ಮೇನಾಲದಲ್ಲಿ ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡರಾಗಿದ್ದ ನವೀನ್ ರೈ ಮೇನಾಲರು ನಿಧನರಾಗಿ ಮೇ.18ಕ್ಕೆ ಎರಡು ವರ್ಷವಾಗಿದ್ದು ಆ ಪ್ರಯುಕ್ತ ಸ್ಮರಣೆ ಕಾರ್ಯಕ್ರಮ ಮೇನಾಲ ಶ್ರೀಕೃಷ್ಣಾ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ದಿ.ನವೀನ್ ರೈಯವರಿಗೆ ನುಡಿನಮನ ಸಲ್ಲಿಸಿದ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಸುಬೋಧ್ ಶೆಟ್ಟಿ ಮೇನಾಲರುನಮ್ಮನ್ನಗಲಿದ ನವೀನ್ ರೈ ಮೇನಾಲ ರವರು...

ಸಹಕಾರಿ ಸಂಘಗಳು ಗ್ರಾಮೀಣ ಜನರ ಬೆನ್ನೆಲುಬು – ಬಿ.ವೈ.ವಿಜಯೇಂದ್ರ – ಸುಳ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಪ್ರಥಮ ಭೇಟಿ

ಸಹಕಾರಿ ಸಂಘಗಳು ಗ್ರಾಮೀಣ ಜನರ ಬೆನ್ನೆಲುಬು ಆಗಿ ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಅವರು ಸುಳ್ಯದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಹಕಾರಿಗಳು ಸಮಾಜ ಸೇವೆಯ ಜತೆಗೆ ಸಂಘಟನೆಗೂ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು. ರಾಜ್ಯ ಸರಕಾರವನ್ನು ಪ್ರಶ್ನಿಸಿದ ಅವರು...
Ad Widget

ಕವನ : ಸಾಗೋಣ ಮತ್ತೆ ಶಾಲೆಯ ಕಡೆಗೆ…

ಬೇಸಿಗೆಯ ರಜೆಯೀಗ ಮುಗಿಯುತ್ತಾ ಬಂದಿದೆ, ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ ಕೇಳಿಸುವ ಸಮಯ ಇದೀಗ ಹತ್ತಿರವಾಗಿದೆ…ಎರಡು ತಿಂಗಳುಗಳ ಸುಧೀರ್ಘ ರಜೆಯದು ಕಣ್ಮುಚ್ಚಿ ಬಿಡುವಷ್ಟರಲ್ಲಿ ಮುಕ್ತಾಯಗೊಂಡಿದೆ, ಸ್ನೇಹಿತರ ಜೊತೆಗೂಡಿ ಆಟಗಳ ಆಡುತ್ತಾ ಪಾಠಗಳ ಕಲಿಯುವ ಸಮಯವೀಗ ಮತ್ತೆ ಮರಳಿ ಬಂದಿದೆ…ರಜೆಯ ದಿನಗಳ ಮೆಲುಕನ್ನು ಹಾಕುತ್ತಾ, ತಂದೆ-ತಾಯಿಯ ಆಶೀರ್ವಾದವ ಪಡೆಯುತ್ತಾ ಪುಸ್ತಕದ ಚೀಲವನ್ನು ಬೆನ್ನಿಗೆ ಹಾಕಿ ಸಾಗೋಣ ಮತ್ತೆ...

ಸುಳ್ಯ : ಬಿಜೆಪಿಯ ಚುನಾಯಿತ ಸಹಕಾರಿಗಳ ಸಮಾವೇಶ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿಯ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾಯಿತ ಸಹಕಾರಿಗಳ ಸಮಾವೇಶ ಸುಳ್ಯದ ಸಿಎ ಬ್ಯಾಂಕ್ ನಲ್ಲಿ ಮೇ.17 ರಂದು ನಡೆಯಿತು.‌ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶ ಉದ್ಘಾಟಿಸಿದರು. ವೇದಿಕೆಯಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಸತೀಶ್ಚಂದ್ರ, ಬಿಜೆಪಿ ಜಿಲ್ಲಾ ಪ್ರಧಾನ...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ವೆಂಕಟೇಶ್.ಎಚ್.ಎಲ್., ಕಾರ್ಯದರ್ಶಿಯಾಗಿ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ  ಮೋನಪ್ಪ ಡಿ.

ಸುಬ್ರಹ್ಮಣ್ಯ ಮೇ 16: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಲೀಜನ್ ನ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್.ಎಚ್.ಎಲ್ ಆಯ್ಕೆಗೊಂಡಿದ್ದಾರೆ. ಕಾರ್ಯದರ್ಶಿಯಾಗಿ ಸೀನಿಯರ್ ಗೋಪಾಲ್ ಎಣ್ಣೆಮಜಲ್, ಕೋಶಾಧಿಕಾರಿಯಾಗಿ ಸೀನಿಯರ್ ಮೋನಪ್ಪ.ಡಿ, ನಿಕಟ ಪೂರ್ವ ಅಧ್ಯಕ್ಷರಾಗಿ ಸೀನಿಯರ್ ರವಿ ಕಕ್ಕೆ ಪದವು, ಉಪಾಧ್ಯಕ್ಷರುಗಳಾಗಿ ಸೀನಿಯರ್ ಪ್ರಕಾಶ್ ಕಟ್ಟೆಮನೆ, ಹಾಗೂ ಸೀನಿಯರ್ ಅಶೋಕ್ ಮೂಲೆ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ತೆರವಾದ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ನಾಮಪತ್ರ ಸಲ್ಲಿಕೆ, ಅವಿರೋಧ ಆಯ್ಕೆ ಸಾಧ್ಯತೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಐನೆಕಿದು ವಾರ್ಡ್ ನ ತೆರವಾದ ಒಂದು ಸ್ಥಾನ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಬಿಜೆಪಿಯ ಶ್ರೀಮತಿ ಮೋಹಿನಿ ಶ್ರೀಧರ ಅಂಙಣ ರವರು ಮೇ.14 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾಮಪತ್ರ ಸಲ್ಲಿಕೆ ಮಾಡಲು ನಿನ್ನೆ ಕೊನೆಯ ದಿನವಾಗಿದ್ದು, ಇತರೆ ಯಾವುದೇ ಪಕ್ಷಗಳು ಅಥವಾ ವ್ಯಕ್ತಿಗಳು ನಾಮಪತ್ರ ಸಲ್ಲಿಸದೇ ಇರುವ...

ತೀರ್ಥರಾಮ ಗೌಡ ಬಾಳೆತೋಟ ನಿಧನ

ದೇವಚಳ್ಳ ಗ್ರಾಮದ ತಳೂರು ನಿವಾಸಿ ತೀರ್ಥರಾಮ ಗೌಡ ಬಾಳೆತೋಟ ಅಲ್ಪ ಕಾಲದ ಅಸೌಖ್ಯದಿಂದ ಮೇ 13 ರಂದು ಸ್ವಗೃಹ ತಳೂರು ಮನೆಯಲ್ಲಿ ನಿಧನರಾದರು. ಮೃತರು ಪತ್ನಿ ಶಶಿಕಲಾ, ಪುತ್ರರಾರ ಯತಿನ್, ಕಾರ್ತಿಕ್, ದಿವಿನ್ ಹಾಗೂ ಕುಟುಂಬಸ್ಥರನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಕಥಾ ಸಂಕಲನ “ಇದು ಎಂಥಾ ಲೋಕವಯ್ಯಾ” ಅವಲೋಕನ- ವಿಮಲಾರುಣ ಪಡ್ಡoಬೈಲು

ಶ್ರೀ ಪಿ. ಜಿ ಅಂಬೆಕಲ್ ರವರು ನಿವೃತ್ತ ಮುಖ್ಯಶಿಕ್ಷಕರಾಗಿದ್ದು, "ಇದು ಎಂಥಾ ಲೋಕವಯ್ಯಾ" ಅವರು ರಚಿಸಿದ ಐದನೇ ಕೃತಿ ಯಾಗಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನೇಳು ಕಥೆಗಳಿವೆ. ಕಥಾ ಸಂಕಲನಕ್ಕೆ ಕೊಟ್ಟ ಶೀರ್ಷಿಕೆಯ ಕಥೆ ಈ ಸಂಕಲನದಲ್ಲಿ ಇಲ್ಲದಿದ್ದರೂ, ಈ ಎಲ್ಲ ಕಥೆಗಳ ಮೂಲಕ ಕಟ್ಟಿರುವ ಬದುಕಿನ ಬಿಂಬ ಈ ಶೀರ್ಷಿಕೆಗೆ ತಕ್ಕಂತೆ ಸೂಕ್ತ...

ಕಲ್ಮಡ್ಕ : ವಾರ್ಷಿಕ ಕ್ರಿಯಾಯೋಜನೆ ಕುರಿತು ವಿಶೇಷ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಕಲ್ಮಡ್ಕ ಗ್ರಾಮ ಪಂಚಾಯತ್ ಸಹಭಾಗಿತ್ವ ವಾರ್ಷಿಕ ಕ್ರಿಯಾಯೋಜನೆ(GPDP) ತಯಾರಿಸುವ ಕುರಿತಾಗಿ ವಿಶೇಷ ಸಭೆಯನ್ನು ಮೇ. 13ರಂದು ಕಲ್ಮಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ನಡೆಯಿತು. ಸಹಭಾಗಿತ್ವ ವಾರ್ಷಿಕ(GPDP) ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ,...

ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದ ಅಕ್ಷಯ ಬಾಬ್ಲುಬೆಟ್ಟು

ರೆನ್ಶಿ ಯೋಗ ಸಂಸ್ಥೆ ದುಬೈ ಯ.ಎ.ಇ, ಅವಿನಾಶ್ ಯೋಗ ಮತ್ತು ಏರೋಬಿಕ್ಸ್ ಸಂಸ್ಥೆ ಬೆಂಗಳೂರು ಇವುಗಳ ಸಹಯೋಗದೊಂದಿಗೆ ಮೇ.09 ರಿಂದ 12 ರವರೆಗೆ ದುಬೈಯಲ್ಲಿ ನಡೆದ ದುಬೈ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್-2025 ಅಂತರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ಚಿನ್ನದ ಪದಕ ಗಳಿಸಿರುತ್ತಾರೆ.ಇವರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಏನೆಕಲ್ಲು ಸರಕಾರಿ...
Loading posts...

All posts loaded

No more posts

error: Content is protected !!