- Monday
- July 13th, 2026
ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಚಿತ್ರ ಕಲಾ ಶಿಕ್ಷಕ, ಸಂಘಟಕ ಪಂಜದ ಮಹಾಬಲ ಕುಳ ನ.11 ಬೆಳಗ್ಗಿನ ಜಾವ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ನ.10 ರಂದು ಪಂಜದ ಕೃಷ್ಣನಗರದಲ್ಲಿರುವ ಅವರ ಮನೆಯ ಬಳಿ ಇರುವ ಮರದ ಗೆಲ್ಲು ಕಡಿಯಲೆಂದು ಮರ ಏರಿದ್ದ ವೇಳೆ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು...
ಬೆಂಗಳೂರಿನ ಜ್ಞಾನ ಮಂದಾರ ಅಕಾಡೆಮಿ ನೀಡುವ ಸಮಾಜ ರತ್ನ ರಾಜ್ಯ ಪ್ರಶಸ್ತಿಗೆ ಕೆ.ವಿ.ಜಿ.ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ.ಯವರು ಭಾಜನರಾಗಿದ್ದಾರೆ. ಜ.17 ರಂದು ಮಂಗಳೂರಿನಲ್ಲಿ ನಡೆಯುವ ಜ್ಞಾನ ಮಂದಾರ ಉತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಿಳಿದುಬಂದಿದೆ.
Poornima chikkinadka Veena padpu Nandini Chennamule ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ 2019-20 ನೇ ಸಾಲಿನ ಮಹಾಸಭೆಯ ನವೆಂಬರ್ 8 ರಂದು ನಡೆಯಿತು. ಶ್ರೀಮತಿ ಉಷಾಲತಾ ಪಡ್ಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜತೆ ಕಾರ್ಯದರ್ಶಿ ಶ್ರೀಮತಿ ಹೇಮಲತಾ ಪಡ್ಪು ವರದಿ ವಾಚಿಸಿ, ಖಜಾಂಜಿ ಸನ್ನಿಧಿ ಪೂಜಾರಿಮನೆ ಲೆಕ್ಕ ಪತ್ರ ಮಂಡಿಸಿದರು. ಸರ್ವ ಸದಸ್ಯರ...
ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಸೇವಾ ಟ್ರಸ್ಟ್ ಪಂಜ, ಕಲಾಭಿಮಾನಿಗಳ ಸಹಕಾರದೊಂದಿಗೆ ಯಕ್ಷಗಾನ ಗಾನ ವೈಭವ -2020 ನ.10 ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾ ಭವನದಲ್ಲಿ ಉದ್ಘಾಟನೆ ಗೊಂಡಿತು.ಕಾರ್ಯಕ್ರಮವನ್ನು ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿದರು.ಪಂಜ ಶ್ರೀ ಶಾರದಾಂಬಾ ಭಜನಾ ಮಂಡಳಿ ಯ ಅಧ್ಯಕ್ಷ...
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಮಂಗಳವಾರ ಕಳುಹಿಸಿದ್ದಾರೆ.ಇಂದು ಆಧುನಿಕ ಮಾಧ್ಯಮಗಳಿದ್ದರೂ ಅಂಚೆ ಕಚೇರಿ ಮೂಲಕವೇ ಸಮಸ್ಯೆಗಳನ್ನು...
ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡೆಮಿ ಬೆಂಗಳೂರು ಇವರು ಕೊಡ ಮಾಡುವ ರಾಜ್ಯಮಟ್ಟದ 'ಅರಳುಮಲ್ಲಿಗೆ' ಪ್ರಶಸ್ತಿ ಗೆ ಬಹುಮುಖ ಪ್ರತಿಭೆಯ ಮಾ| ಮನ್ವಿತ್ ಆರ್.ಪಡ್ಡಂಬೈಲ್ ಆಯ್ಕೆಯಾಗಿರುತ್ತಾನೆ. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಮನ್ವಿತ್ ಬಾಲ್ಯದಿಂದಲೇ ಚಿತ್ರಕಲೆ,ಯಕ್ಷಗಾನ ,ಸಂಗೀತ, ಕೊಳಲು,ನಾಟಕ ಮುಂತಾದ ಕಲೆಗಳಲ್ಲಿ ಆಸಕ್ತಿ ಹೊಂದಿದ್ದು ಈಗಾಗಲೇ ಅನೇಕ ಸ್ಪರ್ಧೆಗಳಲ್ಲಿ ಬಹುಮಾನವನ್ನು...
ಯಾರೆಂದರೆ ಮುಕ್ಕೂರು : ಎಲ್ಲ ವರ್ಗದ, ಪ್ರದೇಶದ ಜನರನ್ನು ಬೇಧಭಾವ ಇಲ್ಲದೆ ಸಾಮರಸ್ಯದ ಮನೋಭಾವದಿಂದ ಒಂದುಗೂಡಿಸುವ ಸಾಮರ್ಥ್ಯ ಇರುವುದು ಕ್ರೀಡೆಗೆ ಮಾತ್ರ ಎಂದು ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಹೇಳಿದರು. ಯುವ ಸೇನೆ ಮುಕ್ಕೂರು ಇದರ ಆಶ್ರಯದಲ್ಲಿ ಮುಕ್ಕೂರು ಶಾಲಾ ಕ್ರೀಡಾಂಗಣದಲ್ಲಿ ನ.8 ರಂದು ನಡೆದ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಯುವಸೇನ...
ಸಂಪಾಜೆ ಲಯನ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಹೊರಠಾಣೆ ಕಚೇರಿಗೆ ಫ್ಯಾನ್ ಕೊಡುಗೆಯಾಗಿ ನೀಡಲಾಯಿತು. ಠಾಣಾಧಿಕಾರಿ ಚಾಮಯ್ಯರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷರಾದ ಲಯನ್ ವಾಸುದೇವ ಕಟ್ಟೆಮನೆ, ಲಯನ್ ಪ್ರಶಾಂತ್ ಬಾಲನ್, ಲಯನ್ ಕಿಶೋರ್ ಪಿ.ಬಿ ಉಪಸ್ಥಿತರಿದ್ದರು.
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ನೂತನ ನಿರ್ದೇಶಕರಾಗಿ ಸಂಜಯ್ ನೆಟ್ಟಾರ್ ಆಯ್ಕೆಯಾಗಿದ್ದಾರೆ. ಇವರು ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾಗಿದ್ದಾರೆ.
Loading posts...
All posts loaded
No more posts
