- Saturday
- March 14th, 2026
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮ ಕಲಶೋತ್ಸವ ಸಮಿತಿಯ ವಿಶೇಷ ಸಭೆ ನ. 19ರಂದು ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು. ಸೇವಾ ಸಮಿತಿ ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು...
ಏನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನಾಗೇಶ್ ನೆಕ್ರಾಜೆ, ಕಾರ್ಯದರ್ಶಿಯಾಗಿ ಕುಮಾರ ಪುರ್ಲುಪ್ಪಾಡಿ, ಸದಸ್ಯರಾಗಿ ಸದಸ್ಯರಾಗಿ ನಾಗೇಶ್ ಪಿ. ಪೂಜಾರಿಮನೆ, ಬಿ.ಶೂರಪ್ಪ ಗೌಡ ಬಾಲಾಡಿ, ದೇರಪ್ಪ ಗೌಡ ಹೊಸಮನೆ, ಶ್ರೀಮತಿ ಚಿತ್ರಲೇಖ, ಶ್ರೀಮತಿ ವಾಣಿಶ್ರೀ ಮುತ್ಲಾಜೆಡ್ಕ, ಅಚ್ಚುತ ಪಿ. ಪೀಕಟೆಮಜಲು, ಅರ್ಚಕ...
ರಾಷ್ಟ್ರೀಯ ಗಂಥಾಲಯ ಸಪ್ತಾಹದ ಅಂಗವಾಗಿ ಇಲಾಖಾ ವತಿಯಿಂದ ನೀಡುವ ಗ್ರಂಥಾಲಯ ಸಿಬ್ಬಂದಿ ಸೇವಾ ಪುರಸ್ಕಾರಕ್ಕೆ ದೇವಚಳ್ಳ ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ ಭಾಜನರಾಗಿದ್ದರು . ಇವರಿಗೆ ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು. ಇವರು ಮಂಡೆಕೋಲು ಗ್ರಾಮದ ಉಪ ಅಂಚೆ ಪಾಲಕ ಸೀತಾರಾಮ ಕಣೆಮರಡ್ಕ ಇವರ ಪತ್ನಿ.
ಪುತ್ತೂರು ಕಡೆಯಿಂದ ಸುಳ್ಯದ ಕಡೆಗೆ ಬರುತ್ತಿದ್ದ ಬೈಕ್ ಗೆ ದನ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿ ಹೊಡೆದು ಇಬ್ಬರು ಯುವಕರು ಗಾಯಗೊಂಡ ಘಟನೆ ನಿನ್ನೆ ರಾತ್ರಿ ವರದಿಯಾಗಿದೆ. ಬೈಕ್ ನಲ್ಲಿದ್ದ ಅರಂತೋಡು ಗ್ರಾಮದ ಪಿಂಡಿಮನೆ ಸಂತೋಷ್ ಮತ್ತು ಪ್ರವೀಣ್ ಎಂಬವರು ಗಾಯಗೊಂಡವರು. ಪ್ರವೀಣ್ ಎಂಬವರಿಗೆ ಗಂಭೀರ ಗಾಯಗೊಂಡಿದ್ದು, ಸಂತೋಷ್ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ....
ದುಷ್ಯಂತ್ ಶೀರಡ್ಕ ಮಾಲೀಕತ್ವದ ಎಸ್.ಬಿ.ಗ್ರೂಪ್ಸ್ ಆನ್ಲೈನ್ ಸೇವೆಗಳು ಮತ್ತು ಡಿಜಿಟಲ್ ಪ್ರಿಂಟಿಂಗ್ ನ.21 ರಂದು ಗುತ್ತಿಗಾರಿನ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಜನರಿಗೆ ಅಗತ್ಯವಿರುವ ಎಲ್ಲಾ ತರಹದ ಸರ್ಕಾರಿ ಹಾಗೂ ಸರ್ಕಾರೇತರ ಆನ್ಲೈನ್ ಸೇವೆಗಳು ಮತ್ತು ಡಿಜಿಟಲ್ ಪ್ರಿಂಟಿಂಗ್ ಕೆಲಸಗಳನ್ನು ಶೀಘ್ರ ಮಾಡಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಅಖಿಲ ಭಾರತ ರೈತರ ಸಂಘರ್ಷ ಸಮನ್ವಯ ಸಮಿತಿ, ರೈತ ದಲಿತ ಕಾರ್ಮಿಕ ಜನಪರ ಚಳುವಳಿಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದಲಿತ ಕಾರ್ಮಿಕ ಹಾಗೂ ಜನ ವಿರೋಧಿ ಮಸೂದೆಗಳನ್ನು ಆಗ್ರಹಿಸಿ ಭಾರತೀಯ ಕೃಷಿ ಪರಂಪರೆ ಹಾಗೂ ಸಂಪತ್ತನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ...
ನ. 29ರಂದು ಗುತ್ತಿಗಾರಿನಲ್ಲಿ "ಬಿ. ಎಂ. ಎಸ್. ಕಪ್" ಮುಕ್ತ ಕ್ರಿಕೆಟ್ ಪಂದ್ಯಾಟ, ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ತಾಲೂಕು ಆಟೋ ಚಾಲಕರ ಸಂಘ, ಬಿ. ಎಂ.ಎಸ್. ಗುತ್ತಿಗಾರು ಘಟಕದ ನೇತೃತ್ವದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ತಪ್ಪಲಿನ ಗ್ರಾಮಗಳ ಜನತೆ ಪ್ರತೀದಿನ ಆತಂಕದ ವಾತಾವರಣದಲ್ಲಿ ಜೀವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಸ್ತೂರಿ ರಂಗನ್ ಸಮಿತಿಯು ನೀಡಿದ ವರದಿಯಿಂದ ಇದು ದೃಢಪಟ್ಟಿದೆ. ಆದ್ದರಿಂದ ದಿನಾಂಕ 27/11/2020 ನೇ ಶುಕ್ರವಾರ ಸಮಯ ಬೆಳಗ್ಗೆ 10:30 ಕ್ಕೆ ಸುಳ್ಯ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ವಿರುದ್ಧ ಸುಳ್ಯ ತಾಲೂಕಿನ ಬಾಧಿತ ಗ್ರಾಮಗಳ ಗ್ರಾಮಸ್ಥರಿಂದ...
ಇತಿಹಾಸ ಪ್ರಸಿದ್ಧ ಕೋಟಿ-ಚೆನ್ನಯರ ಆರಾಧ್ಯ ದೇವರು ಶತಮಾನದಿಂದ ತುಳುನಾಡ ಭಕ್ತರಿಂದ ಆರಾಧಿಸುತ್ತಾ ಬಂದಿರುವ ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಶೀಘ್ರದಲ್ಲಿ ನಡೆಯಲಿದ್ದು, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ನಾಗಬ್ರಹ್ಮ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶೋಭಾ ಕರಂದ್ಲಾಜೆ ಅವರು...
ಕೊರೋನಾದಿಂದಾಗಿ ಕಳೆದ 8 ತಿಂಗಳಿನಿಂದ ಕಾಲೇಜುಗಳು ಮುಚ್ಚಿದ್ದವು. ಆದರೆ ಇಂದಿನಿಂದ ಕಾಲೇಜುಗಳು ಪುನರಾರಂಭಗೊಂಡಿವೆ. ಸರ್ಕಾರ ಕಾಲೇಜುಗಳನ್ನು ಆರಂಭಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಸೋಂಕು ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಷ್ಟೇ ಅಲ್ಲದೇ ಪ್ರತೀ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿ ನೆಗೆಟಿವ್ ವರದಿ ಬಂದವರಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಲಾಗಿದೆ....
Loading posts...
All posts loaded
No more posts
