ಬಾಳಿಲ : ನಿಲ್ಲಿಸಿದ್ದ ಬೈಕ್ ಗೆ ಆಕಸ್ಮಿಕ ಬೆಂಕಿ

ನಿಲ್ಲಿಸಿದ್ದ ಬೈಕ್‌ನಲ್ಲಿ ವಯರಿಂಗ್ ಶಾರ್ಟ್ ಸರ್ಕ್ಯೂಟ್‌ಗೊಂಡು ಬೈಕ್ ಸಂಪೂರ್ಣ ಹೊತ್ತಿ ಉರಿದ ಘಟನೆ ಸೆ.16 ಮಧ್ಯಾಹ್ನ ಬಾಳಿಲದಿಂದ ವರದಿಯಾಗಿದೆ . ಬಾಳಿಲ ಭಾರತ ಕಾಂಪ್ಲೆಕ್ಸ್ ಸಮೀಪ ಸೆಡ್‌ನಲ್ಲಿ ರಾಕೇಶ್ ಎಂಬವರು ತಮ್ಮ ಬಜಾಜ್ ಪಲ್ಸರ್ ಬೈಕ್‌ನ್ನು ನಿಲ್ಲಿಸಿದ್ದರು . ಬೈಕ್ ಹೊತ್ತಿ ಉರಿಯುತ್ತಿರುವುದನ್ನು ಕಂಡು ಸ್ಥಳಿಯರು ನೀರು ಹಾಯಿಸಿ ನಂದಿಸಲು ಸಹಕರಿಸಿದರು . ಈ ವೇಳೆ...

ಗಾಂಧಿನಗರ ಬೋರುಗುಡ್ಡೆ ವಾರ್ಡಿನಲ್ಲಿ ಚರಂಡಿ ಕಾಮಗಾರಿಗೆ ಚಾಲನೆ

ಸುಳ್ಯ ನಗರ ಪಂಚಾಯತ್ ಅನುದಾನದಲ್ಲಿ ಸುಮಾರು ಐದು ಲಕ್ಷ ರೂಪಾಯಿಗಳ ವೆಚ್ಚದ ಚರಂಡಿ ಕಾಮಗಾರಿಯ ಕಾರ್ಯ ನಡೆಯುತ್ತಿದೆ. ಗಾಂಧಿನಗರ ಸಂತೋಷ್ ಚಿತ್ರಮಂದಿರದ ಬಳಿಯಿಂದ ಮುಖ್ಯರಸ್ತೆಯ ವರೆಗೆ ಈ ಕಾಮಗಾರಿಯ ಪ್ರಗತಿಯಲ್ಲಿ ನಡೆಯುತ್ತಿದೆ. ಸ್ಥಳೀಯ ವಾರ್ಡ್ ಸದಸ್ಯ ಕೆ ಎಸ್ ಉಮ್ಮರ್ ಭೇಟಿ ನೀಡಿ ಕಾಮಗಾರಿಯ ವೀಕ್ಷಣೆ ನಡೆಸಿದರು.
Ad Widget

ಗುತ್ತಿಗಾರು : ಫ್ರೆಂಡ್ಸ್ ಪ್ರಗತಿ ಬಂಧು ಸಂಘ ರಚನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಸುಳ್ಯ ಇದರ ಆಶ್ರಯದಲ್ಲಿ ಗುತ್ತಿಗಾರು ರಿಕ್ಷಾ ಚಾಲಕ, ಮಾಲಕರು ಪ್ರಾರಂಭಿಸಿದ ಫ್ರೆಂಡ್ಸ್ ಹೆಸರಿನ ಸಂಘವನ್ನು ಗುತ್ತಿಗಾರು ಒಕ್ಕೂಟದ ಅಧ್ಯಕ್ಷ ಅಚ್ಯುತ ಗುತ್ತಿಗಾರು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಸುಧಿರ್ ರವರು ಸಂಘದ ನಿಯಮಾವಳಿಗಳನ್ನು ಹಾಗೂ ಸಂಘದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.ಫ್ರೆಂಡ್ಸ್ ಸಂಘದ...

ಡ್ರಗ್ಸ್ ದಂಧೆಯಲ್ಲಿ ತೊಡಗಿದವರ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎ.ಬಿ.ವಿ.ಪಿ. ಸಹಿ ಸಂಗ್ರಹ ಅಭಿಯಾನ

ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರನ್ನು ಬಂಧಿಸಿ ಅವರ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ಇದರ ಆಶ್ರಯದಲ್ಲಿ ಸಹಿ ಸಂಗ್ರಹ ಅಭಿಯಾನ ಇಂದು ಸುಳ್ಯದಲ್ಲಿ ನಡೆಯಿತು.ಎಲ್.ಡಿ. ಬ್ಯಾಂಕ್ ಎದುರುಗಡೆ ಮುಖ್ಯ ರಸ್ತೆಯ ಬದಿಯಲ್ಲಿ ಬೋರ್ಡ್ ಅಳವಡಿಸಿ ಅದಕ್ಕೆ ಸಾರ್ವಜನಿಕ ರಿಂದ ಸಹಿ ಸಂಗ್ರಹ ನಡೆಯಿತು. ಸುಳ್ಯ ಸಿ.ಎ.ಬ್ಯಾಂಕ್ ಅಧ್ಯಕ್ಷ...

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಎಸ್.ಎಸ್.ಎಲ್.ಸಿ. ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಗೆ ಸನ್ಮಾನ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಅರಂತೋಡು ಇದರ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸುಬ್ರಹ್ಮಣ್ಯ ಕುಮಾರ ಸ್ವಾಮಿ ಆಂಗ್ಲ ಮಾದ್ಯಮ ಪ್ರೌಡ ಶಾಲೆಯ ವಿದ್ಯಾರ್ಥಿ ಎ.ಎಲ್ ಅನುಷ್ ಇವರನ್ನು ದಿನಾಂಕ 12.09.2020 ರಂದು ಅರಂತೋಡಿನಲ್ಲಿ ನಡೆದ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರಧಾನ ಮತ್ತು...

ಆತ್ಮನಿರ್ಭರಕ್ಕಾಗಿ ವಳಲಂಬೆಯಲ್ಲಿ ಸೆ.20 ರಿಂದ ಉದ್ಯೋಗ ನೈಪುಣ್ಯ ತರಬೇತಿ

ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಸ್ವಾವಲಂಬಿ, ಸ್ವಾಭಿಮಾನಿ, ಸ್ವ ಸಾಮರ್ಥ್ಯದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಇದೇ ಸೆ.20ರಿಂದ 26 ರವರೆಗೆ ಒಂದು ವಾರಗಳ ಉದ್ಯೋಗ ನೈಪುಣ್ಯ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುತ್ತಿಗಾರು ಪ್ರಾ.ಕೃ.ಪ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹೇಳಿದರು.ಅವರು ಗುತ್ತಿಗಾರು ಪ್ರಾ.ಕೃ.ಸಂಘದ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ನುರಿತ ತರಬೇತುದಾರರಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ, ವಿದ್ಯುತ್...

ಮೋದಿ ಜನ್ಮದಿನಾಚರಣೆ – ಯೇನೆಕಲ್ಲಿನಲ್ಲಿ ವಿಶೇಷ ಪೂಜೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಗ್ರಾಮ ಸಮಿತಿ ನೇತೃತ್ವದಲ್ಲಿ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಯೇನೆಕಲ್ಲು ಗ್ರಾಮಸ್ಥರಿಂದ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ಭವಾನಿಶಂಕರ ಪೂಂಬಾಡಿ, ಶಿವಪ್ರಸಾದ್ ನಡುತೋಟ, ಮನುದೇವ್ ಪರಮಲೆ, ಕುಮಾರ್ ಪೈಲಾಜೆ, ಮೋಹನ ಕೋಟಿಗೌಡನ...

ಮೋದಿ ಜನ್ಮದಿನಾಚರಣೆ ಅಂಗವಾಗಿ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪುಸ್ತಕ ವಿತರಣೆ & ಗಿಡ ನೆಡುವ ಕಾರ್ಯಕ್ರಮ

ನರೇಂದ್ರಮೋದಿ ಜನ್ಮದಿನಾಚರಣೆಯ ಅಂಗವಾಗಿ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪೆರಾಜೆ ಶಾಲೆಯಲ್ಲಿ ಪುಸ್ತಕ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ನಾಗೇಶ್ ಕುಂದಲ್ಪಾಡಿ, ದೊಡ್ಡಣ್ಣ ಬರೆಮೇಲು, ಪ್ರಸನ್ನ ನೆಕ್ಕಿಲ, ಪ್ರವೀಣ್ ಮಜಿಕೋಡಿ, ಉದಯ ಕುಂಬಳಚೇರಿ, ನಂಜಪ್ಪ ನಿಡ್ಯಮಲೆ, ಧನಂಜಯ ಕೋಡಿ, ಮಹೇಶ್ ಮೂಲೆಮಜಲು, ಸುಭಾಷ್ ಬಂಗಾರಕೋಡಿ, ಸೀತಾರಾಮ್ ಕದಿಕಡ್ಕ,ಚಿನ್ನಪ್ಪ...

ಕಂದ್ರಪ್ಪಾಡಿ : ಮೋದಿ ಜನ್ಮದಿನಾಚರಣೆ – ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಇದರ ಆಶ್ರಯದಲ್ಲಿ ಮೋದಿ ಜನ್ಮದಿನಾಚರಣೆ ಹಾಗೂ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಾವಣೆ ಶಿಬಿರ ಸೆ. 17 ರಂದುಕಂದ್ರಪ್ಪಾಡಿ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಮಹಾಬಲೇಶ್ವರ ಮುಂಡೋಡಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ವಹಿಸಿದ್ದರು. ದೊಡ್ಡಣ್ಣ ಕಾಜಿಮಡ್ಕ ಮುಖ್ಯ ಅತಿಥಿಯಾಗಿದ್ದರು. ಯುವಕ...

ಬಾಳಿಲ : ಆಯುಷ್ಮಾನ್ ಕಾರ್ಡ್ ನೋಂದಾವಣೆ ಶಿಬಿರ

ಕಳಂಜ - ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತಿ ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಸೆ.20 ರಂದು ಆಯುಷ್ಮಾನ್ ಕಾರ್ಡ್ ನೋಂದಾವಣೆ ಮತ್ತು ವಿತರಣಾ ಶಿಬಿರವು ಬಾಳಿಲ ಸೊಸೈಟಿಯ ಮಿನಿ ಸಭಾಂಗಣದಲ್ಲಿ ಜರುಗಲಿದೆ. ಶಿಬಿರವು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದ್ದು, ಕಾರ್ಡ್ ಮಾಡಿಸುವವರು ಆಧಾರ್ ಕಾರ್ಡ್...
Loading posts...

All posts loaded

No more posts

error: Content is protected !!