ಸುಳ್ಯ ಅಟೋ ಚಾಲಕ ಯೂನಿಯನ್ ವತಿಯಿಂದ ಆಯುಧ ಪೂಜಾ

ಸುಳ್ಯ ಆಟೋ ಚಾಲಕ ಯೂನಿಯನ್ ವತಿಯಿಂದ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಆಟೋ ನಿಲ್ದಾಣದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು.ಪುರೋಹಿತ ಬ್ರಹ್ಮ ಶ್ರೀ ನಾಗರಾಜ ಭಟ್ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳು,ಸದಸ್ಯರುಗಳು, ಉಪಸ್ಥಿತರಿದ್ದರು.

ಪಂಜದಲ್ಲಿ ಸ್ಪರ್ಶ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಾಯೆನ್ಸಸ್ ಶುಭಾರಂಭ

ಪಂಜದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಹತ್ತಿರ ಇರುವ ಶ್ರೀಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಪುರುಷೋತ್ತಮ ಎರ್ಮಾಯಿಲ್ ಮಾಲಕತ್ವದ ಸ್ಪರ್ಶ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಾಯೆನ್ಸಸ್ ಮಾರಾಟ ಮಳಿಗೆಯು ಅ.23 ರಂದು ಶುಭಾರಂಭಗೊಂಡಿತು. ಮಳಿಗೆಯನ್ನು ಹಿರಿಯ ಧಾರ್ಮಿಕ ಮುಂದಾಳು ಹಾಗೂ ಮಧ್ಯಸ್ಥರಾದ ಶ್ರೀ ತಿಮ್ಮಪ್ಪ ಗೌಡ ಪುತ್ಯ ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಂಜ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಶ್ರೀ...
Ad Widget

ಬಳ್ಪದಲ್ಲಿ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಶುಭಾರಂಭ

ಬಳ್ಪ ಮುಖ್ಯ ರಸ್ತೆಯಲ್ಲಿರುವ ಅಜಿತ್ ರಿಂಗ್ ವರ್ಕ್ಸ್ ಹತ್ತಿರ ಪ್ರವೀಣ್ ಮಾವಿನಗೊಡ್ಲುರವರ ಮಾಲಕತ್ವದ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಅ.23 ರಂದು ಗಣಹೋಮ ನಡೆದು ಶುಭಾರಂಭಗೊಂಡಿತು. ಇಲ್ಲಿ ಎಲೆಕ್ಟ್ರಿಕಲ್ ವಯರಿಂಗ್, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಮತ್ತು ರಿವೈಂಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಹಾಗೂ ಇನ್ ವರ್ಟರ್ ಅಳವಡಿಸಿಕೊಡಲಾಗುವುದು ಎಂದು ಮಾಲಕರಾದ ಪ್ರವೀಣ್ ಮಾವಿನಗೊಡ್ಲು ತಿಳಿಸಿದ್ದಾರೆ.

ಯುವತಿ ನೇಣು ಬಿಗಿದು ಆತ್ಮ ಹತ್ಯೆ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಗಂಗಾಧರ ನಾಯ್ಕ ಅವರ ಪುತ್ರಿ ಪ್ರಸನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. .ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ ತಾಯಿ ಸಹೋದರನ್ನು ಅಗಲಿದ್ದಾರೆ.

ನೂತನವಾಗಿ ನಿರ್ಮಾಣಗೊಂಡು ಲೋಕಾರ್ಪಣೆಗೆ ಸಿದ್ಧಗೊಂಡ ಆಯುರ್ಧಾಮ ಆಯುರ್ವೇದ ಆಸ್ಪತ್ರೆ

ಸುಳ್ಯದಲ್ಲಿ ಸುಮಾರು 11 ವರ್ಷಗಳಿಂದ ಜನರಿಗೆ ಉತ್ತಮ ಸೇವೆಯ ಮುಖಾಂತರ ಆಯುರ್ಧಾಮ ಆಸ್ಪತ್ರೆ ಆಯುರ್ವೇದ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸುವುದರ ಜತೆಗೆ ಜನಮನ್ನಣೆ ಗಳಿಸಿದೆ. ಹಲವಾರು ವಿದೇಶಿಗರು ಕೂಡ ಆಯುರ್ವೇದ ಚಿಕಿತ್ಸೆ ಹಾಗೂ ಅಧ್ಯಯನಕ್ಕಾಗಿ ಇಲ್ಲಿಗೆ ಆಗಮಿಸಿದ್ದರು.‌ ಇದೀಗ ಸುಳ್ಯದ ಹಳೆಗೇಟಿನಲ್ಲಿ ನೂತನವಾಗಿ ಸಕಲ ವ್ಯವಸ್ಥೆಗಳೊಂದಿಗೆ ಆಸ್ಪತ್ರೆ ಸಂಕೀರ್ಣ ನಿರ್ಮಾಣಗೊಂಡು ಜನಸೇವೆ ಸಿದ್ದಗೊಂಡಿದೆ. ಅ.18 ಮತ್ತು...

ಜಯನಗರ : ಬಿಜೆಪಿ ವಾರ್ಡ್ ಸಮಿತಿ ರಚನೆ – ಅಧ್ಯಕ್ಷ ಸುರೇಂದ್ರ ಕಾಮತ್, ಕಾರ್ಯದರ್ಶಿ ಜಗದೀಶ್ ಜಯನಗರ

ಜಯನಗರ ಮಿಲಿಟರಿ ಗ್ರೌಂಡ್ ಸೇರಿ 19ನೇ ವಾರ್ಡಿನ ಬಿಜೆಪಿ ವಾರ್ಡ್ ಸಮಿತಿ ರಚನೆ ನಗರ ಅಧ್ಯಕ್ಷ ಐ.ಬಿ. ಚಂದ್ರಶೇಖರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ನಗರ ಸಮಿತಿಯ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡು ಪನ್ನೆ,, ಸುಳ್ಯ ನ ಪಂ ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಶಿಲ್ಪ ಸುದೇವ್, ಪಕ್ಷದ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ನಡಿದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಆಗ್ರಹಿಸಿ ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಶ್ರೀನಾಥ್ ಟಿಎಸ್ ದೂರು – ಸೇವೆಯಿಂದ ವಜಾಗೊಳಿಸಿರುವ ಹಿನ್ನೆಲೆ ಸುಳ್ಳು ಆರೋಪ ಎಂದು ರವೀಂದ್ರ ಎಂ.ಎಚ್ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ಮೇಲೆ ದೇವಸ್ಥಾನದ ಆಭರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ನಿವಾಸಿಯಾದ ಶ್ರೀನಾಥ್ ಟಿ.ಎಸ್. ಅವರು ಮಂಗಳೂರು ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್ ಅಧೀಕ್ಷರಲ್ಲಿ ದೂರು ದಾಖಲಿಸಿ, ತನಿಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ. ಹಾಗೂ ದೇಗುಲದ ಮಾಜಿ ಮುಖ್ಯ...

ಅ.25 : ಗುತ್ತಿಗಾರು ಸೊಸೈಟಿ ವತಿಯಿಂದ “ಸುವರ್ಣ ಸಹಕಾರ ಮಾರ್ಟ್” ದಿನಸಿ ವ್ಯಾಪಾರ ಮಳಿಗೆ ಆರಂಭ

ಗುತ್ತಿಗಾರು ಪ್ರಾ‌ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ದಿನಸಿ ವ್ಯಾಪಾರ ಮಳಿಗೆ *ಸುವರ್ಣ ಸಹಕಾರ ಮಾರ್ಟ್* ಅ.25 ರಂದು ಶುಭಾರಂಭಗೊಳ್ಳಲಿದೆ. ಸಂಘದ ಸದಸ್ಯರು ಕೊವಿಡ್ ನಿಯಮಗಳನ್ನು ಪಾಲಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು  ಯಶಸ್ವಿಗೊಳಿಸಬೇಕೆಂದು ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ತಿಳಿಸಿದ್ದಾರೆ.

ಅ. 23 : ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಬಿಳಿನೆಲೆಯಲ್ಲಿ ಸಮಾಲೋಚನ ಸಭೆ

ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಕಾರಿಣಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಸಮಾಲೋಚನ ಸಭೆ ಅ.23ರಂದು ಕಡಬ ತಾಲೂಕಿನ ಬಿಳಿನೆಲೆಯಲ್ಲಿ ಪೂರ್ವಾಹ್ನ 10 ಗಂಟೆ ಗೆ ನಡೆಯಲಿದೆ. ಈ ಭಾಗದ ಗ್ರಾಮಸ್ಥರು ಹೆಚ್ಚಿನ ಭಾಗವಹಿಸುವಂತೆ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ನ.ಪಂ.ಮುಖ್ಯಾಧಿಕಾರಿ ಮತ್ತಡಿ ವರ್ಗಾವಣೆ – ಸುಳ್ಯಕ್ಕೆ ಮತ್ತೆ ಎಂ.ಆರ್.ಸ್ವಾಮಿ

ಸುಳ್ಯ ನಗರ ಪಂಚಾಯತ್ ನಲ್ಲಿ ಕಳೆದ ಎರಡು ವರ್ಷಗಳಿಂದ ಮುಖ್ಯಾಧಿಕಾರಿಯಾಗಿದ್ದ ಮತ್ತಡಿಯವರಿಗೆ ವರ್ಗಾವಣೆ ಆದೇಶವಾಗಿದ್ದು, ಸುಳ್ಯಕ್ಕೆ ಎಂ.ಆರ್.ಸ್ವಾಮಿ ಆಗಮಿಸಲಿದ್ದಾರೆ. ಇವರು ಮೈಸೂರು ಮಹಾನಗರಪಾಲಿಕೆಯ ಸಹಾಯಕ ಕಂದಾಯ ಆಧಿಕಾರಿಯಾಗಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆ ಎಮ್.ಆರ್. ಸ್ವಾಮಿಯವರು ಸುಳ್ಯ ನಗರ ಪಂಚಾಯತ್ ಮುಖ್ಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು
Loading posts...

All posts loaded

No more posts

error: Content is protected !!