- Sunday
- April 26th, 2026
ಉಡುಪಿ, ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರಾದ ಧೀರಜ್ ಬೆಳ್ಳಾರೆ ಇವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ (ಕೆಎಬಿಆರ್) ವತಿಯಿಂದ ಜನವರಿ 10, 2025 ರಂದು, ರಾಷ್ಟ್ರೀಯ ದಾಖಲೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಯಿತು. ಇವರು ಸುಳ್ಯ ತಾಲ್ಲೂಕಿನ ಕಳಂಜದ ಯುವ ಮತ್ತು ಉತ್ಸಾಹಭರಿತ ಬರಹಗಾರಾಗಿದ್ದು,"ಸ್ಟೇಟಸ್ ಕಥೆಗಳು" ಎಂಬ ಶೀರ್ಷಿಕೆಯ ಸರಣಿಯಡಿಯಲ್ಲಿ ಜುಲೈ 2020 ರಿಂದ...
ಸ್ವರ್ಣ ಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದರ ನಿರ್ದೇಶಕರಾಗಿರುವ ಸಚಿನ್ ಕುಮಾರ್ ಬಳ್ಳಡ್ಕ ಮತ್ತು ಧರ್ಮಪಾಲ ಕೊಯಿಂಗಾಜೆ ಅವರಿಗೆ ಜ.22 ರಂದು ಅಭಿನಂದನೆ ಸಲ್ಲಿಸಲಾಯಿತು. ಸಚಿನ್ ಕುಮಾರ್ ಬಳ್ಳಡ್ಕ ರವರು ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೇಶಕರಾಗಿ ಚುನಾಯಿತರಾಗಿ ಈಗ ಉಪಾಧ್ಯಕ್ಷರಾಗಿ...
ಉಬರಡ್ಕ ಶ್ರೀ ನರಸಿಹ ಶಾಸ್ತಾವು ದೇವರ ವಾರ್ಷಿಕ ಜಾತ್ರಾ ಉತ್ಸವವು ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಸಮಾಲೋಚನಾ ಸಭೆಯು ಜ. 20 ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಿ.ಎಸ್ ಗಂಗಾಧರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಉಬರಡ್ಕ, ಕೋಶಾಧಿಕಾರಿಯಾಗಿ ಶೀನಪ್ಪ ಗೌಡ ಸೂರ್ಯಮನೆ, ಸಂಚಾಲಕರಾಗಿ ವಿಜಯಕುಮಾರ್ ಉಬರಡ್ಕ, ಇವರನ್ನು ಆಯ್ಕೆ ಮಾಡಲಾಯಿತು. ಈ...
2025ನೇ ಇಸವಿಯ ರಸ್ತೆ ಸುರಕ್ಷಾ ಮಾಸಿಕ ಆಚರಣೆಯ ಘೋಷ ವಾಕ್ಯ “ಸಡಕ್ ಸುರಕ್ಷಾ- ಜೀವನ್ ರಕ್ಷಾ” ಆಗಿರುತ್ತದೆ. ಇದರ ಆಶಯ “ರಸ್ತೆ ಸುರಕ್ಷಾ” ನಿಯಮಗಳನ್ನು ಪಾಲಿಸಿ, ಜೀವವನ್ನು ರಕ್ಷಿಸಿಕೊಳ್ಳಿ ಎಂಬುದಾಗಿದೆ. ಏನಿದು ರಸ್ತೆ ಸುರಕ್ಷಾ ನಿಯಮಗಳು? ರಸ್ತೆ ಸುರಕ್ಷಾ ನಿಯಮಗಳನ್ನು ವಾಹನ ಚಾಲಕರು ಮತ್ತು ಪಾದಾಚಾರಿಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡೇ ರೂಪಿಸಲಾಗಿದೆ. ರಸ್ತೆ ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ...
ಸುಳ್ಯ: ಅಜ್ಜಾವರ ಗ್ರಾಮದ ಶಾಂತಿಮಜಲು ಎಂಬಲ್ಲಿನ ಅಡ್ಪಂಗಾಯ ಶಾಲೆಯ 7ನೇ ತರಗತಿ ವಿಧ್ಯಾರ್ಥಿಅನ್ವಿತ್ ಜ .22 ಮಧ್ಯಾಹ್ನ ನಂತರ ಕಾಣೆಯಾಗಿರುತ್ತಾನೆ ಎಂದು ತಿಳಿದುಬಂದಿದ್ದು ಮೇಲೆ ಕಾಣಿಸಿದ ಬಾಲಕನನ್ನು ಎಲ್ಲಿಯಾದರೂ ಕಂಡುಬಂದಲ್ಲಿ 7259338289 ,7483136835 ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ವಿನಂತಿಸಲಾಗಿದೆ.
ಸುಳ್ಯ: ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯ ನಿರ್ವಹಿಸುವಂತೆ ಆದೇಶ ನೀಡಲಾಗಿದೆ . ಆದೇಶದಲ್ಲೇನಿದೆ ಗೊತ್ತಾ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ನಿರ್ದೇಶನ ,ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ...
ಸುಳ್ಯ ಜ್ಯೋತಿ ಸರ್ಕಲ್ ಬಳಿ ಇರುವ ಸ. ಮಾ. ಹಿ. ಪ್ರಾ. ಶಾಲೆ ಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಿದೂಷಿ ಶ್ಯಾಮಲ ಕೇಶವ್ ಸುಳ್ಯ ಇವರು ಸಂಗೀತ ತರಗತಿ ನಡೆಸಲಿದ್ದು ಇದರ ಉದ್ಘಾಟನಾ ಸಮಾರಂಭ 21.01.24 ರಂದು ನಡೆಯಿತು. ವೇದಿಕೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಮತಾ, ಸಂಗೀತ ಶಿಕ್ಷಕಿ ಶ್ರೀಮತಿ ಶ್ಯಾಮಲಾ ಕೇಶವ್, ಮುಖ್ಯ ಶಿಕ್ಷಕಿ...
ಕಳೆದೊಂದು ವಾರದಿಂದ ಬೆಳ್ಳಾರೆ - ನಿಂತಿಕಲ್ಲು ರಸ್ತೆಯ ಬೆಳ್ಳಾರೆ ಅಜಪಿಲ ದೇವಸ್ಥಾನದ ಬಳಿ ರಸ್ತೆ ಮಧ್ಯೆ ಜೆಸಿಬಿಯೊಂದು ನಿಂತಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದ್ದು, ಅನಾಹುತ ಸಂಭವಿಸುವ ಮೊದಲು ತೆರವು ಮಾಡಲು ಸಂಬಂಧಪಟ್ಟವರು ಗಮನಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗುತ್ತಿಗಾರು ಪೇಟೆಯಲ್ಲಿ ಸರಣಿ ಕಳ್ಳತನಗಳನ್ನು ಮಾಡಿದ ವ್ಯಕ್ತಿಯನ್ನು ಸುಬ್ರಹ್ಮಣ್ಯ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ.ಕೊಲ್ಲಮೊಗ್ರು ಗ್ರಾಮದ ನಿವಾಸಿ ಕರುಣಾಕರ ಈ ಸರಣಿ ಕೃತ್ಯಗಳನ್ನು ನಡೆಸಿದ್ದ ಎಂದು ತಿಳಿದುಬಂದಿದ್ದು, ಪೋಲೀಸರು ಮಹಜರು ಕಾರ್ಯ ಪ್ರಾರಂಭಿಸಿದ್ದಾರೆ.ಸಿಸಿಟಿವಿ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ಅವಭೃತ ಸ್ನಾನದ ಮೆರವಣಿಗೆಯ ಸಂದರ್ಭದಲ್ಲಿ ಡಾ.ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮದರ್ಜೆ ಕಾಲೇಜಿನ ಬಳಿ ಶ್ರೀ ದೇವರಿಗೆ ಪೂಜೆ ಸಲ್ಲಿಸಲಾಯಿತು. ಹಾಗೂ ಭಕ್ತಾದಿಗಳಿಗೆ ತಂಪುಪಾನೀಯ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಬಾಲಸುಬ್ರಮಣ್ಯ ಪಿ ಎಸ್ ಹಾಗೂ ಉಪನ್ಯಾಸಕರಾದ ಯಶೋದ ಹಾಗೂ ಪೊನ್ನಪ್ಪ ಹಾಗೂ ಕಚೇರಿ ಸಿಬ್ಬಂದಿಗಳಾದ ಗೀತಾ ಮತ್ತು ಮೋಹನದಾಸ್ಹಾಗೂ...
Loading posts...
All posts loaded
No more posts
