ಕರಿಕ್ಕಳ : ಪ್ರಗತಿ ಎಂಟರ್ ಪ್ರೈಸಸ್ ಶುಭಾರಂಭ

ಕರಿಕ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಾಯಿಕೃಪಾ ಸಂಕೀರ್ಣದಲ್ಲಿ, ಶ್ರೀ ರಾಮಚಂದ್ರ ಮಡಪ್ಪಾಡಿಯವರ ಮಾಲಕತ್ವದ ಪ್ರಗತಿ ಎಂಟರ್ ಪ್ರೈಸಸ್ ಅ.19ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಯಾವುದೇ ಮಿಶ್ರಣವಿಲ್ಲದ ಪರಿಶುದ್ಧ ಕೊಬ್ಬರಿ ಎಣ್ಣೆ, ಶೇಂಗಾ ಎಣ್ಣೆ, ಸೂರ್ಯಕಾಂತಿ ಎಣ್ಣೆ, ಎಳ್ಳೆಣ್ಣೆ, ಕುಸುಬಿ ಎಣ್ಣೆ, ಸಾಸಿವೆ ಎಣ್ಣೆ, ತಾಳೆ ಎಣ್ಣೆ ಸೇರಿದಂತೆ ವಿವಿಧ ತೆರನಾದ ಎಣ್ಣೆಯನ್ನು ಕ್ಲಪ್ತ ಸಮಯದಲ್ಲಿ ತಯಾರಿಸಲಾಗುವುದೆಂದು ಮಾಲಕರು ತಿಳಿಸಿದ್ದಾರೆ.

ಕೃಷಿ ಮಾರುಕಟ್ಟೆ

*ಕ್ಯಾಂಪ್ಕೋ ನಿಯಮಿತ ಮಂಗಳೂರು.*                  ಶಾಖೆ  :  *ಸುಳ್ಯ.*           (19.12.2020   ಶನಿವಾರ) *ಅಡಿಕೆ ಧಾರಣೆ*ಹೊಸ ಅಡಿಕೆ          235 - 325ಹಳೆ ಅಡಿಕೆ             330 - 380ಡಬಲ್ ಚೋಲ್     330 - 385 ಹೊಸ ಫಠೋರ     175 - 265ಹಳೆ ಫಠೋರ        250 - 325 ಹೊಸ ಉಳ್ಳಿಗಡ್ಡೆ    110 - 200ಹಳೆ ಉಳ್ಳಿಗಡ್ಡೆ       150 - 210...
Ad Widget

ಅ.23 : ಪಂಜದಲ್ಲಿ ಸ್ಪರ್ಶ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಾಯೆನ್ಸಸ್ ಶುಭಾರಂಭ

ಪಂಜದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಹತ್ತಿರ ಇರುವ ಶ್ರೀಕೃಷ್ಣ ಕಾಂಪ್ಲೆಕ್ಸ್ ನಲ್ಲಿ ಪುರುಷೋತ್ತಮ ಎರ್ಮಾಯಿಲ್ ಮಾಲಕತ್ವದ ಸ್ಪರ್ಶ ಎಲೆಕ್ಟ್ರಾನಿಕ್ಸ್ & ಹೋಮ್ ಅಪ್ಲಾಯೆನ್ಸಸ್ ಮಾರಾಟ ಮಳಿಗೆಯು ಅ.23 ರ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ. ಬೆಳಗ್ಗೆ 10.30 ಕ್ಕೆ ಮಳಿಗೆಯು ಶುಭಾರಂಭಗೊಳ್ಳಲಿದ್ದು , ಹಿರಿಯ ಧಾರ್ಮಿಕ ಮುಂದಾಳು ಶ್ರೀ ತಿಮ್ಮಪ್ಪ ಗೌಡ ಪುತ್ಯ ಉದ್ಘಾಟನೆಗೈಯಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಂಜ ಗ್ರಾ.ಪಂ.ಮಾಜಿ...

ಕೊಲ್ಲಮೊಗ್ರ ಜಾಲುಮನೆ ಕಿರುಸೇತುವೆ ತಾ.ಪಂ. ಸದಸ್ಯ ಉದಯ ಕೊಪ್ಪಡ್ಕ ನೇತೃತ್ವದಲ್ಲಿ ದುರಸ್ತಿ

ಕೊಲ್ಲಮೊಗ್ರ ದಿಂದ ಜಾಲುಮನೆ ಸಂಚರಿಸುವ ಕಿರುಸೇತುವೆ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಸೇತುವೆಯ ಒಂದು ಬದಿಯ ಮಣ್ಣು ಕುಸಿತಗೊಂಡು ಸಂಚಾರಕ್ಕೆ ತಡೆಯಾಗಿತ್ತು. ಕೂಡಲೇ ಸಮಸ್ಯೆಗೆ ಸ್ಪಂದಿಸಿದ ಕೊಲ್ಲಮೊಗ್ರು ಬಿ.ಜೆ.ಪಿಯ ಕಾರ್ಯಕರ್ತರು ಮತ್ತು ಮುಖಂಡರು ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕರವರಿಗೆ ತಿಳಿಸಿ ಶೀಘ್ರ ದುರಸ್ತಿ ಗೆ ಮನವಿ ಮಾಡಿದ್ದರು. ಕೂಡಲೇ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ...

ವಿಹಿಂಪ : ಮುಕ್ಕೂರು ಕುಂಡಡ್ಕ ಛತ್ರಪತಿ ಶಾಖೆ ಉದ್ಘಾಟನೆ, ಕರಸೇವಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷದ್ ಭಜರಂಗದಳದ ನೂತನ ಮುಕ್ಕೂರು - ಕುಂಡಡ್ಕ ಛತ್ರಪತಿ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಅ.18 ರಂದು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ನಡೆಯಿತು. ಅಯೋಧ್ಯಾ ಕರಸೇವಕರಾದ ಯಶೋಧ ಪ್ರಭು ಏನಡ್ಕ ಪೆರುವಾಜೆ ಇವರು ಉದ್ಘಾಟಿಸಿದರು. ಭಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತಡ್ಕ ದಿಕ್ಸೂಚಿ ಭಾಷಣಗೈದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಭಜರಂಗದಳ ಸಂಯೋಜಕರಾದ ಶ್ರೀಧರ್...

ಸುಳ್ಯದ ವಸತಿಗೃಹದಲ್ಲಿ ಐವರ್ನಾಡಿನ ಹುಡುಗ ಬೆಳ್ತಂಗಡಿಯ ಹುಡುಗಿ ಆತ್ಮಹತ್ಯೆ

ಸುಳ್ಯ ನಗರದ ಖಾಸಗಿ ವಸತಿಗೃಹವೊಂದರಲ್ಲಿ ಹುಡುಗ ಮತ್ತು ಹುಡುಗಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಘಟನೆ ಇಂದು ವರದಿಯಾಗಿದೆ . ಹುಡುಗ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದುಬಂದಿದ್ದು , ಹುಡುಗಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ...

ರಂಗಮನೆಯಲ್ಲಿ ಮೋಹನ ಸೋನರಿಗೆ ನುಡಿನಮನ

ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ಅಗಲಿದ ಮಹಾನ್ ಕಲಾವಿದ ಮೋಹನ ಸೋನರಿಗೆ ರಂಗಗೀತೆ ಗಾಯನ- ನುಡಿ ನಮನ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಮಾತನಾಡಿ " ಸೋನಾರ ಸಾವು ಸಾವಲ್ಲ. ಅದು ಬದುಕಿನ ಮುಂದುವರಿಕೆ. ಪಂಪ ರನ್ನ ಕುಮಾರವ್ಯಾಸರಂತೆ ಸೋನ ಕೂಡಾ ಸದಾ...

ಬಜರಂಗದಳ ಕುಂಡಡ್ಕ-ಮುಕ್ಕೂರು ಶಾಖೆಯ ಸಂಯೋಜಕರಾಗಿ ಪ್ರಸಾದ್ ಎನ್

ಮುಕ್ಕೂರು‌: ಮುಕ್ಕೂರು ಕುಂಡಡ್ಕ ಬಜರಂಗದಳ ಛತ್ರಪತಿ ಶಾಖೆಯ ಸಂಯೋಜಕ್ ಆಗಿ ಪ್ರಸಾದ್ ಎನ್ ಕುಂಡಡ್ಕ ಆಯ್ಕೆಯಾಗಿದ್ದಾರೆ.ಅ.18 ರಂದು ಪೆರುವಾಜೆ ಜೆಡಿ‌ ಆಡಿಟೋರಿಯಂ ‌ನಲ್ಲಿ ಪದಗ್ರಹಣ ನಡೆಯಿತು. ಸಹ ಸಂಯೋಜಕ್ ರಾಗಿ ರಮೇಶ್ ಕುಂಡಡ್ಕ, ಗೋ-ರಕ್ಷಾ ಪ್ರಮುಖ್ ರಾಗಿ ಪ್ರಸಾದ್ ಕುಂಡಡ್ಕ, ಆನಂದ ಜಾಲ್ಪಣೆ, ಸುರಕ್ಷಾ ಪ್ರಮುಖ್ ವಾಸುಕುಂಡಡ್ಕ , ಅಖಡ್ ಪ್ರಮುಖ್ -ವಿಶ್ವನಾಥ ಕಂಪವಿದ್ಯಾರ್ಥಿ ಪ್ರಮುಖ್...

ಸಮಾಜದಲ್ಲಿ ಮಹಿಳೆಯರು ಸಾಮಾಜಿಕ ಬಲಾಢ್ಯತೆಯನ್ನು ಸಾಧಿಸಬೇಕು – ಯಶೋಧ ರಾಮಚಂದ್ರ

ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರ ಸಂಪಾಜೆ ಕೊಡಗು, ಮಹಿಳಾ ಮೋರ್ಚಾ ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಜಾಗೃತಿ ಸಮಾವೇಶವು ಸಂಪಾಜೆಯ ಕೊಯನಾಡು ಗಣೇಶ ಕಲಾ ಮಂದಿರದಲ್ಲಿ ಅ.18 ರಂದು ಸಭೆ ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನಾಂಗಿ ಕಂಜಿಪಿಲಿ, ಅಧ್ಯಕ್ಷರು ಮಹಿಳಾ ಮೋರ್ಚಾ ಸಂಪಾಜೆ, ಮುಖ್ಯ ಅತಿಥಿಗಳಾಗಿ ಯಶೋಧ ರಾಮಚಂದ್ರ, ನಿವೃತ್ತ ಪ್ರಾಂಶುಪಾಲರು, ಸುಳ್ಯ...

ಪಂಜ: ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರತಾಪ್ ಸಿಂಹ ನಾಯಕ್ ಭೇಟಿ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅ.18 ರಂದು ಭೇಟಿ ನೀಡಿದರು. ಇವರಿಗೆ ಶಾಲುಹೊದಿಸಿ ದೇವರ ಪ್ರಸಾದವನ್ನು ಅರ್ಚಕರಾದ ನಾಗರಾಜ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್, ಲಿಗೋಧರ ಆಚಾರ್ಯ, ಚೆನ್ನಕೇಶವ ಆಚಾರ್ಯ, ಲೋಕೇಶ್ ಬರಮೇಲು ಹಾಗೂ ನಾರಾಯಣ ಕೃಷ್ಣ ನಗರ...
Loading posts...

All posts loaded

No more posts

error: Content is protected !!