- Monday
- July 13th, 2026
ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ,ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು,ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ,ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಪುತ್ತೂರು, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇವುಗಳ ಸಹಯೋಗದೊಂದಿಗೆ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಅ.28 ರಿಂದ ನ 03 ರವರೆಗೆ ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್...
ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಮತ್ತು ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 49 ನೇ ವರ್ಷದ ದಸರಾ ಕಾರ್ಯಕ್ರಮದಲ್ಲಿ ಅ.21 ರಂದು ಸುಳ್ಯ ದ ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ) ಸುಳ್ಯ ಇದರ ವತಿಯಿಂದ ಕೊರೋನಾ ಜಾಗೃತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ವಾರಿಯರ್ಸ್...
ಕಲ್ಮಕಾರು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅ.21 ರಂದು ಆರನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂವ ಗಣಪತಿ ಹವನ, ಶ್ರೀ ಸತ್ಯನಾರಾಯಣ ದೇವರ ಪೂಜೆ, ದುರ್ಗಾ ಪೂಜೆ ಹಾಗೂ ವಾಹನ ಪೂಜೆ ಪುರೋಹಿತರಾದ ವೆಂಕಟ್ರಮಣ ಭಟ್ ಬಳ್ಳಕ ಇದರ ನೇತೃತ್ವದಲ್ಲಿ ನಡೆಯಿತು.
ದೇವಚಳ್ಳ ಗ್ರಾಮದ ದೇವ ರಸ್ತೆಯ ಬದಿಯ ಗಿಡಗಂಟಿ ಹಾಗೂ ಹುಲ್ಲು ಬೆಳೆದು ವಾಹನ ಹಾಗೂ ಪಾದಾಚಾರಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತೀಚೆಗೆ ಅಪಘಾತಗಳು ಸಂಭವಿಸಿತ್ತು. ಇದನ್ನು ಗಮನಿಸಿದ ಚಿದಾನಂದ ಪೇರಳಕಜೆ ಮತ್ತು ಅವರ ಬಳಗ ಶ್ರಮದಾನ ನಡೆಸಿ ರಸ್ತೆ ಬದಿ ಸ್ವಚ್ಛಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಡಬ ಪಂಜ ಮುಖ್ಯರಸ್ತೆಯಲ್ಲಿರುವ ಓಂಕಾರ ಸಂಕೀರ್ಣದಲ್ಲಿ ಪಂಚಲಿಂಗೇಶ್ವರ ಕೂಲಿಂಗ್ ಸೊಲ್ಯೂಷನ್ ಶುಭಾರಂಭಗೊಂಡಿದೆ. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಸಂಸ್ಥೆಯ ಸಂಚಾಲಕರು, ವಿದ್ಯಾಭಾರತಿ ಕರ್ನಾಟಕ ರಾಜ್ಯದ ನೈತಿಕ ಆಧ್ಯಾತ್ಮಿಕ ಶಿಕ್ಷಣ ಪ್ರಮುಖರು ಆಗಿರುವ ಎಂ. ವೆಂಕಟ್ರಮಣ ರಾವ್, ಗುರುಪ್ರಸಾದ್ ತೋಟ , ಸಂಕೀರ್ಣ ಮಾಲಕರಾದ ಕೃಷ್ಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿ ಎಲ್ಲಾ ರೀತಿಯ ಎ.ಸಿ, ಎಲ್ಲಾ ಕಂಪನಿ...
ತೋಟಗಾರಿಕಾ ಇಲಾಖೆ ಸುಳ್ಯ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು ಇದರ ಸಹಯೋಗದೊಂದಿಗೆ ಮಧುವನ ಹಾಗೂ ಜೇನು ಸಾಕಾಣಿಕಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಜೇನು ಕೃಷಿ ಬಗ್ಗೆ ರೈತರಿಗೆ ತರಬೇತಿ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಿರಿಸೌಧ ಸಭಾಭವನದಲ್ಲಿ ಅ.21 ನಡೆಯಿತು.ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ...
ಶಾಲಾ ಕಾಲೇಜುಗಳ ತರಗತಿಗಳು ಆನ್ಲೈನ್ ಮುಖಾಂತರ ನಡೆಯುತ್ತಿದ್ದು, ಸುಳ್ಯದ ಹಲವು ಗ್ರಾಮೀಣ ಪ್ರದೇಶಗಳಲ್ಲಿ (ಬಾಳುಗೋಡು, ಪೆರುವಾಜೆ) ನೆಟ್ವರ್ಕ್ ಸಮಸ್ಯೆಯಾಗುತ್ತಿದ್ದು, ಇದನ್ನು ಶೀಘ್ರ ಪರಿಹರಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಸುಳ್ಯ ಏರಿಯಾ ಸಮಿತಿ ನಿಯೋಗವು ತಹಶಿಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಪ್ರತಿಯೊಬ್ಬರೂ ಕಡ್ಡಾಯವಾಗಿ ಆನ್ಲೈನ್ ತರಗತಿಗಳಿಗೆ ಹಾಜರಾಗಬೇಕು. ಇಲ್ಲದಿದ್ದರೆ ಪರೀಕ್ಷಾ ಸಮಯದಲ್ಲಿ...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಮಣ್ಯ ಘಟಕದ ವತಿಯಿಂದ ನಗರ ಅಭ್ಯಾಸ ವರ್ಗ ಅ.27 ರಂದು ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಬಳ್ಪ ಮುಖ್ಯ ರಸ್ತೆಯಲ್ಲಿರುವ ಅಜಿತ್ ರಿಂಗ್ ವರ್ಕ್ಸ್ ಹತ್ತಿರ ಪ್ರವೀಣ್ ಮಾವಿನಗೊಡ್ಲುರವರ ಮಾಲಕತ್ವದ ತ್ರಿಶೂಲಿನಿ ಎಲೆಕ್ಟ್ರಿಕಲ್ಸ್ ಅ.23 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ಎಲೆಕ್ಟ್ರಿಕಲ್ ವಯರಿಂಗ್, ಎಲೆಕ್ಟ್ರಿಕಲ್ ಉಪಕರಣಗಳ ದುರಸ್ತಿ ಮತ್ತು ರಿವೈಂಡಿಂಗ್ ಕೆಲಸಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುವುದು ಹಾಗೂ ಇನ್ ವರ್ಟರ್ ಅಳವಡಿಸಿಕೊಡಲಾಗುವುದು ಎಂದು ಮಾಲಕರು ತಿಳಿಸಿದ್ದಾರೆ.
ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ವತಿಯಿಂದ ಸರಳ ಶಾರದೋತ್ಸವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಶಾರದಾ ದೇವಿಯ ಮೆರವಣಿಗೆ ಹಾಗೂ ಪ್ರತಿಷ್ಟಾಪನೆ ಕಾರ್ಯಕ್ರಮ ಇಂದು ನಡೆಯಿತು. ಒಂದು ದಿನಕ್ಕೆ ಸೀಮಿತಗೊಂಡಿರುವ ಈ ಬಾರಿಯ ಶಾರದೋತ್ಸವ ಇಂದು ಸಂಜೆ ಶಾರದ ವಿಸರ್ಜನೆ ಯೊಂದಿಗೆ ಸಮಾಪನಗೊಳ್ಳಲಿದೆ.
Loading posts...
All posts loaded
No more posts
