡರ ಯುವ ಸೇವಾ ಸಂಘದ ವತಿಯಿಂದ ಇಂದು ಸನ್ಮಾನಿಸಲಾಯಿತು. ಇಂದು ಕೊಡಿಯಾಲ ಬೈಲಿನ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ನಡೆದ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ...
ಎಸ್ಎಂಎ ಸುನ್ನಿ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಬೆಳ್ಳಾರೆ ಝೋನಲ್ ಇದರ ಆಶ್ರಯದಲ್ಲಿ ಝೋನಲ್ ಮಟ್ಟದ ಎಲೆಕ್ಷನ್ ಕ್ರಿಯೇಷನ್ ಸಮಾವೇಶ ಬೆಳ್ಳಾರೆ ಸುನ್ನಿ ಸೆಂಟರ್ ಸಭಾಂಗಣದಲ್ಲಿ ನ. 29ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘಟನೆಯ ಬೆಳ್ಳಾರೆ ಜೋನಲ್ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ವಹಿಸಿದ್ದರು. ಸೈಯದ್ ಹಾಮಿದ್ ತಂಙಳ್ ತಂಬಿನಮಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಕ ಜಿಲ್ಲಾ ಈಸ್ಟ್ ಸಮಿತಿ...
ಸುಬ್ರಹ್ಮಣ್ಯದಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ಸುಬ್ರಹ್ಮಣ್ಯ ಅವರು ನಡೆಸುತ್ತಿರುವ ವಾರದ ಶ್ರಮದಾನಕ್ಕೆ ಇಂದು ಎ.ಸಿ ಯತೀಶ್ ಉಳ್ಳಾಲ್ ಭೇಟಿ ನೀಡಿದರು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ಇಂದು ಭೇಟಿ ನೀಡಿ ಕುಮಾರಧಾರ ವ್ಯಾಪ್ತಿಯಲ್ಲಿ ಪರ್ವತಮುಖಿ ಫ್ರೆಂಡ್ಸ್ ಮತ್ತು ಜೆಸಿಐ ನಡೆಸಿದ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇದರ ವತಿಯಿಂದ ಚಿಗುರು 2020 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಿ. 1ರಂದು ಪಂಜದ ವಿದ್ಯಾರ್ಥಿಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಪಂಜದ ಶ್ರೀ ಶಾರದಾಂಬ ಯಕ್ಷಗಾನ ಕಲಾಸೇವಾ ಟ್ರಸ್ಟ್ ಇದರ ವಿದ್ಯಾರ್ಥಿಗಳು ಈ ಯಕ್ಷಗಾನ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಕರಾವಳಿ ಜಿಲ್ಲೆಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಕಲೆಯನ್ನು ಉತ್ತರ ಕರ್ನಾಟಕದಲ್ಲಿ ಪ್ರದರ್ಶಿಸಲು...
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡುವ ಪ್ರೋತ್ಸಾಹಕ ಪ್ರಶಸ್ತಿಗೆ ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ.ಸಂಘ ಆಯ್ಕೆಯಾಗಿದೆ. ಮಂಗಳೂರಿನಲ್ಲಿ ನ.27 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷಜಯಪ್ರಕಾಶ್ ಕೂಜುಗೋಡು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಕಟ್ಟೆಮನೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ರವರಿಂದ ಪ್ರಶಸ್ತಿಸ್ವೀಕರಿಸಿದರು. ಸಂಘವು 2019-20ನೇ ಸಾಲಿನಲ್ಲಿ ಬ್ಯಾಂಕಿನ...
ಏನೆಕಲ್ಲು ಆದಿಶಕ್ತಿ ಭಜನಾ ಮಂದಿರ ಹಾಗೂ ಕಲಾಭಿಮಾನಿಗಳ ಸಹಕಾರದೊಂದಿಗೆ ಚಿತ್ರಚಿತ್ತಾರ ಅರ್ಪಿಸಿದ 'ಗಾನ ವರ್ಣ ಸಿಂಚನ" ಮಕ್ಕಳ ಕಾರ್ಯಕ್ರಮ ನ.28 ರಂದು ಏನೆಕಲ್ಲು ಭಜನಾ ಮಂದಿರದಲ್ಲಿ ನಡೆಯಿತು. ಸುಬ್ರಹ್ಮಣ್ಯ ಕೆ.ಎಂ. ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ಮೈಸೂರಿನ ಆರ್ಟ್ಸ್ ಸ್ಟುಡಿಯೋದ ಮಹೇಶ್ ಹುಳಿಯಾರು ಉದ್ಘಾಟಿಸಿದರು. ಮಕ್ಕಳಿಂದ ರಚನೆಯಾದ ಚಿತ್ರ ಚಿತ್ತಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿಶಕ್ತಿ ಭಜನಾ ಮಂದಿರದ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ಮಂಡಲ ಪ್ರಶಿಕ್ಷಣ ವರ್ಗವು ಪೆರುವಾಜೆ ಜೆ. ಡಿ. ಅಡಿಟೋರಿಯಂನಲ್ಲಿ 2 ದಿನಗಳ ಕಾಲ ನಡೆಯಲ್ಲಿದ್ದು ಇದರ ಉದ್ಘಾಟನೆ ಯನ್ನು ಶಾಸಕ ಎಸ್. ಅಂಗಾರವರು ನೆರೆವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ಕೃಷ್ಣ ಶೆಟ್ಟಿ ಕಡಬ,ಮಂಡಲ ಪ್ರಶಿಕ್ಷಣದ...
ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ (ಬಿ.ಎಂ.ಎಸ್) ಗುತ್ತಿಗಾರು ಘಟಕದ ವತಿಯಿಂದ ಕ್ರಿಕೆಟ್ ಪಂದ್ಯಾಟ ಮತ್ತು ಗೌರವಾರ್ಪಣೆ ಇಂದು ನಡೆಯಿತು. ಮಾಜಿ ಗ್ರಾ.ಪಂ.ಅಧ್ಯಕ್ಷ ವೆಂಕಟ್ ವಳಲಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಅಧ್ಯಕ್ಷ ವೆಂಕಟ್ ದಂಬೆಕೋಡಿ, ಪಿಡಿಓ ಶ್ಯಾಮ್ ಪ್ರಸಾದ್, ಅಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ, ಕಾರ್ಯದರ್ಶಿ ಶಶಿಧರ ಕುಕ್ಕುಜೆ ಉಪಸ್ಥಿತರಿದ್ದರು....
ನರ್ಲಡ್ಕ ಎಣ್ಮೂರು ಶ್ರೀ ಜನಾರ್ದನ ಆಚಾರ್ಯರ ಪುತ್ರ ಪ್ರಶಾಂತ್ ನರ್ಲಡ್ಕರ ವಿವಾಹವು ಪೇರಳಕಟ್ಟೆ ಶ್ರೀ ಕೊರಗಪ್ಪ ಆಚಾರ್ಯರ ಪುತ್ರಿ ಲತಾಶ್ರೀಯವರೊಂದಿಗೆ ನ.27 ರಂದು ಎಣ್ಮೂರು ಕೋಟಿ - ಚೆನ್ನಯ್ಯ ನಗರದ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದು ಕಡಬ ತಾಲೂಕಿನ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದ ಪ್ರಕರಣವೊಂದಕ್ಕೆ ಸಂಬಂಧಿಸಿ ಲೋಕಾಯುಕ್ತ ತನಿಖೆ ನಡೆದಿತ್ತು....
Loading posts...
All posts loaded
No more posts
