ಶಿಕ್ಷಕ ಪೊಡಿಯ ಪಿ. ಯವರಿಗೆ ಪದೋನ್ನತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ, ಸುಳ್ಯ ಇಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಪೊಡಿಯ ಪಿ ಯವರು ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪ್ರೌಢಶಾಲೆ ಎಡಮಂಗಲಕ್ಕೆ ಆಂಗ್ಲಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ.06.08.2002 ರಂದು ಪುತ್ತೂರು ತಾಲೂಕಿನ ಸ.ಕಿ.ಪ್ರಾ.ಶಾಲೆ ಪಿಲಿಕಜೆ ಗುಂಡ್ಯ ಇಲ್ಲಿ ಪ್ರಾಥಮಿಕ ಶಾಲಾ ಸಹಶಿಕ್ಷಕರಾಗಿ ಸೇವೆ ಆರಂಭಿಸಿದ ಇವರು,13 ವರ್ಷಗಳ ಸೇವೆಯನ್ನು ಸಲ್ಲಿಸಿದರು....

ಮುರುಳ್ಯ ಶಾಂತಿನಗರ ಶಾಲಾ ಶಿಕ್ಷಕಿ ಕುಸುಮಾವತಿಯವರಿಗೆ ಪದೋನ್ನತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುರುಳ್ಯ ಶಾಂತಿನಗರ ಇಲ್ಲಿ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀಮತಿ ಕುಸುಮಾವತಿ ಪದೋನ್ನತಿ ಹೊಂದಿದ್ದು, ಇದೀಗ ಸರಕಾರಿ ಪದವಿಪೂರ್ವ ಕಾಲೇಜು ಕಾಣಿಯೂರಿನ ಪ್ರೌಢಶಾಲಾ ವಿಭಾಗಕ್ಕೆ ಭಡ್ತಿಗೊಂಡಿದ್ದಾರೆ.ಕಡಬ ತಾಲೂಕು ಕೊಂಬಾರು ಗ್ರಾಮದ ಕೆಂಜಾಲ ದಿ.ತಿಮ್ಮಯ್ಯ ಆಚಾರ್ಯ ಹಾಗೂ ಶ್ರೀಮತಿ ಕೃಷ್ಣಮ್ಮ ದಂಪತಿಗಳ ಪುತ್ರಿಯಾಗಿರುವ ಇವರು 1998 ರಲ್ಲಿ ಸಿರಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ...
Ad Widget

ಶಿಕ್ಷಕಿ ತುಳಸಿ.ಎಸ್ ರವರಿಗೆ ಪದೋನ್ನತಿ

ಕೊಲ್ಲಮೊಗ್ರದ ಸ.ಹಿ.ಪ್ರಾ.ಶಾಲೆ. ಬಂಗ್ಲೆ ಗುಡ್ಡೆ ಯಲ್ಲಿ ಸಹಶಿಕ್ಷಕಿಯಾಗಿದ್ದ ಶ್ರೀಮತಿ ತುಳಸಿಯವರು ಪದೋನ್ನತಿ ಹೊಂದಿದ್ದು ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಬಿಳಿಯೂರು ಮಡತ್ತಾರು ಇಲ್ಲಿಗೆ ಕನ್ನಡ ಭಾಷಾ ಸಹಶಿಕ್ಷಕರಾಗಿ ಭಡ್ತಿ ಹೊಂದಿದ್ದಾರೆ. ಇವರು ಸ.ಹಿ.ಪ್ರಾಥಮಿಕ ಶಾಲೆ ಕೊಟ್ಟೂರು ಮಡಿಕೇರಿ ತಾಲೂಕು ಕೊಡಗು ಜಿಲ್ಲೆಯಲ್ಲಿ 15 ವರ್ಷಸೇವೆ ಸಲ್ಲಿಸಿ ನಂತರ, ಸ.ಹಿ.ಪ್ರಾಥಮಿಕ ಶಾಲೆ ಬೋಳಿಯಾರು ಮಸೀದಿ ಬಳಿ ಮಂಗಳೂರು...

ಸುಳ್ಯ ಕ್ರೈಸ್ತ ಅಲ್ಪಸಂಖ್ಯಾತರ ಸಹಕಾರಿ ಸಂಘದ ಮಹಾಸಭೆ – ಶೇ.15 ಡಿವಿಡೆಂಟ್ ಘೋಷಣೆ

ಸುಳ್ಯ ತಾಲೂಕು ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.12 ರಂದು ಸಂಘದ ಅಧ್ಯಕ್ಷ ಬಿಟ್ಟಿ ಬಿ.ನಡುನಿಲಂ ಇದರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘವು 2019-20 ನೇ ಸಾಲಿನಲ್ಲಿ ಗಳಿಸಿದ ಲಾಭಾಂಶ ವಿಂಗಡನೆ ಮಾಡುತ್ತ 15% ಡಿವಿಡೆಂಟ್ ಅನ್ನು ಸದಸ್ಯರಿಗೆ ಕೊಡುವುದೆಂದು ಘೋಷಿಸಿದರು. ಸುಳ್ಯ ತಾಲೂಕಿನ ಎಲ್ಲಾ ಧರ್ಮಿಯಾರಿಗೂ ಕಳೆದ 10 ವರ್ಷಗಳಿಂದ ಉತ್ತಮ...

ಅರಂತೋಡು : ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರಿಂದ ಆರೋಗ್ಯ ಹಸ್ತ ಯೋಜನೆಯ ಪರಿಶೀಲನೆ

ಆರೋಗ್ಯ ಹಸ್ತ ಯೋಜನೆಯ ಬಗ್ಗೆ ಪರಿಶೀಲನಾ ಕಾರ್ಯಕ್ರಮದ ಅಂಗವಾಗಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ರವರ ದ.ಕ ಜಿಲ್ಲಾ ಪ್ರವಾಸ ಕಾರ್ಯಕ್ರಮ ದ ಅಂಗವಾಗಿ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗು ಸಾಧಕರಿಗೆ ಸನ್ಮಾನ ಕಾರ್ಯಕ್ರಮ , ಆರೋಗ್ಯ ಹಸ್ತ ಆರೋಗ್ಯ ತಪಾಸಣೆ ಕಾರ್ಯಕ್ರಮ ಸೆಪ್ಟೆಂಬರ್ 12...

“ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್” ಪ್ರಶಸ್ತಿ ಪ್ರದಾನ ಸಮಾರಂಭ- ಪ್ರತಿಭಾ ಪುರಸ್ಕಾರ

ದ.ಕ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ಇದರ ವತಿಯಿಂದ ಕೇರಳ ಮತ್ತು ಕರ್ನಾಟಕದಲ್ಲಿ ಕೃಷಿ ಮತ್ತು ಉದ್ಯಮಿಯಾಗಿ,ಕೊಡುಗೆದಾನಿಯಾಗಿ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನಾನುರಾಗಿದ್ದ ದಿ।ತೆಕ್ಕಿಲ್ ಮಹಮ್ಮದ್ ಹಾಜಿಯವರ ಸ್ಮರಣಾರ್ಥ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ ನ್ನು...

ಪಂಜ ಬಸ್ ನಿಲ್ದಾಣದ ರಸ್ತೆ ಕಾಂಕ್ರೀಟೀಕರಣ ಪೂರ್ಣ

ಪಂಜ ಪೇಟೆಯ ಹೃದಯ ಭಾಗದಲ್ಲಿರುವ ರಸ್ತೆಯ ಕಾಂಕ್ರೀಟೀಕರಣ ಭರದಿಂದ ಸಾಗಿದೆ. ರಸ್ತೆ ಕಾಂಕ್ರೀಟೀಕರಣ ಸಂದರ್ಭದಲ್ಲಿ ಪಂಜ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಈ ವೇಳೆ ಉಪಸ್ಥಿತರಿದ್ದು ಕಾಮಗಾರಿಯನ್ನು ವೀಕ್ಷಿಸಿದರು.

ಬಾಳಿಲ: ಆಯುಷ್ಮಾನ್ ನೋಂದಣಿ ಶಿಬಿರ ಮುಂದೂಡಿಕೆ

ಕಳಂಜ - ಬಾಳಿಲ ಪ್ರಾ.ಕೃ.ಪ.ಸ.ಸಂಘ ನಿ. ಹಾಗೂ ನಾಗರಿಕ ಸೇವಾ ಸಮಿತಿ ಬಾಳಿಲ - ಮುಪ್ಪೇರ್ಯ ಇದರ ಜಂಟಿ ಆಶ್ರಯದಲ್ಲಿ ಬಾಳಿಲ ಸೊಸೈಟಿ ಶಾಖೆಯ ಮಿನಿ ಸಭಾಂಗಣದಲ್ಲಿ ನಾಳೆ(ಸೆ.13) ಆಯೋಜಿಸಲಾಗಿದ್ದ ಆಯುಷ್ಮಾನ್ ಆರೋಗ್ಯ ಕಾರ್ಡ್ ನೋಂದಾವಣಿ ಶಿಬಿರವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಬೆಳ್ಳಾರೆಗೆ ಭೇಟಿ – ಆರೋಗ್ಯ ಹಸ್ತ ಯೋಜನೆಯ ಬಗ್ಗೆ ಪರಿಶೀಲನೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ಆರೋಗ್ಯ ಹಸ್ತ ಕಾರ್ಯಕ್ರಮ ಕ್ಕೆ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷ ರಾದ ಸಲೀಂ ಅಹ್ಮದ್, ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾದ ಹರೀಶ್ ಕುಮಾರ್ ಅರಂತೋಡು ಹಾಗೂ ಬೆಳ್ಳಾರೆ ಗ್ರಾಮದ ದರ್ಖಾಸ್ತು ಗೆ ಭೇಟಿ ನೀಡಿದರು. ಕೆ ಪಿ ಸಿ ಸಿ...

ಸೆ.19 : ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ವತಿಯಿಂದ ಮಕ್ಕಳನ್ನು ಬೆಳೆಸುವ ರೀತಿ ಎಂಬ ವಿಷಯದ ಬಗ್ಗೆ ಉಚಿತ ಆನ್ಲೈನ್ ತರಬೇತಿ ಕಾರ್ಯಾಗಾರ

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಮತ್ತು ಬೀಜದಕಟ್ಟೆ ಅಭಿಮಾನಿಗಳ ಬಳಗ ಬೆಂಗಳೂರು ಜಂಟಿ ಸಹಯೋಗದೊಂದಿಗೆ ಸತತ ನಾಲ್ಕನೇ ಬಾರಿಗೆ ಉಚಿತ ಝೂಮ್ ಆನ್ಲೈನ್ ತರಬೇತಿ ಕಾರ್ಯಾಗಾರ ನಡೆಯಲಿದೆ.ಇದೇ ಬರುವ ಸೆ.19 ಶನಿವಾರದಂದು ಸಾಯಂಕಾಲ 7.30 ರಿಂದ ರಾತ್ರಿ 9.15 ರ ವರೆಗೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ಮಕ್ಕಳನ್ನು ಬೆಳೆಸುವ ರೀತಿ ಎಂಬ ವಿಷಯದ ಬಗ್ಗೆ ಪೋಷಕರೊಂದಿಗೆ ,ಅಂತರರಾಷ್ಟ್ರೀಯ...
Loading posts...

All posts loaded

No more posts

error: Content is protected !!