ಮುಕ್ಕೂರು : ಯುವಸೇನೆ ಸೇವಾರ್ಥವಾಗಿ ನಡೆಸಿದ ಲಕ್ಕಿ ಕೂಪನ್ ನ ಉಳಿಕೆ ಹಣ ಕುಂಡಡ್ಕ ಕೊರಗಜ್ಜ ದೈವಸ್ಥಾನಕ್ಕೆ ಹಸ್ತಾಂತರ

ಯುವಸೇನೆ ಮುಕ್ಕೂರು ಪೆರುವಾಜೆ ವತಿಯಿಂದ ಶ್ರೀ ಕೊರಗಜ್ಜ ದೈವಸ್ಥಾನ ಕುಂಡಡ್ಕ ಇದರ ಬ್ರಹ್ಮಕಲಶ ಸಂದರ್ಭದಲ್ಲಿ ನಡೆಸಿದ 'ಯುವಸೇನೆ ಸೇವಾರ್ಥ ಲಕ್ಕಿ ಕೂಪನ್' ನಲ್ಲಿ ಉಳಿಕೆಯಾದ ರೂ.29,230 ಹಣವನ್ನು ದೈವಸ್ಥಾನಕ್ಕೆ ಹಸ್ತಾಂತರಿಸಲಾಯಿತು. ದೈವಸ್ಥಾನದ ವತಿಯಿಂದ ಕುಂಬ್ರ ದಯಾಕರ ಆಳ್ವ ಪೆರುವಾಜೆ, ಕುಶಾಲಪ್ಪ ಗೌಡ ಕುಂಡಡ್ಕ, ದಯಾನಂದ ರೈ ಕನ್ನೆಜಲು, ಬಾಲಕೃಷ್ಣ ರೈ ಕನ್ನೆಜಲು ಹಾಗೂ ಹೊನ್ನಪ್ಪ ಗೌಡ...

ಪಂಜ :ಶಿವ ಫ್ರೆಂಡ್ಸ್ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ ಮತ್ತು ಕರೋನ ವಾರಿಯರ್ಸ್ ಗೆ ಗೌರವಾರ್ಪಣೆ.

ಶಿವ ಫ್ರೆಂಡ್ಸ್ (ರಿ) ಪಂಜ ಇದರ ಆಶ್ರಯದಲ್ಲಿ ಆಹ್ವಾನಿತ ಸ್ಥಳೀಯ ತಂಡಗಳ ವಾಲಿಬಾಲ್ ಪಂದ್ಯಾಟ ಮತ್ತು ಕರೋನ ವಾರಿಯರ್ಸ್ ಗೆ ಗೌರವಾರ್ಪಣೆ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ರೋಹಿತ್ ಪೆರ್ಮಾಜೆ ಅಧ್ಯಕ್ಷರು ಶಿವ ಫ್ರೆಂಡ್ಸ್ (ರಿ)ಪಂಜ, ಡಾ. ಮಂಜುನಾಥ್ ಭಟ್ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ,ಡಾ. ದೇವಿಪ್ರಸಾದ್ ಕಾನತ್ತೂರ್ ಆಡಳಿತಾಧಿಕಾರಿಗಳು ಶ್ರೀ ಪರಿವಾರ ಪಂಚಲಿಂಗೇಶ್ವರ...
Ad Widget

ಸಮಹಾದಿ : ಅಕ್ರಮ ಮರ ಸಾಗಾಟಕ್ಕೆ ತಡೆ- ಟಿಪ್ಪರ್ ವಶ, ಆರೋಪಿಗಳು ಪರಾರಿ

ಪಂಜ ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಕ್ರಮ ಮರ ಸಾಗಾಟ ಮಾಡುತ್ತಿದ್ದಾಗ ತಡೆದು ವಾಹನ ವಶಪಡಿಸಿಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಸಮಹಾದಿ ಎಂಬಲ್ಲಿ ಅಕ್ರಮವಾಗಿ ಕಿರಾಲ್‍ಬೋಗಿ ಮತ್ತು ಹಲಸು ಜಾತಿಯ ಮರದ ದಿಮ್ಮಿಗಳನ್ನು ಈಚರ್ ಟಿಪ್ಪರ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪಂಜ ವಲಯದ ಎಡಮಂಗಲ ಶಾಲೆಯ ಸಿಬ್ಬಂದಿಗಳು ಹಾಗೂ ರಾತ್ರಿ ಗಸ್ತು...

ಸುಳ್ಯ : ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ

ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಇಂದು ಸುಳ್ಯ ತಾಲೂಕು ಪಂಚಾಯತ್ ವಾಣಿಜ್ಯ ಸಂಕೀರ್ಣದ ಟ್ರಸ್ಟ್ ಕಚೇರಿ ಆವರಣದಲ್ಲಿ ನಡೆಯಿತು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಎನ್ ಜಯಪ್ರಕಾಶ್ ರೈ ಯವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕನ್ನಡ ನಾಡು...

ಸುಳ್ಯದಲ್ಲಿ ರೋಡ್ ರನ್ನರ್ಸ್ ಫುಡ್ ಡೆಲಿವರಿ ಶುಭಾರಂಭ

ಇದೇ ಮೊದಲ ಬಾರಿಗೆ ಸುಳ್ಯದಲ್ಲಿ ರೋಡ್ ರನ್ನರ್ಸ್ ಎಂಬ ಫುಡ್ ಡೆಲಿವರಿ ಸಂಸ್ಥೆ ಇಂದು ಶುಭಾರಂಭಗೊಂಡಿತು. ಸುಳ್ಯ ನಗರ ವ್ಯಾಪ್ತಿಯಲ್ಲಿ ಪ್ರತಿದಿನ ಸಂಜೆ 6.30 ರಿಂದ ರಾತ್ರಿ 10.30 ರ ತನಕ ಫುಡ್ ಡೆಲಿವರಿ ವ್ಯವಸ್ಥೆ ಮಾಡಲಿದ್ದಾರೆ. 8123067957 ಸಂಖ್ಯೆಯ ವಾಟ್ಸಾಪ್ ನಂಬರ್ ಗೆ ಸಂದೇಶ ಕಳುಹಿಸಿದರೆ ಕೂಡಲೇ ನಿಮ್ಮ ಮನೆ ಬಾಗಿಲಿಗೆ ಫುಡ್ ಡೆಲಿವರಿ...

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಹಾಗೂ ಕಾಂಗ್ರೆಸ್ ಸಮಿತಿ ಗ್ರಾಮ ಪಂಚಾಯತ್ ಚುನಾವಣೆ ಉಸ್ತುವಾರಿಗಳ ಮತ್ತು ಗ್ರಾಮ ಅಧ್ಯಕ್ಷರುಗಳು, ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕರು ಸಭೆಯನ್ನು ಇಂದು ಸುಳ್ಯದ ಯೋಜನಾ ಸಂಯುಕ್ತ ಮಂಡಲಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಜಯಪ್ರಕಾಶ್...

ನಿಸ್ವಾರ್ಥ ಸೇವೆಯನ್ನು ಗುರುತಿಸಿ ಗೋಪಾಲ ದುಗ್ಗಲಡ್ಕರಿಗೆ ಗೌರವಾರ್ಪಣೆ

ಸುಳ್ಯ ಕೆ.ಎಸ್.ಆರ್.ಟಿ.ಸಿ ಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೋಪಾಲ ದುಗ್ಗಲಡ್ಕ ಇವರನ್ನು ಸನ್ಮಾನಿಸಲಾಯಿತು. ಇವರು ಈಗ ಕೆ.ಎಸ್.ಆರ್.ಟಿ.ಸಿ. ಯ ನೌಕರನಲ್ಲದಿದ್ದರೂ ತನ್ನದೇ ಸಂಸ್ಥೆ ಎಂಬಂತೆ ಸೇವೆ ಸಲ್ಲಿಸುತ್ತಿದ್ದು ಇವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸುಳ್ಯ ಘಟಕ ಹಾಗೂ ಸಿಬ್ಬಂದಿಗಳ ಪರವಾಗಿ ಹೂ ಗುಚ್ಚ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ಸುಂದರ್ ರಾಜ್,...

ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಜಿತ್ ಶ್ಯಾಮ್ ಚಿಕ್ಮುಳಿ ಹಾಗೂ ವೀಕ್ಷಿತ್ ಕುತ್ಯಾಳ ಇವರಿಂದ ಯೂಟ್ಯೂಬ್ ನಲ್ಲಿ ಗೀತೆ ಬಿಡುಗಡೆ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹೊಸದಾಗಿ ರಚಿಸಲಾದ ಗೀತೆಯನ್ನು ಯೂಟ್ಯೂಬ್ ನಲ್ಲಿ ಟಾಲೆಂಟ್ ಹಂಟರ್ಸ್ ಎಂಬ ಚಾನೆಲ್ ನಲ್ಲಿ ನವಂಬರ್ 1 ರಂದು ಬಿಡುಗಡೆ ಮಾಡಲಾಯಿತು. ನಮ್ಮ‌ ಕನ್ನಡದ ಜನಪ್ರಿಯ ಸಂಸ್ಕೃತಿಯನ್ನು ಎತ್ತಿ ತೋರಿಸುವ ಮೂಲಕ ಹೊಸ ಪ್ರಯತ್ನದಲ್ಲಿ ಗಾಯಕನಾಗಿ ಉಜಿತ್ ಶ್ಯಾಮ್ ಚಿಕ್ಮುಳಿ, ಕೊಳಲಿನಲ್ಲಿ ವೀಕ್ಷಿತ್ ಕುತ್ಯಾಳ ಇವರಿದ್ದು ಉತ್ತಮವಾಗಿ ಮೂಡಿಬಂದಿದೆ. ವೀಕ್ಷಿಸಲು ಇಲ್ಲಿ ಕ್ಲಿಕ್...

ಸುಳ್ಯದ ಇಬ್ಬರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಇಂದು ಮಂಗಳೂರಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯದ ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಣ್ಣ ಬರೆಮೇಲು, ಹಾಗೂ ಪ್ರಗತಿಪರ ಕೃಷಿಕ ವಿಶ್ವನಾಥ ಪೈ ಯವರಿಗೆ ಪ್ರಶಸ್ತಿ ಪ್ರಧಾನ ನಡೆಯಿತು. ಸಂಸದ ನಳೀನ್ ಕುಮಾರ್ ಕಟೀಲ್, ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

ಸುಂಟಿಕೊಪ್ಪದಲ್ಲೊಬ್ಬ ಕನ್ನಡದ ಅಭಿಮಾನಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಮೆರುಗು

ಕೊಡಗಿನ ಸುಂಟಿಕೊಪ್ಪ ಎಂಬಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಥಳೀಯ ನಿವಾಸಿ ಎಂ.ಎಸ್. ರವಿ ಎಂಬುವವರು ಕನ್ನಡದ ಧ್ವಜ ಮತ್ತು ಕನ್ನಡದ ಪೇಟವನ್ನು ಧರಿಸಿ ಪೇಟೆಯಲ್ಲಿ ಸಂಚರಿಸಿ ಜನರಲ್ಲಿ ವಿಶೇಷ ಆಕರ್ಷಣೆಯನ್ನು ಮೂಡಿಸುತ್ತಿದ್ದಾರೆ. ಇವರು ಸತತ 25 ವರ್ಷಗಳಿಂದ ಕನ್ನಡದ ಕಂಪನ್ನು ಬೀರುತ್ತಿದ್ದಾರೆ. ಡಾಕ್ಟರ್ ರಾಜಕುಮಾರ್ ಅಭಿಮಾನಿ ಬಳಗದಲ್ಲಿ ಗುರುತಿಸಿಕೊಂಡು, ಪ್ರಸ್ತುತ ಸುಂಟಿಕೊಪ್ಪ ಡಾಕ್ಟರ್ ಅಂಬೇಡ್ಕರ್ ಸಂಘದ...
Loading posts...

All posts loaded

No more posts

error: Content is protected !!