- Monday
- September 14th, 2026
ಸುಳ್ಯದ ಗುರು ಪ್ರಕಾಶ್ ಕೇಬಲ್ ನೆಟ್ ವರ್ಕ್ ಮಾಲಕ, ಹಿರಿಯ ಉದ್ಯಮಿ ಹಾಗೂ ಕ್ರೀಡಾ ಪ್ರೋತ್ಸಾಹಕ ಗುರುದತ್ ನಾಯಕ್ ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 54 ವರ್ಷ ವಯಸ್ಸಾಗಿತ್ತು.ಕಿಡ್ನಿ ಸಮಸ್ಯೆಯಿಂದ ಕೆಲ ಸಮಯದಿಂದ ಬಳಲುತ್ತಿದ್ದ ಅವರಿಗೆ ಡಯಾಲಿಸಿಸ್ ಆರಂಭಿಸಲಾಗಿತ್ತು. ವಾರದ ಹಿಂದೆ ಅಸೌಖ್ಯ ಉಲ್ಬಣಗೊಂಡಿತ್ತು. ಅವರ ಅಂತ್ಯ ಸಂಸ್ಕಾರ...
ಎಣ್ಮೂರು ಗ್ರಾಮದ ಅಲೆಂಗಾರದ ಯುವಕನೊಬ್ಬ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ .15 ರಂದು ನಡೆದಿದೆ . ಎಣ್ಮೂರು ಗ್ರಾಮದ ಅಲೆಂಗಾರ ಬಾಲಕೃಷ್ಣ ಗೌಡರ ಪುತ್ರ ಕಾರ್ತಿಕ್ ಮೃತಪಟ್ಟ ದುರ್ದೈವಿ . ಅವರಿಗೆ 25 ವರ್ಷ ವಯಸ್ಸಾಗಿತ್ತು . ಅವರು ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆಂದು ತಿಳಿದುಬಂದಿದೆ....
ಚೆಂಬು ಸರಕಾರಿ ಪ್ರೌಡ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಾಮಾಕ್ಷಿ ಪಿ.ಎಸ್. ಅವರಿಗೆ ರಾಷ್ಟ್ರೀಯ ಹಿಂದಿ ದಿವಸ್ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಇವರು ಬೆಂಬು ನಿವಾಸಿ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರಾಗಿರುವ ಸುಬ್ರಮಣ್ಯ ಉಪಾಧ್ಯಾಯ ರವರ ಪತ್ನಿ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುತ್ಯ, ಮಂಡೆಕೋಲು ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಅಮೃತವಲ್ಲಿಯವರು ಪದೋನ್ನತಿ ಹೊಂದಿದ್ದು, ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮುಡ್ನೂರು ಇಲ್ಲಿಗೆ ವಿಜ್ಞಾನ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ. ಸುಮಾರು 12 ವರ್ಷಗಳ ಸೇವೆಯ ಬಳಿಕ ಇದೀಗ ಪ್ರೌಢಶಾಲೆಗೆ ಭಡ್ತಿಗೊಂಡಿದ್ದಾರೆ. 11.06.2008 ರಂದು ಸ.ಕಿ.ಪ್ರಾ. ಶಾಲೆ ಪುತ್ಯ ಮಂಡೆಕೋಲು ಇಲ್ಲಿ ಸಹಶಿಕ್ಷಕಿಯಾಗಿ ಸೇವೆ...
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಇಂದಿರಾವತಿ.ಕೆ ಯವರು ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಸಂಪಾಜೆ ಇಲ್ಲಿಗೆ ಹಿಂದಿ ಭಾಷಾ ಶಿಕ್ಷಕಿಯಾಗಿ ಭಡ್ತಿ ಹೊಂದಿದ್ದಾರೆ.21.02.2004 ರಲ್ಲಿ ಬೆಳ್ತಂಗಡಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿ ಸಹಶಿಕ್ಷಕಿಯಾಗಿ ಸೇವೆಗೆ ನಿಯೋಜನೆಯಾಗಿ 7 ವರ್ಷಗಳ ಸೇವೆಯನ್ನು...
ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಕೋವಿಡ್-19 ರೋಗಿಗಳು ಭಾರತದಲ್ಲಿ ಗುಣಮುಖರಾಗುತ್ತಿದ್ದಾರೆ. ಜಾನ್ಸ್ ಹಾಪ್ ಕಿನ್ಸ್ ಯುನಿವರ್ಸಿಟಿ ಮಾಹಿತಿ ಪ್ರಕಾರ ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚಿನ 37, 80,107 ಮಂದಿ ಸೋಂಕಿತರು ಭಾರತದಲ್ಲಿ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಜಗತ್ತಿನಾದ್ಯಂತ ಒಟ್ಟಾರೇ ಸೋಂಕಿತರ ಸಂಖ್ಯೆ 2, 90, 06, 033 ಆಗಿದ್ದು, 9,24,105 ಮಂದಿ ಸಾವನ್ನಪ್ಪಿದ್ದಾರೆ. 1,96,25,959 ಮಂದಿ ಕೊರೋನಾವೈರಸ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಪ್ಲಾಸ್ಮಾ ದಾನಿಗಳ ಮಾದರಿ ರಕ್ತಸಂಗ್ರಹ ಇಂದು ಕೈಕಂಬದಲ್ಲಿ ನಡೆದ ವಿಖಾಯ ರಕ್ತದಾನಿ ಬಳಗದ ರಕ್ತದಾನ ಶಿಬಿರದಲ್ಲಿ ಮಾಡಲಾಯಿತು. ಹದಿನಾಲ್ಕು ಜನರ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದಾಗ ಹನ್ನೆರಡು ಜನರ ರಕ್ತವನ್ನು ಪ್ಲಾಸ್ಮಾ ದಾನಕ್ಕಾಗಿ ಪಡೆಯಬಹುದು ಎಂದು ತಿಳಿದುಬಂತು. ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ವತಿಯಿಂದ...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ಕಲ್ಲುಗುಂಡಿ, ಸಂಪಾಜೆ,ಗೂನಡ್ಕ ವ್ಯಾಪ್ತಿಗೆ ಸಂಬಂಧಪಟ್ಟ ನೂತನ ವಲಯ ಸಮಿತಿ ರಚನೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಕಲ್ಲುಗುಂಡಿಯಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ವಹಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್ಡಿಪಿಐ...
ವಿಶ್ವ ಹಿಂದೂ ಪರಿಷದ್, ಭಜರಂಗದಳ ಸುಳ್ಯ ಪ್ರಖಂಡಅಯೋಧ್ಯೆ ಶಾಖೆ ಎಲಿಮಲೆ ಇದರ ನೂತನ ಸಮಿತಿಯ ಉದ್ಘಾಟನೆ ಸೆ.13 ರಂದು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಇದರ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಸುಳ್ಯ ತಾಲೂಕು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇದರ ಸಂಘಚಾಲಕರಾದ ಚಂದ್ರಶೇಖರ ಭಟ್ ತಳೂರು ಉದ್ಘಾಟಿಸಿದರು. ಕಾರ್ಯಕ್ರಮ ದಲ್ಲಿ ಅಯೋಧ್ಯೆಯ ಕರಸೇವೆಗೆ ಹೋದ ಸ್ವಯಂಸೇವಕರಾದ ಚಂದ್ರಶೇಖರ...
Loading posts...
All posts loaded
No more posts
