ಜ.19 : ಏನೇಕಲ್ಲಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ (ಅಂದತ್ವ ನಿವಾರಣ ವಿಭಾಗ)ಮಂಗಳೂರು ಹಾಗೂ ಹಲವು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಂಗಣದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ನಡೆಸಲಾಗುವುದು. ಇದರ ಪ್ರಯೋಜನವನ್ನು ಎಲ್ಲ ಸಾರ್ವಜನಿಕರು, ಸಂಘ ಸಂಸ್ಥೆಯವರು, ಪಡೆದುಕೊಳ್ಳಬೇಕಾಗಿ ಸುಬ್ರಹ್ಮಣ್ಯ ರೋಟರಿ...

ಜಿ. ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ವಜ್ರಾಭರಣಗಳ ಉತ್ಸವ ಜ.26 ವರೆಗೆ

ಜಿ ಎಲ್ ಆಚಾರ್ಯ ಜ್ಯುವೆಲ್ಲರಿ ಮಳಿಗೆಯಲ್ಲಿ ಗ್ಲೋ ಫೆಸ್ಟ್ ಡಿ.23 ರಿಂದ ಪ್ರಾರಂಭವಾಗಿದ್ದು ಜ.26 ರವರೆಗೆ ನಡೆಯಲಿದೆ. ವಜ್ರಾಭರಣ ಗಳು ರೂ.3,500 ರಿಂದ ಪ್ರಾರಂಭ ಗೊಂಡಿರುತ್ತದೆ. ವಜ್ರಾಭರಣಗಳ ಮೇಲೆ ರೂ.8,000 ವರೆಗೆ ( ಪ್ರತೀ ಕ್ಯಾರೆಟ್ ಮೇಲೆ ರಿಯಾಯಿತಿ) ಹಾಗೂ ರೂ.25,000 ಕ್ಕಿಂತ ಮೇಲ್ಪಟ್ಟ ಖರೀದಿಗೆ ವಿಶೇಷ ಮತ್ತು ಆಕರ್ಷಕ ಉಡುಗೊರೆಯನ್ನು ನೀಡಲಾಗುವುದು. ಗ್ರಾಹಕರು ಈ...
Ad Widget

ಕಲ್ಮಡ್ಕ: ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ – ಸಮನ್ವಯ ರಂಗ ಮತ್ತೆ ಆಡಳಿತಕ್ಕೆ

ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಜ.15 ರಂದು ಚುನಾವಣೆ ನಡೆದು ಫಲಿತಾಂಶ ಪ್ರಕಟಗೊಂಡಿದ್ದು ಉದಯಕುಮಾರ್ ಬೆಟ್ಟ ನೇತೃತ್ವದ ಸಮನ್ವಯ ರಂಗ ಮತ್ತೆ ಆಡಳಿತಕ್ಕೇರಿದೆ. ಸಮನ್ವಯ ರಂಗದ 10 ಹಾಗೂ ಸಹಕಾರ ರಂಗದ ಇಬ್ಬರು ಗೆಲುವು ಸಾಧಿಸಿದ್ದಾರೆ ಸಮನ್ವಯ ರಂಗದ ಪಿ ಉದಯಕುಮಾರ್ ಬೆಟ್ಟ, ಅಶೋಕ ಜಿ., ತೃಪ್ತಿ ಯು., ರವಿಕಿರಣ...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದಡಾ. ಪ್ರಭಾಕರ ಶಿಶಿಲರಿಗೆ ಅಭಿನಂದನೆ

ಫೆಬ್ರವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ ಪ್ರಭಾಕರ ಶಿಶಿಲ ಅವರನ್ನು ಅಭಿನಂದಿಸಲಾಯಿತು.ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಮೇರು ವ್ಯಕ್ತಿತ್ವದ ಡಾ. ಪ್ರಭಾಕರ ಶಿಶಿಲರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾದ್ಯಕ್ಷತೆ ಒಲಿದು ಬಂದಿರುವ ಸಂತಸದ ಸಮಯದಲ್ಲಿ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...

ಮೇ 3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಏ.25 ಕೊನೆಯ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್...

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ...

ಸೇವಾಜೆ ಅಂಗನವಾಡಿ ಕೇಂದ್ರಕ್ಕೆ ಇನ್ವರ್ಟರ್ ಕೊಡುಗೆ

ಸೇವಾಜೆ ಅಂಗನವಾಡಿ ಕೇಂದ್ರಕ್ಕೆ ಪೋಷಕರಾದ ಹೊನ್ನಮೂಲೆ ಹೊನ್ನಪ್ಪ ಗೌಡರು 27 ಸಾವಿರ ರೂ. ಮೌಲ್ಯದ ಇನ್ವರ್ಟರ್ ನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ರೇಣುಕಾ ಗುಡ್ಡನಮನೆ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುತ್ತಿಗಾರು : ನವೋದಯ ಪರೀಕ್ಷಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ ಕಾರ್ಯಕ್ರಮ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ...

ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ – ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು, ಉಪಾಧ್ಯಕ್ಷರಾಗಿ ಸಚಿನ್ ಬಳ್ಳಡ್ಕ ಆಯ್ಕೆ

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ಸಚಿನ್ ಬಳ್ಳಡ್ಕ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪಿ.ಸಿ.ಜಯರಾಮ್, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಕರುಣಾಕರ...

ಸುಳ್ಯದ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಬಹುಮಾನ ವಿತರಣೆ

ಸುಳ್ಯದ ರಥಬೀದಿಯ ವಿನಾಯಕ ಕಾಂಪ್ಲೆಕ್ಸ್ ನಲ್ಲಿ ರುವ ಸ್ವರ್ಣ ಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಜಾತ್ರೆಯ ಪ್ರಯುಕ್ತ ವಿಶೇಷ ಬಡ್ಡಿದರಗಳ ಪೋಸ್ಟರ್ ರನ್ನು ಸ್ಟೇಟಸ್ ಹಾಕಿದ ಗ್ರಾಹಕರಿಗೆ 100ಕ್ಕಿಂತ ಜಾಸ್ತಿ ವೀಕ್ಷಣೆ ಬಂದವರು ಸ್ತ್ರೀನ್ ಶಾಟ್ ತೆಗೆದು ಕಳುಹಿಸಿರಿ ಎಂಬ ಸ್ಪರ್ದೆಯಲ್ಲಿ ವಿಜೇತರಾದ ಅದೃಷ್ಟಶಾಲಿ ಯೋಗಿಶ್ ಅರಂಬೂರು ಇವರಿಗೆ ಸೊಸೈಟಿ ಅಧ್ಯಕ್ಷರಾದ ಜನಾರ್ಧನ...
Loading posts...

All posts loaded

No more posts

error: Content is protected !!